Andolana originals

ಮೈಸೂರು ಸಂಸ್ಥಾನಕ್ಕೂ ಬಾಬುರಾಯನ ಕೊಪ್ಪಲಿಗೂ ಸಂಬಂಧವೇನು?

ಧರ್ಮೇಂದ್ರ ಕುಮಾರ್‌ ಮೈಸೂರು

ಮೈಸೂರು ಸಂಸ್ಥಾನಕ್ಕೂ ಶ್ರೀರಂಗಪಟ್ಟಣ ತಾಲ್ಲೂಕಿನ ಬಾಬುರಾಯನ ಕೊಪ್ಪಲು ಗ್ರಾಮಕ್ಕೂ ಅವಿನಾಭಾವ ಸಂಬಂಧ ಇದೆ. ಆ ಸಂಬಂಧದ ಮೂಲವನ್ನು ಹುಡುಕುತ್ತಾ ಹೋದರೆ ಟಿಪ್ಪು ಸುಲ್ತಾನ್ ಆಡಳಿತದ ಕಾಲಕ್ಕೆ ಕರೆದೊಯ್ಯುತ್ತದೆ.

ಸೈನಿಕನಾಗಿದ್ದು, ದಿವಾನ ಹುದ್ದೆಗೇರಿದವರೊಬ್ಬರ ಹೆಸರು ಮುಂಚೂಣಿಗೆ ಬರುತ್ತದೆ. ಮೈಸೂರು ಸಂಸ್ಥಾನ ಅನೇಕ ಶ್ರೇಷ್ಠ ದಿವಾನರುಗಳನ್ನು ಕಂಡಿದೆ. ಅದರಲ್ಲಿ ಕೆಲವರು ಅಗ್ರಗಣ್ಯ ಸ್ಥಾನ ಪಡೆದರೆ, ಇನ್ನೂ ಕೆಲವರು ಶ್ರೇಷ್ಠ ಆಡಳಿತ ನೀಡಿದ್ದರು. ಅಂತಹವರ ಪೈಕಿ ಬಾಬು ರಾವ್ ಕೂಡ ಒಬ್ಬರು. ಹೈದರ್ ಅಲಿ, ಟಿಪ್ಪು ಸುಲ್ತಾನ್ ಮತ್ತು ಮೈಸೂರು ಸಂಸ್ಥಾನದ ಇತಿಹಾಸದಲ್ಲಿ ಅಚ್ಚಳಿಯದ ಗುರುತು ಮೂಡಿಸಿದ ಬಾಬುರಾವ್, ಶ್ರೀರಂಗಪಟ್ಟಣ ಚರಿತ್ರೆಯಲ್ಲಿ ಅಜರಾಮರ ಆಗಿದ್ದಾರೆ.

ಮೈಸೂರು-ಬೆಂಗಳೂರು ಹಳೇ ರಸ್ತೆಯಲ್ಲಿ ಬಾಬುರಾಯನ ಕೊಪ್ಪಲು ಎಂಬ ಗ್ರಾಮವಿದೆ. ಗ್ರಾಮಕ್ಕೆ ಶತಮಾನಗಳ ಇತಿಹಾಸವಿದ್ದು, ಬಾಬು ರಾವ್ ಅವರ ನೆನಪಿನಾರ್ಥ ಅವರ ಹೆಸರನ್ನು ನಾಮಕರಣ ಮಾಡಲಾಗಿದೆ.

ಟಿಪ್ಪು ಖಾಸಾ ಪಡೆಯ ಸೈನಿಕ ಈ ಬಾಬುರಾವ್: ಬಾಬು ರಾವ್ ಅವರು ಟಿಪ್ಪು ಸುಲ್ತಾನ್ ಅವರ ಖಾಸಾ ಪಡೆಯಲ್ಲಿದ್ದ ೧೦ ಸಾವಿರ ಮಂದಿ ಪೈಕಿ ಪ್ರಮುಖರಲ್ಲಿ ಒಬ್ಬರಾಗಿದ್ದರು. ಬಾಬು ರಾವ್ ದೃಢಕಾಯ ಹಾಗೂ ಅತ್ಯಂತ ಶಕ್ತಿಶಾಲಿ ಸೈನಿಕ ಆಗಿದ್ದರು. ಆಂಗ್ಲೋ-ಮೈಸೂರು ಯುದ್ಧ ನಡೆದಾಗ ಕರ್ನಲ್ ಬೈಲಿ ಡಂಜಿಯನ್ ಎಂಬ ಬ್ರಿಟಿಷ್ ಅಧಿಕಾರಿಯನ್ನು ಬಂಧಿಸಿ ಕರೆತಂದ ಸೈನಿಕ ತುಕಡಿಯಲ್ಲಿ ಬಾಬು ರಾವ್ ಕೂಡ ಒಬ್ಬರಾಗಿದ್ದರು. ಬಾಬು ರಾವ್ ಅವರು ಸೇನೆಯಷ್ಟೆ ಅಲ್ಲದೆ, ಆಡಳಿತಾತ್ಮಕ ವಿಚಾರದಲ್ಲೂ ಪರಿಣತರಾಗಿದ್ದರು. ಹಾಗಾಗಿ ಅವರನ್ನು ಮೈಸೂರು ಸಂಸ್ಥಾನದ ರಾಜರಾಗಿದ್ದ ಹೈದರ್ ಅಲಿ ಅವರು ದಿವಾನ್ಸ್ ಕಚೇರಿಗೆ ನೇಮಕ ಮಾಡಿದ್ದರು. ಆಗಿನಿಂದ ಬಾಬು ರಾವ್ ಮೈಸೂರು ಸಂಸ್ಥಾನದ ಆಡಳಿತ ವ್ಯವಸ್ಥೆಯಲ್ಲಿ ಗಮನಾರ್ಹ ಪಾತ್ರವಹಿಸಿದ್ದರು.

