Andolana originals

ವಯನಾಡು ದುರಂತ: ಕೆಆರ್‌ ಪೇಟೆಯ ಮಹಿಳೆ, ಮೊಮ್ಮಗ ಸಾವು

ದಂಪತಿ ಜೀವನ್ಮರಣದ ಹೋರಾಟ

ಕೆ. ಆರ್. ಪೇಟೆ: ಕೇರಳ ರಾಜ್ಯದ ವಯನಾಡಿನಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ ಕೆ. ಆರ್. ಪೇಟೆ ತಾಲ್ಲೂಕಿನ ಕತ್ತರಘಟ್ಟ ಮೂಲದ ಮಹಿಳೆಯೊಬ್ಬರ ಅತ್ತೆ ಮತ್ತು ಪುತ್ರ ಮೃತಪಟ್ಟಿದ್ದು, ಸ್ವತಃ ಮಹಿಳೆ, ಆಕೆಯ ಪತಿ, ಮಾವ ತೀವ್ರವಾಗಿ ಗಾಯಗೊಂಡಿದ್ದಾರೆ.

ಕತ್ತರಘಟ್ಟ ಗ್ರಾಮದ ಜಗದೀಶ್ ಮತ್ತು ಕುಳ್ಳಮ್ಮ ಅವರ ಪುತ್ರಿ ಜಾನ್ಸಿರಾಣಿ ಅವರನ್ನು ಮೂಲತಃ ನಂಜನಗೂಡು ತಾಲ್ಲೂಕಿನ ಸರಗೂರು ಗ್ರಾಮದ ಅನಿಲ್‌ಕುಮಾರ್‌ರವರಿಗೆ ೨೦೨೦ರಲ್ಲಿ ವಿವಾಹ ಮಾಡಕೊಡಲಾಗಿತ್ತು. ಪ್ರಸ್ತುತ ಕೇರಳದ ಮುಂಡಕ್ಕೈ ಗ್ರಾಮದಲ್ಲಿ ವಾಸಿಸುತ್ತಿದ್ದಾರೆ. ಅವರ ಅತ್ತೆ ಲೀಲಾವತಿ (೫೫) ಮತ್ತು ಪುತ್ರ ನಿಹಾಲ್ (೨) ದುರಂತದಲ್ಲಿ ಸಾವಿಗೀಡಾಗಿದ್ದಾರೆ.

ಕೇರಳದ ಮುಂಡಕ್ಕೈ ಗ್ರಾಮದಲ್ಲಿ ವಾಸವಿದ್ದ ಗ್ರಾಮದಲ್ಲಿ ತಡರಾತ್ರಿ ಸಂಭವಿಸಿದ ಘಟನೆಯಲ್ಲಿ ಸಿಲುಕಿ ಸಾವು ಬದುಕಿನ ನಡುವೆ ಹೋರಾಡುತ್ತಿರುವ ಝಾನ್ಸಿರಾಣಿ ಮತ್ತು ಅವರ ಗಂಡ ಅನಿಲ್ ಕುಮಾರ್ ಹಾಗೂ ಮಾವ ದೇವರಾಜು, ಹೆಚ್ಚಿನ ಚಿಕಿತ್ಸೆಗಾಗಿ ಕೇರಳದ ವಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭೀಕರ ದುರಂತದಿಂದ ತಮ್ಮ ಗ್ರಾಮದ ಮಗಳು ಮತ್ತು ಮೊಮ್ಮಗುವನ್ನು ಕಳೆದುಕೊಂಡಿರುವ ಕತ್ತರಘಟ್ಟ ಗ್ರಾಮದಲ್ಲಿ ದುಃಖ ಮಡುಗಟ್ಟಿತು.

ಶಾಸಕ ಮಂಜು, ತಹಶೀಲ್ದಾರ್‌ ಭೇಟಿ
ದಂಪತಿ ಜೀವನ್ಮರಣದ ಹೋರಾಟ ಶಾಸಕ ಮಂಜು, ತಹಸಿಲ್ದಾರ್ ಭೇಟಿ ಕೇರಳ ಭೂ ಕುಸಿತ ದುರಂತದಲ್ಲಿ ಸಾವಿಗೀಡಾಗಿರುವ ಲೀಲಾವತಿ ಅವರ ತವರು ಮನೆಗೆ ಶಾಸಕ ಎಚ್. ಟಿ. ಮಂಜು, ಹಾಗೂ ತಹಸಿಲ್ದಾರ್ ನಿಸರ್ಗ ಪ್ರಿಯ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರಲ್ಲದೇ, ಕೇರಳದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಜಾನ್ಸಿರಾಣಿ ಮತ್ತು ಅನಿಲ್ ಕುಮಾರ್ ದಂಪತಿ ಬಗ್ಗೆ ಮಾಹಿತಿ ಪಡೆದರು.

