Andolana originals

ನೀರಿನ ಶುಲ್ಕ ಶೇ.25 ಹೆಚ್ಚಳ

ಮೈಸೂರು: ಅಡುಗೆ ಅನಿಲ ಸಂಕಷ್ಟವನ್ನು ಎದುರಿಸುತ್ತಿರುವ ಜನತೆಗೆ ರಾಜ್ಯ ಸರ್ಕಾರ ನೀರಿನ ದರ ಹೆಚ್ಚಳದ ಶಾಕ್ ನೀಡಿದೆ. ಏ.೧ರಿಂದ ಜಾರಿಗೆ ಬರುವಂತೆ ನಗರದಲ್ಲಿ ನೀರಿನ ದರ ಹಾಗೂ ಒಳಚರಂಡಿ ಶುಲ್ಕ ಹೆಚ್ಚಳವಾಗುತ್ತಿದೆ.

ಮೈಸೂರು ಮಹಾ ನಗರ ಪಾಲಿಕೆ ವ್ಯಾಪ್ತಿಯ ಗೃಹ ಬಳಕೆ ನೀರಿನ ದರ ಹಾಗೂ ಒಳ ಚರಂಡಿ ಶುಲ್ಕವನ್ನು ಪೌರಾಡಳಿತ ನಿರ್ದೇಶನಾಲಯದ ಆದೇಶದ ಮೇರೆಗೆ ನಗರ ಪಾಲಿಕೆಯು ಏ.೧ರಿಂದ ಜಾರಿಗೆ ಬರುವಂತೆ ಪರಿಷ್ಕರಣೆ ಮಾಡಿದೆ. ಇದರ ಜೊತೆಗೆ ನೀರಿನ ಒಟ್ಟು ಮೊತ್ತದ ಶೇ.೪೦ರಷ್ಟು ಶುಲ್ಕವನ್ನು ಒಳ ಚರಂಡಿ ಶುಲ್ಕವನ್ನಾಗಿ ಪಾವತಿಸಬೇಕಿದೆ. ಈ ಮುನ್ನ ಒಳಚರಂಡಿ ಶುಲ್ಕ ಶೇ. ೩೦ರಷ್ಟಿತ್ತು. ದಿನ ನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಲ್ಲಿ ನೀರಿನ ದರ ಏರಿಕೆಯು ಸಹಜವಾಗಿ ಅಕ್ರೋಶ ಮೂಡಿಸುತ್ತಿದೆ.

ಮೈಸೂರು ಸಂಸ್ಥಾನವು ಜನರಿಗೆ ಉಚಿತವಾಗಿ ನೀರು ನೀಡಬೇಕು ಎಂದು ವಾಣಿವಿಲಾಸ ನೀರು ಸರಬರಾಜು ಕೇಂದ್ರವನ್ನು ಆರಂಭಿಸಿತ್ತು. ಆದರೀಗ ಶುಲ್ಕದ ಹೆಸರಿನಲ್ಲಿ ಸರ್ಕಾರ ಜನರಿಂದ ಹಣವನ್ನು ಸುಲಿಗೆ ಮಾಡುತ್ತಿದೆ ಎಂದು ಸಾರ್ವಜನಿಕರು ಬೇಸರ ಹೊರಹಾಕಿದ್ದಾರೆ.

ವಾಹನ ಉಪಕರದ ಬರೆ: 

ಮೈಸೂರು: ನಗರದಲ್ಲಿ ಮೋಟಾರು ವಾಹನ ಉಪಕರ ಸಂಗ್ರಹ ಮಾಡಲು ನಗರಪಾಲಿಕೆ ತೀರ್ಮಾನಿಸಿದೆ. ಪ್ರಸಕ್ತ ಆರ್ಥಿಕ ವರ್ಷದಿಂದ ಆಸ್ತಿ ತೆರಿಗೆ ಪಾವತಿಯ ಜತೆಗೆ, ವಾಹನ ಉಪಕರವನ್ನೂ ಮಾಲೀಕರು ಪಾವತಿಸ ಬೇಕಾಗಿದೆ. ಮೈಸೂರು ನಗರಪಾಲಿಕೆ ವ್ಯಾಪ್ತಿಯಲ್ಲಿರುವ ಮನೆಗಳ ಆಸ್ತಿಯ ಗುರುತಿನ ಸಂಖ್ಯೆಯ ಆಧಾರದ ಮೇಲೆ ದ್ವಿಚಕ್ರವಾಹನಕ್ಕೆ ೧೦೦ ರೂ., ತ್ರಿಚಕ್ರವಾಹನಕ್ಕೆ ೨೦೦ ರೂ. ಹಾಗೂ ನಾಲ್ಕು ಚಕ್ರದ ವಾಹನಕ್ಕೆ ೫೦೦ರೂ. ಸಂಗ್ರಹ ಮಾಡಲಾಗುತ್ತದೆ ಎಂದು ಆಯುಕ್ತರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಾಪಿರೈಟ್‌ ಉಲ್ಲಂಘನೆ ಆರೋಪ ಪ್ರಕರಣ: ನಟ ರಕ್ಷಿತ್‌ ಶೆಟ್ಟಿಗೆ 25 ಲಕ್ಷ ರೂ ದಂಡ ವಿಧಿಸಿ ಹೈಕೋರ್ಟ್‌ ಆದೇಶ

