ಓದುಗರ ಪತ್ರ
ಇತ್ತೀಚೆಗೆ ಮೈಸೂರಿನ ವಿವೇಕಾನಂದನಗರ ವೃತ್ತದ ಬಳಿ ಸಾರಿಗೆ ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ. ಸಂಚಾರ ಪೊಲೀಸರು ಇಲ್ಲದ ಕಡೆ ಅಥವಾ ಸಿಸಿ ಕ್ಯಾಮೆರಾ ಇಲ್ಲದ ಕಡೆ ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸುವುದನ್ನು ಕಡೆಗಣಿಸುತ್ತಾರೆ. ಇದರಿಂದ ಅಪಾಯ ಉಂಟಾಗಬಹುದು ಎಂಬ ಅರಿವೂ ಅವರಿಗಿರುವುದಿಲ್ಲ. ದಂಡ ಕಟ್ಟಬೇಕಾಗುತ್ತದೆ ಎಂದು ಹೆಲ್ಮೆಟ್ ಧರಿಸುವುದಕ್ಕಿಂತ ಪ್ರಾಣ ರಕ್ಷಣೆಗಾಗಿ ಹೆಲ್ಮೆಟ್ ಧರಿಸುವುದು ಒಳ್ಳೆಯದು. ಮಕ್ಕಳನ್ನು ಮನೆಯಿಂದ ಶಾಲೆಗೆ ಕರೆದುಕೊಂಡು ಹೋಗುವಾಗ, ಮನೆಯ ಸಮೀಪದ ಅಂಗಡಿಗಳಿಗೆ ತೆರಳುವಾಗ ಹೆಲ್ಮೆಟ್ ಧರಿಸುವುದನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ ಮಾಡಬಾರದು. ಹಾಗೆಯೇ ವಾಹನ ಚಾಲಕರು ತಮ್ಮನ್ನು ನಂಬಿರುವ, ಪ್ರೀತಿಸುವ ಬಂಧು-ಬಳಗಕ್ಕೋಸ್ಕರ ಎಚ್ಚರಿಕೆಯಿಂದ ಚಾಲನೆ ಮಾಡಬೇಕು. ಸಂಚಾರ ನಿಯಮವನ್ನು ಪ್ರತಿಯೊಬ್ಬರೂ ಪಾಲಿಸಬೇಕು.
– ಜಿ.ಪಿ.ಹರೀಶ್, ವಿ.ವಿ.ಮೊಹಲ್ಲಾ, ಮೈಸೂರು
ಟೆಹ್ರಾನ್ : ಇಷ್ಟು ದಿನ ತನ್ನ ನೆರೆಹೊರೆಯ ದೇಶಗಳಲ್ಲಿರುವ ಅಮೆರಿಕ ಸೇನಾ ನೆಲೆಗಳ ಮೇಲೆ ದಾಳಿ ಮಾಡುತ್ತಿದ್ದ ಇರಾನ್ ಇದೀಗ…
ಬೆಂಗಳೂರು : ಭರ್ಜರಿ ಪ್ರದರ್ಶನ ಕಾಣುತ್ತಿರು ಧುರಂಧರ್ 2 ಸಿನಿಮಾ ನಿರಾಸೆ ಮೂಡಿಸಿದ್ದು, ಚಿತ್ರಮಂದಿರಕ್ಕೆ ಹೋಗಿ ನಿಮ್ಮ ಸಮಯ ಮತ್ತು…
ಮೈಸೂರು : ಯುಗಾದಿ ಮತ್ತು ರಂಜಾನ್ ಹಬ್ಬದ ಪ್ರಯುಕ್ತ ಸಾಲು ಸಾಲು ಸರಣಿ ರಜೆ ಹಿನ್ನೆಲೆ ಮೈಸೂರಿನ ಪ್ರಮುಖ ಪ್ರವಾಸಿ…
ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ಬಸ್ ಟಿಕೆಟ್ ದರವನ್ನು ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು…
ಹಾಸನ: ಜೂಜಾಡುವ ವೇಲೆ ಪೊಲೀಸರು ದಾಳಿ ನಡೆಸಿದ ಪರಿಣಾಮ ತಪ್ಪಿಸಿಕೊಂಡು ಓಡುವ ವೇಳೆ ಆಯತಪ್ಪಿ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ…
ಮೈಸೂರು: ನಾಡಿನಾದ್ಯಂತ ರಂಜಾನ್ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ…