LPG cylinder price reduction for commercial use
ಹೆಚ್.ಎಸ್.ದಿನೇಶ್ಕುಮಾರ್
ಸಿಲಿಂಡರ್ ಹಿಂತಿರುಗಿಸದಿದ್ದರೆ ಎಫ್ಐಆರ್ ದಾಖಲು
ಸಿಲಿಂಡರ್ಗಳ ಕಾಳಸಂತೆ ವಿರುದ್ಧ ಕ್ರಮಕ್ಕೆ ಮುಂದಾದ ಸರ್ಕಾರ; ೫ಕೆಜಿ ಸಿಲಿಂಡರ್ಗೂ ಇನ್ನು ಮುಂದೆ ಒಟಿಪಿ ಕಡ್ಡಾಯ
ಮೈಸೂರು: ಪೈಪ್ಡ್ ನ್ಯಾಚುರಲ್ ಗ್ಯಾಸ್ (ಪಿಎನ್ಜಿ)ಬಳಕೆ ಜೊತೆಗೆ ಸಿಲಿಂಡರ್ಗಳನ್ನು ಕೂಡ ಗ್ರಾಹಕರು ಪಡೆದುಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದ ಹಿನ್ನೆಯಲ್ಲಿ ಸಿಲಿಂಡರ್ ಗಳನ್ನು ವಾಪಸ್ ನೀಡದವರ ವಿರುದ್ಧ ಎಫ್ ಐಆರ್ ದಾಖಲಿಸಲು ಇಂಧನ ಸಚಿವಾಲಯ ನಿಯಮ ರೂಪಿಸಿದೆ.
ನಗರದ ಕೆಲವೆಡೆ ಈಗಾಗಲೇ ನೂರಾರು ಮನೆಗಳಿಗೆ ಪೈಪ್ಲೈನ್ ಮೂಲಕ ಅನಿಲ ಸರಬರಾಜು ಮಾಡಲಾಗುತ್ತಿದೆ. ಆದರೆ, ಅವರುಗಳು ಈ ಹಿಂದೆ ಪಡೆದಿದ್ದ ಸಿಲಿಂಡರ್ಗಳನ್ನು ಆಯಾ ಏಜೆನ್ಸಿಗಳಿಗೆ ಹಿಂತಿರುಗಿಸಿಲ್ಲ. ಹೀಗೆ ಪಡೆದುಕೊಳ್ಳುವ ಸಿಲಿಂಡರ್ಗಳನ್ನು ಅನ್ಯರಿಗೆ ಹೆಚ್ಚಿನ ಹಣಕ್ಕೆ ಮಾರಾಟ ಮಾಡುತ್ತಿರುವುದು ಏಜೆನ್ಸಿಗಳ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಅಂತಹವರ ವಿರುದ್ಧ ಕ್ರಮಕ್ಕೆ ಮುಂದಾಗಿದೆ.
ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ಗಳ ವಿತರಣೆಗೆ ಕೇಂದ್ರ ಸರ್ಕಾರ ಮತ್ತಷ್ಟು ನಿಯಮಗಳನ್ನು ಜಾರಿಗೆ ತಂದಿದ್ದು, ಇನ್ನು ಮುಂದೆ ೫ ಕೆಜಿ ಸಿಲಿಂಡರ್ ಪಡೆಯಲೂ ಒಟಿಪಿ ಸಂಖ್ಯೆ ನೀಡುವುದನ್ನು ಕಡ್ಡಾಯಗೊಳಿಸಿದೆ.
ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ಆರಂಭವಾದಾಗಿನಿಂದ ಅನಿಲ ಪೂರೈಕೆಯಲ್ಲಿ ಸಾಕಷ್ಟು ವ್ಯತ್ಯಯಗಳು ಉಂಟಾಗಿವೆ. ಗ್ರಾಹಕರಿಗೆ ಅನಿಲ ಸಿಲಿಂಡರ್ ವಿತರಣೆಗೆ ಸಾಕಷ್ಟು ಹೊಸ ನಿಯಮಗಳನ್ನೂ ಜಾರಿಗೊಳಿಸಲಾಗಿದೆ.
