Andolana originals

ಹುದಿಕೇರಿಯಲ್ಲಿ ಚೆಕ್ಕೇರ ಕ್ರಿಕೆಟ್‌ ನಮ್ಮೆ

ಪುನೀತ್ ಮಡಿಕೇರಿ

ಏ.೬ರಿಂದ ೪೦ ದಿನಗಳ ಕಾಲ ಪಂದ್ಯಾವಳಿ ಆಯೋಜನೆ; ಅಂದಾಜು ೪೦ ಲಕ್ಷ ರೂ. ವೆಚ್ಚ 

ಮಡಿಕೇರಿ: ಕೊಡವ ಕೌಟುಂಬಿಕ ಕ್ರಿಕೆಟ್‌ನಲ್ಲಿ ೮ ಬಾರಿ ಚಾಂಪಿಯನ್ ಪಟ್ಟ ಅಲಂಕರಿಸಿರುವ ಚೆಕ್ಕೇರ ಕುಟುಂಬ ಈ ಬಾರಿ ಕೊಡವ ಕೌಟುಂಬಿಕ ಕ್ರಿಕೆಟ್ ನಮ್ಮೆಯ ಸಾರಥ್ಯ ವಹಿಸಿದೆ.

ಚೆಕ್ಕೇರ ಕುಟುಂಬ ಮತ್ತು ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ ೨೩ನೇ ವರ್ಷದ ಕೊಡವ ಕೌಟುಂಬಿಕ ಕ್ರಿಕೆಟ್ ನಮ್ಮೆಯಾಗಿರುವ ಚೆಕ್ಕೇರ ಕ್ರಿಕೆಟ್ ಕಪ್ ಏ.೬ರಂದು ಆರಂಭಗೊಳ್ಳಲಿದೆ. ಹುದಿಕೇರಿ ಜನತಾ ಪ್ರೌಢಶಾಲೆ ಮತ್ತು ಸರ್ಕಾರಿ ಪ್ರಾಥಮಿಕ ಶಾಲೆ ಮೈದಾನದಲ್ಲಿ ನಮ್ಮೆ ನಡೆಯಲಿದೆ. ಪುರುಷರು ಮತ್ತು ಮಹಿಳೆಯರಿಗೆ ಪ್ರತ್ಯೇಕ ಕ್ರಿಕೆಟ್ ಸ್ಪರ್ಧೆ ನಡೆಯಲಿದೆ.  ಪುರುಷರಲ್ಲಿ ೩೦೦, ಮಹಿಳೆಯರ ೧೦೦ ತಂಡಗಳು ಭಾಗವಹಿಸುವ ನಿರೀಕ್ಷೆಯನ್ನು ಆಯೋಜಕರು ಹೊಂದಿದ್ದಾರೆ. ಕೊಡವ ಕ್ರಿಕೆಟ್ ಅಕಾಡೆಮಿ ಅಧ್ಯಕ್ಷ ಕೀತಿಯಂಡ ಕಾರ್ಸನ್ ಕಾರ್ಯಪ್ಪ ಕೂಡ ಈ ವರ್ಷದ ಕ್ರಿಕೆಟ್ ಕಪ್‌ಗೆ ಹೆಚ್ಚು ತಂಡಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಕೋಣಗೇರಿ, ತಿತಿಮತಿ, ಹುದಿಕೇರಿ, ಬಾಳೆಲೆ,  ಕುಟ್ಟ, ಬೀರುಗ, ಕಡಂಗ ಭಾಗಗಳಲ್ಲಿ ಚೆಕ್ಕೇರ ಕುಟುಂಬ ಜೀವನ ಸಾಗಿಸುತ್ತಿದ್ದು, ಹಬ್ಬ ಹರಿದಿನಗಳನ್ನು ಒಟ್ಟಾಗಿ ಆಚರಿಸುತ್ತಿದೆ.

