Andolana originals

ನಮ್ಮ ಕಥೆ ಮುಗಿದೇ ಹೋಯ್ತು ಅಂದುಕೊಂಡಿದ್ದೆವು…

ಅಣ್ಣನ ಸ್ಮರಣೆಗೆ ಕಾರ್ಯಕ್ಕೆ ಹೋಗಿದ್ದವ ಬದುಕಿ ಬಂದ ರೋಚಕ ಕಥೆ

ಚಾಮರಾಜನಗರ: ಅಂದು ರಾತ್ರಿ ನೀರು ಜೋರಾಗಿ ಬಾಗಿಲಿಗೆ ಬಡಿಯುತ್ತಿತ್ತು. ಮನೆಯಲ್ಲಿ 8 ಜನರು ಇದ್ದೆವು. ನಮ್ಮ ಕಥೆ ಮುಗಿದೇ ಹೋಯಿತು ಅಂದುಕೊಂಡಿದ್ದೆವು ಎಂದು ತಾಲ್ಲೂಕಿನ ಮಂಗಲ ಗ್ರಾಮದ ಸ್ವಾಮಿ ಅವರು ಚೂರಲ್‌ಮಲಾದಲ್ಲಿ ನಡೆದ ಭೀಕರ ಘಟನೆ ಬಗ್ಗೆ ಹೇಳುತ್ತ ಕಣ್ಣೀರಾದರು.

ನಮ್ಮ ಅಣ್ಣನ ಸ್ಮರಣೆ ಕಾರ್ಯ ಇತ್ತು. ಎಲ್ಲಾ ವ್ಯವಸ್ಥೆ ಮಾಡಬೇಕು ಅಂತಾ ಐದು ದಿನಗಳ ಮೊದಲೇ ಚೂರಲ್‌ಲಾಗೆ ಹೋಗಿದ್ವಿ. ಆ ರಾತ್ರಿ ಸೇತುವೆ ಹೊಡೆದು ಹೋದ ಮೇಲೆ ನೀರು ನುಗ್ಗಿತು. ಅದು ತುಂಬಾ ಹಳೆ ಸೇತುವೆ. ನೀರು ಮನೆಯತ್ತ ನುಗ್ಗುತ್ತಿದ್ದಂತೆ ಮನೆಯಿಂದ ಹೊರಬಂದ ನಾವು ತಂತಿಗಳನ್ನು ಕಟ್ಟಿ ಅದರ ಸಹಾಯದಿಂದ ಮೇಲೆ ಬಂದು ಬಚಾವ್ ಆದೆವು. ನಾನು ಅಲ್ಲಿಂದ ತಪ್ಪಿಸಿಕೊಂಡು ಬರುವಾಗ ನನ್ನ ಹಾಗೂ ನನ್ನ ಮಗಳ ಕಾಲಿಗೆ ಗಾಯವಾಯಿತು. ಬೆಳಿಗ್ಗೆ ಹೋಗಿ ನೋಡಿದರೆ ಒಂದು ಕಡ್ಡಿಯೂ ಇರಲಿಲ್ಲ. ಕೂಲಿ ಮಾಡಿ 6 ಹಸುಗಳನ್ನು ಸಾಕಿದ್ದೆವು. ಅವೂ ಕೊಚ್ಚಿ ಹೋಗಿವೆ. ಊರೇ ಇಲ್ಲ ಅಂದ್ದೇಲೆ ದನಕರು ಎಲ್ಲಿ ಇರುತ್ತೆ ಹೇಳಿ ಎಂದು ನೊಂದು ನುಡಿದರು.

ಕೇರಳದ ಚೂರಲ್ ಮಲಾದಲ್ಲಿ ನೀರು ತುಂಬಿದೆ, ಎಲ್ಲರೂ ಕೊಚ್ಚಿಕೊಂಡು ಹೋಗಿದ್ದಾರೆಂದು ಕೇಳಿದಾಗ ಗಾಬರಿಯಾಗಿತ್ತು. ನಮ್ಮ ಮಾವ ಬೇರೆಯವರಿಂದ ನಮಗೆ ಕರೆ ಮಾಡಿಸಿ ‘ನಮಗೆ ಏನೂ ಆಗಿಲ್ಲ ಅಂತಾ ಹೇಳಿದ ಮೇಲೆ ನಾವು ನಿಟ್ಟುಸಿರು ಬಿಡುವಂತಾಯಿತು ಎಂದು ಸೊಸೆ ನಂದಿನಿ ಘಟನೆಯ ಸಂದರ್ಭವನ್ನು ನೆನಪಿಸಿಕೊಂಡರು.

ಗರ್ಭಿಣಿ ಪತ್ನಿ, ಗಂಡ ಕೈಹಿಡಿದುಕೊಂಡೇ ಕೊಚ್ಚಿ ಹೋದರು
ನಾವಿದ್ದ ಸ್ಥಳದಲ್ಲಿ ತುಂಬಾ ಜನರು ಕೊಚ್ಚಿ ಹೋಗಿದ್ದಾರೆ. ಈಗ 10ರಿಂದ 12 ಜನರು ಬದುಕಿದ್ದಾರಷ್ಟೆ. ನಮ್ಮ ಮನೆ ಪಕ್ಕದಲ್ಲಿ 9 ತಿಂಗಳ ಗರ್ಭಿಣಿ ಹಾಗೂ ಅವಳ ಗಂಡ ವಾಸವಿದ್ದರು. ಒಬ್ಬರಿಗೊಬ್ಬರು ಕೈ ಹಿಡಿದುಕೊಂಡೇ ಕೊಚ್ಚಿ ಹೋದರು. ಯಾರನ್ನು ಕೂಡ ರಕ್ಷಣೆ ಮಾಡಲೂ ಆಗಲಿಲ್ಲ ಎಂದು ಸ್ವಾಮಿ ಘಟನೆ ಬಗ್ಗೆ ವಿವರಿಸಿದರು.

 

ಆಂದೋಲನ ಡೆಸ್ಕ್

Recent Posts

ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್‌ ಸಿಲಿಂಡರ್‌ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…

7 hours ago

ರಸ್ತೆಯಲ್ಲಿ ರಾಗಿ ಒಕ್ಕಣೆ | ಮುಗುಚಿ ಬಿದ್ದ ಕಾರು ; ಓರ್ವ ಸಾವು

ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…

9 hours ago

ಕಾರು ಮುಖಾಮುಖಿ ಡಿಕ್ಕಿ : ಮೂವರಿಗೆ ಗಾಯ

ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…

9 hours ago

ಮೈಸೂರು | ಜಿಲ್ಲೆಯಾದ್ಯಂತ ಕ್ರಿಸ್‌ಮಸ್‌ ಸಂಭ್ರಮಾಚರಣೆ

ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್‌ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…

9 hours ago

ಕೆ.ಆರ್.ಪೇಟೆ | ವೇತನದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ ಕಲ್ಪಿಸಿದ ಶಿಕ್ಷಕ

ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…

10 hours ago

ತುರ್ತು ನಿರ್ಗಮನದ ಬಾಗಿಲು ಇಲ್ಲದಿದ್ದರೆ ಎಫ್‌ಸಿ ಇಲ್ಲ ; ಸಚಿವ ರಾಮಲಿಂಗಾ ರೆಡ್ಡಿ ಖಡಕ್ ಸೂಚನೆ

ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…

10 hours ago