Andolana originals

ಸುವರ್ಣಾವತಿಯಲ್ಲಿ ಇಂದಿನಿಂದ ಜಲಸಾಹಸ ಕ್ರೀಡೋತ್ಸವ

ರಿವರ್ ರಾಫ್ಟಿಂಗ್, ಮೋಟಾರ್ ಬೋಟ್, ಬನಾನಾ ರೈಡ್, ಕಯಾಕಿಂಗ್, ಜೆಟ್ ಸ್ಕೀ ಆಯೋಜನೆ

ಚಾಮರಾಜನಗರ: ಯುವಜನರಲ್ಲಿ ಸಾಹಸ, ಶೌರ್ಯ ಪ್ರವೃತ್ತಿಯನ್ನು ಬೆಳೆಸುವ ದಿಸೆಯಲ್ಲಿ ತಾಲ್ಲೂಕಿನ ಸುವರ್ಣಾವತಿ ಜಲಾಶಯದಲ್ಲಿ ಜಲ ಸಾಹಸ ಕ್ರೀಡೋತ್ಸವವನ್ನು ಎರಡು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ.

ಫೆ.೫, ೬ರಂದು ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿ ಸಹಯೋಗದಲ್ಲಿ ತಾಲ್ಲೂಕಿನ ಅಟ್ಟು ಗೂಳಿಪುರ ಬಳಿಯ ಸುವರ್ಣಾವತಿ ಜಲಾಶಯದಲ್ಲಿ ಆಯೋಜಿಸಲಾಗಿದೆ.

ಜಿಲ್ಲೆಯ ಎಲ್ಲ ತಾಲ್ಲೂಕುಗಳ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಯುವಕ, ಯುವತಿಯರು, ಸಾರ್ವಜನಿಕರ ಸಹಿತ ೩೦ವರ್ಷ ಒಳಪಟ್ಟವರಿಗೆ ಏರ್ಪಡಿಸಲಾಗಿದೆ. ಇದಕ್ಕಿಂತ ಹೆಚ್ಚಿನ ವಯೋಮಾನದವರೂ ಭಾಗವಹಿಸಬಹುದು. ಭಾಗವಹಿಸುವ ಸಂಬಂಧ ಈಗಾಗಲೇ ಅರ್ಜಿ ಆಹ್ವಾನಿಸಲಾಗಿತ್ತು. ನೇರವಾಗಿಯೂ ಆಸಕ್ತರು ಭಾಗವಹಿಸಬಹುದಾಗಿದ್ದು ನಿತ್ಯ ೩೦೦-೪೦೦ ಜನರಂತೆ ಎರಡೂ ದಿನ ಕನಿಷ್ಠ

೭೦೦ಮಂದಿ ಭಾಗವಹಿಸಬಹುದು ಎಂದು ಯುವ ಜನಸೇವೆ ಕ್ರೀಡಾ ಇಲಾಖೆ ನಿರೀಕ್ಷೆ ಹೊಂದಿದೆ. ವಾಟರ್ ಫೋಬಿಯಾ, ಆರೋಗ್ಯ ಸಮಸ್ಯೆ ಇರುವವರನ್ನು ಪರಿಗಣಿಸುವುದಿಲ್ಲ. ಪರಿಶೀಲನೆಗಾಗಿ ತಜ್ಞರ ತಂಡವನ್ನು ನಿಯೋಜಿಸಲಾಗಿದೆ. ರಿವರ್ ರಾಪ್ಟಿಂಗ್, ಮೋಟಾರ್ ಬೋಟ್, ಬನಾನ ಬೋಟ್ ರೈಡ್, ಕಯಾಕಿಂಗ್, ಜೆಟ್‌ಸ್ಕೀ ಸಾಹಸ ಕ್ರೀಡೆಗಳನ್ನು ಯುವಕ, ಯುವತಿಯರನ್ನು ಮುಖ್ಯವಾಗಿಟ್ಟು ಕೊಂಡು ನಡೆಸಲಾಗುತ್ತಿದ್ದು, ಇದಕ್ಕೆ ಬೇಕಾದ ೧೫ ತಂತ್ರಜ್ಞರು ಯಂತ್ರಗಳು , ಇನ್ನಿತರ ಪರಿಕರಗಳು ಸಜ್ಜುಗೊಂಡಿವೆ.

ಈ ರೀತಿಯ ಸಾಹಸ ಕ್ರೀಡೆಗಳಲ್ಲಿ ಭಾಗವಹಿಸುವವರು ದೈಹಿಕವಾಗಿ ಫಿಟ್ ಆಗಿ ಇರಬೇಕಾಗುತ್ತದೆ. ಆದಷ್ಟೂ ಅಂಥವರನ್ನೇ ಪರಿಗಣಿಸಲಾಗುತ್ತದೆ. ಸಾಹಸ ಕ್ರೀಡೆಯಲ್ಲಿ ಭಾಗವಹಿಸುವುದು ತರಬೇತಿ ಪಡೆದಂತೆಯೇ ಸರಿ. ಉತ್ತಮ ಸಾಮರ್ಥ್ಯ ತೋರಿದವರು ಭವಿಷ್ಯದಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳುವುದಕ್ಕೂ ಈ ಕ್ರೀಡೆ ನೆರವಾಗುತ್ತದೆ. ಬಹಳ ಮುಖ್ಯವಾಗಿ ಇದರಲ್ಲಿ ಭಾಗವಹಿಸುವುದರಿಂದ ಧೈರ್ಯ,ಸಾಹಸ ಪ್ರವೃತ್ತಿ ತನಗೆ ತಾನೇ ಬೆಳೆಯುತ್ತದೆ. ಒಬ್ಬರನ್ನು ನೋಡಿ ಇನ್ನೊಬ್ಬರು ಮುಂದೆ ಬರುತ್ತಾರೆ. ಯುವ ಜನರಲ್ಲಿ ಈ ಮೂಲಕ ಮಾನಸಿಕ ಸ್ಥೈರ್ಯ ವೃದ್ಧಿಸುತ್ತದೆ ಎಂದು ಹೇಳಲಾಗುತ್ತದೆ.

