Andolana originals

ನೀರಿನ ಶುಲ್ಕ ಶೇ.25 ಹೆಚ್ಚಳ

ಮೈಸೂರು: ಅಡುಗೆ ಅನಿಲ ಸಂಕಷ್ಟವನ್ನು ಎದುರಿಸುತ್ತಿರುವ ಜನತೆಗೆ ರಾಜ್ಯ ಸರ್ಕಾರ ನೀರಿನ ದರ ಹೆಚ್ಚಳದ ಶಾಕ್ ನೀಡಿದೆ. ಏ.೧ರಿಂದ ಜಾರಿಗೆ ಬರುವಂತೆ ನಗರದಲ್ಲಿ ನೀರಿನ ದರ ಹಾಗೂ ಒಳಚರಂಡಿ ಶುಲ್ಕ ಹೆಚ್ಚಳವಾಗುತ್ತಿದೆ.

ಮೈಸೂರು ಮಹಾ ನಗರ ಪಾಲಿಕೆ ವ್ಯಾಪ್ತಿಯ ಗೃಹ ಬಳಕೆ ನೀರಿನ ದರ ಹಾಗೂ ಒಳ ಚರಂಡಿ ಶುಲ್ಕವನ್ನು ಪೌರಾಡಳಿತ ನಿರ್ದೇಶನಾಲಯದ ಆದೇಶದ ಮೇರೆಗೆ ನಗರ ಪಾಲಿಕೆಯು ಏ.೧ರಿಂದ ಜಾರಿಗೆ ಬರುವಂತೆ ಪರಿಷ್ಕರಣೆ ಮಾಡಿದೆ. ಇದರ ಜೊತೆಗೆ ನೀರಿನ ಒಟ್ಟು ಮೊತ್ತದ ಶೇ.೪೦ರಷ್ಟು ಶುಲ್ಕವನ್ನು ಒಳ ಚರಂಡಿ ಶುಲ್ಕವನ್ನಾಗಿ ಪಾವತಿಸಬೇಕಿದೆ. ಈ ಮುನ್ನ ಒಳಚರಂಡಿ ಶುಲ್ಕ ಶೇ. ೩೦ರಷ್ಟಿತ್ತು. ದಿನ ನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಲ್ಲಿ ನೀರಿನ ದರ ಏರಿಕೆಯು ಸಹಜವಾಗಿ ಅಕ್ರೋಶ ಮೂಡಿಸುತ್ತಿದೆ.

ಮೈಸೂರು ಸಂಸ್ಥಾನವು ಜನರಿಗೆ ಉಚಿತವಾಗಿ ನೀರು ನೀಡಬೇಕು ಎಂದು ವಾಣಿವಿಲಾಸ ನೀರು ಸರಬರಾಜು ಕೇಂದ್ರವನ್ನು ಆರಂಭಿಸಿತ್ತು. ಆದರೀಗ ಶುಲ್ಕದ ಹೆಸರಿನಲ್ಲಿ ಸರ್ಕಾರ ಜನರಿಂದ ಹಣವನ್ನು ಸುಲಿಗೆ ಮಾಡುತ್ತಿದೆ ಎಂದು ಸಾರ್ವಜನಿಕರು ಬೇಸರ ಹೊರಹಾಕಿದ್ದಾರೆ.

ವಾಹನ ಉಪಕರದ ಬರೆ: 

ಮೈಸೂರು: ನಗರದಲ್ಲಿ ಮೋಟಾರು ವಾಹನ ಉಪಕರ ಸಂಗ್ರಹ ಮಾಡಲು ನಗರಪಾಲಿಕೆ ತೀರ್ಮಾನಿಸಿದೆ. ಪ್ರಸಕ್ತ ಆರ್ಥಿಕ ವರ್ಷದಿಂದ ಆಸ್ತಿ ತೆರಿಗೆ ಪಾವತಿಯ ಜತೆಗೆ, ವಾಹನ ಉಪಕರವನ್ನೂ ಮಾಲೀಕರು ಪಾವತಿಸ ಬೇಕಾಗಿದೆ. ಮೈಸೂರು ನಗರಪಾಲಿಕೆ ವ್ಯಾಪ್ತಿಯಲ್ಲಿರುವ ಮನೆಗಳ ಆಸ್ತಿಯ ಗುರುತಿನ ಸಂಖ್ಯೆಯ ಆಧಾರದ ಮೇಲೆ ದ್ವಿಚಕ್ರವಾಹನಕ್ಕೆ ೧೦೦ ರೂ., ತ್ರಿಚಕ್ರವಾಹನಕ್ಕೆ ೨೦೦ ರೂ. ಹಾಗೂ ನಾಲ್ಕು ಚಕ್ರದ ವಾಹನಕ್ಕೆ ೫೦೦ರೂ. ಸಂಗ್ರಹ ಮಾಡಲಾಗುತ್ತದೆ ಎಂದು ಆಯುಕ್ತರು ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

3 hours ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

3 hours ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

3 hours ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

3 hours ago

ಇಂಧನ ಬೆಲೆ ಏರಿಕೆ-ಮೊಸಳೆ ಬಂತು ಮೊಸಳೆ ಕಥೆ!

ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್‌ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…

3 hours ago

‘ಬೇಡು ಹಬ್ಬದ ಹೆಸರಿನಲ್ಲಿ ತೊಂದರೆ ನೀಡಿದಲ್ಲಿ ಕಾನೂನು ಕ್ರಮ’

ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ  ಮಡಿಕೇರಿ: ಅಶ್ಲೀಲ…

3 hours ago