Andolana originals

ನೀರಿನ ಕರ ಬಿಲ್: ಕೋಟಿಗಟ್ಟಲೇ ಹಣ ಗುಳುಂ

ಎಚ್.ಎಸ್.ದಿನೇಶ್‌ ಕುಮಾರ್‌ 

ಮೈಸೂರು ಮಹಾನಗರಪಾಲಿಕೆ: ಕೆಲ ವಾಟರ್ ಇನ್‌ಸ್ಪೆಕರ್, ಸಿಬ್ಬಂದಿ ಕರಾಮತ್ತು

ತಪ್ಪಿತಸ್ಥರ ವಿರುದ ಬಿಗಿ ಕ್ರಮ ಕೈಗೊಳ್ಳಲು ಮುಂದಾಗಿರುವ ನಗರಪಾಲಿಕೆ ಆಯುಕ್ತರು

ವಾಣಿವಿಲಾಸ ನೀರು ಸರಬರಾಜು ಕೇಂದ್ರದಲ್ಲಿ ಅವ್ಯವಹಾರ

ಕಟ್ಟಡಗಳಲ್ಲಿ ನೀರು ಸಂಪರ್ಕ ಪಡೆದವರಿಗೆ ನಕಲಿ ಬಿಲ್ ಕೊಟ್ಟು ವಂಚನೆ

ಸುಮಾರು ಒಂದು ವರ್ಷದಿಂದಲೂ ನಡೆಯುತ್ತಿರುವ ಮೋಸ

ಆಪರೇಟರ್‌ಗಳು ಸಾಥ್ ಈ ವಂಚನೆಯ ಪ್ರಕರಣದಲ್ಲಿ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿರುವ ಆಪರೇಟರ್‌ಗಳು ಸಾಥ್ ನೀಡಿದ್ದಾರೆ. ವಾಟರ್ ಇನ್ ಸ್ಪೆಕ್ಟರ್‌ಗಳು ಹೇಳಿದಂತೆ ಮಾಡಿದ ತಪ್ಪಿನಿಂದ ಅವರೀಗ ಕೆಲಸ ಕಳೆದು ಕೊಳ್ಳುವ ಭೀತಿಯಲ್ಲಿ ಇದ್ದಾರೆ.

ಮೈಸೂರು: ಇದು ‘ಬೇಲಿಯೇ ಎದ್ದು ಹೊಲ ಮೇಯ್ದ’ ಕಥೆ. ಒಂದೆಡೆ ಕೋಟ್ಯಂತರ ರೂ. ನೀರಿನ ತೆರಿಗೆ ಬಾಕಿ ಇದೆ ಎಂದು ನಗರಪಾಲಿಕೆ ಅಧಿಕಾರಿಗಳು ಬೊಬ್ಬಿಡುತ್ತಿದ್ದರೆ, ಮತ್ತೊಂದೆಡೆ ಕೆಲ ವಾಟರ್ ಇನ್‌ಸ್ಪೆಕ್ಟರ್‌ಗಳು ಮತ್ತು ಸಿಬ್ಬಂದಿಯೇ ನಕಲಿ ಬಿಲ್ ನೀಡಿ ೨ ಕೋಟಿ ರೂ. ಗಳಿಗೂ ಹೆಚ್ಚು ಹಣವನ್ನು ಗುಳುಂ ಮಾಡಿದ್ದಾರೆ.

