Andolana originals

‘ನಾ ಆಸ್ಪತ್ರೆ ಸೇರಿದರೆ ಕುಟುಂಬದ ಗತಿಯೇನು?’

ಆಸ್ಪತ್ರೆ ಸೇರಲು ಒಲ್ಲೆ ಎಂದ ಪುಟ್ಟಮ್ಮ :  ಆಂದೋಲನ ವರದಿಗೆ ಸ್ಪಂದಿಸಿ ಇಂಡಿಗನತ್ತ ಗ್ರಾಮಕ್ಕೆ ಬಂದ ಆರೋಗ್ಯ ಇಲಾಖೆ ಸಿಬ್ಬಂದಿ ವಾಪಸ್‌

ಹನೂರು: ಎಲ್ಲವೂ ಅಂದುಕೊಂಡಂತೆ ನಡೆದರೆ ಸೊಂಟ ನೋವಿನಿಂದ ಹಾಸಿಗೆ ಹಿಡಿದಿರುವ ಇಂಡಿಗನತ್ತ ಗ್ರಾಮದ ಪುಟ್ಟಮ್ಮ ಮಂಗಳವಾರ ಆಸ್ಪತ್ರೆಗೆ ದಾಖಲಾಗಬೇಕಿತ್ತು. ಆದರೆ ಇಂಡಿಗನತ್ತದ ಜನರು ಇದೀಗ ಊರಿಗೆ ಯಾರೇ ಬಂದರೂ ತಮ್ಮನ್ನು ಜೈಲಿಗೆ ಒಯ್ಯಲುಬಂದಿದ್ದಾರೆಂಬಭೀತಿಯಲ್ಲಿದ್ದಾರೆ. ತಮ್ಮನ್ನು ಆಸ್ಪತ್ರೆಗೆ ಸೇರಿಸಲು ಬಂದ ಮಲೆ ಮಹದೇಶ್ವರ ಬೆಟ್ಟದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ಮನವೊಲಿಕೆಗೆ ಒಪ್ಪದ ಪುಟ್ಟಮ್ಮ ತಾವು ಮನೆಯಲ್ಲಿಯೇ ಚಿಕಿತ್ಸೆ ಪಡೆಯುವುದಾಗಿ ಪಟ್ಟು ಹಿಡಿದರು. ಇದರಿಂದ ವರದಿಗೆ ಸಿಬ್ಬಂದಿ ಮರುಮಾತಿಲ್ಲದೇ ಸಂದನೆ ವಾಪಸಾಗಬೇಕಾಯಿತು.

‘ಆಂದೋಲನ’ ಪತ್ರಿಕೆಯಲ್ಲಿ ಸೋಮವಾರ ಪ್ರಕಟಗೊಂಡ ‘ಪುಟ್ಟಮನಿಗೆ ಬೇಕಿದೆ ಚಿಕಿತ್ಸೆ- ಆಸ್ಪತ್ರೆಗೆ ಸೇರಿಸುವವರಿಲ್ಲ’ ಎಂಬ ವರದಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಶಿಲ್ಪಾನಾಗ್ ಅವರು, ಪುಟ್ಟಮ್ಮನ ಚಿಕಿತ್ಸೆಗೆ ವ್ಯವಸ್ಥೆ ಮಾಡುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಅದರಂತೆ ಮಂಗಳವಾರ ಆರೋಗ್ಯ ಸಿಬ್ಬಂದಿ ಮಲೆ ಮಹದೇಶ್ವರ ಬೆಟ್ಟಗಳ ನಡುವೆ ಇರುವ ಪುಟ್ಟಮ್ಮ ಅವರ ಮನೆಗೆ ಭೇಟಿ ನೀಡಿದ್ದರು.