ಆಂದೋಲನ ಡೆಸ್ಕ್

Recent Posts

ಹನೂರು| ಆಟೋ ಹಾಗೂ ಕಾರಿನ ನಡುವೆ ಡಿಕ್ಕಿ: ಮೂವರಿಗೆ ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ‌ ಮಹದೇಶ್ವರಬೆಟ್ಟ ರಸ್ತೆಯ ತಾಳುಬೆಟ್ಟ–ಕೋಣನಕೆರೆ ಮಾರ್ಗದಲ್ಲಿ ಮಂಗಳವಾರ ಬೆಳ್ಳಂಬೆಳಿಗ್ಗೆ ಆಟೋ…

5 hours ago

ನೀಟ್‌ ಪರೀಕ್ಷೆಯ ರದ್ದು, ಕೇಂದ್ರ ಸರ್ಕಾರದ ಬಹು ದೊಡ್ಡ ಹಗರಣ: ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್

ಬೆಂಗಳೂರು: ನೀಟ್‌ ಪರೀಕ್ಷೆಯನ್ನು ಸಮರ್ಪಕವಾಗಿ ನಡೆಸದ ಕೇಂದ್ರ ಸರ್ಕಾರ, ಪರೀಕ್ಷೆ ರದ್ದು ಮಾಡುವ ಮೂಲಕ ವೈದ್ಯರಾಗಬೇಕು ಎಂಬ ಕನಸು ಹೊತ್ತಿದ್ದ…

5 hours ago

ಪಾಕಿಸ್ತಾನದಲ್ಲಿ ಭೀಕರ ಬಾಂಬ್‌ ಸ್ಫೋಟ: 9 ಮಂದಿ ಸಾವು

ಪಾಕಿಸ್ತಾನ: ಇಲ್ಲಿನ ವಾಯುವ್ಯ ಭಾಗದ ಮಾರುಕಟ್ಟೆಯೊಂದರಲ್ಲಿ ರಿಕ್ಷಾಗೆ ಅಳವಡಿಸಿದ್ದ ಬಾಂಬ್‌ ಸ್ಫೋಟಗೊಂಡ ಪರಿಣಾಮ 9 ಮಂದಿ ಸಾವನ್ನಪ್ಪಿದ್ದು, ಹಲವರಿಗೆ ಗಂಭೀರ…

5 hours ago

ನಾಳೆಯಿಂದ ಎರಡು ದಿನ ಸಿದ್ದರಾಮಯ್ಯ ಮೈಸೂರು ಪ್ರವಾಸ

ಮೈಸೂರು: ನಾಳೆಯಿಂದ ಎರಡು ದಿನಗಳ ಕಾಲ ಸಿಎಂ ಸಿದ್ದರಾಮಯ್ಯ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ನಾಳೆ ಸಂಜೆ 5.30ಕ್ಕೆ ವಿಶೇಷ…

5 hours ago

ವನ್ಯಜೀವಿ ಸಂಚಾರವಿರುವ ಚಾರಣಪಥ, ಸಂಚಾರಪಥ ಸ್ಥಗಿತಕ್ಕೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾಜನಗರದ ನಾಗಮಲೆ ಅರಣ್ಯದಲ್ಲಿ ಚಿರತೆ ದಾಳಿಯಿಂದ 10 ವರ್ಷದ ಬಾಲಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ವನ್ಯಜೀವಿ ಸಂಚಾರ ಇರುವ ಎಲ್ಲ…

5 hours ago

ನಾಗಮಲೆ ಗ್ರಾಮದಲ್ಲಿ ಎರಡು ಮೇಕೆ ಹೊತ್ತೊಯ್ದ ಚಿರತೆ: ಮತ್ತಷ್ಟು ಆತಂಕ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ…

5 hours ago