Andolana originals

ಬೆಲೆ ಕುಸಿತದಿಂದ ಕಂಗಾಲಾದ ಕಲ್ಲಂಗಡಿ ಬೆಳೆಗಾರರು

ದಾ.ರಾ.ಮಹೇಶ್

ಕೆಜಿಗೆ ೧೦ ರೂ. ಇದ್ದುದು ಈಗ ೩ ರೂ.ಗೆ ಕುಸಿತ; ಖರೀದಿಗೆ ಬಾರದ ಆಂಧ್ರಪ್ರದೇಶದ ಮಧ್ಯವರ್ತಿಗಳು

ವೀರನಹೊಸಹಳ್ಳಿ: ಹನಗೋಡು ಹೋಬಳಿಯ ವಿವಿಧ ಗ್ರಾಮಗಳಲ್ಲಿ ಕಲ್ಲಂಗಡಿ ಬೆಳೆದ ರೈತರು ಬೆಲೆ ಕುಸಿತದಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

ನೆರೆಯ ತೆಲಂಗಾಣ, ಆಂಧ್ರಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಕಲ್ಲಂಗಡಿಯನ್ನು ಕೇಳುವವರೇ ಇಲ್ಲದಂತಾಗಿದೆ. ಇದರಿಂದ ಬಹುತೇಕ ಬೆಳೆಗಾರರು ಕಲ್ಲಂಗಡಿ ಹಣ್ಣು ಕಟಾವು ಮಾಡದೇ ಜಮೀನಿನಲ್ಲಿಯೇ ಹಾಗೆಯೇ ಬಿಟ್ಟಿದ್ದಾರೆ.

ಫೆಬ್ರವರಿಯಲ್ಲಿ ನಾಟಿ ಮಾಡಿದ್ದ ಕಲ್ಲಂಗಡಿ ಈಗ ಕಟಾವಿಗೆ ಬಂದಿದೆ. ಪ್ರತಿ ಬಾರಿ ಒಂದು ಕೆಜಿಗೆ ೧೦ ರೂ.ನಂತೆ ಮಾರಾಟ ಆಗುತ್ತಿತ್ತು. ಎಲ್ಲೆಡೆ ಇಳುವರಿ ಚೆನ್ನಾಗಿ ಬಂದಿದೆ. ಆದರೆ, ಈಗ ಪ್ರತಿ ಕೆಜಿಗೆ ಕೇವಲ ೩ ರೂ.ನಂತೆ ಮಾರಾಟ ಆಗುತ್ತಿದೆ. ಇದರಿಂದ ಕಲ್ಲಂಗಡಿ ಬೆಳೆಗಾರರು ನಷ್ಟ ಅನುಭ ವಿಸುತ್ತಿದ್ದಾರೆ ಎಂದು ರೈತ ಕೃಷ್ಣೇಗೌಡ ಅಲವತ್ತುಕೊಂಡರು.

ಇಲ್ಲಿಯ ರೈತ ಮಂಜು ತಮ್ಮ ಎರಡು ಎಕರೆ ಪ್ರದೇಶದಲ್ಲಿ ಕಲ್ಲಂಗಡಿ ಬೆಳೆದಿದ್ದಾರೆ. ಉತ್ತಮ ಇಳುವರಿ ಕೂಡ ಬಂದಿದೆ. ಈ ಬಾರಿ ದುಪ್ಪಟ್ಟು ಪ್ರಮಾಣದಲ್ಲಿ ಲಾಭ ಪಡೆಯಬಹುದು ಎಂಬ ಅವರ ನಿರೀಕ್ಷೆಗೆ ಬೆಲೆ ಕುಸಿತ ತಣ್ಣೀರು ಎರಚಿದೆ. ಉತ್ತಮ ಬೆಲೆ ಸಿಕ್ಕಿದ್ದರೆ ಕನಿಷ್ಠ ೩ ಲಕ್ಷ ರೂ. ಆದಾಯ ಆಗುತ್ತಿತ್ತು. ಖರ್ಚು ಕಳೆದು ಲಾಭವೂ ಸಿಗುತ್ತಿತ್ತು. ಆದರೆ ಈಗ ನಯಾಪೈಸೆ ಸಿಕ್ಕಿಲ್ಲ. ನಷ್ಟ ಅನುಭವಿಸಿರುವ ರೈತರಿಗೆ ಸರ್ಕಾರ ಸೂಕ್ತ ಪರಿಹಾರ ಕೊಡಬೇಕು ಎಂದು ರೈತ ಮಂಜು ಒತ್ತಾಯಿಸಿದರು.

