Andolana originals

ಸಿದ್ದಾಪುರದ ರಾಶಿ ರಾಶಿ ಕಸಕ್ಕೆ ಮುಕ್ತಿ ಯಾವಾಗ?

ಸಿದ್ದಾಪುರ : ತೆರಿಗೆ ಸಂಗ್ರಹದಲ್ಲಿ ಮುಂಚೂಣಿಯಲ್ಲಿ ಇರುವ ಇಲ್ಲಿನ ಗ್ರಾಮ ಪಂಚಾಯಿತಿ ಎರಡು ದಶಕಗಳಿಂದ ಕಸ ವಿಲೇವಾರಿಗೆ ಜಾಗವಿಲ್ಲದೆ ಸಮಸ್ಯೆ ಎದುರಿಸುತ್ತಿದ್ದು, ಜನವಸತಿ ಪ್ರದೇಶದಲ್ಲಿ ಕಸವಿಲೇವಾರಿ ಮಾಡುತ್ತಿರುವುದ ರಿಂದ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ.

ಕಸ ವಿಲೇವಾರಿ ಸಮರ್ಪಕವಾದಲ್ಲಿ ಮಾತ್ರ ಆ ಪ್ರದೇಶ ಸ್ವಚ್ಛವಾಗಿರಲು ಸಾಧ್ಯ. ಆದರೆ, ಸಿದ್ದಾಪುರ ಗ್ರಾ. ಪಂ. ಕಳೆದ ೨ ದಶಕಗಳಿಂದ ಕಸ ವಿಲೇವಾರಿಗೆ ಸಂಬಂಧಿಸಿದಂತೆ ಜಾಗದ ಸಮಸ್ಯೆ ಪರಿಹರಿಸಿಕೊಳ್ಳುವಲ್ಲಿ ವಿಫಲವಾಗಿದ್ದು, ಪಟ್ಟಣದಲ್ಲಿ ಕಸದ ರಾಶಿಯಿಂದ ಸಾಂಕ್ರಾಮಿಕ ರೋಗದ ಭೀತಿ ಎದುರಾಗಿದೆ. ಹಲವು ಕಡೆ ಕಸ ತಂದು ಸುರಿಯಲಾಗುತ್ತಿದ್ದು, ಸಮರ್ಪಕವಾಗಿ ವಿಲೇವಾರಿಯಾಗದೆ ಸಮಸ್ಯೆ ಎದುರಿಸುವಂತಾಗಿದೆ.

ಇದೀಗ ಸಿದ್ದಾಪುರ ಸಂತೆ ಮಾರುಕಟ್ಟೆಯ ಸರ್ಕಾರಿ ಪ್ರಾಥ ಮಿಕ ಶಾಲೆಯ ಅನತಿ ದೂರದಲ್ಲಿ ಗ್ರಾಮ ಪಂಚಾಯಿತಿ ಕಸ ತಂದು ಸುರಿಯುತ್ತಿದ್ದು, ಇಡೀ ವಾತಾವರಣವೇ ಗಬ್ಬು ನಾರುತ್ತಿದೆ. ಅಲ್ಲದೆ, ಸೊಳ್ಳೆ, ನೊಣ, ಬೀದಿ ನಾಯಿಗಳ ಹಾವಳಿಯೂ ಹೆಚ್ಚಾಗಿದೆ.

ಕೂಲಿ ಕಾರ್ಮಿಕರು ಹೆಚ್ಚಾಗಿರುವ ಈ ಭಾಗಗಳಲ್ಲಿ ಕಸ ಸಂಗ್ರಹಿಸಲು ಟ್ರಾಕ್ಟರ್ ಬಾರದೆ ಇರುವುದರಿಂದ ಕಸದ ಸಮಸ್ಯೆ ಹೆಚ್ಚುತ್ತಿದೆ. ಆಗೊಮ್ಮೆ ಈಗೊಮ್ಮೆ ಬಂದರೂ ಮನೆಯಲ್ಲಿ ಜನ ಇಲ್ಲದೆ ಇರುವುದರಿಂದ ಕಸ ಸಂಗ್ರಹ ಸರಿಯಾಗಿ ಆಗುತ್ತಿಲ್ಲ.

ಮಳೆ ಕೂಡ ಹೆಚ್ಚುತ್ತಿರುವುದರಿಂದ ಕಸ ವಿಲೇವಾರಿ ಸಮರ್ಪಕವಾಗಿ ಆಗದೆ ರೋಗ ರುಜಿನ ಹರಡುವ ಭೀತಿ ಎದುರಾಗಿದೆ.

ಈ ಹಿಂದೆ ಶಾಸಕರ ನೇತೃತ್ವದಲ್ಲಿ ನಡೆದ ಜನ ಸಂಪರ್ಕ ಸಭೆಯಲ್ಲಿ ಕಸ ವಿಲೇವಾರಿ ವಿಚಾರದ ಬಗ್ಗೆ ಚರ್ಚೆ ನಡೆದು ಶಾಸಕರೇ ಖುದ್ದು ಮಾರುಕಟ್ಟೆ ಪ್ರಾಂಗಣ ಪರಿಶೀಲಿಸಿ ೨೦ ದಿನಗಳಲ್ಲಿ ತ್ಯಾಜ್ಯ ವಿಲೇವಾರಿ ಮಾಡಿಸುವಂತೆ ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಗೆ ಸೂಚಿಸಿದ್ದರು. ಆದರೆ ಆ ಸಂದರ್ಭದಲ್ಲಿ ಮಾತ್ರ ಕಸವನ್ನು ಖಾಲಿ ಮಾಡಿದ್ದು, ನಂತರ ಮತ್ತೆ ಇದೇ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿ ಕಸ ಸುರಿಯುತ್ತಿರುವುದಾಗಿ ಸ್ಥಳಿಯರು ಆರೋಪಿಸಿದ್ದಾರೆ.

ಕಸ ಸಂಗ್ರಹಕ್ಕೆ ಹಣ ಸಂಗ್ರಹ:- ಕಸ ವಿಲೇವಾರಿ ಮಾಡಲು ವರ್ತಕರಿಂದಲೇ ಗ್ರಾ. ಪಂ. ಹಣ ಸಂಗ್ರಹಿಸುತ್ತಿರುವ ಆರೋಪ ಕೇಳಿ ಬಂದಿದೆ. ಗ್ರಾಮ ಪಂಚಾಯಿತಿ ಕಸ ವಿಲೇವಾರಿ ಮಾಡಲು ವರ್ತಕರಿಂದ ೧೦೦ರಿಂದ ೨೫೦ ರೂ. ಸಂಗ್ರಹಿಸುವ ವಿಚಾರವಾಗಿ ಈಗಾಗಲೇ ವರ್ತಕರ ಸಂಘದ ಸಭೆ ಕರೆದು ತೀರ್ಮಾನಿಸಲಾ ಗಿದೆ. ಅದರಂತೆ ಪಟ್ಟಣದಲ್ಲಿ ಕಸ ಸಂಗ್ರಹ ಮಾಡಲಾಗುತ್ತಿ ದ್ದರೂ ಸಮರ್ಪಕವಾಗಿ ವಿಲೇವಾರಿಯಾಗುತ್ತಿಲ್ಲ. ಅಲ್ಲಲ್ಲಿ ಮತ್ತೆ ಕಸದ ರಾಶಿ ಗೋಚರಿಸುತ್ತಿದೆ.

ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮಳಿಗೆಗಳನ್ನು ನಿರ್ಮಿಸಲಾಗಿದೆ. ಅದರ ಸುತ್ತಲೂ ಕಸ ಸುರಿಯಲಾಗಿದೆ. ಇತ್ತ ಕಟ್ಟಡಗಳನ್ನೂ ಸಮರ್ಪಕವಾಗಿ ಉಪಯೋಗಿಸುತ್ತಿಲ್ಲ, ಮತ್ತೊಂದೆಡೆ ಕಸ ವಿಲೇವಾರಿಯೂ ಆಗುತ್ತಿಲ್ಲ.
ಇದರಿಂದ ಪಂಚಾಯಿತಿಯ ಆದಾಯ ಕೂಡ ಕುಂಠಿತವಾಗಿದೆ. ಕಸ ಸಮಸ್ಯೆ ಬಗೆಹರಿಸಲು ಗ್ರಾ. ಪಂ. ಸೂಕ್ತ ಕ್ರಮ ಕೈಗೊಳ್ಳಬೇಕು. -ಸಮ್ಮದ್, ಸಾಮಾಜಿಕ ಕಾರ್ಯಕರ್ತ, ಸಿದ್ದಾಪುರ

ಕಸ ಸುರಿಯುತ್ತಿರುವ ಸ್ಥಳದ ಸಮೀಪದಲ್ಲೇ ಪ್ರಾಥಮಿಕ ಶಾಲೆ ಇದೆ. ಮಕ್ಕಳು, ವಯೋವೃದ್ಧರು ಈ ರಸ್ತೆಯಲ್ಲೇ ಓಡಾಡುತ್ತಾರೆ. ಇದರೊಂದಿಗೆ ಕಸ ಸಂಗ್ರಹಿಸಲು ವಾಹನ ಕೂಡ ಸರಿಯಾದ ಸಮಯಕ್ಕೆ ಬಾರದೆ ಸಮಸ್ಯೆಯಾಗಿದೆ. ಕಸ ವಿಲೇವಾರಿ ಸಮರ್ಪಕವಾಗಿ ಮಾಡದಿದ್ದಲ್ಲಿ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇದೆ. – ಫಯಾಜ್ ಅಹಮದ್, ಸ್ಥಳೀಯ ನಿವಾಸಿ, ಸಿದ್ದಾಪುರ

ಕಸ ಸಂಗ್ರಹಿಸುವ ವಾಹನ ಕೆಟ್ಟು ನಿಂತಿರುವುದರಿಂದ ಸಮಸ್ಯೆಯಾಗುತ್ತಿದೆ. ಈಗಾಗಲೇ ವಾಹನ ದುರಸ್ತಿಗೆ ಕ್ರಮಕೈಗೊಳ್ಳಲಾಗಿದ್ದು, ಗ್ಯಾರೇಜ್ ನಲ್ಲಿ ನಿಲ್ಲಿಸಲಾಗಿದೆ. ವಾಹನ ದುರಸ್ತಿಪಡಿಸಿದ ತಕ್ಷಣ ಕಸ ಸಂಗ್ರಹಿಸಲು ಕಳುಹಿಸಲಾಗುವುದು. ನಿವಾಸಿಗಳು ಹಸಿ ಮತ್ತು ಒಣ ಕಸ ಬೇರ್ಪಡಿಸಿ ವಾಹನಕ್ಕೆ ನೀಡಿದಲ್ಲಿ ಕಸ ವಿಲೇವಾರಿ ಸುಲಭವಾಗಲಿದೆ. ಸಾರ್ವಜನಿಕರು ಅಗತ್ಯ ಸಹಕಾರ ನೀಡಬೇಕು. – ಪ್ರೇಮಾ ಗೋಪಾಲ್, ಗ್ರಾ. ಪಂ. ಅಧ್ಯಕ್ಷರು, ಸಿದ್ದಾಪುರ

– ಕೃಷ್ಣ ಸಿದ್ದಾಪುರ

ಆಂದೋಲನ ಡೆಸ್ಕ್

Recent Posts

ಹನೂರು| ಅಮಾವಾಸ್ಯೆ ಪ್ರಯುಕ್ತ ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…

24 mins ago

ಚಾ.ನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ: ಸಚಿವ ಕೆ.ವೆಂಕಟೇಶ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು:‌ ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು‌‌ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…

32 mins ago

ಒಂದು ರಾಷ್ಟ್ರ ಒಂದು ಚುನಾವಣೆ ಪ್ರಸ್ತಾವನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರೋಧ

ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…

38 mins ago

ಶಾಸಕ ಜಿಟಿಡಿ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೆ ಅಭ್ಯಂತರವಿಲ್ಲ: ಮಾಜಿ ಸಚಿವ ಸಾ.ರಾ.ಮಹೇಶ್‌

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್‌…

1 hour ago

ಮಂಡ್ಯ| ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ

Θಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪಾಂಡವಪುರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ…

2 hours ago

ರಾಜ್ಯಕ್ಕೆ ಹೆಚ್ಚುವರಿ 1122 ಸರ್ಕಾರಿ ಮೆಡಿಕಲ್‌ ಸೀಟ್‌ ಲಭ್ಯ: ಸಚಿವ ಡಾ.ಶರಣ ಪ್ರಕಾಶ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಮೆಡಿಕಲ್‌ ಸೀಟು ಲಭ್ಯತೆ ಹೆಚ್ಚಾಗಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಸುವರ್ಣ ಅವಕಾಶ ಲಭಿಸಲಿದೆ. ರಾಜ್ಯಕ್ಕೆ…

2 hours ago