Andolana originals

ಮೈಸೂರು ಡಿಸಿ ಬಂಧನಕ್ಕೆ ವಾರಂಟ್

ಪಾಲನೆಯಾಗದ ಕೋರ್ಟ್ ಆದೇಶ: ಡಿಸಿಗೆ ನೋಟಿಸ್

ಮೈಸೂರು: ಭೂ ವ್ಯಾಜ್ಯ ಪ್ರಕರಣವೊಂದಕ್ಕೆ ಸಂಬಂಽಸಿದಂತೆ ನ್ಯಾಯಾಯದ ಆದೇಶವನ್ನು ಪಾಲಿಸದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ವಿರುದ್ಧ ನ್ಯಾಯಾಲಯ ಬಂಧನ ವಾರಂಟ್ ಜಾರಿಗೊಳಿಸಿದೆ. ಆದರೆ, ನೋಟಿಸ್ ಈತನಕ ಕೈ ಸೇರಿಲ್ಲವೆಂದು ಜಿಲ್ಲಾಡಳಿತ ಹೇಳಿದೆ.

ಮೈಸೂರಿನ ಒಂದನೇ ಅಪರ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್ ನ್ಯಾಯಾಲಯವು ಜಿಲ್ಲಾಧಿಕಾರಿಯವರ ಬಂಧನಕ್ಕೆ ವಾರಂಟ್ ಹೊರಡಿಸಿದ್ದು, ಏ.೨೪ಕ್ಕೆ ಪ್ರಕರಣದ ವಿಚಾರಣೆಯನ್ನು ಮುಂದೂಡಲಾಗಿದೆ. ಕುಂಬಾರಕೊಪ್ಪಲು ನಿವಾಸಿ ಜಯರಾಮು ಅವರ ಜಮೀನು ಸಂಬಂಧ ನ್ಯಾಯಾಲಯ ನೀಡಿದ್ದ ತೀರ್ಪನ್ನು ಜಿಲ್ಲಾಡಳಿತ ಜಾರಿಗೊಳಿಸದ ಹಿನ್ನೆಲೆಯಲ್ಲಿ ಅವರು ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದರು. ವಿಚಾರಣೆಯನ್ನು ಗಂಭೀರವಾಗಿ ಪರಿ ಗಣಿಸಿದ ನ್ಯಾಯಾಲಯ, ಆದೇಶ ಪಾಲನೆ ಆಗದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಯ ಬಂಧನಕ್ಕೆ ವಾರಂಟ್ ಜಾರಿಗೊಳಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ, ನ್ಯಾಯಾಲಯದಿಂದ ವಾರಂಟ್ ಜಾರಿಯಾಗಿದೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಿಲ್ಲ. ಮಾಧ್ಯಮಗಳ ಮೂಲಕ ನನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಪರಿಶೀಲಿಸಿ ನ್ಯಾಯಾಲಯದ ಆದೇಶದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಪ್ರಕರಣ ಏನು?: ಹೆಬ್ಬಾಳು ಗ್ರಾಮದ ಸರ್ವೆ ನಂ. ೧೫೫ ಮತ್ತು ೧೫೯/೧ರಲ್ಲಿ ಇರುವ ಸುಮಾರು ಐದು ಎಕರೆ ಜಮೀನನ್ನು ೧೯೮೦ರಲ್ಲಿ ನಗರ ಭೂ ಕಾಯ್ದೆಯಡಿ ಜಿಲ್ಲಾಡಳಿತ ಸ್ವಾಧಿನಪಡಿಸಿಕೊಂಡಿತು

ಈ ಕ್ರಮವನ್ನು ಪ್ರಶ್ನಿಸಿ ಮೂಲ ಮಾಲೀಕರಾದ ಸೀತಾರಾಮೇಗೌಡ ಅವರ ಪುತ್ರ ಚೆಲುವೇಗೌಡ ಮತ್ತು ಮೊಮ್ಮಗ ಜಯರಾಮು ನ್ಯಾಯಾಲಯದ ಮೊರೆ ಹೋಗಿದ್ದರು. ಕೆಳ ನ್ಯಾಯಾಲಯ ಹಾಗೂ ಮೇಲ್ಮನವಿ ನ್ಯಾಯಾಲಯ ಎರಡೂ ಅರ್ಜಿದಾರರ ಪರ ತೀರ್ಪು ನೀಡಿದ್ದರೂ ಜಮೀನು ಹಸ್ತಾಂತರಕ್ಕೆ ಜಿಲ್ಲಾಡಳಿತ ಕ್ರಮ ಕೈಗೊಂಡಿರಲಿಲ್ಲ. ಇದರಿಂದ ಬೇಸತ್ತ ಭೂ ಮಾಲೀಕರು ಮತ್ತೆ ನ್ಯಾಯಾಲಯದ ಮೊರೆ ಹೋಗಿದ್ದು, ಇದೀಗ ನ್ಯಾಯಾಲಯ ಕಠಿಣ ನಿಲುವು ತಾಳಿದೆ.

