Andolana originals

ಸುವರ್ಣಾವತಿಯಲ್ಲಿ ಇಂದಿನಿಂದ ಜಲಸಾಹಸ ಕ್ರೀಡೋತ್ಸವ

ರಿವರ್ ರಾಫ್ಟಿಂಗ್, ಮೋಟಾರ್ ಬೋಟ್, ಬನಾನಾ ರೈಡ್, ಕಯಾಕಿಂಗ್, ಜೆಟ್ ಸ್ಕೀ ಆಯೋಜನೆ

ಚಾಮರಾಜನಗರ: ಯುವಜನರಲ್ಲಿ ಸಾಹಸ, ಶೌರ್ಯ ಪ್ರವೃತ್ತಿಯನ್ನು ಬೆಳೆಸುವ ದಿಸೆಯಲ್ಲಿ ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಜಲ ಸಾಹಸ ಕ್ರೀಡೋತ್ಸವವನ್ನು ಎರಡು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ.

ಫೆ.೫, ೬ರಂದು ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ಸಹಯೋಗದಲ್ಲಿ ತಾಲ್ಲೂಕಿನ ಅಟ್ಟು ಗೂಳಿಪುರ ಬಳಿಯ ಸುವರ್ಣಾವತಿ ಜಲಾಶಯದಲ್ಲಿ ಆಯೋಜಿಸಲಾಗಿದೆ.

ಜಿಲ್ಲೆಯ ಎಲ್ಲ ತಾಲ್ಲೂಕುಗಳ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯುವಕ, ಯುವತಿಯರು, ಸಾರ್ವಜನಿಕರ ಸಹಿತ ೩೦ವರ್ಷ ಒಳಪಟ್ಟವರಿಗೆ ಏರ್ಪಡಿಸಲಾಗಿದೆ. ಇದಕ್ಕಿಂತ ಹೆಚ್ಚಿನ ವಯೋಮಾನದವರೂ ಭಾಗವಹಿಸಬಹುದು. ಭಾಗವಹಿಸುವ ಸಂಬಂಧ ಈಗಾಗಲೇ ಅರ್ಜಿ ಆಹ್ವಾನಿಸಲಾಗಿತ್ತು. ನೇರವಾಗಿಯೂ ಆಸಕ್ತರು ಭಾಗವಹಿಸಬಹುದಾಗಿದ್ದು ನಿತ್ಯ ೩೦೦-೪೦೦ ಜನರಂತೆ ಎರಡೂ ದಿನ ಕನಿಷ್ಠ

೭೦೦ಮಂದಿ ಭಾಗವಹಿಸಬಹುದು ಎಂದು ಯುವ ಜನಸೇವೆ ಕ್ರೀಡಾ ಇಲಾಖೆ ನಿರೀಕ್ಷೆ ಹೊಂದಿದೆ. ವಾಟರ್ ಫೋಬಿಯಾ, ಆರೋಗ್ಯ ಸಮಸ್ಯೆ ಇರುವವರನ್ನು ಪರಿಗಣಿಸುವುದಿಲ್ಲ. ಪರಿಶೀಲನೆಗಾಗಿ ತಜ್ಞರ ತಂಡವನ್ನು ನಿಯೋಜಿಸಲಾಗಿದೆ. ರಿವರ್ ರಾಪ್ಟಿಂಗ್, ಮೋಟಾರ್ ಬೋಟ್, ಬನಾನ ಬೋಟ್ ರೈಡ್, ಕಯಾಕಿಂಗ್, ಜೆಟ್‌ಸ್ಕೀ ಸಾಹಸ ಕ್ರೀಡೆಗಳನ್ನು ಯುವಕ, ಯುವತಿಯರನ್ನು ಮುಖ್ಯವಾಗಿಟ್ಟು ಕೊಂಡು ನಡೆಸಲಾಗುತ್ತಿದ್ದು, ಇದಕ್ಕೆ ಬೇಕಾದ ೧೫ ತಂತ್ರಜ್ಞರು ಯಂತ್ರಗಳು , ಇನ್ನಿತರ ಪರಿಕರಗಳು ಸಜ್ಜುಗೊಂಡಿವೆ.

ಈ ರೀತಿಯ ಸಾಹಸ ಕ್ರೀಡೆಗಳಲ್ಲಿ ಭಾಗವಹಿಸುವವರು ದೈಹಿಕವಾಗಿ ಫಿಟ್ ಆಗಿ ಇರಬೇಕಾಗುತ್ತದೆ. ಆದಷ್ಟೂ ಅಂಥವರನ್ನೇ ಪರಿಗಣಿಸಲಾಗುತ್ತದೆ. ಸಾಹಸ ಕ್ರೀಡೆಯಲ್ಲಿ ಭಾಗವಹಿಸುವುದು ತರಬೇತಿ ಪಡೆದಂತೆಯೇ ಸರಿ. ಉತ್ತಮ ಸಾಮರ್ಥ್ಯ ತೋರಿದವರು ಭವಿಷ್ಯದಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳುವುದಕ್ಕೂ ಈ ಕ್ರೀಡೆ ನೆರವಾಗುತ್ತದೆ. ಬಹಳ ಮುಖ್ಯವಾಗಿ ಇದರಲ್ಲಿ ಭಾಗವಹಿಸುವುದರಿಂದ ಧೈರ್ಯ,ಸಾಹಸ ಪ್ರವೃತ್ತಿ ತನಗೆ ತಾನೇ ಬೆಳೆಯುತ್ತದೆ. ಒಬ್ಬರನ್ನು ನೋಡಿ ಇನ್ನೊಬ್ಬರು ಮುಂದೆ ಬರುತ್ತಾರೆ. ಯುವ ಜನರಲ್ಲಿ ಈ ಮೂಲಕ ಮಾನಸಿಕ ಸ್ಥೈರ್ಯ ವೃದ್ಧಿಸುತ್ತದೆ ಎಂದು ಹೇಳಲಾಗುತ್ತದೆ.

