Andolana originals

ಶಿಥಿಲ ಶಾಲಾ ಕಟ್ಟಡಗಳ ತೆರವು ಯಾವಾಗ?

ಮಹಾದೇಶ್ ಎಂ.ಗೌಡ

ಮಳೆ ಹಿನ್ನೆಲೆಯಲ್ಲಿ ಹನೂರು ಶೈಕ್ಷಣಿಕ ವಲಯದ ಹಲವು ಶಾಲೆಗಳ ಪೋಷಕರು, ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆತಂಕ 

ಹನೂರು: ಹನೂರು ಶೈಕ್ಷಣಿಕ ವಲಯದಲ್ಲಿ ೭೩ ಕಿರಿಯ ಪ್ರಾಥಮಿಕ ಶಾಲೆ, ೭೭ ಹಿರಿಯ ಪ್ರಾಥಮಿಕ ಶಾಲೆ, ೧೮ ಪ್ರೌಢಶಾಲೆಗಳು ಸೇರಿದಂತೆ ೧೬೮ ಗ್ರಾಮಗಳಲ್ಲಿ ಶಾಲೆಗಳು ಕಾರ್ಯಾಚರಿಸುತ್ತಿದ್ದು, ಹಲವು ಶಾಲೆಗಳಲ್ಲಿ ಶಿಥಿಲ ಗೊಂಡಿರುವ ಕೊಠಡಿಗಳನ್ನು ದುರಸ್ತಿ ಮಾಡುವಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ವಿಫಲವಾಗಿರುವುದರಿಂದ ಮಳೆಗಾಲದ ಸಂದರ್ಭದಲ್ಲಿ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದಾರೆ.

೩೭ ಕಟ್ಟಡಗಳು ಶಿಥಿಲ: ಈಗ ಮಳೆಗಾಲ ಪ್ರಾರಂಭವಾಗುತ್ತಿದ್ದು ಕಳೆದ ಒಂದು ವಾರದಿಂದ ನಿರಂತರವಾಗಿತಾಲ್ಲೂಕು ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿದೆ. ಹನೂರು ಶೈಕ್ಷಣಿಕ ವಲಯದ ವ್ಯಾಪ್ತಿಯಲ್ಲಿ ೩೭ ಶಾಲಾ ಕಟ್ಟಡಗಳು ಸಂಪೂರ್ಣ ಶಿಥಿಲಗೊಂಡು ಬಳಸಲು ಯೋಗ್ಯವಿಲ್ಲದೆ ಇರುವುದರಿಂದ ಕೊಠಡಿಗಳ ನೆಲಸಮ ಮಾಡಲೇಬೇಕಿದೆ. ಆದರೆ ಅಧಿಕಾರಿಗಳು ಕ್ರಮವಹಿಸದೆ ಇರುವುದರಿಂದ ಮಳೆಗಾಲದ ಸಂದರ್ಭ ದಲ್ಲಿ ಯಾವು ದಾದರೂ ಅನಾಹುತ ಸಂಭವಿಸಿದರೆ ಯಾರು ಹೊಣೆ ಎಂಬ ಪ್ರಶ್ನೆ ನಾಗರಿಕರನ್ನು ಕಾಡುತ್ತಿದೆ.

ಕೆಲದಿನಗಳ ಹಿಂದೆ ಬೆಂಗಳೂರಿನಲ್ಲಿ ಬಿದ್ದ ಭಾರಿ ಮಳೆಯಿಂದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಉರುಳಿ ಬಿದ್ದು ೯ ಜನರು ಮೃತಪಟ್ಟು ಹಲವರು ಗಾಯಗೊಂಡಿದ್ದಾರೆ. ಅದೇ ರೀತಿ ತಾಲ್ಲೂಕಿನಲ್ಲಿರುವ ಹಲವು ಶಾಲಾ ಕಟ್ಟಡಗಳು ಬೀಳುವ ಹಂತದಲ್ಲಿ ಇರುವುದರಿಂದ ಶೀಘ್ರದಲ್ಲಿ ತುರ್ತು ಕ್ರಮ ವಹಿಸಿ ಮುನ್ನೆಚ್ಚರಿಕೆ ವಹಿಸಬೇಕೆಂಬುದು ಸಾರ್ವಜನಿಕರ ಆಗ್ರಹವಾಗಿದೆ.

