Andolana originals

ಮೈಸೂರು ಸಂಸ್ಥಾನಕ್ಕೂ ಬಾಬುರಾಯನ ಕೊಪ್ಪಲಿಗೂ ಸಂಬಂಧವೇನು?

ಧರ್ಮೇಂದ್ರ ಕುಮಾರ್‌ ಮೈಸೂರು

ಮೈಸೂರು ಸಂಸ್ಥಾನಕ್ಕೂ ಶ್ರೀರಂಗಪಟ್ಟಣ ತಾಲ್ಲೂಕಿನ ಬಾಬುರಾಯನ ಕೊಪ್ಪಲು ಗ್ರಾಮಕ್ಕೂ ಅವಿನಾಭಾವ ಸಂಬಂಧ ಇದೆ. ಆ ಸಂಬಂಧದ ಮೂಲವನ್ನು ಹುಡುಕುತ್ತಾ ಹೋದರೆ ಟಿಪ್ಪು ಸುಲ್ತಾನ್ ಆಡಳಿತದ ಕಾಲಕ್ಕೆ ಕರೆದೊಯ್ಯುತ್ತದೆ.

ಸೈನಿಕನಾಗಿದ್ದು, ದಿವಾನ ಹುದ್ದೆಗೇರಿದವರೊಬ್ಬರ ಹೆಸರು ಮುಂಚೂಣಿಗೆ ಬರುತ್ತದೆ. ಮೈಸೂರು ಸಂಸ್ಥಾನ ಅನೇಕ ಶ್ರೇಷ್ಠ ದಿವಾನರುಗಳನ್ನು ಕಂಡಿದೆ. ಅದರಲ್ಲಿ ಕೆಲವರು ಅಗ್ರಗಣ್ಯ ಸ್ಥಾನ ಪಡೆದರೆ, ಇನ್ನೂ ಕೆಲವರು ಶ್ರೇಷ್ಠ ಆಡಳಿತ ನೀಡಿದ್ದರು. ಅಂತಹವರ ಪೈಕಿ ಬಾಬು ರಾವ್ ಕೂಡ ಒಬ್ಬರು. ಹೈದರ್ ಅಲಿ, ಟಿಪ್ಪು ಸುಲ್ತಾನ್ ಮತ್ತು ಮೈಸೂರು ಸಂಸ್ಥಾನದ ಇತಿಹಾಸದಲ್ಲಿ ಅಚ್ಚಳಿಯದ ಗುರುತು ಮೂಡಿಸಿದ ಬಾಬುರಾವ್, ಶ್ರೀರಂಗಪಟ್ಟಣ ಚರಿತ್ರೆಯಲ್ಲಿ ಅಜರಾಮರ ಆಗಿದ್ದಾರೆ.

ಮೈಸೂರು-ಬೆಂಗಳೂರು ಹಳೇ ರಸ್ತೆಯಲ್ಲಿ ಬಾಬುರಾಯನ ಕೊಪ್ಪಲು ಎಂಬ ಗ್ರಾಮವಿದೆ. ಗ್ರಾಮಕ್ಕೆ ಶತಮಾನಗಳ ಇತಿಹಾಸವಿದ್ದು, ಬಾಬು ರಾವ್ ಅವರ ನೆನಪಿನಾರ್ಥ ಅವರ ಹೆಸರನ್ನು ನಾಮಕರಣ ಮಾಡಲಾಗಿದೆ.

ಟಿಪ್ಪು ಖಾಸಾ ಪಡೆಯ ಸೈನಿಕ ಈ ಬಾಬುರಾವ್: ಬಾಬು ರಾವ್ ಅವರು ಟಿಪ್ಪು ಸುಲ್ತಾನ್ ಅವರ ಖಾಸಾ ಪಡೆಯಲ್ಲಿದ್ದ ೧೦ ಸಾವಿರ ಮಂದಿ ಪೈಕಿ ಪ್ರಮುಖರಲ್ಲಿ ಒಬ್ಬರಾಗಿದ್ದರು. ಬಾಬು ರಾವ್ ದೃಢಕಾಯ ಹಾಗೂ ಅತ್ಯಂತ ಶಕ್ತಿಶಾಲಿ ಸೈನಿಕ ಆಗಿದ್ದರು. ಆಂಗ್ಲೋ-ಮೈಸೂರು ಯುದ್ಧ ನಡೆದಾಗ ಕರ್ನಲ್ ಬೈಲಿ ಡಂಜಿಯನ್ ಎಂಬ ಬ್ರಿಟಿಷ್ ಅಧಿಕಾರಿಯನ್ನು ಬಂಧಿಸಿ ಕರೆತಂದ ಸೈನಿಕ ತುಕಡಿಯಲ್ಲಿ ಬಾಬು ರಾವ್ ಕೂಡ ಒಬ್ಬರಾಗಿದ್ದರು. ಬಾಬು ರಾವ್ ಅವರು ಸೇನೆಯಷ್ಟೆ ಅಲ್ಲದೆ, ಆಡಳಿತಾತ್ಮಕ ವಿಚಾರದಲ್ಲೂ ಪರಿಣತರಾಗಿದ್ದರು. ಹಾಗಾಗಿ ಅವರನ್ನು ಮೈಸೂರು ಸಂಸ್ಥಾನದ ರಾಜರಾಗಿದ್ದ ಹೈದರ್ ಅಲಿ ಅವರು ದಿವಾನ್ಸ್ ಕಚೇರಿಗೆ ನೇಮಕ ಮಾಡಿದ್ದರು. ಆಗಿನಿಂದ ಬಾಬು ರಾವ್ ಮೈಸೂರು ಸಂಸ್ಥಾನದ ಆಡಳಿತ ವ್ಯವಸ್ಥೆಯಲ್ಲಿ ಗಮನಾರ್ಹ ಪಾತ್ರವಹಿಸಿದ್ದರು.

