Andolana originals

ನೀರಿನ ಶುಲ್ಕ ಶೇ.25 ಹೆಚ್ಚಳ

ಮೈಸೂರು: ಅಡುಗೆ ಅನಿಲ ಸಂಕಷ್ಟವನ್ನು ಎದುರಿಸುತ್ತಿರುವ ಜನತೆಗೆ ರಾಜ್ಯ ಸರ್ಕಾರ ನೀರಿನ ದರ ಹೆಚ್ಚಳದ ಶಾಕ್ ನೀಡಿದೆ. ಏ.೧ರಿಂದ ಜಾರಿಗೆ ಬರುವಂತೆ ನಗರದಲ್ಲಿ ನೀರಿನ ದರ ಹಾಗೂ ಒಳಚರಂಡಿ ಶುಲ್ಕ ಹೆಚ್ಚಳವಾಗುತ್ತಿದೆ.

ಮೈಸೂರು ಮಹಾ ನಗರ ಪಾಲಿಕೆ ವ್ಯಾಪ್ತಿಯ ಗೃಹ ಬಳಕೆ ನೀರಿನ ದರ ಹಾಗೂ ಒಳ ಚರಂಡಿ ಶುಲ್ಕವನ್ನು ಪೌರಾಡಳಿತ ನಿರ್ದೇಶನಾಲಯದ ಆದೇಶದ ಮೇರೆಗೆ ನಗರ ಪಾಲಿಕೆಯು ಏ.೧ರಿಂದ ಜಾರಿಗೆ ಬರುವಂತೆ ಪರಿಷ್ಕರಣೆ ಮಾಡಿದೆ. ಇದರ ಜೊತೆಗೆ ನೀರಿನ ಒಟ್ಟು ಮೊತ್ತದ ಶೇ.೪೦ರಷ್ಟು ಶುಲ್ಕವನ್ನು ಒಳ ಚರಂಡಿ ಶುಲ್ಕವನ್ನಾಗಿ ಪಾವತಿಸಬೇಕಿದೆ. ಈ ಮುನ್ನ ಒಳಚರಂಡಿ ಶುಲ್ಕ ಶೇ. ೩೦ರಷ್ಟಿತ್ತು. ದಿನ ನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಲ್ಲಿ ನೀರಿನ ದರ ಏರಿಕೆಯು ಸಹಜವಾಗಿ ಅಕ್ರೋಶ ಮೂಡಿಸುತ್ತಿದೆ.

ಮೈಸೂರು ಸಂಸ್ಥಾನವು ಜನರಿಗೆ ಉಚಿತವಾಗಿ ನೀರು ನೀಡಬೇಕು ಎಂದು ವಾಣಿವಿಲಾಸ ನೀರು ಸರಬರಾಜು ಕೇಂದ್ರವನ್ನು ಆರಂಭಿಸಿತ್ತು. ಆದರೀಗ ಶುಲ್ಕದ ಹೆಸರಿನಲ್ಲಿ ಸರ್ಕಾರ ಜನರಿಂದ ಹಣವನ್ನು ಸುಲಿಗೆ ಮಾಡುತ್ತಿದೆ ಎಂದು ಸಾರ್ವಜನಿಕರು ಬೇಸರ ಹೊರಹಾಕಿದ್ದಾರೆ.

ವಾಹನ ಉಪಕರದ ಬರೆ: 