ನೆಲಸಮ ಯಾವಾಗ?: ಹನೂರು ಶೈಕ್ಷಣಿಕ ವಲಯದ ಕೂಡ್ಲೂರು, ಲೊಕ್ಕನಹಳ್ಳಿ, ಮಾರ್ಟಳ್ಳಿ, ಮಲೆ ಮಹದೇಶ್ವರ ಬೆಟ್ಟ, ಶಾಗ್ಯ, ಒಡೆಯರಪಾಳ್ಯ, ಮಾರಳ್ಳಿ, ಪಿ.ಜಿ.ಪಾಳ್ಯ, ರಾಮಾಪುರ, ಕೌದಳ್ಳಿ ಕ್ಲಸ್ಟರ್ ವ್ಯಾಪ್ತಿಯ ೩೭ ಶಾಲೆಗಳ ಕಟ್ಟಡಗಳು ಬಳಕೆಗೆ ಯೋಗ್ಯವಾಗಿಲ್ಲದಿರುವುದರಿಂದ ಇವುಗಳನ್ನು ನೆಲಸಮ ಮಾಡಿ ಹೊಸ ಕಟ್ಟಡ ನಿರ್ಮಾಣ ಮಾಡಬೇಕಿದೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಟ್ಟಡಗಳ ತೆರವು ಆಗದೆ ಪೋಷಕರು ಹಾಗೂ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ.

೧೧೪ ಕೊಠಡಿಗಳ ದುರಸ್ತಿ ಅಗತ್ಯ: ಬಂಡಳ್ಳಿ, ಅಲಗಾಪುರ, ಚಿಂಚಳ್ಳಿ, ಮಂಗಲ, ಕೆಂಪಯ್ಯನಹಟ್ಟಿ, ಕುರಟ್ಟಿ ಹೊಸೂರು, ಕೂಡ್ಲೂರು, ಹೂಗ್ಯಂ, ಲೊಕ್ಕನಹಳ್ಳಿ, ಹುತ್ತೂರು, ಒಡೆಯರ ಪಾಳ್ಯ, ಹುಣಸೆಪಾಳ್ಯ, ರಾಮಾಪುರ, ಎಲ್ಲೇಮಾಳ, ಗೊರಸಾಣೆ, ತುಳಸಿಕೆರೆ, ಬಸಪ್ಪನದೊಡ್ಡಿ, ಕೆ.ಗುಂಡಾಪುರ, ಸುಳವಾಡಿ, ಮಾರ್ಟಳ್ಳಿ, ವಡಕೆಹಳ್ಳ, ಮಹಾಲಿಂಗನ ಕಟ್ಟೆ ಗ್ರಾಮಗಳ ಶಾಲೆಗಳು ಸೇರಿದಂತೆ ಶಿಥಿಲಗೊಂಡಿರುವ ೧೧೪ ಶಾಲಾ ಕೊಠಡಿಗಳನ್ನು ದುರಸ್ತಿ ಮಾಡಬೇಕಿದೆ. ಆದರೆ ಇದುವರೆಗೂ ಕಾಮಗಾರಿ ನಡೆಸದೇ ಇರುವುದರಿಂದ ಮತ್ತಷ್ಟು ಶಿಥಿಲಗೊಳ್ಳುತ್ತಿವೆ. ಇನ್ನು ಮುಂದಾದರೂ ಸಂಬಂಧಪಟ್ಟ ಜನಪ್ರತಿನಿಽಗಳು, ಅಽಕಾರಿಗಳು ಮುನ್ನೆಚ್ಚರಿಕೆ ಕ್ರಮವಹಿಸಿ ದುರಸ್ತಿ ಮಾಡಬೇಕಿದೆ.

