Andolana originals

ಬೆಲೆ ಕುಸಿತದಿಂದ ಕಂಗಾಲಾದ ಕಲ್ಲಂಗಡಿ ಬೆಳೆಗಾರರು

ದಾ.ರಾ.ಮಹೇಶ್

ಕೆಜಿಗೆ ೧೦ ರೂ. ಇದ್ದುದು ಈಗ ೩ ರೂ.ಗೆ ಕುಸಿತ; ಖರೀದಿಗೆ ಬಾರದ ಆಂಧ್ರಪ್ರದೇಶದ ಮಧ್ಯವರ್ತಿಗಳು

ವೀರನಹೊಸಹಳ್ಳಿ: ಹನಗೋಡು ಹೋಬಳಿಯ ವಿವಿಧ ಗ್ರಾಮಗಳಲ್ಲಿ ಕಲ್ಲಂಗಡಿ ಬೆಳೆದ ರೈತರು ಬೆಲೆ ಕುಸಿತದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

ನೆರೆಯ ತೆಲಂಗಾಣ, ಆಂಧ್ರಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಕಲ್ಲಂಗಡಿಯನ್ನು ಕೇಳುವವರೇ ಇಲ್ಲದಂತಾಗಿದೆ. ಇದರಿಂದ ಬಹುತೇಕ ಬೆಳೆಗಾರರು ಕಲ್ಲಂಗಡಿ ಹಣ್ಣು ಕಟಾವು ಮಾಡದೇ ಜಮೀನಿನಲ್ಲಿಯೇ ಹಾಗೆಯೇ ಬಿಟ್ಟಿದ್ದಾರೆ.

ಫೆಬ್ರವರಿಯಲ್ಲಿ ನಾಟಿ ಮಾಡಿದ್ದ ಕಲ್ಲಂಗಡಿ ಈಗ ಕಟಾವಿಗೆ ಬಂದಿದೆ. ಪ್ರತಿ ಬಾರಿ ಒಂದು ಕೆಜಿಗೆ ೧೦ ರೂ.ನಂತೆ ಮಾರಾಟ ಆಗುತ್ತಿತ್ತು. ಎಲ್ಲೆಡೆ ಇಳುವರಿ ಚೆನ್ನಾಗಿ ಬಂದಿದೆ. ಆದರೆ, ಈಗ ಪ್ರತಿ ಕೆಜಿಗೆ ಕೇವಲ ೩ ರೂ.ನಂತೆ ಮಾರಾಟ ಆಗುತ್ತಿದೆ. ಇದರಿಂದ ಕಲ್ಲಂಗಡಿ ಬೆಳೆಗಾರರು ನಷ್ಟ ಅನುಭ ವಿಸುತ್ತಿದ್ದಾರೆ ಎಂದು ರೈತ ಕೃಷ್ಣೇಗೌಡ ಅಲವತ್ತುಕೊಂಡರು.

ಇಲ್ಲಿಯ ರೈತ ಮಂಜು ತಮ್ಮ ಎರಡು ಎಕರೆ ಪ್ರದೇಶದಲ್ಲಿ ಕಲ್ಲಂಗಡಿ ಬೆಳೆದಿದ್ದಾರೆ. ಉತ್ತಮ ಇಳುವರಿ ಕೂಡ ಬಂದಿದೆ. ಈ ಬಾರಿ ದುಪ್ಪಟ್ಟು ಪ್ರಮಾಣದಲ್ಲಿ ಲಾಭ ಪಡೆಯಬಹುದು ಎಂಬ ಅವರ ನಿರೀಕ್ಷೆಗೆ ಬೆಲೆ ಕುಸಿತ ತಣ್ಣೀರು ಎರಚಿದೆ. ಉತ್ತಮ ಬೆಲೆ ಸಿಕ್ಕಿದ್ದರೆ ಕನಿಷ್ಠ ೩ ಲಕ್ಷ ರೂ. ಆದಾಯ ಆಗುತ್ತಿತ್ತು. ಖರ್ಚು ಕಳೆದು ಲಾಭವೂ ಸಿಗುತ್ತಿತ್ತು. ಆದರೆ ಈಗ ನಯಾಪೈಸೆ ಸಿಕ್ಕಿಲ್ಲ. ನಷ್ಟ ಅನುಭವಿಸಿರುವ ರೈತರಿಗೆ ಸರ್ಕಾರ ಸೂಕ್ತ ಪರಿಹಾರ ಕೊಡಬೇಕು ಎಂದು ರೈತ ಮಂಜು ಒತ್ತಾಯಿಸಿದರು.

ಜಿಲ್ಲೆಯಾದ್ಯಂತ ಕಲ್ಲಂಗಡಿ ಬೆಳೆದ ರೈತರು ಸಾಮಾನ್ಯವಾಗಿ ಹೈದರಾಬಾದ್ ಮಾರುಕಟ್ಟೆಗೆ ಕಳುಹಿಸುತ್ತಾರೆ. ಆದರೆ, ಹೈದರಾಬಾದ್‌ನಲ್ಲಿ ಹೆಚ್ಚು ಮಳೆ ಆಗುತ್ತಿರುವುದರಿಂದ ಹಣ್ಣು ಖರೀದಿಸಲು ಮಧ್ಯವರ್ತಿಗಳು ಮುಂದೆ ಬರುತ್ತಿಲ್ಲ ಎಂದು ರೈತ ರಾಜೇಗೌಡ ಬೇಸರದಿಂದ ಹೇಳುತ್ತಾರೆ.

