ಓದುಗರ ಪತ್ರ
ಶುಕ್ರವಾರ ಮೈಸೂರು ಅಭಿವೃದ್ಧಿ ಪ್ರಾಧಿಕಾರವು ನಡೆಸಿದ ಹರಾಜು ಪ್ರಕ್ರಿಯೆಯಲ್ಲಿ ವಿಜಯ ನಗರದ ೨ ನೇ ಹಂತದ ೬೦೦ ಚದರಡಿಯ (೨೦೩೦), ಖಾಲಿ ನಿವೇಶನವು ೨ ಕೋಟಿ ರೂ. ಬೃಹತ್ ಮೊತ್ತಕ್ಕೆ ಹರಾಜು ಆಗಿರುವುದು ಮೈಸೂರಿನ ನಾಗರಿಕರಲ್ಲಿ ಅಚ್ಚರಿ ಮೂಡಿಸಿದೆ. ಇದರ ಬೆಲೆ, ಒಂದು ಅಡಿಗೆ ರೂ. ೩೪ ಸಾವಿರ ರೂ.ಗಳಾಗಿದೆ.
ಮೈಸೂರಿನ ಹೃದಯ ಭಾಗದಲ್ಲಿರುವ ಅಶೋಕ ರಸ್ತೆ, ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆಯಲ್ಲೂ ನಿವೇಶನಗಳಿಗೆ ಇಷ್ಟು ದುಬಾರಿ ಬೆಲೆ ಇಲ್ಲದಿರುವಾಗ, ಮೈಸೂರಿನಿಂದ ಸುಮಾರು ೮ ಕಿ.ಮೀ. ದೂರದಲ್ಲಿರುವ ಈ ನಿವೇಶನಕ್ಕೇಕೆ ಇಷ್ಟೊಂದು ದುಬಾರಿ ಬೆಲೆ ಎಂದು ಸಾರ್ವಜನಿಕರು ಹುಬ್ಬೇರಿಸುತ್ತಿದ್ದಾರೆ. ಈ ನಿವೇಶನದಲ್ಲೇನಾದರೂ ಚಿನ್ನದ ನಿಕ್ಷೇಪ ಇದೆಯಾ? ಈ ನಿವೇಶನ ಕೊಂಡುಕೊಂಡಿರುವ ವ್ಯಕ್ತಿಯ ಹಣದ ಮೂಲ ಯಾವುದು? ತಮ್ಮಲ್ಲಿರುವ ಕಪ್ಪು ಹಣವನ್ನು ವೈಟ್ ಮಾಡಲು ಈ ರೀತಿ ಮಾಡಿರಬಹುದೇ ಎಂಬ ಅನುಮಾನ ಸಾರ್ವಜನಿಕರಲ್ಲಿ ಮೂಡಿದೆ. ಇದಕ್ಕೆ ತೆರಿಗೆ ಇಲಾಖೆ ಅಧಿಕಾರಿಗಳೇ ಸ್ಪಷ್ಟನೆ ನೀಡಬೇಕು.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
1 ಕೆ.ಜಿ.ಬೆಳ್ಳಿಗೆ 3.30 ಲಕ್ಷ ರೂಪಾಯಿ ಹೈದರಾಬಾದ್ : ಚಿನ್ನ ಮತ್ತು ಬೆಳ್ಳಿ ಬೆಲೆಗಳ ಏರಿಕೆ ನಿಲ್ಲುತ್ತಿಲ್ಲ. ಬುಧವಾರ ಹಳದಿ…
ಮೈಸೂರು : ಸೋಮವಾರ ತಡರಾತ್ರಿ ಯುವಕನೋರ್ವನನ್ನು ಐವರ ಗುಂಪು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಉದಯಗಿರಿ…
ಹನೂರು : ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮ ವ್ಯಕ್ತಿ ಮೃತಪಟ್ಟಿರುವುದರಿಂದ ಚಿರತೆ…
ಇಡಿ ಬಂಧನದಿಂದ ಬಿಡುಗಡೆ ಕೋರಿ ಮಾಜಿ ಆಯುಕ್ತ ಸಲ್ಲಿಸಿದ್ದ ಅರ್ಜಿ ತಿರಸ್ಕಾರ ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿರುವ…
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…