ಇಷ್ಟು ದಿನ ೫ ಕೆಜಿ ಸಿಲಿಂಡರ್ಗಳನ್ನು ೧೫.೫ ಕೆಜಿ ಸಿಲಿಂಡರ್ಗೆ ಪರ್ಯಾಯವಾಗಿ ಜನರು ಬಳಸುತ್ತಿದ್ದರು. ಸಿಲಿಂಡರ್ ಬುಕ್ ಮಾಡಿದಲ್ಲಿ ೨೦ ದಿನಗಳ ನಂತರ ಸಿಲಿಂಡರ್ ನೀಡುವ ಪದ್ಧತಿ ಜಾರಿಯಾದ ನಂತರ ೫ ಕೆಜಿ ಸಿಲಿಂಡರ್ಗೆ ಬೇಡಿಕೆ ಹೆಚ್ಚಾಗಿತ್ತು. ಯಾವುದೇ ದಾಖಲೆಗಳೂ ಇಲ್ಲದೆ ೫ ಕೆಜಿ ಸಿಲಿಂಡರ್ಗಳನ್ನು ಪಡೆಯಬಹುದಾಗಿತ್ತು. ಆದರೆ, ಈ ಸಿಲಿಂಡರ್ ಗಳಿಗೂ ಬೇಡಿಕೆ ಹೆಚ್ಚಾದ ಹಿನ್ನೆಯಲ್ಲಿ ಸರ್ಕಾರ ಒಟಿಪಿ ಕಡ್ಡಾಯ ಗೊಳಿಸುವುದರ ಜೊತೆಗೆ ೧೦ ದಿನಗಳ ಅಂತರದಲ್ಲಿ ಒಂದು ಸಿಲಿಂಡರ್ ನೀಡಲು ನಿಯಮ ರೂಪಿಸಿದೆ. ಇನ್ನು ವಾಣಿಜ್ಯ ಸಿಲಿಂಡರ್ಗಳಿಗಂತೂ ಸಾಕಷ್ಟು ಬೇಡಿಕೆ ಇದೆ. ಬೇಡಿಕೆಗೆ ಅನುಸಾರವಾಗಿ ಶೇ.೫೦ ರಿಂದ ೬೦ ರಷ್ಟು ಸಿಲಿಂಡರ್ಗಳನ್ನು ಹೋಟೆಲ್ ಹಾಗೂ ಇನ್ನಿತರ ವಾಣಿಜ್ಯ ಚಟುವಟಿಕೆಗೆ ನೀಡಲಾಗುತ್ತಿತ್ತು. ಆದರೆ, ಇನ್ನು ಮುಂದೆ ವಾಣಿಜ್ಯ ಸಿಲಿಂಡರ್ಗಳನ್ನು ಪಡೆಯಲು ಒಟಿಪಿ ಕಡ್ಡಾಯಗೊಳಿಸಲಾಗಿದೆ. ಇದರ ಜೊತೆಗೆ ಗೃಹ ಬಳಕೆ ಸಿಲಿಂಡರ್ಗೆ ನೀಡಿರುವ ಮೊಬೈಲ್ ಸಂಖ್ಯೆಯನ್ನು ವಾಣಿಜ್ಯ ಬಳಕೆ ಸಿಲಿಂಡರ್ ಪಡೆಯಲು ನೀಡುವಂತಿಲ್ಲ. ಇದಕ್ಕೆ ಪ್ರತ್ಯೇಕ ಮೊಬೈಲ್ ಸಂಖ್ಯೆಯನ್ನು ನೀಡಬೇಕಿದೆ.
ದರ ಹೆಚ್ಚಳ ಸಾಧ್ಯತೆ:
ಮೂಲಗಳ ಪ್ರಕಾರ ಮುಂದಿನ ಒಂದು ವಾರದಲ್ಲಿ ಅಡುಗೆ ಅನಿಲ ಸಿಲಿಂಡರ್ ದರ ಹೆಚ್ಚಳವಾಗುವ ಸಾಧ್ಯತೆಗಳಿವೆ. ವಾಣಿಜ್ಯ ಬಳಕೆಯ ಸಿಲಿಂಡರ್ಗಳಿಗೆ ೩೦೦ ರೂ. ಹಾಗೂ ಗೃಹ ಬಳಕೆಯ ಸಿಲಿಂಡರ್ಗಳಿಗೆ ೫೦ ರೂ. ನಿಂದ ೬೦ ರೂ.ಗಳಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಏಜೆನ್ಸಿಗಳ ಮಾಲೀಕರು ತಿಳಿಸಿದ್ದಾರೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…