Andolana originals

ಬೆಲೆ ಕುಸಿತದಿಂದ ಕಂಗಾಲಾದ ಕಲ್ಲಂಗಡಿ ಬೆಳೆಗಾರರು

ದಾ.ರಾ.ಮಹೇಶ್

ಕೆಜಿಗೆ ೧೦ ರೂ. ಇದ್ದುದು ಈಗ ೩ ರೂ.ಗೆ ಕುಸಿತ; ಖರೀದಿಗೆ ಬಾರದ ಆಂಧ್ರಪ್ರದೇಶದ ಮಧ್ಯವರ್ತಿಗಳು

ವೀರನಹೊಸಹಳ್ಳಿ: ಹನಗೋಡು ಹೋಬಳಿಯ ವಿವಿಧ ಗ್ರಾಮಗಳಲ್ಲಿ ಕಲ್ಲಂಗಡಿ ಬೆಳೆದ ರೈತರು ಬೆಲೆ ಕುಸಿತದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

ನೆರೆಯ ತೆಲಂಗಾಣ, ಆಂಧ್ರಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಕಲ್ಲಂಗಡಿಯನ್ನು ಕೇಳುವವರೇ ಇಲ್ಲದಂತಾಗಿದೆ. ಇದರಿಂದ ಬಹುತೇಕ ಬೆಳೆಗಾರರು ಕಲ್ಲಂಗಡಿ ಹಣ್ಣು ಕಟಾವು ಮಾಡದೇ ಜಮೀನಿನಲ್ಲಿಯೇ ಹಾಗೆಯೇ ಬಿಟ್ಟಿದ್ದಾರೆ.

ಫೆಬ್ರವರಿಯಲ್ಲಿ ನಾಟಿ ಮಾಡಿದ್ದ ಕಲ್ಲಂಗಡಿ ಈಗ ಕಟಾವಿಗೆ ಬಂದಿದೆ. ಪ್ರತಿ ಬಾರಿ ಒಂದು ಕೆಜಿಗೆ ೧೦ ರೂ.ನಂತೆ ಮಾರಾಟ ಆಗುತ್ತಿತ್ತು. ಎಲ್ಲೆಡೆ ಇಳುವರಿ ಚೆನ್ನಾಗಿ ಬಂದಿದೆ. ಆದರೆ, ಈಗ ಪ್ರತಿ ಕೆಜಿಗೆ ಕೇವಲ ೩ ರೂ.ನಂತೆ ಮಾರಾಟ ಆಗುತ್ತಿದೆ. ಇದರಿಂದ ಕಲ್ಲಂಗಡಿ ಬೆಳೆಗಾರರು ನಷ್ಟ ಅನುಭ ವಿಸುತ್ತಿದ್ದಾರೆ ಎಂದು ರೈತ ಕೃಷ್ಣೇಗೌಡ ಅಲವತ್ತುಕೊಂಡರು.

ಇಲ್ಲಿಯ ರೈತ ಮಂಜು ತಮ್ಮ ಎರಡು ಎಕರೆ ಪ್ರದೇಶದಲ್ಲಿ ಕಲ್ಲಂಗಡಿ ಬೆಳೆದಿದ್ದಾರೆ. ಉತ್ತಮ ಇಳುವರಿ ಕೂಡ ಬಂದಿದೆ. ಈ ಬಾರಿ ದುಪ್ಪಟ್ಟು ಪ್ರಮಾಣದಲ್ಲಿ ಲಾಭ ಪಡೆಯಬಹುದು ಎಂಬ ಅವರ ನಿರೀಕ್ಷೆಗೆ ಬೆಲೆ ಕುಸಿತ ತಣ್ಣೀರು ಎರಚಿದೆ. ಉತ್ತಮ ಬೆಲೆ ಸಿಕ್ಕಿದ್ದರೆ ಕನಿಷ್ಠ ೩ ಲಕ್ಷ ರೂ. ಆದಾಯ ಆಗುತ್ತಿತ್ತು. ಖರ್ಚು ಕಳೆದು ಲಾಭವೂ ಸಿಗುತ್ತಿತ್ತು. ಆದರೆ ಈಗ ನಯಾಪೈಸೆ ಸಿಕ್ಕಿಲ್ಲ. ನಷ್ಟ ಅನುಭವಿಸಿರುವ ರೈತರಿಗೆ ಸರ್ಕಾರ ಸೂಕ್ತ ಪರಿಹಾರ ಕೊಡಬೇಕು ಎಂದು ರೈತ ಮಂಜು ಒತ್ತಾಯಿಸಿದರು.

ಜಿಲ್ಲೆಯಾದ್ಯಂತ ಕಲ್ಲಂಗಡಿ ಬೆಳೆದ ರೈತರು ಸಾಮಾನ್ಯವಾಗಿ ಹೈದರಾಬಾದ್ ಮಾರುಕಟ್ಟೆಗೆ ಕಳುಹಿಸುತ್ತಾರೆ. ಆದರೆ, ಹೈದರಾಬಾದ್‌ನಲ್ಲಿ ಹೆಚ್ಚು ಮಳೆ ಆಗುತ್ತಿರುವುದರಿಂದ ಹಣ್ಣು ಖರೀದಿಸಲು ಮಧ್ಯವರ್ತಿಗಳು ಮುಂದೆ ಬರುತ್ತಿಲ್ಲ ಎಂದು ರೈತ ರಾಜೇಗೌಡ ಬೇಸರದಿಂದ ಹೇಳುತ್ತಾರೆ.

