Andolana originals

ನೀರಿನ ‘ತಾಪ’ತ್ರಯ ಹನೂರು ಮೊದಲು!

ಟ್ಯಾಂಕರ್ ನೀರು , ಖಾಸಗಿ ಕೊಳವೆ ಬಾವಿ ಬಾಡಿಗೆ ಜತೆ ಇನ್ನು ರೀಡ್ರಿಲ್, ಹೊಸ ಕೊಳವೆ ಆಲೋಚನೆ 

ಚಾಮರಾಜನಗರ: ಬಿಸಿಲ ತಾಪ ಏರುತ್ತಿದ್ದು ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಕೂಡ ದಿನೇ ದಿನೇ ಹೆಚ್ಚಾಗತೊಡಗಿದೆ. ಪ್ರಮುಖವಾಗಿ ಹನೂರು ತಾಲ್ಲೂಕಿನ ಸಮಸ್ಯೆ ನಿವಾರಿಸುವುದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಗೆ ದೊಡ್ಡ ಸವಾಲಾಗಿದೆ!

ಖಾಸಗಿ ಕೊಳವೆ ಬಾವಿಗಳಿಂದ ಮತ್ತು ಟ್ಯಾಂಕರ್‌ಗಳ ಮೂಲಕ ನೀರು ಸರಬರಾಜು ಮಾಡುವ ಕೆಲಸ ಹನೂರು ತಾಲ್ಲೂಕಿನ ಕೆಲವೊಂದು ಕಡೆ ಈಗಾಗಲೇ ನಡೆಯುತ್ತಿದ್ದು ಮುಂದಿನ ದಿನಗಳಲ್ಲಿ ಅಗತ್ಯ ಇರುವೆಡೆ ಕೊಳವೆ ಬಾವಿಗಳನ್ನು ಮರು ಆಳಮಾಡಿಸುವ ಮತ್ತು ಹೊಸದಾಗಿ ಕೊಳವೆ ಬಾವಿ ಕೊರೆಸುವ ಸಂದರ್ಭ ಒದಗಿ ಬಂದರೆ ಅದಕ್ಕೆ ಸಿದ್ಧರಾಗುವ ನಿಟ್ಟಿನಲ್ಲಿ ಜಿಪಂ ಸಿಇಒ ಮೋನಾ ರೋತ್ ಅವರು ನಗರದಲ್ಲಿ ಅಧಿಕಾರಿಗಳ ಸಭೆ ಕೂಡ ಮಾಡಿದ್ದಾರೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಹೇಳುವ ಪ್ರಕಾರ ಹನೂರು ತಾಲ್ಲೂಕಿನ ೨೫ ಗ್ರಾಮಗಳನ್ನು ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳೆಂದು ಗುರುತಿಸಲಾಗಿದೆ. ಅದರಲ್ಲೂ ಮಾರ್ಟಳ್ಳಿ ಮತ್ತು ಕೌದಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ತೀವ್ರ ಕುಡಿಯುವ ನೀರಿನ ಸಮಸ್ಯೆ ಇದೆ. ದೊಡ್ಡ ಆಲತ್ತೂರು, ಕೌದಳ್ಳಿ, ಮಾರ್ಟಳ್ಳಿ ಮತ್ತು ರಾಮಾಪುರ ಗ್ರಾಪಂಗಳ ವ್ಯಾಪ್ತಿಯ ಕೆಲ ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳಿಂದ ಕುಡಿಯುವ ನೀರು ಒದಗಿಸಲಾಗುತ್ತಿದೆ. ಕೆಲ ಖಾಸಗಿ ಕೊಳವೆ ಬಾವಿಗಳವರು ಬಾಡಿಗೆ ರೂಪದಲ್ಲಿ ಹಣ ಪಡೆದು ನೀರು ಪೂರೈಸುತ್ತಿದ್ದಾರೆ. ಇನ್ನು, ಕೌದಳ್ಳಿ, ಮಾರ್ಟಳ್ಳಿ ಪಂಚಾಯಿತಿಯ ಕೆಲವೊಂದು ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಒದಗಿಸಲಾಗುತ್ತಿದೆ.

ಒಟ್ಟಾರೆ, ಅಜ್ಜೀಪುರ, ದಿನ್ನಳ್ಳಿ, ಎಲ್ಲೆಮಾಳ, ದೊಡ್ಡ ಆಲತ್ತೂರು, ಕೌದಳ್ಳಿ, ಮೀಣ್ಯಂ, ಮಾರ್ಟಳ್ಳಿ, ಮಹದೇಶ್ವರ ಬೆಟ್ಟ, ಹುತ್ತೂರು, ಶೆಟ್ಟಳ್ಳಿ, ಪಿ.ಜಿ.ಪಾಳ್ಯ ಒಳಗೊಂಡಂತೆ ೨೫ ಗ್ರಾಮಗಳಲ್ಲಿ ನೀರಿಗೆ ತೊಂದರೆ ಇದ್ದು ೧೧ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸಮಸ್ಯೆ ಇರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಹೆಚ್ಚುವರಿ ಪೈಪ್ ಲೈನ್ ಮಾಡಿ; ಕೊಳವೆ ಬಾವಿಗಳ ಆಳಕ್ಕೆ ತಕ್ಕಂತೆ ಹೆಚ್ಚುವರಿ ಪೈಪ್ಗಳನ್ನು ಬಿಟ್ಟು ನೀರಿನ ಸಮಸ್ಯೆ ತಡೆಗಟ್ಟುವ ಕೆಲಸವನ್ನೂ ವ್ಯವಸ್ಥಿತವಾಗಿ ಮಾಡಲಾಗುತ್ತಿದೆ.

