Andolana originals

ನಮ್ಮ ಕಥೆ ಮುಗಿದೇ ಹೋಯ್ತು ಅಂದುಕೊಂಡಿದ್ದೆವು…

ಅಣ್ಣನ ಸ್ಮರಣೆಗೆ ಕಾರ್ಯಕ್ಕೆ ಹೋಗಿದ್ದವ ಬದುಕಿ ಬಂದ ರೋಚಕ ಕಥೆ

ಚಾಮರಾಜನಗರ: ಅಂದು ರಾತ್ರಿ ನೀರು ಜೋರಾಗಿ ಬಾಗಿಲಿಗೆ ಬಡಿಯುತ್ತಿತ್ತು. ಮನೆಯಲ್ಲಿ 8 ಜನರು ಇದ್ದೆವು. ನಮ್ಮ ಕಥೆ ಮುಗಿದೇ ಹೋಯಿತು ಅಂದುಕೊಂಡಿದ್ದೆವು ಎಂದು ತಾಲ್ಲೂಕಿನ ಮಂಗಲ ಗ್ರಾಮದ ಸ್ವಾಮಿ ಅವರು ಚೂರಲ್‌ಮಲಾದಲ್ಲಿ ನಡೆದ ಭೀಕರ ಘಟನೆ ಬಗ್ಗೆ ಹೇಳುತ್ತ ಕಣ್ಣೀರಾದರು.

ನಮ್ಮ ಅಣ್ಣನ ಸ್ಮರಣೆ ಕಾರ್ಯ ಇತ್ತು. ಎಲ್ಲಾ ವ್ಯವಸ್ಥೆ ಮಾಡಬೇಕು ಅಂತಾ ಐದು ದಿನಗಳ ಮೊದಲೇ ಚೂರಲ್‌ಲಾಗೆ ಹೋಗಿದ್ವಿ. ಆ ರಾತ್ರಿ ಸೇತುವೆ ಹೊಡೆದು ಹೋದ ಮೇಲೆ ನೀರು ನುಗ್ಗಿತು. ಅದು ತುಂಬಾ ಹಳೆ ಸೇತುವೆ. ನೀರು ಮನೆಯತ್ತ ನುಗ್ಗುತ್ತಿದ್ದಂತೆ ಮನೆಯಿಂದ ಹೊರಬಂದ ನಾವು ತಂತಿಗಳನ್ನು ಕಟ್ಟಿ ಅದರ ಸಹಾಯದಿಂದ ಮೇಲೆ ಬಂದು ಬಚಾವ್ ಆದೆವು. ನಾನು ಅಲ್ಲಿಂದ ತಪ್ಪಿಸಿಕೊಂಡು ಬರುವಾಗ ನನ್ನ ಹಾಗೂ ನನ್ನ ಮಗಳ ಕಾಲಿಗೆ ಗಾಯವಾಯಿತು. ಬೆಳಿಗ್ಗೆ ಹೋಗಿ ನೋಡಿದರೆ ಒಂದು ಕಡ್ಡಿಯೂ ಇರಲಿಲ್ಲ. ಕೂಲಿ ಮಾಡಿ 6 ಹಸುಗಳನ್ನು ಸಾಕಿದ್ದೆವು. ಅವೂ ಕೊಚ್ಚಿ ಹೋಗಿವೆ. ಊರೇ ಇಲ್ಲ ಅಂದ್ದೇಲೆ ದನಕರು ಎಲ್ಲಿ ಇರುತ್ತೆ ಹೇಳಿ ಎಂದು ನೊಂದು ನುಡಿದರು.

ಕೇರಳದ ಚೂರಲ್ ಮಲಾದಲ್ಲಿ ನೀರು ತುಂಬಿದೆ, ಎಲ್ಲರೂ ಕೊಚ್ಚಿಕೊಂಡು ಹೋಗಿದ್ದಾರೆಂದು ಕೇಳಿದಾಗ ಗಾಬರಿಯಾಗಿತ್ತು. ನಮ್ಮ ಮಾವ ಬೇರೆಯವರಿಂದ ನಮಗೆ ಕರೆ ಮಾಡಿಸಿ ‘ನಮಗೆ ಏನೂ ಆಗಿಲ್ಲ ಅಂತಾ ಹೇಳಿದ ಮೇಲೆ ನಾವು ನಿಟ್ಟುಸಿರು ಬಿಡುವಂತಾಯಿತು ಎಂದು ಸೊಸೆ ನಂದಿನಿ ಘಟನೆಯ ಸಂದರ್ಭವನ್ನು ನೆನಪಿಸಿಕೊಂಡರು.