ಸುಮಾರು ೩೫೦ ಸದಸ್ಯರನ್ನು ಚೆಕ್ಕೇರ ಕುಟುಂಬ ಒಳಗೊಂಡಿದ್ದು, ಚೆಕ್ಕೇರ ಕುಟುಂಬದ ತಕ್ಕರಾಗಿ ಪಿ.ರಾಜೇಶ್ ಕೆಲಸ ನಿರ್ವ ಹಿಸುತ್ತಿದ್ದಾರೆ. ಚೆಕ್ಕೇರ ಕ್ರಿಕೆಟ್ ಕಪ್ ಅಧ್ಯಕ್ಷರಾಗಿ ಚೆಕ್ಕೇರ ಚಂದ್ರ ಪ್ರಕಾಶ್, ಕೊಡವ ಕ್ರಿಕೆಟ್ ಕಾರ್ಯದರ್ಶಿಯಾಗಿ ಕೊಕ್ಕಂಗೇಡ ರಂಜನ್, ಚೆಕ್ಕೇರ ಕ್ರಿಕೆಟ್ ಕಪ್ ನಮ್ಮೆಯ ಸಂಚಾಲಕರಾಗಿ ಚೆಕ್ಕೇರ ಆದರ್ಶ್,  ಕ್ರಿಕೆಟ್ ಸಮಿತಿಯ ನಿರ್ದೇಶಕರಾಗಿ ಚಿಟ್ಯಪ್ಪ ,  ಖಜಾಂಚಿಯಾಗಿ ವಿವೇಕ್, ಇತರರು ಕ್ರಿಕೆಟ್ ನಮ್ಮೆಯ ಯಶಸ್ವಿಗಾಗಿ ಶ್ರಮ ವಹಿಸಿದ್ದಾರೆ.

ಅಂದಾಜು ೪೦ ಲಕ್ಷ ರೂ. ವೆಚ್ಚದಲ್ಲಿ ಕ್ರೀಡಾಕೂಟ ನಡೆಯಲಿದೆ. ಸಂಬಂಧಪಟ್ಟವರಿಗೆಈಗಾಗಲೇ ಮನವಿ ನೀಡಲಾಗಿದ್ದು, ಆರ್ಥಿಕ ಕ್ರೋಢೀಕರಣವೂ ನಡೆಯುತ್ತಿದೆ. ಲೋಗೋದಲ್ಲಿಯೂ ಪುರುಷ ಹಾಗೂ ಮಹಿಳಾ ಕ್ರೀಡಾಪಟುವಿಗೆ ಸಮಾನ ಆದ್ಯತೆ ನೀಡಲಾಗಿದೆ. ಗಂಡು ಹೆಣ್ಣು ಎಂಬ ಭೇದ ಕೊಡವ ಜನಾಂಗದಲ್ಲಿ ಇಲ್ಲ ಎಂಬ ಸಂದೇಶ ಸಾರಲಾಗಿದೆ.  ಇದರೊಂದಿಗೆ ಐನ್‌ಮನೆಯ ಸಾಂಸ್ಕೃತಿಕ ಹಿರಿಮೆಯನ್ನು ಪ್ರತಿಬಿಂಬಿಸಲಾಗಿದೆ.