ತೋಟಗಾರಿಕೆ ಇಲಾಖೆ ಅಥವಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯವರು ರೈತರ ಸಂಕಷ್ಟಕ್ಕೆ ಸ್ಪಂದಿಸಿ ಕಲ್ಲಂಗಡಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಪಡಿಸಬೇಕು ಎನ್ನುವುದು ರೈತರ ಆಗ್ರಹವಾಗಿದೆ.

” ಕಲ್ಲಂಗಡಿ ಹಣ್ಣಿನ ಬೆಲೆ ಕುಸಿತದಿಂದ ರೈತರು ಕಂಗಾಲಾಗಿದ್ದಾರೆ. ಸರ್ಕಾರ ಸೂಕ್ತ ಪರಿಹಾರ ಘೋಷಿಸುವ ಮೂಲಕ ರೈತರಿಗೆ ನೆರವಾಗಬೇಕು.”

-ಸುರೇಶ್, ಕಲ್ಲಂಗಡಿ ಬೆಳೆಗಾರ

” ಬೆಳೆ ಬೆಳೆಯುವ ಪ್ರದೇಶ ವಿಸ್ತಾರವಾಗಿದೆ. ಆದರೆ, ಖರೀದಿಸುವವರ ಸಂಖ್ಯೆ ಕಡಿಮೆಯಾಗಿದೆ. ಕೆಲವರು ಹಣ್ಣಿಗೆ ಇಂಜೆಕ್ಷನ್‌ನಿಂದ ಬಣ್ಣ ಬರಿಸುತ್ತಿದ್ದಾರೆ ಎಂಬ ವದಂತಿ ಹಬ್ಬಿಸಿದ್ದರಿಂದ ತಿನ್ನುವವರ ಸಂಖ್ಯೆ ಕಡಿಮೆಯಾಗಿದೆ. ಇದು ಬೆಲೆ ಕುಸಿತಕ್ಕೆ ಕಾರಣವಾಗಿದೆ.”

ನಾಗರಾಜ್, ಸಹಾಯಕ ನಿರ್ದೇಶಕ, ತೋಟಗಾರಿಕೆ ಇಲಾಖೆ

ಆಂದೋಲನ ಡೆಸ್ಕ್

Recent Posts

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

4 mins ago

ದ್ವೇಷ ಭಾಷಣಕ್ಕೆ ಕಡಿವಾಣ | ಗರಿಷ್ಟ 10 ವರ್ಷ ಶಿಕ್ಷೆ, ವಿಧಾನಸಭೆಯಲ್ಲಿ ಮಸೂದೆ ಮಂಡನೆ, BJP ವಿರೋಧ

ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…

14 mins ago

ಮೈವಿವಿಯಲ್ಲಿ ಫ್ರೆಂಚ್‌ ಭಾಷೆ ವಿಭಾಗ ಪುನರಾಂಭಿಸಲು ಚರ್ಚೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ…

36 mins ago

ʼಗ್ಯಾರಂಟಿʼ ಜನರ ಬದುಕಿನ ಆಧಾರ

ಬೆಳಗಾವಿ(ಸುವರ್ಣ ವಿಧಾನ ಸೌಧ) : ಗ್ಯಾರಂಟಿ ಯೋಜನೆಗಳ ಮೂಲಕ ನಾಗರಿಕರಿಗೆ ನೇರವಾಗಿ ಹಣ ವರ್ಗಾವಣೆಯಿಂದ ಅವರ ಆರ್ಥಿಕ ಬದುಕು ಬಹಳಷ್ಟು…

55 mins ago

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ

ಮೈಸೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್.ಸಿ.ಎಸ್.ಪಿ ಮತ್ತು ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ…

1 hour ago

ತೊಗರಿ – ಕಬ್ಬಿಗೆ ಬೆಂಬಲ ಬೆಲೆ ನಿಗದಿಗೆ ಒತ್ತಾಯ ; ಸಿಎಂ‌ ಪತ್ರದೊಂದಿಗೆ ಕೇಂದ್ರ ಸಚಿವರಿಗೆ ಮನವಿ ನೀಡಿದ ಸಂಸದರ ನಿಯೋಗ

ಹೊಸದಿಲ್ಲಿ : ಕರ್ನಾಟಕ ರಾಜ್ಯದಲ್ಲಿ‌ ಭಾರತದ ರಾಷ್ಟ್ರೀಯ ಕೃಷಿ‌ ಸಹಕಾರಿ ಮಾರುಕಟ್ಟೆ ಒಕ್ಕೂಟ ಹಾಗೂ ಭಾರತದ ರಾಷ್ಟ್ರೀಯ ಸಹಕಾರಿ ಗ್ರಾಹಕರ…

2 hours ago