ಗರ್ಭಿಣಿ ಪತ್ನಿ, ಗಂಡ ಕೈಹಿಡಿದುಕೊಂಡೇ ಕೊಚ್ಚಿ ಹೋದರು
ನಾವಿದ್ದ ಸ್ಥಳದಲ್ಲಿ ತುಂಬಾ ಜನರು ಕೊಚ್ಚಿ ಹೋಗಿದ್ದಾರೆ. ಈಗ 10ರಿಂದ 12 ಜನರು ಬದುಕಿದ್ದಾರಷ್ಟೆ. ನಮ್ಮ ಮನೆ ಪಕ್ಕದಲ್ಲಿ 9 ತಿಂಗಳ ಗರ್ಭಿಣಿ ಹಾಗೂ ಅವಳ ಗಂಡ ವಾಸವಿದ್ದರು. ಒಬ್ಬರಿಗೊಬ್ಬರು ಕೈ ಹಿಡಿದುಕೊಂಡೇ ಕೊಚ್ಚಿ ಹೋದರು. ಯಾರನ್ನು ಕೂಡ ರಕ್ಷಣೆ ಮಾಡಲೂ ಆಗಲಿಲ್ಲ ಎಂದು ಸ್ವಾಮಿ ಘಟನೆ ಬಗ್ಗೆ ವಿವರಿಸಿದರು.

 

ಆಂದೋಲನ ಡೆಸ್ಕ್

Recent Posts

ಕಟಾವಿಗೆ ಬಂದಿದ್ದ ಕಬ್ಬಿಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು: ರೈತರು ಕಂಗಾಲು

ನಂಜನಗೂಡು: ಆಳೆತ್ತರ ಬೆಳೆದು ನಿಂತಿದ್ದ ಕಬ್ಬಿನ ಬೆಳೆಗೆ ದುಷ್ಕರ್ಮಿಗಳು ಬೆಂಕಿ ಇಟ್ಟ ಪರಿಣಾಮ ಐದು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಬೆಂಕಿಗಾಹುತಿಯಾಗಿರುವ…

9 hours ago

ಹನೂರು| ಬಿರುಗಾಳಿ ಸಹಿತ ಭಾರೀ ಮಳೆಗೆ ಬೆಳೆ ನಾಶ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿರುಗಾಳಿ ಸಹಿತ ಮಳೆಗೆ ಹಲವಾರು ರೈತರು ಬೆಳೆದಿದ್ದ 50ಕ್ಕೂ ಹೆಚ್ಚು…

9 hours ago

ಗುಂಡ್ಲುಪೇಟೆ| ಭಾರೀ ಗಾಳಿ ಮಳೆಗೆ ಬಾಳೆ ಬೆಳೆ ನಾಶ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನಲ್ಲಿ‌ ಬುಧವಾರ ಸುರಿದ ಬಿರುಗಾಳಿ ಮಳೆಗೆ ಬಾಲೆ ಬೆಳೆ ನಾಶವಾಗಿರುವ ಘಟನೆ…

9 hours ago

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಸಾವು: ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

ಬೆಂಗಳೂರು: ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್‌ ಅನ್ನು ಕೂಡಲೇ ಅಮಾನತು…

9 hours ago

ಗುಂಡ್ಲುಪೇಟೆ| ಮನೆ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬೆಳವಾಡಿ ಗ್ರಾಮದಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣವನ್ನು ಭೇದಿಸಿ, ಇಬ್ಬರು…

9 hours ago

ಅಧಿಕಾರ ಹಂಚಿಕೆ ಬಗ್ಗೆ ಯಾವುದೇ ಗೊಂದಲವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಅಧಿಕಾರ ಹಂಚಿಕೆಯ ಬಗ್ಗೆ ಯಾವುದೇ ಗೊಂದಲ ಇಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿನ ರಾಜಕೀಯ ಗೊಂದಲಗಳನ್ನು ಆದಷ್ಟು…

9 hours ago