LPG cylinder price reduction for commercial use
ಹೆಚ್.ಎಸ್.ದಿನೇಶ್ಕುಮಾರ್
ಸಿಲಿಂಡರ್ ಹಿಂತಿರುಗಿಸದಿದ್ದರೆ ಎಫ್ಐಆರ್ ದಾಖಲು
ಸಿಲಿಂಡರ್ಗಳ ಕಾಳಸಂತೆ ವಿರುದ್ಧ ಕ್ರಮಕ್ಕೆ ಮುಂದಾದ ಸರ್ಕಾರ; ೫ಕೆಜಿ ಸಿಲಿಂಡರ್ಗೂ ಇನ್ನು ಮುಂದೆ ಒಟಿಪಿ ಕಡ್ಡಾಯ
ಮೈಸೂರು: ಪೈಪ್ಡ್ ನ್ಯಾಚುರಲ್ ಗ್ಯಾಸ್ (ಪಿಎನ್ಜಿ)ಬಳಕೆ ಜೊತೆಗೆ ಸಿಲಿಂಡರ್ಗಳನ್ನು ಕೂಡ ಗ್ರಾಹಕರು ಪಡೆದುಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದ ಹಿನ್ನೆಯಲ್ಲಿ ಸಿಲಿಂಡರ್ ಗಳನ್ನು ವಾಪಸ್ ನೀಡದವರ ವಿರುದ್ಧ ಎಫ್ ಐಆರ್ ದಾಖಲಿಸಲು ಇಂಧನ ಸಚಿವಾಲಯ ನಿಯಮ ರೂಪಿಸಿದೆ.
ನಗರದ ಕೆಲವೆಡೆ ಈಗಾಗಲೇ ನೂರಾರು ಮನೆಗಳಿಗೆ ಪೈಪ್ಲೈನ್ ಮೂಲಕ ಅನಿಲ ಸರಬರಾಜು ಮಾಡಲಾಗುತ್ತಿದೆ. ಆದರೆ, ಅವರುಗಳು ಈ ಹಿಂದೆ ಪಡೆದಿದ್ದ ಸಿಲಿಂಡರ್ಗಳನ್ನು ಆಯಾ ಏಜೆನ್ಸಿಗಳಿಗೆ ಹಿಂತಿರುಗಿಸಿಲ್ಲ. ಹೀಗೆ ಪಡೆದುಕೊಳ್ಳುವ ಸಿಲಿಂಡರ್ಗಳನ್ನು ಅನ್ಯರಿಗೆ ಹೆಚ್ಚಿನ ಹಣಕ್ಕೆ ಮಾರಾಟ ಮಾಡುತ್ತಿರುವುದು ಏಜೆನ್ಸಿಗಳ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಅಂತಹವರ ವಿರುದ್ಧ ಕ್ರಮಕ್ಕೆ ಮುಂದಾಗಿದೆ.
ಗೃಹ ಬಳಕೆ ಹಾಗೂ ವಾಣಿಜ್ಯ ಬಳಕೆಯ ಅನಿಲ ಸಿಲಿಂಡರ್ಗಳ ವಿತರಣೆಗೆ ಕೇಂದ್ರ ಸರ್ಕಾರ ಮತ್ತಷ್ಟು ನಿಯಮಗಳನ್ನು ಜಾರಿಗೆ ತಂದಿದ್ದು, ಇನ್ನು ಮುಂದೆ ೫ ಕೆಜಿ ಸಿಲಿಂಡರ್ ಪಡೆಯಲೂ ಒಟಿಪಿ ಸಂಖ್ಯೆ ನೀಡುವುದನ್ನು ಕಡ್ಡಾಯಗೊಳಿಸಿದೆ.
ಮಧ್ಯ ಪ್ರಾಚ್ಯ ದೇಶಗಳಲ್ಲಿ ಯುದ್ಧ ಆರಂಭವಾದಾಗಿನಿಂದ ಅನಿಲ ಪೂರೈಕೆಯಲ್ಲಿ ಸಾಕಷ್ಟು ವ್ಯತ್ಯಯಗಳು ಉಂಟಾಗಿವೆ. ಗ್ರಾಹಕರಿಗೆ ಅನಿಲ ಸಿಲಿಂಡರ್ ವಿತರಣೆಗೆ ಸಾಕಷ್ಟು ಹೊಸ ನಿಯಮಗಳನ್ನೂ ಜಾರಿಗೊಳಿಸಲಾಗಿದೆ.