” ಜಯರಾಮು ಪರ ವಕೀಲ ನಾಗರಾಜು ನೀಡಿರುವ ಮಾಹಿತಿಯಂತೆ, ನ್ಯಾಯಾಲಯದ ಆದೇಶಪಾಲನೆಗೆ ವಿಫಲವಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.”

ಆಂದೋಲನ ಡೆಸ್ಕ್

Recent Posts

ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್ ನಿರ್ಧಾರ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಬದಲಾವಣೆ ಎನ್ನುವುದು ಹೈಕಮಾಂಡ್‌ ನಿರ್ಧಾರ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅಧಿಕಾರ ಹಸ್ತಾಂತರ…

46 mins ago

ಮುಂದೆಯೂ ಇದೇ ರೀತಿ ಸಹಕಾರ ನೀಡಿ: ಮಂತ್ರಿಗಳಿಗೆ ಡಿಸಿಎಂ ಡಿಕೆಶಿ ಮನವಿ

ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮಂತ್ರಿಗಳ ಜೊತೆ ಸಹಕಾರವನ್ನು ಕೇಳಿದ್ದಾರೆ. ಸಿಎಂ ಹುದ್ದೆಗೆ ಇಂದು ಸಿದ್ದರಾಮಯ್ಯ ರಾಜೀನಾಮೆ…

2 hours ago

ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ನನಗೆ ಯಾವುದೇ ನೋವಿಲ್ಲ. ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಂತ್ರಿಗಳ ಜೊತೆಗಿನ ಉಪಹಾರ ಸಭೆಯಲ್ಲಿ…

3 hours ago

ಬ್ರೇಕ್‌ಫಾಸ್ಟ್‌ ಮೀಟಿಂಗ್:‌ ಸಿದ್ದರಾಮಯ್ಯರನ್ನು ತಬ್ಬಿ ಕಾಲಿಗೆ ಬಿದ್ದ ಡಿಸಿಎಂ ಡಿಕೆಶಿ

ಬೆಂಗಳೂರು: ಇಂದು ಬೆಳಿಗ್ಗೆ ಉಪಹಾರಕ್ಕೆ ಕಾವೇರಿ ನಿವಾಸಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯರನ್ನು ತಬ್ಬಿಕೊಂಡು ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ.…

4 hours ago

ಓದುಗರ ಪತ್ರ: ತಡೆಯಲಿ ಸರ್ಕಾರ!

ತಡೆಯಲಿ ಸರ್ಕಾರ! ಏರುತ್ತಲೇ ಇದೆ ಇಂಧನ ಬೆಲೆ ಇಳಿಯುತ್ತಲೇ ಇದೆ ಮಾನವ ಬೆಲೆ! ಈ ಪರಿಯ ಹಾವು-ಏಣಿ ಆಟದಲಿ ಅಧೋಗತಿಗೆ…

4 hours ago

ಓದುಗರ ಪತ್ರ: ಬಿಪಿಎಲ್ ಆದಾಯ ಮಿತಿ ಹೆಚ್ಚಿಸಿ

ರಾಜ್ಯಾದ್ಯಂತ ಹೊಸ ಬಿಪಿಎಲ್ ಕಾರ್ಡ್‌ಗಾಗಿ ಸಲ್ಲಿಕೆಯಾಗಿರುವ ಮೂರು ಲಕ್ಷ ಅರ್ಜಿಗಳು ನಾಲ್ಕು ವರ್ಷಗಳಿಂದ ವಿಲೇವಾರಿಯಾಗದೆ ಬಾಕಿ ಉಳಿದಿರುವುದು ಬೇಸರದ ಸಂಗತಿ.…

4 hours ago