Andolana originals

ನೀರಿನ ಶುಲ್ಕ ಶೇ.25 ಹೆಚ್ಚಳ

ಮೈಸೂರು: ಅಡುಗೆ ಅನಿಲ ಸಂಕಷ್ಟವನ್ನು ಎದುರಿಸುತ್ತಿರುವ ಜನತೆಗೆ ರಾಜ್ಯ ಸರ್ಕಾರ ನೀರಿನ ದರ ಹೆಚ್ಚಳದ ಶಾಕ್ ನೀಡಿದೆ. ಏ.೧ರಿಂದ ಜಾರಿಗೆ ಬರುವಂತೆ ನಗರದಲ್ಲಿ ನೀರಿನ ದರ ಹಾಗೂ ಒಳಚರಂಡಿ ಶುಲ್ಕ ಹೆಚ್ಚಳವಾಗುತ್ತಿದೆ.

ಮೈಸೂರು ಮಹಾ ನಗರ ಪಾಲಿಕೆ ವ್ಯಾಪ್ತಿಯ ಗೃಹ ಬಳಕೆ ನೀರಿನ ದರ ಹಾಗೂ ಒಳ ಚರಂಡಿ ಶುಲ್ಕವನ್ನು ಪೌರಾಡಳಿತ ನಿರ್ದೇಶನಾಲಯದ ಆದೇಶದ ಮೇರೆಗೆ ನಗರ ಪಾಲಿಕೆಯು ಏ.೧ರಿಂದ ಜಾರಿಗೆ ಬರುವಂತೆ ಪರಿಷ್ಕರಣೆ ಮಾಡಿದೆ. ಇದರ ಜೊತೆಗೆ ನೀರಿನ ಒಟ್ಟು ಮೊತ್ತದ ಶೇ.೪೦ರಷ್ಟು ಶುಲ್ಕವನ್ನು ಒಳ ಚರಂಡಿ ಶುಲ್ಕವನ್ನಾಗಿ ಪಾವತಿಸಬೇಕಿದೆ. ಈ ಮುನ್ನ ಒಳಚರಂಡಿ ಶುಲ್ಕ ಶೇ. ೩೦ರಷ್ಟಿತ್ತು. ದಿನ ನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಲ್ಲಿ ನೀರಿನ ದರ ಏರಿಕೆಯು ಸಹಜವಾಗಿ ಅಕ್ರೋಶ ಮೂಡಿಸುತ್ತಿದೆ.

ಮೈಸೂರು ಸಂಸ್ಥಾನವು ಜನರಿಗೆ ಉಚಿತವಾಗಿ ನೀರು ನೀಡಬೇಕು ಎಂದು ವಾಣಿವಿಲಾಸ ನೀರು ಸರಬರಾಜು ಕೇಂದ್ರವನ್ನು ಆರಂಭಿಸಿತ್ತು. ಆದರೀಗ ಶುಲ್ಕದ ಹೆಸರಿನಲ್ಲಿ ಸರ್ಕಾರ ಜನರಿಂದ ಹಣವನ್ನು ಸುಲಿಗೆ ಮಾಡುತ್ತಿದೆ ಎಂದು ಸಾರ್ವಜನಿಕರು ಬೇಸರ ಹೊರಹಾಕಿದ್ದಾರೆ.

ವಾಹನ ಉಪಕರದ ಬರೆ: 

ಮೈಸೂರು: ನಗರದಲ್ಲಿ ಮೋಟಾರು ವಾಹನ ಉಪಕರ ಸಂಗ್ರಹ ಮಾಡಲು ನಗರಪಾಲಿಕೆ ತೀರ್ಮಾನಿಸಿದೆ. ಪ್ರಸಕ್ತ ಆರ್ಥಿಕ ವರ್ಷದಿಂದ ಆಸ್ತಿ ತೆರಿಗೆ ಪಾವತಿಯ ಜತೆಗೆ, ವಾಹನ ಉಪಕರವನ್ನೂ ಮಾಲೀಕರು ಪಾವತಿಸ ಬೇಕಾಗಿದೆ. ಮೈಸೂರು ನಗರಪಾಲಿಕೆ ವ್ಯಾಪ್ತಿಯಲ್ಲಿರುವ ಮನೆಗಳ ಆಸ್ತಿಯ ಗುರುತಿನ ಸಂಖ್ಯೆಯ ಆಧಾರದ ಮೇಲೆ ದ್ವಿಚಕ್ರವಾಹನಕ್ಕೆ ೧೦೦ ರೂ., ತ್ರಿಚಕ್ರವಾಹನಕ್ಕೆ ೨೦೦ ರೂ. ಹಾಗೂ ನಾಲ್ಕು ಚಕ್ರದ ವಾಹನಕ್ಕೆ ೫೦೦ರೂ. ಸಂಗ್ರಹ ಮಾಡಲಾಗುತ್ತದೆ ಎಂದು ಆಯುಕ್ತರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕಾಕ್ರೋಚ್‌ ಪ್ರತಿಭಟನೆ ; ವಿದ್ಯಾರ್ಥಿಗಳ ರಕ್ಷಣೆಗೆ ಪೊಲೀಸ್‌ ವ್ಯಾನ್‌ ತಡೆದ ಜೇನ್‌-ಝಿ ಕಿಡ್‌

ಮುಂಬೈ : ನೀಟ್‌ ಅಕ್ರಮ ವಿರೋಧಿಸಿ ದೇಶಾದ್ಯಂತ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯು ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ.…

10 hours ago

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

23 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

23 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

23 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

23 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

23 hours ago