ಮೈಸೂರು: ನಗರದಲ್ಲಿ ಮೋಟಾರು ವಾಹನ ಉಪಕರ ಸಂಗ್ರಹ ಮಾಡಲು ನಗರಪಾಲಿಕೆ ತೀರ್ಮಾನಿಸಿದೆ. ಪ್ರಸಕ್ತ ಆರ್ಥಿಕ ವರ್ಷದಿಂದ ಆಸ್ತಿ ತೆರಿಗೆ ಪಾವತಿಯ ಜತೆಗೆ, ವಾಹನ ಉಪಕರವನ್ನೂ ಮಾಲೀಕರು ಪಾವತಿಸ ಬೇಕಾಗಿದೆ. ಮೈಸೂರು ನಗರಪಾಲಿಕೆ ವ್ಯಾಪ್ತಿಯಲ್ಲಿರುವ ಮನೆಗಳ ಆಸ್ತಿಯ ಗುರುತಿನ ಸಂಖ್ಯೆಯ ಆಧಾರದ ಮೇಲೆ ದ್ವಿಚಕ್ರವಾಹನಕ್ಕೆ ೧೦೦ ರೂ., ತ್ರಿಚಕ್ರವಾಹನಕ್ಕೆ ೨೦೦ ರೂ. ಹಾಗೂ ನಾಲ್ಕು ಚಕ್ರದ ವಾಹನಕ್ಕೆ ೫೦೦ರೂ. ಸಂಗ್ರಹ ಮಾಡಲಾಗುತ್ತದೆ ಎಂದು ಆಯುಕ್ತರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

3 mins ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

10 mins ago

ಕಣ್ಣಿಲ್ಲದ ತಮ್ಮ, ದಿಕ್ಕಿಲ್ಲದ ಅಕ್ಕ

ಮಧುಕರ ಎಮ್.ಎಲ್. ಯಳಂದೂರಿನಲ್ಲೊಂದು ಅಪರೂಪದ ಜೋಡಿ ಅದು ಬೇಸಿಗೆ ಕಾಲ, ಬೆಳಗಿನ ವೇಳೆಯಲ್ಲಿ ವಾಕಿಂಗ್ ಮಾಡುವ ಜನರ ಸಂಖ್ಯೆ ಹೆಚ್ಚು,…

16 mins ago

ಯರಿಯೂರಿನ ಸೋಬಾನೆ ಮಾಳಗರಸಮ್ಮ ಮತ್ತು ಸೋದರಿಯರು

ಪ್ರಕಾಶ್ ಪುಟ್ಟಪ್ಪ ಸುತ್ತಮುತ್ತ ಹಳ್ಳಿಗಳಿಗೆಲ್ಲ ಸೋಬಾನೆ ಮಾಳಗರಸಮ್ಮ ಎಂದೇ ಪ್ರಖ್ಯಾತಿ ಗಳಿಸಿರೋ ಈ ಹಿರಿ ತಾಯಿಯ ವೈಯಕ್ತಿಕ ಬದುಕು ನಿಜಕ್ಕೂ…

21 mins ago

2026ರ ಮೈಸೂರು ದಸರಾಗೆ ಡಿಜಿಟಲ್ ಸ್ಪರ್ಶ!

ಕೆ.ಎಸ್.ಚಂದ್ರಶೇಖರ್‌ಮೂರ್ತಿ ಅರಮನೆಯಿಂದ ಪಂಜಿನ ಕವಾಯತುವರೆಗೂ ಅಂಗೈಯ ವೀಕ್ಷಣೆಗೆ ಅವಕಾಶ  ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ೨೦೨೬ರ ವರ್ಷದಲ್ಲಿ ಹತ್ತು ಹಲವು…

25 mins ago

ಮಡಿಕೇರಿ ದಸರಾ ಶೋಭಾಯಾತ್ರೆ ದಿನಾಂಕ ಗೊಂದಲ

ನವೀನ್ ಡಿಸೋಜ ಅ.೨೦, ೨೧ರ ಕುರಿತು ಭಿನ್ನ ನಿರ್ಧಾರ; ದೇವಪ್ರಶ್ನೆ ಮೂಲಕ ಪರಿಹಾರಕ್ಕೆ ಕರಗ ಸೇವೆದಾರರ ಮನವಿ ಮಡಿಕೇರಿ: ಐತಿಹಾಸಿಕ…

31 mins ago