Andolana originals

ಶಿಥಿಲ ಶಾಲಾ ಕಟ್ಟಡಗಳ ತೆರವು ಯಾವಾಗ?

ಮಹಾದೇಶ್ ಎಂ.ಗೌಡ

ಮಳೆ ಹಿನ್ನೆಲೆಯಲ್ಲಿ ಹನೂರು ಶೈಕ್ಷಣಿಕ ವಲಯದ ಹಲವು ಶಾಲೆಗಳ ಪೋಷಕರು, ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆತಂಕ 

ಹನೂರು: ಹನೂರು ಶೈಕ್ಷಣಿಕ ವಲಯದಲ್ಲಿ ೭೩ ಕಿರಿಯ ಪ್ರಾಥಮಿಕ ಶಾಲೆ, ೭೭ ಹಿರಿಯ ಪ್ರಾಥಮಿಕ ಶಾಲೆ, ೧೮ ಪ್ರೌಢಶಾಲೆಗಳು ಸೇರಿದಂತೆ ೧೬೮ ಗ್ರಾಮಗಳಲ್ಲಿ ಶಾಲೆಗಳು ಕಾರ್ಯಾಚರಿಸುತ್ತಿದ್ದು, ಹಲವು ಶಾಲೆಗಳಲ್ಲಿ ಶಿಥಿಲ ಗೊಂಡಿರುವ ಕೊಠಡಿಗಳನ್ನು ದುರಸ್ತಿ ಮಾಡುವಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ವಿಫಲವಾಗಿರುವುದರಿಂದ ಮಳೆಗಾಲದ ಸಂದರ್ಭದಲ್ಲಿ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ.

೩೭ ಕಟ್ಟಡಗಳು ಶಿಥಿಲ: ಈಗ ಮಳೆಗಾಲ ಪ್ರಾರಂಭವಾಗುತ್ತಿದ್ದು ಕಳೆದ ಒಂದು ವಾರದಿಂದ ನಿರಂತರವಾಗಿತಾಲ್ಲೂಕು ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿದೆ. ಹನೂರು ಶೈಕ್ಷಣಿಕ ವಲಯದ ವ್ಯಾಪ್ತಿಯಲ್ಲಿ ೩೭ ಶಾಲಾ ಕಟ್ಟಡಗಳು ಸಂಪೂರ್ಣ ಶಿಥಿಲಗೊಂಡು ಬಳಸಲು ಯೋಗ್ಯವಿಲ್ಲದೆ ಇರುವುದರಿಂದ ಕೊಠಡಿಗಳ ನೆಲಸಮ ಮಾಡಲೇಬೇಕಿದೆ. ಆದರೆ ಅಧಿಕಾರಿಗಳು ಕ್ರಮವಹಿಸದೆ ಇರುವುದರಿಂದ ಮಳೆಗಾಲದ ಸಂದರ್ಭ ದಲ್ಲಿ ಯಾವು ದಾದರೂ ಅನಾಹುತ ಸಂಭವಿಸಿದರೆ ಯಾರು ಹೊಣೆ ಎಂಬ ಪ್ರಶ್ನೆ ನಾಗರಿಕರನ್ನು ಕಾಡುತ್ತಿದೆ.

ಕೆಲದಿನಗಳ ಹಿಂದೆ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಉರುಳಿ ಬಿದ್ದು ೯ ಜನರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ಅದೇ ರೀತಿ ತಾಲ್ಲೂಕಿನಲ್ಲಿರುವ ಹಲವು ಶಾಲಾ ಕಟ್ಟಡಗಳು ಬೀಳುವ ಹಂತದಲ್ಲಿ ಇರುವುದರಿಂದ ಶೀಘ್ರದಲ್ಲಿ ತುರ್ತು ಕ್ರಮ ವಹಿಸಿ ಮುನ್ನೆಚ್ಚರಿಕೆ ವಹಿಸಬೇಕೆಂಬುದು ಸಾರ್ವಜನಿಕರ ಆಗ್ರಹವಾಗಿದೆ.

