Bike racing: Police department ready for tough action
ಎಚ್.ಎಸ್.ದಿನೇಶ್ಕುಮಾರ್
ಯುವಕರ ಹುಚ್ಚಾಟಕ್ಕೆ ಕಡಿವಾಣ ಹಾಕಲು ಐವರು ಪೊಲೀಸರ ತಂಡ
ಆಯಾ ಠಾಣಾ ವ್ಯಾಪ್ತಿಯಲ್ಲಿ ಎಎಸ್ಐ ನೇತೃತ್ವದ ತಂಡದಿಂದ ಕಣ್ಗಾವಲು
ಮೈಸೂರು: ಬೈಕ್ ರೇಸಿಂಗ್ ಪ್ರಕರಣದಲ್ಲಿ ತನ್ನದಲ್ಲದ ತಪ್ಪಿಗೆ ಬಲಿಯಾದ ಕಾರ್ತಿಕ್ ಎಂಬ ಯುವಕನ ಸಾವಿನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ನಗರ ಪೊಲೀಸ್ ಆಯುಕ್ತರು ನಗರದ ವರ್ತುಲ ರಸ್ತೆ ಹಾಗೂ ಪ್ರಮುಖ ರಸ್ತೆಗಳಲ್ಲಿ ವ್ಹೀಲಿಂಗ್, ರೇಸಿಂಗ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.
ನಗರದ ಎನ್.ಆರ್.ಸಂಚಾರ, ಸಿದ್ದಾರ್ಥ ಸಂಚಾರ, ಕೃಷ್ಣರಾಜ ಹಾಗೂ ವಿವಿ ಮೊಹಲ್ಲಾ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿ ಯಲ್ಲಿ ಪೊಲೀಸರು ಪ್ರಮುಖ ರಸ್ತೆಗಳು ಹಾಗೂ ವರ್ತುಲ ರಸ್ತೆಗಳಲ್ಲಿ ಬೈಕ್ ವ್ಹೀಲಿಂಗ್ ಮಾಡುವವರು, ರೇಸಿಂಗ್ ಮಾಡುವವರ ಹೆಡೆಮುರಿ ಕಟ್ಟಲಿದ್ದಾರೆ.
ಸೋಮವಾರ ಅಧಿಕಾರಿಗಳ ಸಭೆ ನಡೆಸಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾಲಾಟ್ಕರ್, ಭಾನುವಾರ ಮುಂಜಾನೆ ನಡೆದ ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ್ದು, ಮುಂದೆ ಹೀಗಾಗದಂತೆ ಎಚ್ಚರ ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಹೆಚ್ಚಾಗಿ ರಾತ್ರಿ ವೇಳೆ ಯುವಕರು ಬೈಕ್ ವ್ಹೀಲಿಂಗ್ ಹಾಗೂ ರೇಸಿಂಗ್ ನಡೆಸುತ್ತಾರೆ.
ಕೆಲವೊಮ್ಮೆ ಹಗಲಿನಲ್ಲಿ ಕೂಡ ಪ್ರಮುಖ ರಸ್ತೆಗಳಲ್ಲಿ ಯುವಕರು ವ್ಹೀಲಿಂಗ್ ನಡೆಸಿ ಸಾರ್ವಜನಿಕರಿಗೆ ಕಿರಿಕಿರಿ ಮಾಡುವುದುಂಟು.
ಹೀಗಾಗಿ ಆಯುಕ್ತರು ಇಂತಹವರನ್ನು ಹದ್ದುಬಸ್ತಿ ನಲ್ಲಿಡಲು ಪೊಲೀಸರ ತಂಡ ರಚನೆ ಮಾಡಿದ್ದಾರೆ. ಆಯಾ ಠಾಣಾ ವ್ಯಾಪ್ತಿಯಲ್ಲಿ ಓರ್ವ ಎಎಸ್ಐ ನೇತೃತ್ವದಲ್ಲಿ ಐವರು ಪೊಲೀಸರ ತಂಡವನ್ನು ರಚನೆ ಮಾಡಿದ್ದಾರೆ. ನಿತ್ಯ ಎರಡು ಪಾಳಿಯಲ್ಲಿ ಪೊಲೀಸರು ಕರ್ತವ್ಯ ನಿರ್ವಹಿಸಲಿದ್ದಾರೆ. ಬೆಳಿಗ್ಗೆಯಿಂದ ಸಂಜೆವರೆಗೆ ಒಂದು ತಂಡ ಹಾಗೂ ರಾತ್ರಿ ವೇಳೆ ಒಂದು ತಂಡ ಆಯಾ ಠಾಣಾ ವ್ಯಾಪ್ತಿಯ ಪ್ರಮುಖ ರಸ್ತೆಗಳಲ್ಲಿ ನಿಗಾ ವಹಿಸಲಿದೆ. ತಪ್ಪು ಮಾಡಿದವರನ್ನು ಯಾವುದೇ ಮುಲಾಜಿಲ್ಲದೆ ಬಂಧಿಸಲಿದೆ.