ಗಾಯಾಳು ಪುಟ್ಟಮ್ಮ ಅವರ ಪತಿ ಪುಟ್ಟತಂಬಡಿ ಅವರನ್ನು ಭೇಟಿ ಮಾಡಿದ ಆಸ್ಪತ್ರೆಯ ಸಿಬ್ಬಂದಿ ಹೆಚ್ಚಿನ ಚಿಕಿತ್ಸೆಗಾಗಿ ಕೊಳ್ಳೇಗಾಲದ ಉಪ ವಿಭಾಗದ ಆಸ್ಪತ್ರೆ ಅಥವಾ ಚಾಮರಾಜನಗರದ ಹೊರವಲಯದ ಸಿಮ್ಸ್ ಬೋಧನಾ ಆಸ್ಪತ್ರೆಗೆ ದಾಖಲಿಸುವುದಾಗಿ ತಿಳಿಸಿದರು. ಇದಕ್ಕೆ ಒಪ್ಪದ ಪಟ್ಟತಂಬಡಿ ಅವರು, “ನನ್ನ ಪತ್ನಿ ಹಾಸಿಗೆ ಹಿಡಿದು ವರ್ಷವಾಗಿದೆ. ಗ್ರಾಮದ ಬೀದಿಯಲ್ಲಿ ನಡೆದು ಹೋಗುವಾಗ ಹಸುವೊಂದು ತಿವಿದು ನೆಲಕ್ಕೆ ಬಿದ್ದು ಗಾಯಗೊಂಡಿದ್ದರು.

ಸೊಂಟಕ್ಕೆ ಪೆಟ್ಟಾಗಿ ತಮಿಳುನಾಡಿನ ಅಂದಿಯೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಆಗಿದೆ. ಆದರೂ ಆಕೆಗೆ ನಡೆಯಲು ಆಗುತ್ತಿಲ್ಲ. ಇದಾದ ಬಳಿಕ ಮೂರಾಲ್ಕು ಬಾರಿ ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯಲಾಗಿದೆ. ಆದರೂ ವಾಸಿಯಾ ಗದೆ ಹಾಸಿಗೆ ಹಿಡಿದಿದ್ದಾರೆ” ಎಂದರು.

ಕಳೆದ ಒಂದು ವರ್ಷದಿಂದ ಮನೆಯಲ್ಲೇ ಇದ್ದಾರೆ. ವಯಸ್ಸಾಗಿರುವ ಈಕೆಯನ್ನು ಈಗ ಆಸ್ಪತ್ರೆಗೆ ದಾಖಲಿಸಿದರೆ ಅವರನ್ನು ನೋಡಿಕೊಳ್ಳಲು ಜನರಿಲ್ಲ. ಸಾಧ್ಯವಾದರೆ ಮನೆಯಲ್ಲೇ ಚಿಕಿತ್ಸೆ ಕೊಡಿಸಿ ಎಂದು ಪುಟ್ಟ ತಂಬಡಿ ಅವರು ಮನವಿ ಮಾಡಿದರು.

ಇದಕ್ಕೆ ಒಪ್ಪಿದ ಆರೋಗ್ಯ ಸಿಬ್ಬಂದಿ, ಅಂದಿಯೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಶಸ್ತ್ರ ಚಿಕಿತ್ಸೆ ಮಾಡಿಸಿರುವ ಸಂಬಂಧ ಇರುವ ದಾಖಲೆಗಳು ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿರುವ ಚೀಟಿಗಳನ್ನು ತೆಗೆದು ಕೊಂಡು ಮಲೆ ಮಹದೇಶ್ವರ ಬೆಟ್ಟದ ಸರ್ಕಾರಿ ಆಸ್ಪತ್ರೆಗೆ ತರಲು ತಿಳಿಸಿದರು.

ಅವು ಗಳನ್ನು ಪರಿಶೀಲಿಸಿ ಪುಟ್ಟಮ್ಮ ಅವರಿಗೆ ಮುಂದಿನ ಚಿಕಿತ್ಸೆಯನ್ನು ಮನೆಯಲ್ಲೇ ನೀಡಲು ಕ್ರಮ ವಹಿಸಲಾಗುವುದು ಎಂದರು. ಪುಟ್ಟತಂಬಡಿ ಅವರು ಇದಕ್ಕೆ ಒಪ್ಪಿಕೊಂಡು ಬುಧವಾರ ಬೆಳಿಗ್ಗೆ ದಾಖಲೆಗಳನ್ನು ಆಸ್ಪತ್ರೆಗೆ ತರಲಾಗು ವುದು ಎಂದು ತಿಳಿಸಿ ಬೆಟ್ಟದ ಆಸ್ಪತ್ರೆಯ ಸಿಬ್ಬಂದಿಯನ್ನು ವಾಪಸ್ ಕಳುಹಿಸಿದರು.