ಬೆಂಗಳೂರು: ಕಾಪಿ ರೈಟ್‌ ಉಲ್ಲಂಘನೆ ಆರೋಪ ಪ್ರಕರಣದಲ್ಲಿ ನಟ ರಕ್ಷಿತ್‌ ಶೆಟ್ಟಿ ಅವರಿಗೆ ದೆಹಲಿ ಹೈಕೋರ್ಟ್‌ 25 ಲಕ್ಷ ದಂಡ…

15 mins ago

ಹನೂರು| ಪೊನ್ನಾಚಿ ಗ್ರಾಮದಲ್ಲಿ ಜರುಗಿದ ಕುಳ್ಳುಮಾರಮ್ಮ ಹಾಗೂ ಬಸವೇಶ್ವರ ಸ್ವಾಮಿ ಕೊಂಡೋತ್ಸವ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪೊನ್ನಾಚಿ ಗ್ರಾಮದಲ್ಲಿ ಗ್ರಾಮ ದೇವತೆ ಹಬ್ಬದ ಅಂಗವಾಗಿ ಶ್ರೀ…

26 mins ago

ಹನೂರು| ಹಿಟಾಚಿ ವಾಹನಗಳಲ್ಲಿ ಬ್ಯಾಟರಿ, ಡೀಸೆಲ್‌ ಕಳ್ಳತನ: ದೂರು ದಾಖಲು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಿಂಗನ ಕಟ್ಟೆ ಬಸ್ ನಿಲ್ದಾಣದ ಬಳಿ ನಿಲ್ಲಿಸಿದ್ದ ಹಿಟಾಚಿ ವಾಹನಗಳಲ್ಲಿ…

32 mins ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಅಪಹರಣ ಸಂತ್ರಸ್ತೆಯರ ಕಡಿದ ಬದುಕನ್ನು ಜೋಡಿಸುವ ನಸೀಮಾ

ನಾಲ್ಕು ಸಾವಿರಕ್ಕೂ ಹೆಚು ಜನರಿಗೆ ಬದುಕು ರೂಪಿಸಿದ ಉತ್ಥಾನ್ ಕಲೆಕ್ಟಿವ್ ‘ಉತ್ಥಾನ್ ಕಲೆಕ್ಟಿವ್’ ಎಂಬುದು ಅಪಹರಣ ಸಂತ್ರಸ್ತೆಯರಿಗೆ ಆಶ್ರಯ ನೀಡಿ,…

52 mins ago

ಚಾಮರಾಜನಗರ ಜಿಲ್ಲೆಯಲ್ಲಿ ಜಾನುವಾರುಗಳಿಗೆ ನೀರು, ಲಸಿಕೆಗೆ ಸಜ್ಜು

ಬೇಸಿಗೆ ಕಾರಣ ಗ್ರಾಮಮಟ್ಟದ ಸಿಮೆಂಟ್ ತೊಟ್ಟಿಗಳಿಗೆ ನೀರು ತುಂಬಿಸಲು ಜಿಲ್ಲಾಧಿಕಾರಿ, ಸಿಇಒ ಸೂಚನೆ  ಚಾಮರಾಜನಗರ: ಬೇಸಿಗೆಯ ಈ ದಿನಗಳಲ್ಲಿ ಜಾನುವಾರುಗಳಿಗೆ…

59 mins ago

ಮೈಸೂರು ಜಿಲ್ಲೆಯಲ್ಲಿ ಹಾವು ಕಡಿತ ಪ್ರಕರಣಗಳ ಸಂಖ್ಯೆ ಹೆಚ್ಚಳ

ಮೈಸೂರು: ಗ್ರಾಮಾಂತರ ಪ್ರದೇಶದ ಸಾರ್ವಜನಿಕರು ಹಾಗೂ ಕೃಷಿ ಚಟುವಟಿಕೆಯಲ್ಲಿ ತೊಡಗುವ ರೈತರಿಗೆ ಹಾವುಗಳಿಂದ ರಕ್ಷಣೆ ಪಡೆಯುವ ಅರಿವಿನ ಕೊರತೆ ಕಾರಣದಿಂದ…

1 hour ago