ಕಾಳಿ ನದಿ, ದುಬಾರೆ, ಸಾಗರ ಇತ್ಯಾದಿ ಸ್ಥಳಗಳಲ್ಲಿ ಬೋಟಿಂಗ್ ಸೇರಿದಂತೆ ವಿವಿಧ ಜಲಸಾಹಸ ಕ್ರೀಡೆಗಳು ನಿರಂತರವಾಗಿ ನಡೆಯುವಂತೆ ನಮ್ಮಲ್ಲಿಯೂ ಸುವರ್ಣಾವತಿ ಮತ್ತು ಹನೂರಿನ ಗುಂಡಾಲ್ ಜಲಾಶಯಗಳಲ್ಲಿ ಇದನ್ನು ಪರಿಚಯಿಸಬಹುದಾಗಿದೆ. ಯುವ ಜನರು ಹೇಗೆ ಸ್ಪಂದಿಸುತ್ತಾರೆ, ಆಸಕ್ತಿ ತೋರುತ್ತಾರೆ ಎಂಬುದರ ಮೇಲೆ ಭವಿಷ್ಯದಲ್ಲಿ ಈ ಬಗ್ಗೆ ನಿರ್ಧಾರ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ. ಬೆಳಿಗ್ಗೆ ೧೦ರಿಂದ ಸಂಜೆ ೫.೩೦ರ ತನಕ ಎರಡೂ ದಿನ ಜಲಸಾಹಸ ಕ್ರೀಡೋತ್ಸವ ನಡೆಯಲಿದ್ದು,  ಸ್ಥಳೀಯ ಶಾಸಕರು, ಅಧಿಕಾರಿಗಳು ಮೋಟಾರ್ ಬೋಟಿಂಗ್ ಚಾಲೂ ಮಾಡಿ ಚಾಲನೆ ನೀಡಲಿದ್ದಾರೆ. ಸಾಹಸ ಕ್ರೀಡೆ ಆಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೂಡ ಮಾಡಲಾಗಿದೆ.

೨ನೇ ಬಾರಿಗೆ ಜಲಸಾಹಸ ಕ್ರೀಡೋತ್ಸವ: 

ಜಿಲ್ಲಾ ಮಟ್ಟದ ಜಲಸಾಹಸ ಕ್ರೀಡೋತ್ಸವವನ್ನು ಸುವರ್ಣಾವತಿ ಜಲಾಶಯದಲ್ಲಿ ನಡೆಸುತ್ತಿರುವುದು ಇದು ಎರಡನೇ ಬಾರಿ. ೨೦೨೩ರಲ್ಲಿ ಒಂದು ದಿನಕ್ಕೆ ಸೀಮಿತವಾಗಿ ನಡೆಸಲಾಗಿತ್ತು. ಈ ಬಾರಿ ೨ದಿನಗಳ ಕಾಲ ಆಯೋಜನೆ ಮಾಡಲಾಗಿದೆ.

” ಜಲ ಸಾಹಸ ಕ್ರೀಡೋತ್ಸವವನ್ನು ಯುವ ಜನರಿಗಾಗಿ ಆಯೋಜನೆ ಮಾಡಲಾಗಿದೆ. ಸಾಕಷ್ಟು ಮಂದಿ ಉಚಿತವಾಗಿ ನೋಂದಾಯಿಸಿಕೊಂಡಿದ್ದು, ನೋಂದಣಿ ಮಾಡದೇ ಇರುವ ವಿದ್ಯಾರ್ಥಿಗಳು ಸಹನೇರವಾಗಿ ಭಾಗವಹಿಸಬಹುದು.”

ಸುರೇಶ್, ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ 

 

 

 

ಆಂದೋಲನ ಡೆಸ್ಕ್

Recent Posts

ಭಟ್ಕಳ ದುರಂತ | ಕಪ್ಪೆ ಚಿಪ್ಪು ಆರಿಸಲು ಹೋಗಿದ್ದ 8 ಮಂದಿ ಸಾವು!

ನದಿಗೆ ಇಳಿದು ಕೊಚ್ಚಿ ಹೋದ ಕುಟುಂಬ ಭಟ್ಕಳ : ಭಟ್ಕಳದಲ್ಲಿ ಚಪ್ಪೆಕಲ್ಲು ಆರಿಸಲು ಹೋಗಿದ್ದ ಒಂದೇ ಕುಟುಂಬದ 8 ಜನರು…

4 hours ago

ಬಲೂಚಿಸ್ತಾನ | ಸೇನಾ ಸಿಬ್ಬಂದಿ ಇದ್ದ ರೈಲು ಗುರಿಯಾಗಿಸಿ ಸ್ಫೋಟ ; 24 ಸಾವು

ಪೇಶಾವರ : ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಸೇನಾ ಸಿಬ್ಬಂದಿ ಪ್ರಯಾಣಿಸುತ್ತಿದ್ದ ರೈಲನ್ನು ಗುರಿಯಾಗಿಸಿಕೊಂಡು ನಡೆಸಿದ ಸ್ಪೋಟದಲ್ಲಿ 24 ಮಂದಿ ಸಾವು ಸೇರಿದಂತೆ…

6 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

8 hours ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

8 hours ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

9 hours ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

9 hours ago