Andolana originals

ಬಿಸಿಲ ದಾಹ ತಣಿಸಲು ಕಲ್ಲಂಗಡಿ ಲಗ್ಗೆ

ಆಂಧ್ರಪ್ರದೇಶ, ತಮಿಳುನಾಡಿನಿಂದಲೂ ಕಲ್ಲಂಗಡಿ ಪೂರೈಕೆ; ಗ್ರಾಹಕರ ಕೈಗೆಟಕುವ ದರದಲ್ಲಿ ಲಭ್ಯ

ಮೈಸೂರು: ಬೇಸಿಗೆ ಬಿಸಿಲಿನ ದಾಹ ತಣಿಸಲು ಮಾರುಕಟ್ಟೆಗೆ ಲಗ್ಗೆ ಹಾಕಿರುವ ಕಲ್ಲಂಗಡಿ ಹಣ್ಣಿಗೆ ಈ ಬಾರಿಯೂ ಬೇಡಿಕೆ ಕಂಡು ಬರುತ್ತಿದೆ. ಚಳಿಗೆ ನಡುಗುತ್ತಿದ್ದ ಜನತೆ ಈಗ ಬಿಸಿಲಿನ ತಾಪಕ್ಕೆ ಬೆವರುತ್ತಿದ್ದು, ಋತುಮಾನ ಬದಲಾವಣೆಯಂತೆ ನಿಧಾನವಾಗಿ ಬೇಸಿಗೆಯತ್ತ ವಾಲುತ್ತಿದೆ. ಈಗಾಗಲೇ ಕಲ್ಲಂಗಡಿ, ಸೌತೆಕಾಯಿ ಹಾಗೂ ತಂಪು ಪಾನೀಯಗಳ ಮಾರಾಟಗಾರರು ಜನ ಸಂದಣಿ ಪ್ರದೇಶಗಳು, ಪ್ರಮುಖ ವೃತ್ತಗಳು ಮತ್ತು ರಸ್ತೆ ಬದಿಗಳಲ್ಲಿ ಅಂಗಡಿಗಳನ್ನು ತೆರೆಯುತ್ತಿದ್ದಾರೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಭಾಗಗಳಿಂದ ನಂಜನಗೂಡು, ಹುಣಸೂರು, ಬೆಂಗಳೂರು, ತಿ.ನರಸೀಪುರ, ಹುಣಸೂರು ಮಾರ್ಗದ ರಸ್ತೆಗಳಿಗೆ ಕಲ್ಲಂಗಡಿ ಆಗಮಿಸುತ್ತಿವೆ.

ಪ್ರಮುಖ ಪಟ್ಟಣಗಳ ರಸ್ತೆ ಬದಿಯಲ್ಲಿ ಕಲ್ಲಂಗಡಿ ಹಣ್ಣುಗಳ ವ್ಯಾಪಾರ ಕಂಡುಬರುತ್ತಿದ್ದು, ಹಣ್ಣುಗಳ ವ್ಯಾಪಾರ ದಿನದಿಂದ ದಿನಕ್ಕೆ ಹೆಚ್ಚುವ ಸಾಧ್ಯತೆ ಇದೆ. ಬೆಲೆಯೂ ಜನಸಾಮಾನ್ಯರ ಕೈಗೆಟುಕುವಂತಿದೆ. ಇದು ಸಹಜವಾಗಿಯೇ ಗ್ರಾಹಕರನ್ನು ಸೆಳೆಯಲು ಸಹಕಾರಿಯಾಗಿದೆ. ಪ್ರತೀ ವರ್ಷದಂತೆ ಈ ಬಾರಿಯೂ ಕಲ್ಲಂಗಡಿ ಹಣ್ಣು ಮಾರುಕಟ್ಟೆಗೆ ನಿರೀಕ್ಷೆಗಿಂತಲೂ ಹೆಚ್ಚು ಬಂದಿದ್ದು, ಸಾರ್ವಜನಿಕರು ಕಲ್ಲಂಗಡಿ ಹಣ್ಣು ಖರೀದಿಸಲು ಮುಗಿಬೀಳುತ್ತಿದ್ದಾರೆ.

