Andolana originals

ನುಗು ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ

ಸರಗೂರು ದಾಸೇಗೌಡ

ಸರಗೂರು: ಕೇರಳ ಮತ್ತು ತಾಲ್ಲೂಕಿನ ಚಿಕ್ಕಬರಗಿ, ದೊಡ್ಡಬರಗಿ, ಆಲನಹಳ್ಳಿ, ಕುರ್ಣೇಗಾಲ, ಕಾಡಬೇಗೂರು, ಹೊಸ ಕೋಟೆ, ಮುತ್ತಿಗೆಹುಂಡಿ ಭಾಗಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ತಾಲ್ಲೂಕಿನ ನುಗು ಜಲಾಶಯದ ನೀರಿನ ಮಟ್ಟ ೯೩ ಅಡಿಗಳನ್ನು ತಲುಪಿದೆ.

ಕೆಲ ದಿನಗಳ ಹಿಂದೆ ಜಲಾಶಯದಲ್ಲಿ ೮೨ ಅಡಿಗಳಷ್ಟು ನೀರು ಸಂಗ್ರಹವಾಗಿತ್ತು. ಸದ್ಯ ಜಲಾಶಯಕ್ಕೆ ೧,೩೯೨ ಕ್ಯೂಸೆಕ್ಸ್ ನೀರು ಒಳಹರಿವಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮೇ ತಿಂಗಳಿನಲ್ಲಿ ಜಲಾಶಯದಲ್ಲಿ ಈ ಮಟ್ಟದ ನೀರು ಸಂಗ್ರಹವಾಗಿದೆ.

ನುಗು ಜಲಾಶಯದ ಗರಿಷ್ಟ ಮಟ್ಟ ೧೧೦ ಅಡಿಗಳಿದ್ದು, ಸದ್ಯ ನೀರಿನ ಮಟ್ಟ ೯೩ ಅಡಿಗಳಷ್ಟಿದೆ ಎಂದು ನುಗು ಜಲಾಶಯದ ಇಂಜಿನಿಯರ್ ದೀಪಕ್ ತಿಳಿಸಿದ್ದಾರೆ.

೫.೪೪ ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವಿರುವ ಜಲಾಶಯ ವ್ಯಾಪ್ತಿಯಲ್ಲಿ ಸುಮಾರು ೧೮,೧೧೦ ಎಕರೆ ಅಚ್ಚುಕಟ್ಟು ಪ್ರದೇಶವಿದೆ. ಸರಗೂರು ತಾಲ್ಲೂಕಿನ ೧,೫೦೦ ಎಕರೆ ಪ್ರದೇಶಕ್ಕೆ ನೀರು ಹರಿಸಿದರೆ, ಉಳಿದ ನೀರು ನಂಜನಗೂಡು ತಾಲ್ಲೂಕಿನ ಜನರಿಗೆ ದೊರಕಲಿದೆ. ಮೇಲ್ದಂಡೆ ನಾಲೆ ೮೭ ಕಿ.ಮೀ. ಉದ್ದವಿದ್ದು, ನಂಜನಗೂಡಿನ ನರಸಾಂಬುಧಿ ಕೆರೆಯವರೆಗೆ ಇದೆ. ೬೬೦ ಕ್ಯೂಸೆಕ್ಸ್ ನೀರು ಬಳಕೆಯಾಗಲಿದೆ.

ಜಲಾಶಯದ ಸಮೀಪದಲ್ಲೇ ೨ ಕಿ.ಮೀ. ದೂರದಲ್ಲಿ ಹಲಸೂರು ಗ್ರಾಮದ ಬಳಿ ಕೆರೆಗೆ ಅಣೆಕಟ್ಟೆ ನಿರ್ಮಿಸಲಾಗಿದೆ. ಬಲದಂಡೆ ನಾಲೆ ಹುಲ್ಲಹಳ್ಳಿವರೆಗೆ ೩೮ ಕಿ.ಮೀ. ದೂರವಿದೆ. ೧೫೦ ಕ್ಯೂಸೆಕ್ಸ್ ನೀರು ಬಳಕೆಯಾಗಲಿದೆ. ಅದೇ ರೀತಿ ಎಡದಂಡೆ ನಾಲೆ ನಂಜನಗೂಡು ತಾಲ್ಲೂಕಿನ ಹರದನಹಳ್ಳಿವರೆಗೆ ೩೩ ಕಿ.ಮೀ. ದೂರವಿದ್ದು, ೭೦ ಕ್ಯೂಸೆಕ್ಸ್ ನೀರು ಇರಲಿದೆ. ಒಟ್ಟು ೧೦ ಕೆರೆಗಳಿಗೆ ನೀರು ಬಳಕೆಯಾಗಲಿದೆ.

ನುಗು ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಳದಿಂದ ರೈತರಲ್ಲಿ ಸಂತಸ ಮೂಡಿದೆ ಎಂದು ರೈತ ಮುಖಂಡ ಮುಳ್ಳೂರು ರವಿಕುಮಾರ್ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

5 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

6 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

7 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

7 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

8 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

8 hours ago