ಇದು ನಗರಪಾಲಿಕೆ ಅಧೀನದಲ್ಲಿರುವ ವಾಣಿವಿಲಾಸ ನೀರು ಸರಬರಾಜು ಕೇಂದ್ರದ ಕರ್ಮಕಾಂಡ. ಅಲ್ಲಿನ ವಾಟರ್ ಇನ್‌ಸ್ಪೆಕ್ಟರ್ ಹಾಗೂ ನೀರಿನ ಬಿಲ್ ತಯಾರಿಸಿ ನೀಡುವ ಡಾಟಾ ಆಪರೇಟರ್‌ಗಳು ಸೇರಿ ಮಾಡಿರುವ ವಂಚನೆ. ಸ್ವತಃ ನಗರಪಾಲಿಕೆಯ ಆಯುಕ್ತರು ಈ ಅಕ್ರಮವನ್ನು ಒಪ್ಪಿಕೊಂಡಿದ್ದು, ಆದಷ್ಟು ಶೀಘ್ರವಾಗಿ ತಪ್ಪಿತಸ್ಥರ ವಿರುದ್ಧ ಬಿಗಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ತಪ್ಪಿತಸ್ಥರನ್ನು ಅಮಾನತ್ತುಗೊಳಿಸುವ ಪ್ರಕ್ರಿಯೆಯಲ್ಲೂ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿವೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆದಿದೆ ಎಂಬ ಆರೋಪದ ಬೆನ್ನಲ್ಲೇ ವಾಣಿವಿಲಾಸ ನೀರು ಸರಬರಾಜು ಕೇಂದ್ರದಲ್ಲಿ ಕೋಟ್ಯಂತರ ರೂ. ಅವ್ಯವಹಾರ ನಡೆದಿರುವ ವಿಚಾರ ಬೆಳಕಿಗೆ ಬಂದಿದೆ.

ಅಕ್ರಮವಾಗಿ ನೀರಿನ ಸಂಪರ್ಕ ಪಡೆಯುವವರಿಗೆ ದಂಡ ವಿಧಿಸುವುದರ ಜೊತೆಗೆ ಕಾಲಕಾಲಕ್ಕೆ ನೀರಿನ ಬಿಲ್ ಪಾವತಿಸುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕಾದ ಅಽಕಾರಿಗಳೇ ವಂಚನೆ ಎಸಗಿರು ವುದು ಆಶ್ಚರ್ಯ ಹುಟ್ಟಿಸುತ್ತದೆ.

ವಂಚನೆ ಹೇಗೆ?: ನಗರಪಾಲಿಕೆ ವ್ಯಾಪ್ತಿಯ ಯಾವುದೇ ಬಡಾವಣೆಗಳಲ್ಲಿ ವಾಣಿಜ್ಯ ಕಟ್ಟಡ ಅಥವಾ ಮನೆಗಳನ್ನು ನಿರ್ಮಿಸಬೇಕಾದಲ್ಲಿ ನಗರಪಾಲಿಕೆಗೆ ಹಣ ಪಾವತಿಸಿ ತಾತ್ಕಾಲಿಕ ಸಂಪರ್ಕ ಪಡೆದುಕೊಳ್ಳ ಬೇಕಾಗುತ್ತದೆ.

ಆದರೆ, ಕೆಲವರು ಯಾವುದೇ ಪರವಾನಗಿ ಪಡೆಯದೆ ಅಕ್ರಮವಾಗಿ ನೀರಿನ ಸಂಪರ್ಕವನ್ನು ಪಡೆದು ನೀರನ್ನು ಉಪ ಯೋಗಿಸಿಕೊಳ್ಳುವುದು ಆಗಾಗ್ಗೆ ನಡೆಯುತ್ತಿರುತ್ತದೆ. ಇಂತಹ ಕಟ್ಟಡಗಳನ್ನೇ ಗುರಿಯಾಗಿಟ್ಟುಕೊಳ್ಳುವ ನೀರು ಸರಬರಾಜು ಕೇಂದ್ರದ ಸಿಬ್ಬಂದಿ ಕಟ್ಟಡದ ಮಾಲೀಕರನ್ನು ಸಂಪರ್ಕಿಸಿ, ನೀವು ದಂಡ ಸಹಿತ ನೀರಿನ ಬಿಲ್ ಪಾವತಿಸಬೇಕು ಎಂದು ನೋಟಿಸ್ ನೀಡುತ್ತಿದ್ದರು. ನಂತರ ಅವರಿಂದ ಹಣ ಪಡೆದುಕೊಳ್ಳುತ್ತಿದ್ದ ಕೆಲ ವಾಟರ್ ಇನ್ಸ್ಪೆಕ್ಟರ್‌ಗಳು ಅವರಿಗೆ ನೀಡುತ್ತಿದ್ದುದು ಮಾತ್ರ ನಕಲಿ ಬಿಲ್!