ಚಾಮರಾಜನಗರ, ಮಂಡ್ಯ, ಹಾಸನ ಹೀಗೆ ರಾಜ್ಯದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಹಾಗೂ ಕಾವೇರಿ ನದಿಯ ಅಕ್ಕಪಕ್ಕದ ರೈತರು ಯಥೇಚ್ಛವಾಗಿ ಕಲ್ಲಂಗಡಿ ಬೆಳೆಯುತ್ತಾರೆ. ಪ್ರಸಕ್ತ ವರ್ಷ ಶೇ.೮೦ರಷ್ಟು ಬೆಳೆ ಇಳುವರಿ ಬಂದಿದ್ದು, ಉತ್ಪಾದನೆ ೧೧೧೦.೯೩ ಲಕ್ಷ ಟನ್‌ಗಳಷ್ಟು ಆಗಿದೆ ಎಂದು ಅಂದಾಜಿಸಲಾಗಿದೆ. ಮಾರ್ಚ್ ಮೊದಲನೇ ವಾರದಲ್ಲಿ ಕಟಾವಿಗೆ ಬರುತ್ತಿದ್ದ ಕಲ್ಲಂಗಡಿ ಹಣ್ಣು ಈ ಬಾರಿ ಫೆಬ್ರವರಿ ಎರಡನೇ ವಾರದಿಂದಲೇ ಬಂದಿದೆ.

ಕಳೆದ ವರ್ಷ ಚಿಲ್ಲರೆ ಮಾರುಕಟ್ಟೆಯಲ್ಲಿ ಪ್ರತಿ ಕೆಜಿ ಕಲ್ಲಂಗಡಿ ೬೦ ರೂಪಾಯಿಗೆ ಮಾರಾಟವಾಗಿತ್ತು. ಈ ಬಾರಿ ಬೆಲೆ ಕಡಿಮೆ ಇದೆ. ೩೦ರಿಂದ ೪೦ ರೂಪಾಯಿಗೆ ಕೆಜಿಯಂತೆ ಕಲ್ಲಂಗಡಿ ಖರೀದಿಸುತ್ತಿದ್ದೇವೆ. ನಮಗೆ ಹಣ್ಣು ಕೊಡಿಸುವ ಮಧ್ಯವರ್ತಿಗೆ ಕೆಜಿಗೆ ೧ ರೂಪಾಯಿ ಕಮಿಷನ್ ನೀಡಲಾಗುತ್ತದೆ. ಲಾರಿ ಬಾಡಿಗೆ ರಸ್ತೆಯಲ್ಲಿ ಕಲ್ಲಂಗಡಿ ರಾಶಿ ಹಾಕುವುದರಿಂದ ಬಿಸಿಲಿಗೆ ತೂಕ ಕಡಿಮೆಯಾಗಲಿದೆ. ಈ ಎಲ್ಲಾ ಖರ್ಚು ತೆಗೆದು ನಮ್ಮ ಲಾಭಾಂಶವೂ ಸೇರಿ ೩೦ ರಿಂದ ೪೦ ರೂಪಾಯಿಗೆ ಮಾರಾಟ ಮಾಡುತ್ತಿದ್ದೇವೆ ಎನ್ನುತ್ತಾರೆ ಮಾನಂದವಾಡಿ ರಸ್ತೆಯಲ್ಲಿ ಕಲ್ಲಂಗಡಿ ಹಣ್ಣು ಮಾರುತ್ತಿರುವ ವ್ಯಾಪಾರಿ.

ಪೋಷಕಾಂಶಗಳ ಆಗರ: 

ಕಲ್ಲಂಗಡಿ ಹಣ್ಣು ದಾಹ ನಿವಾರಣೆ ಮಾತ್ರವಲ್ಲದೆ ದೇಹಕ್ಕೆ ಅಗತ್ಯವಾದ ಅನೇಕ ಪೋಷಕಾಂಶಗಳನ್ನೂ ಒದಗಿಸುತ್ತದೆ. ಇದರಲ್ಲಿ ಪೊಟ್ಯಾಷಿಯಂ, ಮೆಗ್ನೀಷಿಯಂ ಹಾಗೂ ಸಿಟ್ರುಲಿನ್ ಹೆಚ್ಚಾಗಿ ಇದ್ದು, ರಕ್ತದೊತ್ತಡ ನಿಯಂತ್ರಣಕ್ಕೆ ಸಹಕಾರಿ. ವಿಟಮಿನ್ ‘ಎ’ ಮತ್ತು ‘ಸಿ’ ಸೇರಿದಂತೆ ಹಲವು ಪೋಷಕಾಂಶಗಳನ್ನು ಹೊಂದಿರುವ ಈ ಹಣ್ಣು ದೇಹದ ಉಷ್ಣತೆಯನ್ನು ನಿಯಂತ್ರಿಸುವುದರ ಜತೆಗೆ ಹೃದಯ ಆರೋಗ್ಯ, ಕಣ್ಣಿನ ರಕ್ಷಣೆ, ಚರ್ಮದ ಆರೋಗ್ಯ, ಜೀರ್ಣಕ್ರಿಯೆ ಹಾಗೂ ಮಲಬದ್ಧತೆ ನಿಯಂತ್ರಣಕ್ಕೂ ಸಹಕಾರಿಯಾಗಿದೆ ಎನ್ನುತ್ತಾರೆ ಆರೋಗ್ಯ ತಜ್ಞರು