ಕರ್ಕಶ ಶಬ್ದ: ಇದೇ ವೇಳೆ ನಗರದಾದ್ಯಂತ ಕಳೆದ ಆರು ತಿಂಗಳ ಅವಧಿಯಲ್ಲಿ ಕರ್ಕಶ ಶಬ್ದ ಮಾಡುವ ಸೈಲೆನ್ಸರ್ ಅಳವಡಿಸಿಕೊಂಡಿದ್ದ ೩೨೪ ಬೈಕ್ಗಳನ್ನು ವಶಕ್ಕೆ ಪಡೆದು ಸೈಲೆನ್ಸರ್ಗಳನ್ನು ನಾಶಪಡಿಸಲಾಗಿದೆ. ಈ ಕಾರ್ಯಾಚರಣೆ ಸೋಮವಾರದಿಂದ ಪುನಾರಂಭವಾಗಲಿದೆ.
೨೦ ಪ್ರಕರಣಗಳು: ನಗರದ ಎನ್.ಆರ್., ಸಿದ್ದಾರ್ಥ, ಕೆ.ಆರ್. ಹಾಗೂ ವಿವಿ ಪುರಂ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕಳೆದ ಆರು ತಿಂಗಳುಗಳ ಅವಧಿಯಲ್ಲಿ ವ್ಹೀಲಿಂಗ್ ಹಾಗೂ ರೇಸಿಂಗ್ನಲ್ಲಿ ತೊಡಗಿದ್ದ ೨೦ ಮಂದಿ ಯುವಕರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಈ ಕಾರ್ಯಾಚರಣೆ ಕೂಡ ಸೋಮವಾರದಿಂದ ವೇಗ ಪಡೆದುಕೊಳ್ಳಲಿದೆ.
ಜಾಗೃತಿ ಕಾರ್ಯಕ್ರಮ: ಇದೇ ವೇಳೆ ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕ ಸಭೆಗಳನ್ನು ನಡೆಸಿ ಮಕ್ಕಳಿಗೆ ಬೈಕ್ ಕೊಡಿಸುವ ಮುನ್ನ ಜಾಗೃತರಾಗಿರುವಂತೆ ಜನರಿಗೆ ತಿಳಿಹೇಳುವ ಜಾಗೃತಿ ಕಾರ್ಯಕ್ರಮಗಳನ್ನು ನಡೆಸುವಂತೆ ಆಯುಕ್ತರು ಠಾಣಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
” ಭಾನುವಾರ ನಡೆದ ಅಪಘಾತ ಪ್ರಕರಣದಿಂದ ನೋವಾಗಿದೆ. ಯುವಕನೊಬ್ಬ ತನ್ನದಲ್ಲದ ತಪ್ಪಿಗೆ ಪ್ರಾಣ ತೆತ್ತಿದ್ದಾನೆ. ಮುಂದೆ ಹೀಗಾಗದಂತೆ ಎಚ್ಚರ ವಹಿಸಲು ಇಲಾಖೆ ಮುಂದಾಗಿದೆ. ಇದಕ್ಕಾಗಿ ಪೊಲೀಸರ ತಂಡವನ್ನು ರಚನೆ ಮಾಡಲಾಗಿದ್ದು, ಸೋಮವಾರದಿಂದಲೇ ಪೊಲೀಸರು ಕಾರ್ಯಾಚರಣೆ ನಡೆಸಲಿದ್ದಾರೆ. ಈ ಸಂಬಂಧ ಪೋಷಕರು ಕೂಡ ಎಚ್ಚರಿಕೆ ವಹಿಸಬೇಕು. ಚಿಕ್ಕ ವಯಸ್ಸಿನ ಮಕ್ಕಳಿಗೆ ದುಬಾರಿ ಬೈಕ್ ಕೊಡಿಸುವ ಮುನ್ನ ಅದರ ಬಳಕೆ ಬಗ್ಗೆ ಅವರಿಗೆ ತಿಳಿ ಹೇಳಬೇಕು. ಹೀಗಾದಾಗ ಮಕ್ಕಳು ಕೂಡ ಎಚ್ಚರಿಕೆಯಿಂದ ಇರುತ್ತಾರೆ.”
-ಸೀಮಾ ಲಾಟ್ಕರ್, ನಗರ ಪೊಲೀಸ್ ಆಯುಕ್ತರು
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…