ಕ್ರಿಕೆಟ್‌ನೊಂದಿಗೆ ಸಾಹಿತ್ಯಕ್ಕೆ ಒತ್ತು: ಕ್ರಿಕೆಟ್ ನೊಂದಿಗೆ ಸಾಹಿತ್ಯಕ್ಕೆ ಒತ್ತು ನೀಡಲು ಪ್ರಬಂಧ ಸ್ಪರ್ಧೆಯನ್ನೂ ಆಯೋಜಿಸಿದ್ದು, ಕೊಡವ ಹಾಕಿ ಮತ್ತು ಕೊಡವ ಕ್ರಿಕೆಟ್ ವಿಷಯದಲ್ಲಿ ೪ ಪುಟ ಮೀರದಂತೆ ಪ್ರಬಂಧ ಬರೆದು ಚೆಕ್ಕೇರ ಕ್ರಿಕೆಟ್ ಕಪ್, ಹುದಿಕೇರಿ ವಿಳಾಸಕ್ಕೆ ಕಳುಹಿಸಬೇಕಿದೆ.  ಕೊಡವ ಹಾಕಿ ಹಾಗೂ ಕೊಡವ ಕ್ರಿಕೆಟ್‌ನ ಹುಟ್ಟು, ಮುಂದಿನ ಬೆಳವಣಿಗೆಗೆ ಸಂಬಂಧಿಸಿದಂತೆ ವಯಸ್ಸಿನ ಮಿತಿ ಇಲ್ಲದಂತೆ ಆಸಕ್ತರು ಕೈ ಬರಹದಲ್ಲಿ ಬರೆದು ಕಳಿಸಬಹುದಾಗಿದೆ.  ಉತ್ತಮ ಬರಹಕ್ಕೆ ನಮ್ಮೆ ಉದ್ಘಾಟನೆಯಂದು ಬಹುಮಾನವೂ ಇದೆ ಎಂದು ಆಯೋಜಕರು ತಿಳಿಸಿದ್ದಾರೆ.

ಮ್ಯಾರಥಾನ್ ಸ ರ್ಧೆ: ಕ್ರಿಕೆಟ್ ಪಂದ್ಯಾಟದೊಂದಿಗೆ ಒಕ ಡೊಕ ಡ ನಡುವೆ(ಕುಟುಂಬಗಳ ನಡುವೆ) ಮ್ಯಾರಥಾನ್ ಸ ರ್ಧೆಯನ್ನು ಹಮ್ಮಿಕೊಳ್ಳುವ ಯೋಜನೆ ರೂಪಿಸಲಾಗಿದೆ. ಪ್ರತಿ ತಂಡದಲ್ಲಿಯೂ ಓರ್ವ ಮಹಿಳಾ ಸದಸ್ಯೆಯನ್ನು ಕಡ್ಡಾಯ ಮಾಡಲಾಗಿದ್ದು, ಕ್ರಿಕೆಟ್ ಪಂದ್ಯಾಟದ ನಡುವೆ ಮ್ಯಾರಥಾನ್ ಮನರಂಜನೆಯೂ ದೊರೆಯಲಿದೆ.

” ಚೆಕ್ಕೇರ ಕುಟುಂಬ ಮತ್ತು ಕೊಡವ ಕ್ರಿಕೆಟ್ ಅಕಾಡೆಮಿ ಸಹಯೋಗದಲ್ಲಿ ೨೩ನೇ ವರ್ಷದ ಕೊಡವ ಕೌಟುಂಬಿಕ ಕ್ರಿಕೆಟ್ ನಮ್ಮೆಯಾಗಿರುವ ಚೆಕ್ಕೇರ ಕ್ರಿಕೆಟ್ ಕಪ್ ಏ.೬ರಂದು ಆರಂಭಗೊಳ್ಳಲಿದೆ. ದಿನ ಪಂದ್ಯಾಟ ಆಯೋಜಿಸುವ ಯೋಜನೆ ಇದ್ದು, ನೋಂದಣಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಕ್ರೀಡೆಯೊಂದಿಗೆ ಸಾಹಿತ್ಯಕ್ಕೂ ಒತ್ತು ನೀಡಲಾಗಿದೆ.”

 -ಚೆಕ್ಕೇರ ಚಂದ್ರ ಪ್ರಕಾಶ್,  ಅಧ್ಯಕ್ಷರು, ಚೆಕ್ಕೇರ ಕ್ರಿಕೆಟ್ ಕಪ್

” ಕ್ರಿಕೆಟ್ ನಮ್ಮೆ ಆಯೋಜಿಸಲು ಕುಟುಂಬ ಸಿದ್ಧವಾಗಿದೆ. ಅವಿಭಕ್ತ ಕುಟುಂಬವಾಗಿ ಜೀವನ ಸಾಗಿಸುತ್ತಿದ್ದ ಕೊಡವರು ಇಂದು ವಿಭಕ್ತ ಕುಟುಂಬವಾಗಿ ಜೀವನ ಸಾಗಿಸುತ್ತಿದ್ದಾರೆ. ಎಲ್ಲರಲ್ಲೂ ಒಗ್ಗಟ್ಟು ಮೂಡಿಸಲು ಕ್ರಿಕೆಟ್ ನಮ್ಮೆ ಸಹಕಾರಿಯಾಗುತ್ತಿದೆ.”