” ತಮ್ಮ ಇಲಾಖೆಯ ಎಇಇಗಳ ವರದಿ ಪ್ರಕಾರ, ಸದ್ಯಕ್ಕೆ ಹನೂರು ತಾಲ್ಲೂಕಿನ ೧೧ ಪಂಚಾಯಿತಿಗಳ ೨೫ ಗ್ರಾಮಗಳನ್ನು ಕುಡಿಯುವ ನೀರಿನ ಸಮಸ್ಯಾತ್ಮಕ ಗ್ರಾಮಗಳೆಂದು ಗುರುತಿಸಲಾಗಿದೆ. ಉಳಿದ ತಾಲ್ಲೂಕುಗಳಲ್ಲಿ ಈ ತರಹದ ಸಮಸ್ಯೆ ಇಲ್ಲಿಯವರೆಗೂ ವರದಿಯಾಗಿಲ್ಲ.”

-ಇಮ್ಯಾನ್ಯುಯಲ್ ಸಂತೋಷ್ ಕುಮಾರ್, ಇಇ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ 

” ನಗರ ಪ್ರದೇಶದಲ್ಲಿ ಅಲ್ಲಲ್ಲಿ ಸಮಸ್ಯೆ ಇದ್ದು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಲ್ಲಲ್ಲಿ ಕುಡಿಯುವ ನೀರಿನ ಸಮಸ್ಯೆ ವರದಿಯಾಗುತ್ತಲೇಇದೆ. ಚಾ.ನಗರ ಮತ್ತು ಕೊಳ್ಳೇಗಾಲ ನಗರಸಭೆ, ಹನೂರು, ಯಳಂದೂರು ಪಪಂ ಮತ್ತು ಗುಂಡ್ಲುಪೇಟೆ ಪುರಸಭೆ ವ್ಯಾಪ್ತಿಯಲ್ಲಿ ಕಂಡುಬಂದಿರುವ ನೀರಿನ ಸಮಸ್ಯೆ ನಿವಾರಣೆಗೆ ಕ್ರಮ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಕೋಶದ ಅಧಿಕಾರಿಯೊಬ್ಬರು ತಿಳಿಸಿದರು.”

” ಸಹಜವಾಗಿಯೇ ಜಾನುವಾರುಗಳಿಗೂ ನೀರಿನ ಸಮಸ್ಯೆ ತಟ್ಟಿದೆ. ದನಕರು, ಕುರಿ, ಮೇಕೆಯಂತಹ ಸಾಕುಪ್ರಾಣಿಗಳು ನೀರು ಕುಡಿಯಲು ಅನುಕೂಲ ಆಗಲೆಂದು ನಿರ್ಮಿಸಿರುವ ಸಿಮೆಂಟ್ ತೊಟ್ಟಿಗಳಲ್ಲಿ ಈ ನಡುವೆ ನೀರು ಪೂರ್ಣ ತುಂಬಿಸುತ್ತಿಲ್ಲ.”