ಪುಟ್ಟಮ್ಮ ಅವರ ಮಗ ಏಪ್ರಿಲ್ 26ರ ಮತಗಟ್ಟೆ ಧ್ವಂಸ ಪ್ರಕರಣ ಸಂಬಂಧ ಪೊಲೀಸರ ಬಂಧನ ಭೀತಿಯಿಂದ ತಲೆಮರೆಸಿ ಕೊಂಡಿದ್ದಾರೆ. ಪತಿ ಪುಟ್ಟ ತಂಬಡಿ ಅವರಿಗೂ ವಯಸ್ಸಾಗಿದೆ. ಪುತ್ರಿ ರಾಜಮ್ಮ ಅವರ ಆರೋಗ್ಯವೂ ಚೆನ್ನಾಗಿಲ್ಲ. ಈ ಕಾರಣದಿಂದ ಪುಟ್ಟಮ್ಮ ಅವರಿಗೆ ಚಿಕಿತ್ಸೆ ಕೊಡಿಸುವ  ಆರೋಗ್ಯ ಸಿಬ್ಬಂದಿ ಯತ್ನ ಕೈಗೂಡಲಿಲ್ಲ.

ಮೂಳೆ ನೋವಿನಿಂದ ಹಾಸಿಗೆ ಹಿಡಿದಿರುವ ಪುಟ್ಟಮ್ಮ ಅವರನ್ನು ಆಸ್ಪತ್ರೆಗೆ ದಾಖಲಿಸಲು ಅವರ ಮನೆಯವರು ಒಪ್ಪುತ್ತಿಲ್ಲ. ಅಲ್ಲದೆ ಪುಟ್ಟಮ್ಮ ಕೂಡ ಆಸ್ಪತ್ರೆಗೆ ಬರಲು ನಿರಾಕರಿಸಿದ್ದಾರೆ. ಆದ್ದರಿಂದ ಅವರಿಗೆ ಮನೆಯಲ್ಲೇ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಲಾಗುವುದು.

-ಡಾ.ಪ್ರಕಾಶ್, ತಾಲ್ಲೂಕು ಆರೋಗ್ಯಾಧಿಕಾರಿ, ಹನೂರು

andolana

Recent Posts

ಶೂಟೌಟ್ ಪ್ರಕರಣ | ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ : ಸಿಎಂ ಡಿ.ಕೆ.ಶಿವಕುಮಾರ್

ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…

4 hours ago

ಮುಂದಿನ ಆಗಸ್ಟ್‌ ಒಳಗೆ ಮೇಕೆದಾಟುಗೆ ಶಂಕುಸ್ಥಾಪನೆ: ಸಚಿವ ಚಲುವರಾಯಸ್ವಾಮಿ

ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…

8 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ

ಮೈಸೂರು: ಮೂವರು ಬೇಟೆಗಾರರ ಎನ್‌ಕೌಂಟರ್‌ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್‌ ಬೋಸ್‌ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…

9 hours ago

ಮೂವರು ಬೇಟೆಗಾರರ ಎನ್‌ಕೌಂಟರ್‌ ಪ್ರಕರಣ: ಸಚಿವ ಪುಟ್ಟರಂಗಶೆಟ್ಟಿ ಪ್ರತಿಕ್ರಿಯೆ

ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…

10 hours ago

ಕಾಡಿನಲ್ಲಿ ಗುಂಡಿನ ಮೊರೆತ: ಮೂವರು ಸ್ಥಳದಲ್ಲೇ ಸಾವು- ಉದ್ರಿಕ್ತರಿಂದ ಕಚೇರಿ ಪೀಠೋಪಕರಣ ಧ್ವಂಸ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…

10 hours ago

ಕಾವೇರಿ ಅಭಯಾರಣ್ಯದಲ್ಲಿ ಎನ್‌ಕೌಂಟರ್: ಅಕ್ರಮ ಬೇಟೆ ವೇಳೆ ಗುಂಡಿನ ದಾಳಿ, 3 ಮಂದಿ ಮೃತ್ಯು

ಮಹಾದೇಶ್‌ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…

10 hours ago