Andolana originals

ನುಗು ಜಲಾಶಯದಲ್ಲಿ ನೀರಿನ ಮಟ್ಟ ಏರಿಕೆ

ಸರಗೂರು ದಾಸೇಗೌಡ

ಸರಗೂರು: ಕೇರಳ ಮತ್ತು ತಾಲ್ಲೂಕಿನ ಚಿಕ್ಕಬರಗಿ, ದೊಡ್ಡಬರಗಿ, ಆಲನಹಳ್ಳಿ, ಕುರ್ಣೇಗಾಲ, ಕಾಡಬೇಗೂರು, ಹೊಸ ಕೋಟೆ, ಮುತ್ತಿಗೆಹುಂಡಿ ಭಾಗಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಪರಿಣಾಮ ತಾಲ್ಲೂಕಿನ ನುಗು ಜಲಾಶಯದ ನೀರಿನ ಮಟ್ಟ ೯೩ ಅಡಿಗಳನ್ನು ತಲುಪಿದೆ.

ಕೆಲ ದಿನಗಳ ಹಿಂದೆ ಜಲಾಶಯದಲ್ಲಿ ೮೨ ಅಡಿಗಳಷ್ಟು ನೀರು ಸಂಗ್ರಹವಾಗಿತ್ತು. ಸದ್ಯ ಜಲಾಶಯಕ್ಕೆ ೧,೩೯೨ ಕ್ಯೂಸೆಕ್ಸ್ ನೀರು ಒಳಹರಿವಿದೆ. ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮೇ ತಿಂಗಳಿನಲ್ಲಿ ಜಲಾಶಯದಲ್ಲಿ ಈ ಮಟ್ಟದ ನೀರು ಸಂಗ್ರಹವಾಗಿದೆ.

ನುಗು ಜಲಾಶಯದ ಗರಿಷ್ಟ ಮಟ್ಟ ೧೧೦ ಅಡಿಗಳಿದ್ದು, ಸದ್ಯ ನೀರಿನ ಮಟ್ಟ ೯೩ ಅಡಿಗಳಷ್ಟಿದೆ ಎಂದು ನುಗು ಜಲಾಶಯದ ಇಂಜಿನಿಯರ್ ದೀಪಕ್ ತಿಳಿಸಿದ್ದಾರೆ.

೫.೪೪ ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯವಿರುವ ಜಲಾಶಯ ವ್ಯಾಪ್ತಿಯಲ್ಲಿ ಸುಮಾರು ೧೮,೧೧೦ ಎಕರೆ ಅಚ್ಚುಕಟ್ಟು ಪ್ರದೇಶವಿದೆ. ಸರಗೂರು ತಾಲ್ಲೂಕಿನ ೧,೫೦೦ ಎಕರೆ ಪ್ರದೇಶಕ್ಕೆ ನೀರು ಹರಿಸಿದರೆ, ಉಳಿದ ನೀರು ನಂಜನಗೂಡು ತಾಲ್ಲೂಕಿನ ಜನರಿಗೆ ದೊರಕಲಿದೆ. ಮೇಲ್ದಂಡೆ ನಾಲೆ ೮೭ ಕಿ.ಮೀ. ಉದ್ದವಿದ್ದು, ನಂಜನಗೂಡಿನ ನರಸಾಂಬುಧಿ ಕೆರೆಯವರೆಗೆ ಇದೆ. ೬೬೦ ಕ್ಯೂಸೆಕ್ಸ್ ನೀರು ಬಳಕೆಯಾಗಲಿದೆ.

ಜಲಾಶಯದ ಸಮೀಪದಲ್ಲೇ ೨ ಕಿ.ಮೀ. ದೂರದಲ್ಲಿ ಹಲಸೂರು ಗ್ರಾಮದ ಬಳಿ ಕೆರೆಗೆ ಅಣೆಕಟ್ಟೆ ನಿರ್ಮಿಸಲಾಗಿದೆ. ಬಲದಂಡೆ ನಾಲೆ ಹುಲ್ಲಹಳ್ಳಿವರೆಗೆ ೩೮ ಕಿ.ಮೀ. ದೂರವಿದೆ. ೧೫೦ ಕ್ಯೂಸೆಕ್ಸ್ ನೀರು ಬಳಕೆಯಾಗಲಿದೆ. ಅದೇ ರೀತಿ ಎಡದಂಡೆ ನಾಲೆ ನಂಜನಗೂಡು ತಾಲ್ಲೂಕಿನ ಹರದನಹಳ್ಳಿವರೆಗೆ ೩೩ ಕಿ.ಮೀ. ದೂರವಿದ್ದು, ೭೦ ಕ್ಯೂಸೆಕ್ಸ್ ನೀರು ಇರಲಿದೆ. ಒಟ್ಟು ೧೦ ಕೆರೆಗಳಿಗೆ ನೀರು ಬಳಕೆಯಾಗಲಿದೆ.

ನುಗು ಜಲಾಶಯದಲ್ಲಿ ನೀರಿನ ಮಟ್ಟ ಹೆಚ್ಚಳದಿಂದ ರೈತರಲ್ಲಿ ಸಂತಸ ಮೂಡಿದೆ ಎಂದು ರೈತ ಮುಖಂಡ ಮುಳ್ಳೂರು ರವಿಕುಮಾರ್ ತಿಳಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

13 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

13 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

13 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

13 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

13 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

13 hours ago