-ಸದಾಶಿವ, ಬಂಡಳ್ಳಿ

” ಚಾ.ನಗರ, ಗುಂಡ್ಲುಪೇಟೆ, ಯಳಂದೂರು ತಾಲ್ಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೇಳಿಕೊಳ್ಳುವ ರೀತಿಯಲ್ಲಿ ಇಲ್ಲದೇ ಇರಲು ಇಲ್ಲೆಲ್ಲಾ ನದಿ ಮೂಲದಿಂದ ನೀರು ಪೂರೈಸುವ ಬಹು ಗ್ರಾಮ ಕುಡಿಯುವ ನೀರಿನ ಯೋಜನೆ ಚಾಲ್ತಿಯಲ್ಲಿರುವುದು ಆಸರೆಯಾಗಿ ಪರಿಣಮಿಸಿದೆ. ಕೊಳ್ಳೇಗಾಲ ತಾಲ್ಲೂಕಿನಲ್ಲಿಯೂ ಬಹುಗ್ರಾಮ ಯೋಜನೆಯ ಮೊದಲನೇ ಹಂತ ಕಾರ್ಯಗತ ಆಗಿರುವುದರಿಂದ ಅಲ್ಲಿಯೂ ಸಾಕಷ್ಟು ಸಮಸ್ಯೆ ಬಗೆಹರಿದಿದೆ. ಹನೂರು ತಾಲ್ಲೂಕಿನಲ್ಲಿ ಈ ಯೋಜನೆ ಕೆಲಸ ಪೂರ್ಣಗೊಂಡರೆ ನೀರಿನ ಸಮಸ್ಯೆ ಶಾಶ್ವತವಾಗಿ ನಿವಾರಣೆ ಆಗಲಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. ಯಳಂದೂರು ತಾಲ್ಲೂಕಿನ ಬಿಳಿಗಿರಿರಂಗನ ಬೆಟ್ಟಕ್ಕೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ತಲುಪಿಲ್ಲ.ಅರಣ್ಯ ಇಲಾಖೆಯವರು ಸಂರಕ್ಷಿತ ಪ್ರದೇಶದಲ್ಲಿ ಕಾಮಗಾರಿಗೆ ತಡೆಹಾಕಿರುವುದು ಅಲ್ಲಿ ನೀರಿನ ಸಮಸ್ಯೆಯನ್ನು ಪೂರ್ಣ ಹೋಗಲಾಡಿಸಲು ಸಾಧ್ಯವಾಗಿಲ್ಲ.”

ಆಂದೋಲನ ಡೆಸ್ಕ್

Recent Posts

ರಾಜ್ಯಕ್ಕೆ ಇನ್ನೊಂದು ಹೈ ಸ್ಪೀಡ್ ರೈಲ್ವೆ ಕಾರಿಡಾರ್ : ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಜತೆ ಎಚ್‌ಡಿಕೆ ಚರ್ಚೆ

ಹೊಸದಿಲ್ಲಿ : ಬಜೆಟ್ ನಂತರ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ರೈಲ್ವೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ,…

10 mins ago

ಮ.ಬೆಟ್ಟದಲ್ಲಿ ಸ್ವಚ್ಛತಾ ನಡಿಗೆ : ಕಸ ಸಂಗ್ರಹಿಸಿದ ಕಾಲೇಜು ವಿದ್ಯಾರ್ಥಿಗಳು

ಹನೂರು : ತಾಲೂಕಿನ ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ಕೊಳ್ಳೇಗಾಲ ವಾಸವಿ ಪ್ರಥಮ ದರ್ಜೆ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು…

34 mins ago

ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್?

ಬೆಂಗಳೂರು: ಮೆಟ್ರೋ ಪ್ರಯಾಣಿಕರಿಗೆ ಮತ್ತೆ ದರ ಏರಿಕೆ ಶಾಕ್ ನೀಡುವ ಸಾಧ್ಯತೆ ಇದೆ. ಪ್ರತಿ ವರ್ಷದಂತೆ ಈ ವರ್ಷವೂ ಮೆಟ್ರೊ…

2 hours ago

ಕಾಂಗ್ರೆಸ್‌ ಹೈಕಮಾಂಡ್‌ಗೆ ಕರ್ನಾಟಕ ರಾಜ್ಯವೇ ಎಟಿಎಂ: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿರುವ ಕಾಂಗ್ರೆಸ್‌ ಸರ್ಕಾರದ ಮುಖ್ಯಮಂತ್ರಿಗಳು ಅಬಕಾರಿ ವಿಚಾರದಲ್ಲಿ ಗಟ್ಟಿ ನಿರ್ಧಾರವನ್ನು ತೆಗೆದುಕೊಳ್ಳಬೇಕೆಂಬುದು ಬಿಜೆಪಿ ಹಾಗೂ ಜೆಡಿಎಸ್‌…

2 hours ago

ಫೆ.14ರಿಂದ 18ರವರೆಗೆ ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರೆ: ಸಿದ್ಧತೆ ಪರಿಶೀಲಿಸಿದ ಎಈ ರಘು

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಫೆಬ್ರವರಿ.14 ರಿಂದ 18ರವರೆಗೆ…

2 hours ago

ಅಂತರರಾಷ್ಟ್ರೀಯ ವಾಣಿಜ್ಯ ಮೇಳ 2026: ಉತ್ಪಾದನೋತ್ತರ ಕೃಷಿ ಕಾರ್ಯಕ್ರಮವನ್ನು ಯಶ್ವಸಿಗೊಳಿಸಿ: ಎನ್.ಚಲುವರಾಯಸ್ವಾಮಿ

ಬೆಂಗಳೂರು: ನಮ್ಮ ಸರ್ಕಾರವು 2017ರಲ್ಲಿ ಪ್ರಾರಂಭಿಸಿದ ಸಾವಯವ ಮತ್ತು ಸಿರಿಧಾನ್ಯ ಮೇಳವು ಇಂದು ಅಂತರರಾಷ್ಟ್ರೀಯ ಮಟ್ಟದಲ್ಲಿ ಬೆಳೆದಿರುವುದು ನಮ್ಮೆಲ್ಲರ ಹೆಮ್ಮೆ…

3 hours ago