ಓದುಗರ ಪತ್ರ
ಶುಕ್ರವಾರ ಮೈಸೂರು ಅಭಿವೃದ್ಧಿ ಪ್ರಾಧಿಕಾರವು ನಡೆಸಿದ ಹರಾಜು ಪ್ರಕ್ರಿಯೆಯಲ್ಲಿ ವಿಜಯ ನಗರದ ೨ ನೇ ಹಂತದ ೬೦೦ ಚದರಡಿಯ (೨೦೩೦), ಖಾಲಿ ನಿವೇಶನವು ೨ ಕೋಟಿ ರೂ. ಬೃಹತ್ ಮೊತ್ತಕ್ಕೆ ಹರಾಜು ಆಗಿರುವುದು ಮೈಸೂರಿನ ನಾಗರಿಕರಲ್ಲಿ ಅಚ್ಚರಿ ಮೂಡಿಸಿದೆ. ಇದರ ಬೆಲೆ, ಒಂದು ಅಡಿಗೆ ರೂ. ೩೪ ಸಾವಿರ ರೂ.ಗಳಾಗಿದೆ.
ಮೈಸೂರಿನ ಹೃದಯ ಭಾಗದಲ್ಲಿರುವ ಅಶೋಕ ರಸ್ತೆ, ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆಯಲ್ಲೂ ನಿವೇಶನಗಳಿಗೆ ಇಷ್ಟು ದುಬಾರಿ ಬೆಲೆ ಇಲ್ಲದಿರುವಾಗ, ಮೈಸೂರಿನಿಂದ ಸುಮಾರು ೮ ಕಿ.ಮೀ. ದೂರದಲ್ಲಿರುವ ಈ ನಿವೇಶನಕ್ಕೇಕೆ ಇಷ್ಟೊಂದು ದುಬಾರಿ ಬೆಲೆ ಎಂದು ಸಾರ್ವಜನಿಕರು ಹುಬ್ಬೇರಿಸುತ್ತಿದ್ದಾರೆ. ಈ ನಿವೇಶನದಲ್ಲೇನಾದರೂ ಚಿನ್ನದ ನಿಕ್ಷೇಪ ಇದೆಯಾ? ಈ ನಿವೇಶನ ಕೊಂಡುಕೊಂಡಿರುವ ವ್ಯಕ್ತಿಯ ಹಣದ ಮೂಲ ಯಾವುದು? ತಮ್ಮಲ್ಲಿರುವ ಕಪ್ಪು ಹಣವನ್ನು ವೈಟ್ ಮಾಡಲು ಈ ರೀತಿ ಮಾಡಿರಬಹುದೇ ಎಂಬ ಅನುಮಾನ ಸಾರ್ವಜನಿಕರಲ್ಲಿ ಮೂಡಿದೆ. ಇದಕ್ಕೆ ತೆರಿಗೆ ಇಲಾಖೆ ಅಧಿಕಾರಿಗಳೇ ಸ್ಪಷ್ಟನೆ ನೀಡಬೇಕು.
– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…