ನಾಲ್ಕು ಬಾರಿ ದಿವಾನರಾಗಿದ್ದ ಬಾಬುರಾವ್: ಆಡಳಿತದ ಚಾತುರ್ಯವನ್ನು ಅರಗಿಸಿಕೊಂಡಿದ್ದ ಬಾಬುರಾವ್, ೧೭೯೯ ರಿಂದ ೧೮೧೧ ರವರೆಗೆ ಮೈಸೂರು ಸಂಸ್ಥಾನದ ದಿವಾನರಾಗಿದ್ದ ದಿವಾನ್ ಪೂರ್ಣಯ್ಯರನ್ನು ಸದಾ ವಿರೋಽಸುತ್ತಿದ್ದರು. ದಿವಾನ್ ಪೂರ್ಣಯ್ಯ ಅವರ ಆಡಳಿತ ವಿಚಾರ ಹಾಗೂ ನಿರ್ಧಾರಗಳನ್ನೇ ಪ್ರಶ್ನಿಸುತ್ತಿದ್ದರು. ಮೈಸೂರು ಸಂಸ್ಥಾನದ ದಿವಾನ ಆಗಬೇಕು ಎಂದು ಬಾಬು ರಾವ್ ಸಾಕಷ್ಟು ಪ್ರಯತ್ನಗಳನ್ನು ಮಾಡಿದರೂ ಪೂರ್ಣಯ್ಯ ಅವರು ಇರುವವರೆಗೆ ಅದು ಸಾಧ್ಯವಾಗಲಿಲ್ಲ.

 

andolana

Recent Posts

ಬಡವರಿಗೆ ಮನರೇಗಾ ಅಡಿ ಕೂಲಿ ಕೆಲಸ ಕೊಟ್ಟಿದ್ದು ಮನಮೋಹನ್‌ ಸಿಂಗ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ ಮಾಡುತ್ತಿದ್ದೇವೆ. ಬಡವರಿಗೆ ಮನರೇಗಾ…

1 min ago

ಮನರೇಗಾ ಮರು ಜಾರಿ ಮಾಡುವವರೆಗೆ ಹೋರಾಟದಿಂದ ಹಿಂದೆ ಸರಿಯಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮನರೇಗಾ ಮರು ಜಾರಿ ಮಾಡುವವರೆಗೆ ನಾವು ಹೋರಾಟದ ಹಾದಿಯಿಂದ ಹಿಂದೆ ಸರಿಯುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಇಂದು…

4 mins ago

ಮಂಡ್ಯ| ಜೂಜಾಟದಲ್ಲಿ ತೊಡಗಿದ್ದ 29 ಮಂದಿ ಬಂಧನ: 10 ಲಕ್ಷ ರೂ. ವಶ

ಮಂಡ್ಯ: ನಗರದ ಹೊರವಲಯದಲ್ಲಿರುವ ಅಗ್ರಿ ಕ್ಲಬ್ ಮೇಲೆ ದಾಳಿ ನಡೆಸಿರುವ ಮಂಡ್ಯ ಗ್ರಾಮಾಂತರ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ 29 ಮಂದಿಯನ್ನು…

13 mins ago

ಮನರೇಗಾ ಹೆಸರು ಬದಲಾವಣೆಗೆ ವಿರೋಧ: ಕೇಂದ್ರದ ವಿರುದ್ಧ ಕಾಂಗ್ರೆಸ್‌ ಬೃಹತ್‌ ಪ್ರತಿಭಟನೆ

ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್‌ ನಾಯಕರು…

1 hour ago

ಚಾಮರಾಜನಗರ| ನಂಜೇದೇವನಪುರದಲ್ಲಿ ಮತ್ತೊಂದು ಹುಲಿ ಮರಿ ಸೆರೆ: ಇನ್ನೊಂದು ಮಾತ್ರ ಬಾಕಿ

ಚಾಮರಾಜನಗರ: ನಂಜೇದೇವನಪುರ ಗ್ರಾಮದಲ್ಲಿ ತಾಯಿ ಹುಲಿ ಜೊತೆ ನಾಲ್ಕು ಮರಿ ಹುಲಿಗಳು ಪತ್ತೆಯಾಗಿದ್ದ ಪ್ರಕರಣದಲ್ಲಿ ಇದೀಗ ಮತ್ತೊಂದು ಹುಲಿ ಮರಿಯನ್ನು…

1 hour ago

ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಮಹಿಳೆ ಸಾವು: ಇಬ್ಬರಿಗೆ ಗಾಯ

ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್‌ ಬಳಿ…

2 hours ago