ನಾಲ್ಕು ಬಾರಿ ದಿವಾನರಾಗಿದ್ದ ಬಾಬುರಾವ್: ಆಡಳಿತದ ಚಾತುರ್ಯವನ್ನು ಅರಗಿಸಿಕೊಂಡಿದ್ದ ಬಾಬುರಾವ್, ೧೭೯೯ ರಿಂದ ೧೮೧೧ ರವರೆಗೆ ಮೈಸೂರು ಸಂಸ್ಥಾನದ ದಿವಾನರಾಗಿದ್ದ ದಿವಾನ್ ಪೂರ್ಣಯ್ಯರನ್ನು ಸದಾ ವಿರೋಽಸುತ್ತಿದ್ದರು. ದಿವಾನ್ ಪೂರ್ಣಯ್ಯ ಅವರ ಆಡಳಿತ ವಿಚಾರ ಹಾಗೂ ನಿರ್ಧಾರಗಳನ್ನೇ ಪ್ರಶ್ನಿಸುತ್ತಿದ್ದರು. ಮೈಸೂರು ಸಂಸ್ಥಾನದ ದಿವಾನ ಆಗಬೇಕು ಎಂದು ಬಾಬು ರಾವ್ ಸಾಕಷ್ಟು ಪ್ರಯತ್ನಗಳನ್ನು ಮಾಡಿದರೂ ಪೂರ್ಣಯ್ಯ ಅವರು ಇರುವವರೆಗೆ ಅದು ಸಾಧ್ಯವಾಗಲಿಲ್ಲ.

 

andolana

Recent Posts

ಎಸ್‌ಸಿ, ಎಸ್‌ಟಿಗಳ ಹಕ್ಕು ರಕ್ಷಣೆಗೆ ಕ್ರಮ : ಡಾ.ಮೂರ್ತಿ

ಮೈಸೂರು : ಆದಿವಾಸಿ ಸಮುದಾಯಗಳ ಮೇಲಿನ ದೌರ್ಜನ್ಯ, ಸಾಮಾಜಿಕ ಬಹಿಷ್ಕಾರ ಹಾಗೂ ಮೈಸೂರು ಭಾಗದಲ್ಲಿ ದಾಖಲಾಗಿರುವ 134 ಪೋಕ್ಸೊ ಪ್ರಕರಣಗಳು…

5 hours ago

ಬೆಂಕಿ ಅವಘಡ | ಅಬಕಾರಿ ಡಿಸಿ ಅಮಾನತಿಗೆ ಶಿಫಾರಸ್ಸು ಮಾಡಲು ಸೂಚನೆ ಕೊಟ್ಟ ಯತೀಂದ್ರ ಸಿದ್ದರಾಮಯ್ಯ!

ಮೈಸೂರು : ಸೋಮವಾರ ಪಬ್‌ನಲ್ಲಿ ಸಂಭವಿಸಿದ್ದ ಬೆಂಕಿ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಕರ್ತವ್ಯ ಲೋಪದ ಕಾರಣಕ್ಕಾಗಿ ಅಬಕಾರಿ…

6 hours ago

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ತಮಿಳುನಾಡು ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ರೈತರಿಗೆ ಸಿಎಂ ವಿಜಯ್‌ ಬಂಪರ್‌ ಕೊಡುಗೆ ನೀಡಿದ್ದಾರೆ. ವಿವಿಧ ಸಹಕಾರಿ ಬ್ಯಾಂಕುಗಳಲ್ಲಿ ರೈತರು ಪಡೆದಿರುವ 75,000 ರೂ…

10 hours ago

ಮುಂಗಾರು ಕೊರತೆ: ಹಾರಂಗಿ ಜಲಾಶಯದ ಒಳಹರಿವು ತೀವ್ರ ಕುಸಿತ

ಮಡಿಕೇರಿ: ಮುಂಗಾರು ಮಳೆ ಕೊರತೆಯಿಂದ ಹಾರಂಗಿ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಸಿದಿದ್ದು, ರೈತರಲ್ಲಿ ಆತಂಕ ಹೆಚ್ಚಾಗಿದೆ. ಮಳೆಗಾಲವಾದರೂ ಜಿಲ್ಲೆಯಲ್ಲಿ ಮಳೆ…

11 hours ago

ಮೆಡಿಕಲ್‌ನಲ್ಲಿ ಇನ್ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ: ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಮೆಡಿಕಲ್‌ ಶಾಪ್‌ಗಳಲ್ಲಿ ಇನ್ಮು ಮುಂದೆ ಸಾರ್ವಜನಿಕರು ನೇರವಾಗಿ ಸಿರಪ್‌ ಖರೀದಿ ಮಾಡುವಂತಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಆದೇಶ…

12 hours ago

ನಟ ವಿಜಯ್‌ ರಾಘವೇಂದ್ರ, ಶ್ರೀಮುರಳಿಗೆ ಮಾತೃ ವಿಯೋಗ

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರಸಿದ್ಧ ನಿರ್ಮಾಪಕರಾದ ಎಸ್.ಎ.ಚಿನ್ನೇಗೌಡ ಅವರ ಪತ್ನಿ ಹಾಗೂ ನಟರಾದ ವಿಜಯ್‌ ರಾಘವೇಂದ್ರ, ಶ್ರೀಮುರಳಿ ಅವರ ತಾಯಿ…

13 hours ago