ಜಿಲ್ಲೆಯಾದ್ಯಂತ ಕಲ್ಲಂಗಡಿ ಬೆಳೆದ ರೈತರು ಸಾಮಾನ್ಯವಾಗಿ ಹೈದರಾಬಾದ್ ಮಾರುಕಟ್ಟೆಗೆ ಕಳುಹಿಸುತ್ತಾರೆ. ಆದರೆ, ಹೈದರಾಬಾದ್‌ನಲ್ಲಿ ಹೆಚ್ಚು ಮಳೆ ಆಗುತ್ತಿರುವುದರಿಂದ ಹಣ್ಣು ಖರೀದಿಸಲು ಮಧ್ಯವರ್ತಿಗಳು ಮುಂದೆ ಬರುತ್ತಿಲ್ಲ ಎಂದು ರೈತ ರಾಜೇಗೌಡ ಬೇಸರದಿಂದ ಹೇಳುತ್ತಾರೆ.

ತೋಟಗಾರಿಕೆ ಇಲಾಖೆ ಅಥವಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯವರು ರೈತರ ಸಂಕಷ್ಟಕ್ಕೆ ಸ್ಪಂದಿಸಿ ಕಲ್ಲಂಗಡಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ ಪಡಿಸಬೇಕು ಎನ್ನುವುದು ರೈತರ ಆಗ್ರಹವಾಗಿದೆ.

” ಕಲ್ಲಂಗಡಿ ಹಣ್ಣಿನ ಬೆಲೆ ಕುಸಿತದಿಂದ ರೈತರು ಕಂಗಾಲಾಗಿದ್ದಾರೆ. ಸರ್ಕಾರ ಸೂಕ್ತ ಪರಿಹಾರ ಘೋಷಿಸುವ ಮೂಲಕ ರೈತರಿಗೆ ನೆರವಾಗಬೇಕು.”

-ಸುರೇಶ್, ಕಲ್ಲಂಗಡಿ ಬೆಳೆಗಾರ

” ಬೆಳೆ ಬೆಳೆಯುವ ಪ್ರದೇಶ ವಿಸ್ತಾರವಾಗಿದೆ. ಆದರೆ, ಖರೀದಿಸುವವರ ಸಂಖ್ಯೆ ಕಡಿಮೆಯಾಗಿದೆ. ಕೆಲವರು ಹಣ್ಣಿಗೆ ಇಂಜೆಕ್ಷನ್‌ನಿಂದ ಬಣ್ಣ ಬರಿಸುತ್ತಿದ್ದಾರೆ ಎಂಬ ವದಂತಿ ಹಬ್ಬಿಸಿದ್ದರಿಂದ ತಿನ್ನುವವರ ಸಂಖ್ಯೆ ಕಡಿಮೆಯಾಗಿದೆ. ಇದು ಬೆಲೆ ಕುಸಿತಕ್ಕೆ ಕಾರಣವಾಗಿದೆ.”

ನಾಗರಾಜ್, ಸಹಾಯಕ ನಿರ್ದೇಶಕ, ತೋಟಗಾರಿಕೆ ಇಲಾಖೆ

ಆಂದೋಲನ ಡೆಸ್ಕ್

Recent Posts

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

35 mins ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

1 hour ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

2 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

2 hours ago

ವಿಕಸಿತ ಭಾರತಕ್ಕೆ ಕೈಜೋಡಿಸಿ : ದೇಶವಾಸಿಗಳಿಗೆ ಪ್ರಧಾನಿ ಮೋದಿ ಕರೆ

ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…

4 hours ago

ಮುಖ್ಯಮಂತ್ರಿಯಾಗಿ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಡಿಕೆಶಿ

ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್‌ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…

7 hours ago