 -ಪಿ.ರಾಜೇಶ್,  ಚೆಕ್ಕೇರ ಒಕ್ಕ ತಕ್ಕ 

” ಕ್ರಿಕೆಟ್ ನಮ್ಮೆಗೆ ಸಕಲ ಸಿದ ತೆ ಆರಂಭಗೊಂಡಿದ್ದು, ಫೆ.೧ ರಿಂದ ತಂಡಗಳ ನೋಂದಣಿಗೆ ಅವಕಾಶ ಮಾಡಿಕೊಡಲಾಗಿದೆ. ವೆಬ್‌ಸೈಟ್ ಮೂಲಕ, ವಿವಿಧ ಗ್ರಾಮಗಳಲ್ಲಿ ನೇರವಾಗಿ ನೋಂದಾಯಿಸಲು ಅವಕಾಶ ನೀಡಲಾಗಿದೆ.”

 -ಚೆಕ್ಕೇರ ಆದರ್ಶ್,  ಸಂಚಾಲಕರು, ಕ್ರಿಕೆಟ್ ನಮ್ಮೆ

ಆಂದೋಲನ ಡೆಸ್ಕ್

Recent Posts

ವೆನೆಜುವೆಲಾ ಭೂಕಂಪ: ಮೃತರ ಸಂಖ್ಯೆ 1700ಕ್ಕೆ ಏರಿಕೆ

ವೆನೆಜುವೆಲಾ: ಇಲ್ಲಿ ಬುಧವಾರ ಸಂಜೆ ಸಂಭವಿಸಿದ ಎರಡು ಪ್ರಬಲ ಭೂಕಂಪಗಳಲ್ಲಿ ಮೃತಪಟ್ಟವರ ಸಂಖ್ಯೆ 1700ಕ್ಕೆ ಏರಿಕೆಯಾಗಿದೆ. ಈ ದುರಂತದಲ್ಲಿ 5000ಕ್ಕೂ…

24 mins ago

ರಾಜಸ್ಥಾನದಲ್ಲಿ ಪ್ಯಾರಾಮೆಡಿಕಲ್‌ ಪರೀಕ್ಷೆ ಪ್ರಶ್ನೆ ಪತ್ರಿಕೆ ಸೋರಿಕೆ: ನಾಲ್ವರು ಅರೆಸ್ಟ್‌

ಜೈಪುರ: ರಾಜಸ್ಥಾನ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಪ್ಯಾರಾಮೆಡಿಕಲ್‌ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ನಡೆಯುತ್ತಿದ್ದ ವೇಳೆಯೇ ಪರೀಕ್ಷೆ ಹಾಲ್‌ ಮೇಲೆ ಪೊಲೀಸರು…

35 mins ago

ಎಸ್‌ಐಆರ್‌ ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್‌

ಹಾಸನ: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯು ಆರಂಭವಾಗಿದೆ. ಹಾಸನದಲ್ಲಿ ಬೂಕರ್‌ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್‌…

1 hour ago

ನಾಡಿನ ಖ್ಯಾತ ಕಲಾವಿದ ಕೆ.ಟಿ.ಶಿವಪ್ರಸಾದ್‌ ನಿಧನ

ಬೆಂಗಳೂರು: ನಾಡಿನ ಖ್ಯಾತ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕಲಾವಿದರಾದ, ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತ ‌ಕೆ.ಟಿ. ಶಿವಪ್ರಸಾದ್(77) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.…

2 hours ago

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

2 hours ago

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

10 hours ago