ಮಂಜು ಕೋಟೆ
ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್ ಮಾಡಲಾಗಿದೆ.
ತಿಂಗಳ ಪ್ರಾರಂಭದಲ್ಲಿ ಕೇರಳದ ವಯನಾಡು ಪ್ರದೇಶ ವ್ಯಾಪ್ತಿಯಲ್ಲಿ ಭಾರಿ ಮಳೆಯಾಗಿದ್ದರಿಂದ ಕಬಿನಿ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಾಗುತ್ತಿದ್ದಂತೆ ಐದು ದಿನಗಳ ಹಿಂದೆ ಜಲಾಶಯದ ನಾಲ್ಕು ಗೇಟ್ಗಳ ಮೂಲಕ ೧೦,೦೦೦ ಕ್ಯೂಸೆಕ್ಸ್ನಿಂದ ೨೭ ಸಾವಿರ ಕ್ಯೂಸೆಕ್ಸ್ತನಕ ಪ್ರತಿನಿತ್ಯ ನೀರು ಬಿಡಲಾಗಿದ್ದು, ೬ ಟಿಎಂಸಿಗೂ ಹೆಚ್ಚಿನ ನೀರನ್ನು ತಮಿಳುನಾಡಿಗೆ ಹರಿಸಲಾಗಿದೆ.
ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಿದ್ದ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಸರ್ಕಾರಕ್ಕೆ ಕಬಿನಿ ಜಲಾಶಯ ವರದಾನವಾಗಿತ್ತು. ಪ್ರಾಧಿಕಾರ ನೀಡಿದ ಆದೇಶಕ್ಕಿಂತ ಒಂದೂವರೆ ಟಿಎಂಸಿ ನೀರು ಹೆಚ್ಚಾಗಿ ಹರಿದುಹೋಗಿದೆ.
ಬುಧವಾರದಿಂದ ಕೇರಳದ ವಯನಾಡು ಪ್ರದೇಶದಲ್ಲಿ ಮಳೆ ಪ್ರಮಾಣ ತೀವ್ರ ಕುಸಿತ ಕಂಡಿದ್ದರಿಂದ ಜಲಾಶಯಕ್ಕೆ ಒಳಹರಿವು ೯ ಕ್ಯೂಸೆಕ್ಸ್ ನಷ್ಟು ಮಾತ್ರ ಬರುತ್ತಿದೆ. ಹೀಗಾಗಿ ಜಲಾಶಯದಿಂದ ನಾಲ್ಕು ಗೇಟ್ಗಳ ಮೂಲಕ ಹೊರ ಬಿಡಲಾಗುತ್ತಿದ್ದ ನೀರನ್ನು ಸ್ಥಗಿತಗೊಳಿಸಲಾಗಿದೆ.
ಕಬಿನಿ ಎಡದಂಡೆ ಮತ್ತು ಬಲದಂಡೆ ನಾಲೆಗಳ ರೈತರು ಮತ್ತು ಕೆರೆಕಟ್ಟೆಗಳಿಗೆ ೨,೦೦೦ ಕ್ಯೂಸೆಕ್ಸ್ ನೀರು, ಹುಲ್ಲಹಳ್ಳಿ, ರಾಂಪುರ ನಾಲೆಗಳಿಗೆ, ಮೈಸೂರು, ಬೆಂಗಳೂರಿಗೆ ಕುಡಿಯುವ ನೀರಿಗಾಗಿ ಸುಭಾಷ್ ವಿದ್ಯುತ್ ಘಟಕದ ಮೂಲಕ ೫,೦೦೦ ಕ್ಯೂಸೆಕ್ಸ್ ನೀರನ್ನು ಬಿಡಲಾಗುತ್ತಿದೆ. ಜಲಾಶಯದ ಗರಿಷ್ಟ ಮಟ್ಟ ೮೪ ಅಡಿಗಳಿದ್ದು ಜಲಾಶಯದ ಸುರಕ್ಷತೆ ದೃಷ್ಟಿಯಿಂದ ೮೨ ಅಡಿಗಳಿಗೆ ನೀರನ್ನು ಶೇಖರಣೆ ಮಾಡಿಕೊಳ್ಳಲಾಗಿದೆ.
” ವಯನಾಡು ಪ್ರದೇಶದಲ್ಲಿ ಮಳೆ ಪ್ರಮಾಣ ಎರಡು ಮೂರು ದಿನಗಳಿಂದ ಕಡಿಮೆಯಾಗಿದ್ದು ಜಲಾಶಯಕ್ಕೆ ಒಳಹರಿವಿನ ಪ್ರಮಾಣ ೯,೦೦೦ ಕ್ಯೂಸೆಕ್ಸ್ ಬರುತ್ತಿದ್ದು, ನದಿಗೆ ಬಿಡಲಾಗುತ್ತಿದ್ದ ಭಾರೀ ಪ್ರಮಾಣದ ನೀರನ್ನು ಸ್ಥಗಿತಗೊಳಿಸಲಾಗಿದೆ.”
ಗಣೇಶ್, ಎಇಇ, ಕಬಿನಿ ಜಲಾಶಯ
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…