ಹೊರರಾಜ್ಯಗಳಿಂದ ಆಮದು: 

ಮೈಸೂರು: ಬೇಸಿಗೆ ಹಂಗಾಮಿನಲ್ಲಿ ಫೆಬ್ರವರಿಯಿಂದ ಹಂತ ಹಂತವಾಗಿ ಜೂನ್‌ವರೆಗೆ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡು ಮತ್ತು ಮಹಾರಾಷ್ಟ್ರ ರಾಜ್ಯಗಳಿಂದ ದಿನಕ್ಕೆ ಸರಾಸರಿ ೨೦೦೦ರಿಂದ ೪೦೦೦ ಟನ್ ಕಲ್ಲಂಗಡಿ ಹಣ್ಣು ಕರ್ನಾಟಕಕ್ಕೆ ಬರುತ್ತದೆ ಎಂದು ಅಂದಾಜಿಸಲಾಗಿದೆ.

 

 

 

ಆಂದೋಲನ ಡೆಸ್ಕ್

Recent Posts

ಹಣಕ್ಕಾಗಿ ವೃದ್ದೆ ಕೊಲೆ ; ಶವವನ್ನು ಶೌಚಾಲಯದ ಗುಂಡಿಯಲ್ಲಿ ಹೂತು ಹಾಕಿದ್ದ ಕಿರಾತಕ

ಕೆ.ಆರ್.ನಗರ : ಹಣದಾಸಗೆ ವೃದ್ದೆಯನ್ನು ಕೊಲೆಗೈದು ಶೌಚಾಲಯದ ಯುಜಿಡಿ ಗುಂಡಿಯಲ್ಲಿ ಹೂತು ಹಾಕಿರುವ ಘಟನೆ ತಾಲೂಕಿನ ತಿಪ್ಪೂರು ಗ್ರಾಮದಲ್ಲಿ ನಡೆದಿದೆ.…

2 days ago

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ 15 ವರ್ಷಗಳ ಟಿಎಂಸಿ ಆಡಳಿತಕ್ಕೆ ತೆರೆ ಎಳೆದು ಐತಿಹಾಸಿಕ ಗೆಲುವು ಸಾಧಿಸಿರುವ ಬಿಜೆಪಿ, ಮೇ…

2 days ago

ಟಿವಿಕೆಗೆ ಎಡಪಕ್ಷಗಳ ಬೆಂಬಲ : ಬಹುಮತದ ಸೀಟಿ ಊದಿಯೇ ಬಿಟ್ಟ ದಳಪತಿ ವಿಜಯ್‌

ಚೆನ್ನೈ : ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಪಡೆದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಟಿವಿಕೆ ಸರ್ಕಾರ ರಚಿಸಲು…

2 days ago

ತಮಿಳುನಾಡಿನಲ್ಲಿ ವಿಜಯ್‌ ಸಾಧನೆ ಎಲ್ಲರಿಗೂ ಅಚ್ಚರಿ ತಂದಿದೆ : ಕೇಂದ್ರ ಸಚಿವ ಎಚ್‌ಡಿಕೆ

ಹಾಸನ : ಮಾಧ್ಯಮಗಳಲ್ಲಿ ಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಎಂದು ವರದಿಗಳು ಹರಿದಾಡುತ್ತಿದ್ದವು. ಆದರೆ ವಿಜಯ್‌ ಅವರ ಈಗಿನ ಸಾಧನೆಯನ್ನು…

2 days ago

ಹೊರ್ಮುಜ್‌ ಜಲಸಂಧಿಯಿಂದ ನುಗ್ಗಿಬಂದ ಅಮೆರಿಕದ ಯುದ್ಧನೌಕೆಗಳು : ಇರಾನ್‌ನಿಂದ ದಾಳಿ

ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯಲ್ಲಿ ಅಮೆರಿಕದ ಮೂರು ಯುದ್ಧನೌಕೆಗಳ ಮೇಲೆ ಇರಾನ್ ಕ್ಷಿಪಣಿ, ಡ್ರೋನ್ ಮತ್ತು ಸಣ್ಣ ದೋಣಿಗಳ ಮೂಲಕ…

2 days ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ದೇಶದ ಪ್ರವಾಸೋದ್ಯಮವೂ, ಚಲನಚಿತ್ರ ಪ್ರವಾಸೋದ್ಯಮವೂ

ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಓಮರ್ ಅಬ್ದುಲ್ಲಾ ಅವರು ಇತ್ತೀಚೆಗೆ ಬೆಂಗಳೂರಿಗೆ ಬಂದಿದ್ದರು. ಅವರ ಈ ಪ್ರವಾಸದ ಹಿಂದೆ ತಮ್ಮ ರಾಜ್ಯದ ಪ್ರವಾಸೋದ್ಯಮವನ್ನು…

2 days ago