ತೋಟಗಾರಿಕೆ ಇಲಾಖೆ ಅಥವಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯವರು ರೈತರ ಸಂಕಷ್ಟಕ್ಕೆ ಸ್ಪಂದಿಸಿ ಕಲ್ಲಂಗಡಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಪಡಿಸಬೇಕು ಎನ್ನುವುದು ರೈತರ ಆಗ್ರಹವಾಗಿದೆ.

” ಕಲ್ಲಂಗಡಿ ಹಣ್ಣಿನ ಬೆಲೆ ಕುಸಿತದಿಂದ ರೈತರು ಕಂಗಾಲಾಗಿದ್ದಾರೆ. ಸರ್ಕಾರ ಸೂಕ್ತ ಪರಿಹಾರ ಘೋಷಿಸುವ ಮೂಲಕ ರೈತರಿಗೆ ನೆರವಾಗಬೇಕು.”

-ಸುರೇಶ್, ಕಲ್ಲಂಗಡಿ ಬೆಳೆಗಾರ

” ಬೆಳೆ ಬೆಳೆಯುವ ಪ್ರದೇಶ ವಿಸ್ತಾರವಾಗಿದೆ. ಆದರೆ, ಖರೀದಿಸುವವರ ಸಂಖ್ಯೆ ಕಡಿಮೆಯಾಗಿದೆ. ಕೆಲವರು ಹಣ್ಣಿಗೆ ಇಂಜೆಕ್ಷನ್‌ನಿಂದ ಬಣ್ಣ ಬರಿಸುತ್ತಿದ್ದಾರೆ ಎಂಬ ವದಂತಿ ಹಬ್ಬಿಸಿದ್ದರಿಂದ ತಿನ್ನುವವರ ಸಂಖ್ಯೆ ಕಡಿಮೆಯಾಗಿದೆ. ಇದು ಬೆಲೆ ಕುಸಿತಕ್ಕೆ ಕಾರಣವಾಗಿದೆ.”

ನಾಗರಾಜ್, ಸಹಾಯಕ ನಿರ್ದೇಶಕ, ತೋಟಗಾರಿಕೆ ಇಲಾಖೆ

ಆಂದೋಲನ ಡೆಸ್ಕ್

Recent Posts

ಭಕ್ತರ ಸುರಕ್ಷತೆಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ: ಶಾಸಕ ಮಂಜುನಾಥ್ ಸೂಚನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಫೆಬ್ರವರಿ.14ರಿಂದ ಆರಂಭಗೊಳ್ಳಲಿರುವ ಮಹಾಶಿವರಾತ್ರಿ ಜಾತ್ರಾ ಮಹೋತ್ಸಕ್ಕೆ ಲಕ್ಷಾಂತರ ಮಂದಿ ಭಕ್ತರು…

5 mins ago

ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಜಾಗೃತಿ ಜಾಥಾ

ಮೈಸೂರು: ಮೈಸೂರು ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯೊಂದಿಗೆ ಇಂದು ಬಾಲ್ಯವಿವಾಹದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು…

28 mins ago

ಓದುಗರ ಪತ್ರ: ಸುಂಕ ಕದನಕೆ ತೆರೆ!

ಸುಂಕ ಕದನಕೆ ತೆರೆ! ಕೊನೆಗೂ ಭಾರತ ಅಮೆರಿಕ ಜಂಟಿಯಾಗಿ ಒಪ್ಪಂದಕೆ ಬಂದಿವೆ ಆಮದು ಸುಂಕ ಕಡಿತಗೊಳಿಸಲು ತೆರೆ ಬಿದ್ದಿದೆ ಸುಂಕ…

5 hours ago

ಓದುಗರ ಪತ್ರ: ಶಾಲೆಗೆ ಸುತ್ತುಗೋಡೆ ನಿರ್ಮಿಸಿ

ನಂಜನಗೂಡು ತಾಲ್ಲೂಕಿನ ಕಾರ್ಯ ಗ್ರಾಮದಲ್ಲಿ ರಸ್ತೆಯ ಪಕ್ಕದಲ್ಲೇ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಿದೆ. ಶಾಲೆಗೆ ಸುತ್ತುಗೋಡೆ ಇಲ್ಲದ ಕಾರಣ ಶಾಲೆಯಿಂದ…

6 hours ago

ಓದುಗರ ಪತ್ರ: ಜಿಲ್ಲಾ ನ್ಯಾಯಾಲಯಗಳಿಗೆ ಬಸ್ ಸೌಲಭ್ಯ ಕಲ್ಪಿಸಿ

ಮೈಸೂರಿನ ಜಿಲ್ಲಾ ನ್ಯಾಯಾಲಯಗಳಿಗೆ ಸಾಕಷ್ಟು ಬಸ್ ಸೌಲಭ್ಯವಿಲ್ಲದೆ ನ್ಯಾಯಾಲಯದ ಕಲಾಪಗಳಿಗೆ ಬರುವ ವಕೀಲರು ಹಾಗೂ ಕಕ್ಷಿದಾರರಿಗೆ ತೀವ್ರ ತೊಂದರೆಯಾಗಿದೆ. ನಗರ…

6 hours ago

ಓದುಗರ ಪತ್ರ: ಬೈಕ್ ವ್ಹೀಲಿಂಗ್ ಮಾಡುವವರಿಗೆ ಕಠಿಣ ಶಿಕ್ಷೆ ವಿಧಿಸಿ

ಬೈಕ್ ವ್ಹೀಲಿಂಗ್ ನಿಷೇಧಿಸಿದ್ದರೂ ಮೈಸೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಯುವ…

6 hours ago