ಕಾಳಿ ನದಿ, ದುಬಾರೆ, ಸಾಗರ ಇತ್ಯಾದಿ ಸ್ಥಳಗಳಲ್ಲಿ ಬೋಟಿಂಗ್ ಸೇರಿದಂತೆ ವಿವಿಧ ಜಲಸಾಹಸ ಕ್ರೀಡೆಗಳು ನಿರಂತರವಾಗಿ ನಡೆಯುವಂತೆ ನಮ್ಮಲ್ಲಿಯೂ ಸುವರ್ಣಾವತಿ ಮತ್ತು ಹನೂರಿನ ಗುಂಡಾಲ್ ಜಲಾಶಯಗಳಲ್ಲಿ ಇದನ್ನು ಪರಿಚಯಿಸಬಹುದಾಗಿದೆ. ಯುವ ಜನರು ಹೇಗೆ ಸ್ಪಂದಿಸುತ್ತಾರೆ, ಆಸಕ್ತಿ ತೋರುತ್ತಾರೆ ಎಂಬುದರ ಮೇಲೆ ಭವಿಷ್ಯದಲ್ಲಿ ಈ ಬಗ್ಗೆ ನಿರ್ಧಾರ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. ಬೆಳಿಗ್ಗೆ ೧೦ರಿಂದ ಸಂಜೆ ೫.೩೦ರ ತನಕ ಎರಡೂ ದಿನ ಜಲಸಾಹಸ ಕ್ರೀಡೋತ್ಸವ ನಡೆಯಲಿದ್ದು,  ಸ್ಥಳೀಯ ಶಾಸಕರು, ಅಧಿಕಾರಿಗಳು ಮೋಟಾರ್ ಬೋಟಿಂಗ್ ಚಾಲೂ ಮಾಡಿ ಚಾಲನೆ ನೀಡಲಿದ್ದಾರೆ. ಸಾಹಸ ಕ್ರೀಡೆ ಆಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೂಡ ಮಾಡಲಾಗಿದೆ.

೨ನೇ ಬಾರಿಗೆ ಜಲಸಾಹಸ ಕ್ರೀಡೋತ್ಸವ: 

ಜಿಲ್ಲಾ ಮಟ್ಟದ ಜಲಸಾಹಸ ಕ್ರೀಡೋತ್ಸವವನ್ನು ಸುವರ್ಣಾವತಿ ಜಲಾಶಯದಲ್ಲಿ ನಡೆಸುತ್ತಿರುವುದು ಇದು ಎರಡನೇ ಬಾರಿ. ೨೦೨೩ರಲ್ಲಿ ಒಂದು ದಿನಕ್ಕೆ ಸೀಮಿತವಾಗಿ ನಡೆಸಲಾಗಿತ್ತು. ಈ ಬಾರಿ ೨ದಿನಗಳ ಕಾಲ ಆಯೋಜನೆ ಮಾಡಲಾಗಿದೆ.

” ಜಲ ಸಾಹಸ ಕ್ರೀಡೋತ್ಸವವನ್ನು ಯುವ ಜನರಿಗಾಗಿ ಆಯೋಜನೆ ಮಾಡಲಾಗಿದೆ. ಸಾಕಷ್ಟು ಮಂದಿ ಉಚಿತವಾಗಿ ನೋಂದಾಯಿಸಿಕೊಂಡಿದ್ದು, ನೋಂದಣಿ ಮಾಡದೇ ಇರುವ ವಿದ್ಯಾರ್ಥಿಗಳು ಸಹನೇರವಾಗಿ ಭಾಗವಹಿಸಬಹುದು.”

ಸುರೇಶ್, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ 

 

 

 

ಆಂದೋಲನ ಡೆಸ್ಕ್

Recent Posts

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

7 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

7 hours ago

ಆನೆ ಹಾವಳಿ ತಡೆಗೆ ಶಾಶ್ವತ ಪರಿಹಾರ : ಸಚಿವ ಖಂಡ್ರೆ ಭರವಸೆ

ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…

7 hours ago

ಭದ್ರಾ ಅಭಯಾರಣ್ಯ ಪರಿಸರ ಸೂಕ್ಷ್ಮ ಪ್ರದೇಶ ಗುರುತಿಸಲು ಕ್ರಮ : ಈಶ್ವರ ಖಂಡ್ರೆ

ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…

7 hours ago

ಎಲ್‌ಪಿಜಿ ರಿಫಿಲಿಂಗ್‌ ಅವಧಿ ಹೆಚ್ಚಳ ; ವದಂತಿ ನಿರಾಕರಿಸಿದ ಕೇಂದ್ರ

ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್‌ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…

7 hours ago

ಆಕಸ್ಮಿಕ ಬೆಂಕಿ; ಸ್ಕೂಟಿ ಭಸ್ಮ, ಮಹಿಳೆ ಪಾರು

ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…

7 hours ago