ಇಷ್ಟು ದಿನ ೫ ಕೆಜಿ ಸಿಲಿಂಡರ್ಗಳನ್ನು ೧೫.೫ ಕೆಜಿ ಸಿಲಿಂಡರ್ಗೆ ಪರ್ಯಾಯವಾಗಿ ಜನರು ಬಳಸುತ್ತಿದ್ದರು. ಸಿಲಿಂಡರ್ ಬುಕ್ ಮಾಡಿದಲ್ಲಿ ೨೦ ದಿನಗಳ ನಂತರ ಸಿಲಿಂಡರ್ ನೀಡುವ ಪದ್ಧತಿ ಜಾರಿಯಾದ ನಂತರ ೫ ಕೆಜಿ ಸಿಲಿಂಡರ್ಗೆ ಬೇಡಿಕೆ ಹೆಚ್ಚಾಗಿತ್ತು. ಯಾವುದೇ ದಾಖಲೆಗಳೂ ಇಲ್ಲದೆ ೫ ಕೆಜಿ ಸಿಲಿಂಡರ್ಗಳನ್ನು ಪಡೆಯಬಹುದಾಗಿತ್ತು. ಆದರೆ, ಈ ಸಿಲಿಂಡರ್ ಗಳಿಗೂ ಬೇಡಿಕೆ ಹೆಚ್ಚಾದ ಹಿನ್ನೆಯಲ್ಲಿ ಸರ್ಕಾರ ಒಟಿಪಿ ಕಡ್ಡಾಯ ಗೊಳಿಸುವುದರ ಜೊತೆಗೆ ೧೦ ದಿನಗಳ ಅಂತರದಲ್ಲಿ ಒಂದು ಸಿಲಿಂಡರ್ ನೀಡಲು ನಿಯಮ ರೂಪಿಸಿದೆ. ಇನ್ನು ವಾಣಿಜ್ಯ ಸಿಲಿಂಡರ್ಗಳಿಗಂತೂ ಸಾಕಷ್ಟು ಬೇಡಿಕೆ ಇದೆ. ಬೇಡಿಕೆಗೆ ಅನುಸಾರವಾಗಿ ಶೇ.೫೦ ರಿಂದ ೬೦ ರಷ್ಟು ಸಿಲಿಂಡರ್ಗಳನ್ನು ಹೋಟೆಲ್ ಹಾಗೂ ಇನ್ನಿತರ ವಾಣಿಜ್ಯ ಚಟುವಟಿಕೆಗೆ ನೀಡಲಾಗುತ್ತಿತ್ತು. ಆದರೆ, ಇನ್ನು ಮುಂದೆ ವಾಣಿಜ್ಯ ಸಿಲಿಂಡರ್ಗಳನ್ನು ಪಡೆಯಲು ಒಟಿಪಿ ಕಡ್ಡಾಯಗೊಳಿಸಲಾಗಿದೆ. ಇದರ ಜೊತೆಗೆ ಗೃಹ ಬಳಕೆ ಸಿಲಿಂಡರ್ಗೆ ನೀಡಿರುವ ಮೊಬೈಲ್ ಸಂಖ್ಯೆಯನ್ನು ವಾಣಿಜ್ಯ ಬಳಕೆ ಸಿಲಿಂಡರ್ ಪಡೆಯಲು ನೀಡುವಂತಿಲ್ಲ. ಇದಕ್ಕೆ ಪ್ರತ್ಯೇಕ ಮೊಬೈಲ್ ಸಂಖ್ಯೆಯನ್ನು ನೀಡಬೇಕಿದೆ.
ದರ ಹೆಚ್ಚಳ ಸಾಧ್ಯತೆ:
ಮೂಲಗಳ ಪ್ರಕಾರ ಮುಂದಿನ ಒಂದು ವಾರದಲ್ಲಿ ಅಡುಗೆ ಅನಿಲ ಸಿಲಿಂಡರ್ ದರ ಹೆಚ್ಚಳವಾಗುವ ಸಾಧ್ಯತೆಗಳಿವೆ. ವಾಣಿಜ್ಯ ಬಳಕೆಯ ಸಿಲಿಂಡರ್ಗಳಿಗೆ ೩೦೦ ರೂ. ಹಾಗೂ ಗೃಹ ಬಳಕೆಯ ಸಿಲಿಂಡರ್ಗಳಿಗೆ ೫೦ ರೂ. ನಿಂದ ೬೦ ರೂ.ಗಳಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಏಜೆನ್ಸಿಗಳ ಮಾಲೀಕರು ತಿಳಿಸಿದ್ದಾರೆ.
ಮೈಸೂರು : ಮಂತ್ರಿಗಿರಿ, ಅಧಿಕಾರಕ್ಕಾಗಿ ಎಂದಿಗೂ ಯಾರನ್ನು ಕೇಳಿಕೊಂಡಿಲ್ಲ. ಅತ್ತು-ಕರೆದು ಅಧಿಕಾರ ಪಡೆದಿಲ್ಲ. ನನ್ನ-ಸಿದ್ದರಾಮಯ್ಯರ ನಡುವೆ ಯಾವ ವೈಮನಸ್ಸು ಇಲ್ಲ.…
ಮೈಸೂರು : ನಗರದಲ್ಲಿ ರೌಡಿಗಳ ಚಟುವಟಿಕೆಯನ್ನು ಹತ್ತಿಕ್ಕಲು ಮುಂದಾಗಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು, ಸರ್ಕಾರದ ಆದೇಶದನ್ವಯ…
ಮೈಸೂರು: ದಶಕಗಳ ಹಿಂದೆ ಖಾಸಗಿ ಆಸ್ಪತ್ರೆಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳಿಗೆ ದುಬಾರಿ ವೆಚ್ಚದ ಚಿಕಿತ್ಸೆ ಪಡೆಯುವುದನ್ನು ತಗ್ಗಿಸುವ ಜತೆಗೆ ಬೆಂಗಳೂರಿನ…
ನಾಳಿದ್ದು 21ರಂದು ನಡೆಯುವ ನೀಟ್ ಪರೀಕ್ಷೆಯ ಹಿನ್ನೆಲೆಯಲ್ಲಿ ಟೆಲಿಗ್ರಾಂ ಆಪ್ಅನ್ನು ಜೂ. 27ರ ವರೆಗೆ ತಾತ್ಕಾಲಿಕವಾಗಿ ಕೇಂದ್ರ ಸರ್ಕಾರ ಬ್ಯಾನ್…
ಮೀಸಲಾತಿ ಸೌಲಭ್ಯ ಇದ್ದರೂ ಕಠಿಣ ಪರೀಕ್ಷೆ ಪಾಸ್ ಮಾಡಲೇಬೇಕು ಟಿ.ಕೆ. ಹರೀಶ್ ಐತಿಹಾಸಿಕವಾಗಿ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿ, ಶಿಕ್ಷಣ ಹಾಗೂ…