Andolana originals

ಓದುಗರ ಪತ್ರ:  ದುಬಾರಿ ನಿವೇಶನದ ಹಣದ ಮೂಲದ ಯಾವುದು?

ಶುಕ್ರವಾರ ಮೈಸೂರು ಅಭಿವೃದ್ಧಿ ಪ್ರಾಧಿಕಾರವು ನಡೆಸಿದ ಹರಾಜು ಪ್ರಕ್ರಿಯೆಯಲ್ಲಿ ವಿಜಯ ನಗರದ ೨ ನೇ ಹಂತದ ೬೦೦ ಚದರಡಿಯ (೨೦೩೦), ಖಾಲಿ ನಿವೇಶನವು ೨ ಕೋಟಿ ರೂ. ಬೃಹತ್ ಮೊತ್ತಕ್ಕೆ ಹರಾಜು ಆಗಿರುವುದು ಮೈಸೂರಿನ ನಾಗರಿಕರಲ್ಲಿ ಅಚ್ಚರಿ ಮೂಡಿಸಿದೆ. ಇದರ ಬೆಲೆ, ಒಂದು ಅಡಿಗೆ ರೂ. ೩೪ ಸಾವಿರ ರೂ.ಗಳಾಗಿದೆ.

ಮೈಸೂರಿನ ಹೃದಯ ಭಾಗದಲ್ಲಿರುವ ಅಶೋಕ ರಸ್ತೆ, ಅರಸು ರಸ್ತೆ, ಸಯ್ಯಾಜಿರಾವ್ ರಸ್ತೆಯಲ್ಲೂ ನಿವೇಶನಗಳಿಗೆ ಇಷ್ಟು ದುಬಾರಿ ಬೆಲೆ ಇಲ್ಲದಿರುವಾಗ, ಮೈಸೂರಿನಿಂದ ಸುಮಾರು ೮ ಕಿ.ಮೀ. ದೂರದಲ್ಲಿರುವ  ಈ ನಿವೇಶನಕ್ಕೇಕೆ ಇಷ್ಟೊಂದು ದುಬಾರಿ ಬೆಲೆ ಎಂದು ಸಾರ್ವಜನಿಕರು ಹುಬ್ಬೇರಿಸುತ್ತಿದ್ದಾರೆ. ಈ ನಿವೇಶನದಲ್ಲೇನಾದರೂ ಚಿನ್ನದ ನಿಕ್ಷೇಪ ಇದೆಯಾ? ಈ ನಿವೇಶನ ಕೊಂಡುಕೊಂಡಿರುವ ವ್ಯಕ್ತಿಯ ಹಣದ ಮೂಲ ಯಾವುದು? ತಮ್ಮಲ್ಲಿರುವ ಕಪ್ಪು ಹಣವನ್ನು ವೈಟ್ ಮಾಡಲು ಈ ರೀತಿ ಮಾಡಿರಬಹುದೇ ಎಂಬ ಅನುಮಾನ ಸಾರ್ವಜನಿಕರಲ್ಲಿ ಮೂಡಿದೆ. ಇದಕ್ಕೆ ತೆರಿಗೆ ಇಲಾಖೆ ಅಧಿಕಾರಿಗಳೇ ಸ್ಪಷ್ಟನೆ ನೀಡಬೇಕು.

– ಬೂಕನಕೆರೆ ವಿಜೇಂದ್ರ, ಕುವೆಂಪುನಗರ, ಮೈಸೂರು

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

13 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

13 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

14 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

15 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

20 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

20 hours ago