Andolana originals

ಹುಲ್ಲಹಳ್ಳಿ ನಾಲೆಯಲ್ಲಿ ೨ ದಿನದಲ್ಲಿ ಹರಿದ ನೀರು

ನಂಜನಗೂಡು: ಕಬಿನಿ ಬಲದಂಡೆ ನಾಲೆಯ ಉಪನಾಲೆ ಕುಸಿದು ಬಿದ್ದ ಪರಿಣಾಮ ಹುಲ್ಲಹಳ್ಳಿ ನಾಲೆಯ ನೀರು ಮುಂದಕ್ಕೆ ಹರಿಯಲಾಗದೆ ಬಿಳಿಗೆರೆ ಹೋಬಳಿಯ ೭,೨೦೦ ಎಕರೆ ಪ್ರದೇಶಕ್ಕೆ ನೀರಿಲ್ಲದೆ ತೊಂದರೆಯಾ ಗಿದ್ದ ಕುರಿತು ‘ಆಂದೋಲನ’ ದಿನಪತ್ರಿಕೆಯಲ್ಲಿ ವರದಿ ಪ್ರಕಟವಾಗಿದ್ದನ್ನು ಗಮನಿಸಿದ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ನಾಲೆ ದುರಸ್ತಿಪಡಿಸಿ ನೀರು ಹರಿಯಲು ವ್ಯವಸ್ಥೆ ಮಾಡಿದ್ದಾರೆ.

ಕಬಿನಿ ಜಲಾಶಯದ ಇಂಜಿನಿಯರುಗಳಾದ ಹಾಲಪ್ಪ ಹಾಗೂ ದರ್ಶನ್ ಅವರು ಸ್ಥಳಕ್ಕೆ ಆಗಮಿಸಿ ಕುಸಿದು ಬಿದ್ದಿದ್ದ ಕಿರುನಾಲೆಯ ಅವಶೇಷಗಳನ್ನು ತೆರವುಗೊಳಿಸಿ ಹೊರಸಾಗಿಸಿದ್ದರಿಂದ ಗುರುವಾರ ಮಧ್ಯಾಹ್ನದಿಂದಲೇ ಹುಲ್ಲಹಳ್ಳಿ ನಾಲೆಯಲ್ಲಿ ನೀರು ಹರಿಯತೊಡಗಿದ್ದು ನಾಲೆಯ ಅಚ್ಚುಕಟ್ಟು ಭಾಗದ ರೈತರ ನೆಮ್ಮದಿಗೆ ಕಾರಣವಾಗಿದ್ದಾರೆ

ಆಂದೋಲನ ಡೆಸ್ಕ್

Recent Posts

ಹಣ ಅಕ್ರಮ ವರ್ಗಾವಣೆ ಪ್ರಕರಣ : ಕಾಂಗ್ರೆಸ್‌ ಶಾಸಕ ವೀರೇಂದ್ರಗೆ ಜಾಮೀನು

ಬೆಂಗಳೂರು : ಜಾರಿ ನಿರ್ದೇಶನಾಲಯ(ಇ.ಡಿ) ದಾಖಲಿಸಿದ್ದ ಕ್ರಿಮಿನಲ್‌ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಕಾಂಗ್ರೆಸ್‌ ಶಾಸಕ ಕೆ.ಸಿ.ವೀರೇಂದ್ರ ಅವರಿಗೆ ಬಿಗ್‌ ರಿಲೀಫ್‌…

13 mins ago

ಮೈಸೂರಿನಲ್ಲಿ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ : ಜಿಲ್ಲಾಧಿಕಾರಿ ಮೆಚ್ಚುಗೆ

ಮೈಸೂರು : ಬೇರೆ ಜಿಲ್ಲೆಗಳಿಗೆ ಹೋಲಿಸಿಕೊಂಡರೆ ಮೈಸೂರಿನ ಪತ್ರಿಕೋದ್ಯಮ ಗುಣಮಟ್ಟದಿಂದ ಕೂಡಿದ್ದು, ಇಲ್ಲಿನ ಪತ್ರಕರ್ತರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು…

51 mins ago

ನಾಪೋಕ್ಲು |ಕಾಡಾನೆಗಳ ದಾಳಿ ; ವಾಹನಗಳು ಜಖಂ

ನಾಪೋಕ್ಲು : ಕಾಡಾನೆಗಳ ದಾಳಿಯಿಂದ ವಾಹನಗಳು ಜಖಂಗೊಂಡ ಘಟನೆ ಮಂಜಾಟ್ ಗಿರಿಜನ ಕಾಲೋನಿಯಲ್ಲಿ ಭಾನುವಾರ ರಾತ್ರಿ ನಡೆದಿದೆ. ಇಲ್ಲಿಗೆ ಸಮೀಪದ…

1 hour ago

ಕೈಗಾರಿಕೆ ಸ್ಥಾಪನೆಗೆ ಅರ್ಜಿ ಬಂದರೆ ಸಂಪೂರ್ಣ ಬೆಂಬಲ: ಸಚಿವ ಚಲುವರಾಯಸ್ವಾಮಿ ಭರವಸೆ

ಮಂಡ್ಯ : ಕೇಂದ್ರ ಬೃಹತ್ ಉಕ್ಕು ಮತ್ತು ಕೈಗಾರಿಕಾ ಸಚಿವರಾದ ಎಚ್.ಡಿ. ಕುಮಾರಸ್ವಾಮಿ ಅವರು ಯಾವುದಾದರೂ ಕಂಪನಿಗಳಿಂದ ಕೈಗಾರಿಕೆ ಸ್ಥಾಪನೆಗೆ…

2 hours ago

ಜ.1ರಂದು ಚಾ.ಬೆಟ್ಟಕ್ಕೆ ಹೆಚ್ಚಿನ ಜನ ನಿರೀಕ್ಷೆ : ಅಗತ್ಯ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸೂಚನೆ

ಮೈಸೂರು : ಹೊಸ ವರ್ಷ ಜನವರಿ 1ರಂದು ಚಾಮುಂಡಿ ಬೆಟ್ಟಕ್ಕೆ ಹೆಚ್ವಿನ ಭಕ್ತಾಧಿಗಳು ಆಗಮಿಸುವ ನಿರೀಕ್ಷೆ ಇದ್ದು, ಅಗತ್ಯ ವ್ಯವಸ್ಥೆಗಳನ್ನು…

2 hours ago

ಬೈಕ್ ಸಮೇತ ಸಜೀವ ದಹನವಾದ ಯುವಕ ; ಕೊಲೆ ಶಂಕೆ

ನಂಜನಗೂಡು : ಬೈಕ್ ಸಮೇತ ಯುವಕ ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಕೊರೆಹುಂಡಿ ಗ್ರಾಮದ ಹುಲ್ಲಹಳ್ಳಿ ನಾಲೆ ಬಳಿ ನಡೆದಿದೆ.…

2 hours ago