ಈ ವಂಚನೆ ಸುಮಾರು ಒಂದು ವರ್ಷದಿಂದಲೂ ನಡೆದುಕೊಂಡು ಬಂದಿದೆ. ಕಳೆದ ತಿಂಗಳು ಕಟ್ಟಡದ ಮಾಲೀಕರೊಬ್ಬರಿಗೆ ಮಾಸಿಕ ನೀರಿನ ಬಿಲ್ ಬಂದಿದೆ. ಜೊತೆಗೆ ಬಾಕಿ ಹಣವೆಂದು ೫೫ ಸಾವಿರ ರೂ. ಬಂದಿದೆ. ಇದರಿಂದ ಶಾಕ್‌ಗೆ ಒಳಗಾದ ಅವರು ಬಿಲ್ ಸಮೇತ ನೀರು ಸರಬರಾಜು ಕೇಂದ್ರಕ್ಕೆ ಬಂದಿದ್ದಾರೆ. ನಾನು ಈ ಹಿಂದೆಯೇ ಹಣ ಪಾವತಿಸಿದ್ದರೂ ಬಿಲ್ ಬಂದಿದೆ ಎಂದು ದೂರಿದ್ದಾರೆ. ಈ ಸಂದರ್ಭದಲ್ಲಿ ಇಡೀ ಪ್ರಕರಣ ಬೆಳಕಿಗೆ ಬಂದಿದೆ.

ಮರುಪಾವತಿ: ವಂಚನೆ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತ ನಗರಪಾಲಿಕೆ ಅಧಿಕಾರಿಗಳು ಸಂಬಂದಪಟ್ಟ ವಾಟರ್ ಇನ್‌ಸ್ಪೆಕ್ಟರ್‌ಗಳಿಗೆ ಹಣ ಹಿಂದಿರುಗಿಸುವಂತೆ ನೋಟಿಸ್ ನೀಡಿದ್ದಾರೆ.

ಇದರಿಂದ ಆತಂಕಕ್ಕೊಳಗಾದ ವಾಟರ್ ಇನ್‌ಸ್ಪೆಕ್ಟರ್‌ಗಳು ಸುಮಾರು ೭೬ ಲಕ್ಷ ರೂ. ಗಳಷ್ಟು ವಾಪಸ್ ನಗರಪಾಲಿಕೆ ಖಾತೆಗೆ ಜಮೆ ಮಾಡಿದ್ದಾರೆ. ಉಳಿದವರೂ ಕೂಡ ಹಣ ಪಾವತಿಸಲು ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈ ಪ್ರಕರಣದಿಂದ ತೀವ್ರ ಮುಜುಗರಕ್ಕೆ ಒಳಗಾಗಿರುವ ನಗರಪಾಲಿಕೆ ಅಧಿಕಾರಿಗಳು ಇದೀಗ ೬ ಮಂದಿ ವಾಟರ್ ಇನ್‌ಸ್ಪೆಕ್ಟರ್ ಗಳು ಹಾಗೂ ವಾಣಿವಿಲಾಸ ನೀರು ಸರಬರಾಜು ಕೇಂದ್ರದ ೭ ಮಂದಿ ಆಪರೇಟರ್ ಗಳ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ.

೬ ಮಂದಿ ಇನ್‌ಸ್ಪೆಕ್ಟರ್‌ಗಳನ್ನು ಅಮಾನತ್ತು ಮಾಡಲು ನಿರ್ಧರಿಸಲಾಗಿದ್ದು, ಗುತ್ತಿಗೆ ಆಧಾರದಲ್ಲಿ ನೇಮಕವಾಗಿರುವ ೭ ಮಂದಿ ಆಪರೇಟರ್‌ಗಳನ್ನು ಸೇವೆಯಿಂದ ಬಿಡುಗಡೆಗೊಳಿಸಲು ಅಽಕಾರಿಗಳು ನಿರ್ಧ ರಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ತನಿಖೆಯನ್ನು ವಿಸ್ತರಿಸಲು ನಿರ್ಧರಿಸಿರುವ ನಗರ ಪಾಲಿಕೆ ಅಧಿಕಾರಿಗಳು ನಗರ ವ್ಯಾಪ್ತಿಯ ೬೫ ವಾರ್ಡ್ ಗಳಲ್ಲಿ ನೀರಿನ ಬಿಲ್‌ಗಳ ಪರಿ ಶೀಲನಾ ಕಾರ್ಯದಲ್ಲಿ ನಿರತರಾಗಿದ್ದಾರೆ.

ಮುಂದಿನ ದಿನಗಳಲ್ಲಿ ಮತ್ತಷ್ಟು ಮಂದಿಯ ತಲೆದಂಡವಾಗುವುದು ಖಚಿತ ಎನ್ನಲಾಗಿದೆ

ಆಂದೋಲನ ಡೆಸ್ಕ್

Recent Posts

ಕಾರು ಪಲ್ಟಿ: ಐವರಿಗೆ ಗಾಯ

ಗುಂಡ್ಲುಪೇಟೆ: ಪಟ್ಟಣದ ಹೊರವಲಯದ ಕಲ್ಯಾಣಿ ಕೊಳದ ಬಳಿ ಸೇತುವೆಯಿಂದ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿರುವ ಘಟನೆ ನಡೆದಿದೆ. ಮಂಡ್ಯ ಮೂಲದ…

4 mins ago

ಶಾಂತಳ್ಳಿ: ಮುಂದುವರೆದ ಕಾಡಾನೆ ಹಾವಳಿ

ಸೋಮವಾರಪೇಟೆ: ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಕಾಡಾನೆಗಳ ಹಾವಳಿ ಮತ್ತೆ ಮುಂದುವರೆದಿದ್ದು, ಬೆಳೆ ನಷ್ಟದ ಪ್ರಮಾಣ ಹೆಚ್ಚಾಗುತ್ತಿದೆ. ಕಳೆದ ಎರಡು…

11 mins ago

ಕರ್ನಾಟಕದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಒಂದು ವಾರ ಮುಂಗಾರು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್.‌28ರವರೆಗೂ ಕರ್ನಾಟಕದಲ್ಲಿ ಮಳೆ…

59 mins ago

ಭಾರತದಲ್ಲಿ ಟೆಲಿಗ್ರಾಂ ನಿಷೇಧ ತೆರವು

ನವದೆಹಲಿ: ನೀಟ್‌ ಮರು ಪರೀಕ್ಷೆ ಅಂಗವಾಗಿ ಭಾರತದಲ್ಲಿ ಟೆಲಿಗ್ರಾಂ ಮೇಲೆ ಹೇರಲಾಗಿದ್ದ ನಿಷೇಧವನ್ನು ತೆರವುಗೊಳಿಸಲಾಗಿದೆ. ಸದ್ಯ ಪ್ಲೇ ಸ್ಟೋರ್‌ ಹಾಗೂ…

3 hours ago

ಓದುಗರ ಪತ್ರ: ಫಿಜಿಯೋ ಥೆರಪಿ ಸೌಲಭ್ಯ ಕಲ್ಪಿಸಿ

ಹೆಗ್ಗಡದೇವನಕೋಟೆಯ ಸಾರ್ವಜನಿಕ ಆಸ್ಪತ್ರೆಯಲ್ಲಿ ಫಿಜಿಯೋಥೆರಪಿ ಸೌಲಭ್ಯವಿಲ್ಲದೇ ತಾಲ್ಲೂಕಿನ ಗ್ರಾಮಸ್ಥರು ಫಿಜಿಯೋ ಥೆರಪಿಗಾಗಿ ಖಾಸಗಿ ಆಸ್ಪತ್ರೆಗೆ ತೆರಳುವುದು ಅನಿವಾರ್ಯವಾಗಿದೆ. ಹಣವಿದ್ದವರು ಖಾಸಗಿ…

6 hours ago

ಓದುಗರ ಪತ್ರ: ಮರಗಳ ಗಣತಿ ಸ್ವಾಗತಾರ್ಹ

ಮೈಸೂರಿನಲ್ಲಿ ಭೇರುಂಡ ಫೌಂಡೇಷನ್ ಮುಖ್ಯಸ್ಥರಾದ ರಾಜವಂಶಸ್ಥೆ ತ್ರಿಷಿಕಾ ಕುಮಾರಿ ಒಡೆಯರ್ ಅವರ ನೇತೃತ್ವದಲ್ಲಿ ‘ನಮ್ಮ ಮರಗಳ ಗಣತಿ’ ಯ ಹೆಸರಿನಲ್ಲಿ…

6 hours ago