ನೆಲಸಮ ಯಾವಾಗ?: ಹನೂರು ಶೈಕ್ಷಣಿಕ ವಲಯದ ಕೂಡ್ಲೂರು, ಲೊಕ್ಕನಹಳ್ಳಿ, ಮಾರ್ಟಳ್ಳಿ, ಮಲೆ ಮಹದೇಶ್ವರ ಬೆಟ್ಟ, ಶಾಗ್ಯ, ಒಡೆಯರಪಾಳ್ಯ, ಮಾರಳ್ಳಿ, ಪಿ.ಜಿ.ಪಾಳ್ಯ, ರಾಮಾಪುರ, ಕೌದಳ್ಳಿ ಕ್ಲಸ್ಟರ್ ವ್ಯಾಪ್ತಿಯ ೩೭ ಶಾಲೆಗಳ ಕಟ್ಟಡಗಳು ಬಳಕೆಗೆ ಯೋಗ್ಯವಾಗಿಲ್ಲದಿರುವುದರಿಂದ ಇವುಗಳನ್ನು ನೆಲಸಮ ಮಾಡಿ ಹೊಸ ಕಟ್ಟಡ ನಿರ್ಮಾಣ ಮಾಡಬೇಕಿದೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಟ್ಟಡಗಳ ತೆರವು ಆಗದೆ ಪೋಷಕರು ಹಾಗೂ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ.

೧೧೪ ಕೊಠಡಿಗಳ ದುರಸ್ತಿ ಅಗತ್ಯ: ಬಂಡಳ್ಳಿ, ಅಲಗಾಪುರ, ಚಿಂಚಳ್ಳಿ, ಮಂಗಲ, ಕೆಂಪಯ್ಯನಹಟ್ಟಿ, ಕುರಟ್ಟಿ ಹೊಸೂರು, ಕೂಡ್ಲೂರು, ಹೂಗ್ಯಂ, ಲೊಕ್ಕನಹಳ್ಳಿ, ಹುತ್ತೂರು, ಒಡೆಯರ ಪಾಳ್ಯ, ಹುಣಸೆಪಾಳ್ಯ, ರಾಮಾಪುರ, ಎಲ್ಲೇಮಾಳ, ಗೊರಸಾಣೆ, ತುಳಸಿಕೆರೆ, ಬಸಪ್ಪನದೊಡ್ಡಿ, ಕೆ.ಗುಂಡಾಪುರ, ಸುಳವಾಡಿ, ಮಾರ್ಟಳ್ಳಿ, ವಡಕೆಹಳ್ಳ, ಮಹಾಲಿಂಗನ ಕಟ್ಟೆ ಗ್ರಾಮಗಳ ಶಾಲೆಗಳು ಸೇರಿದಂತೆ ಶಿಥಿಲಗೊಂಡಿರುವ ೧೧೪ ಶಾಲಾ ಕೊಠಡಿಗಳನ್ನು ದುರಸ್ತಿ ಮಾಡಬೇಕಿದೆ. ಆದರೆ ಇದುವರೆಗೂ ಕಾಮಗಾರಿ ನಡೆಸದೇ ಇರುವುದರಿಂದ ಮತ್ತಷ್ಟು ಶಿಥಿಲಗೊಳ್ಳುತ್ತಿವೆ. ಇನ್ನು ಮುಂದಾದರೂ ಸಂಬಂಧಪಟ್ಟ ಜನಪ್ರತಿನಿಽಗಳು, ಅಽಕಾರಿಗಳು ಮುನ್ನೆಚ್ಚರಿಕೆ ಕ್ರಮವಹಿಸಿ ದುರಸ್ತಿ ಮಾಡಬೇಕಿದೆ.

” ಹನೂರು ಶೈಕ್ಷಣಿಕ ವಲಯದಲ್ಲಿ ಸಂಪೂರ್ಣ ಶಿಥಿಲಗೊಂಡಿರುವ ಕೊಠಡಿಗಳನ್ನು ತೆರವು ಮಾಡಲು ಈಗಾಗಲೇ ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಜತೆ ಪತ್ರವ್ಯವಹಾರ ಮಾಡಿ ಎರಡು ತಿಂಗಳಾಗಿದೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ತೆರವು ಮಾಡಲು ಅನುಮತಿ ನೀಡಬೇಕು. ಅನುಮತಿ ನೀಡಿದ ತಕ್ಷಣ ಹೊಸ ಕೊಠಡಿ ನಿರ್ಮಾಣ ಮಾಡಲು ಕ್ರಮವಹಿಸಲಾಗುವುದು.”

ಮಹೇಶ್, ಕ್ಷೇತ್ರ ಶಿಕ್ಷಣಾಧಿಕಾರಿ, ಹನೂರು ಶೈಕ್ಷಣಿಕ ವಲಯ

” ತಾಪಂ ಅನಿರ್ಬಂಧಿತ ಅನುದಾನದಲ್ಲಿ ೨೪.೯೦ ಲಕ್ಷ ರೂ.ವೆಚ್ಚದಲ್ಲಿ ಶಾಲಾ ಕಟ್ಟಡ ದುರಸ್ತಿ ಮಾಡಲು ಪಿಆರ್‌ಐಡಿ ಇಲಾಖೆಗೆ ಅನುದಾನ ನೀಡಲಾಗಿದೆ. ಕಾಮಗಾರಿಗೆ ತೆಗೆದುಕೊಂಡಿರುವ ಕೊಠಡಿಯನ್ನು ದುರಸ್ತಿ ಮಾಡುವಂತೆ ಸೂಚನೆ ನೀಡಲಾಗುವುದು.”

ಉಮೇಶ್, ಇಒ, ಹನೂರು ತಾಲ್ಲೂಕು

” ಶಿಥಿಲಗೊಂಡಿರುವ ಶಾಲಾ ಕಟ್ಟಡ ನೆಲಸಮ ಮಾಡುವ ಸಂಬಂಧ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಪತ್ರ ಬಂದಿದೆ. ಇನ್ನು ೩ ದಿನಗಳಲ್ಲಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ವಹಿಸಲಾಗುವುದು.”

ಸುರೇಂದ್ರ, ಎಇಇ, ಲೋಕೋಪಯೋಗಿ ಇಲಾಖೆ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

7 hours ago

ಓದುಗರ ಪತ್ರ: ರೈತ ಮಕ್ಕಳ ವಿದ್ಯಾಭ್ಯಾಸ ಶುಲ್ಕದಲ್ಲಿ

ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…

7 hours ago

ಓದುಗರ ಪತ್ರ: ಧಾರ್ಮಿಕ ಮುಖಂಡರು ರೈತರ ಬೆನ್ನಿಗೆ ನಿಲ್ಲಬೇಕು

ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…

7 hours ago

ಧ್ರುವೀಕರಣದ ನೆಲೆಗಟ್ಟಿನ ಮೇಲೆ ರಾಜ್ಯ ರಾಜಕಾರಣ

ಆರ್.‌ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…

7 hours ago

ಪಕ್ಕದಲ್ಲೇ ನದಿಯಿದ್ದರೂ ಚಿಕ್ಕಮಂದಗೆರೆ ಗ್ರಾಮಕ್ಕಿಲ್ಲ ನೀರು!

ಮಹೇಶ್ ಕರೋಟಿ ಹೇಮಾವತಿ ನದಿ ದಡದಲ್ಲೇ ನೀರಿಗಾಗಿ ಹಾಹಾಕಾರ ಕಿಕ್ಕೇರಿ: ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಮಂದಗೆರೆ ಗ್ರಾಮವು ಹೇಮಾವತಿ…

7 hours ago

ಕೊಡಗಿನಲ್ಲಿ1,20,874 ಮಕ್ಕಳಿಗೆ ಮಾತ್ರೆ ವಿತರಣೆ ಗುರಿ

ನವೀನ್ ಡಿಸೋಜ ಇಂದು ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಜಂತುಹುಳು ಬಾಧೆ ತಡೆಗೆ ಆರೋಗ್ಯ ಇಲಾಖೆಯ ಮಹತ್ವದ ಹೆಜ್ಜೆ ಮಡಿಕೇರಿ:…

7 hours ago