” ಹನೂರು ಶೈಕ್ಷಣಿಕ ವಲಯದಲ್ಲಿ ಸಂಪೂರ್ಣ ಶಿಥಿಲಗೊಂಡಿರುವ ಕೊಠಡಿಗಳನ್ನು ತೆರವು ಮಾಡಲು ಈಗಾಗಲೇ ಲೋಕೋಪಯೋಗಿ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಜತೆ ಪತ್ರವ್ಯವಹಾರ ಮಾಡಿ ಎರಡು ತಿಂಗಳಾಗಿದೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ತೆರವು ಮಾಡಲು ಅನುಮತಿ ನೀಡಬೇಕು. ಅನುಮತಿ ನೀಡಿದ ತಕ್ಷಣ ಹೊಸ ಕೊಠಡಿ ನಿರ್ಮಾಣ ಮಾಡಲು ಕ್ರಮವಹಿಸಲಾಗುವುದು.”

ಮಹೇಶ್, ಕ್ಷೇತ್ರ ಶಿಕ್ಷಣಾಧಿಕಾರಿ, ಹನೂರು ಶೈಕ್ಷಣಿಕ ವಲಯ

” ತಾಪಂ ಅನಿರ್ಬಂಧಿತ ಅನುದಾನದಲ್ಲಿ ೨೪.೯೦ ಲಕ್ಷ ರೂ.ವೆಚ್ಚದಲ್ಲಿ ಶಾಲಾ ಕಟ್ಟಡ ದುರಸ್ತಿ ಮಾಡಲು ಪಿಆರ್‌ಐಡಿ ಇಲಾಖೆಗೆ ಅನುದಾನ ನೀಡಲಾಗಿದೆ. ಕಾಮಗಾರಿಗೆ ತೆಗೆದುಕೊಂಡಿರುವ ಕೊಠಡಿಯನ್ನು ದುರಸ್ತಿ ಮಾಡುವಂತೆ ಸೂಚನೆ ನೀಡಲಾಗುವುದು.”

ಉಮೇಶ್, ಇಒ, ಹನೂರು ತಾಲ್ಲೂಕು

” ಶಿಥಿಲಗೊಂಡಿರುವ ಶಾಲಾ ಕಟ್ಟಡ ನೆಲಸಮ ಮಾಡುವ ಸಂಬಂಧ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಿಂದ ಪತ್ರ ಬಂದಿದೆ. ಇನ್ನು ೩ ದಿನಗಳಲ್ಲಿ ಪರಿಶೀಲನೆ ನಡೆಸಿ ಸೂಕ್ತ ಕ್ರಮ ವಹಿಸಲಾಗುವುದು.”

ಸುರೇಂದ್ರ, ಎಇಇ, ಲೋಕೋಪಯೋಗಿ ಇಲಾಖೆ

ಆಂದೋಲನ ಡೆಸ್ಕ್

Recent Posts

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

4 hours ago

ಕೆಎಸ್‌ಓಯುಗೆ ನೂತನ ಕುಲಪತಿಯಾಗಿ ಡಾ.ಜ್ಞಾನ ಪ್ರಕಾಶ್ ನೇಮಕ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಶಿಕ್ಷಣತಜ್ಞ, ವಿಜ್ಞಾನಿ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.…

5 hours ago

ಕಾಡಾನೆ ದಾಳಿ: ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಮಹಿಳೆ

ಕೃಷ್ಣಾ ಸಿದ್ದಾಪುರ ವಿರಾಜಪೇಟೆ: ತಾಲೂಕಿನ ಪಳ್ಳಕೆರೆ ವ್ಯಾಪ್ತಿಯಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಕೆಲಸಕ್ಕೆ ತೆರಳಿದ್ದ…

6 hours ago

ಮಾಜಿ ಸಿಎಂ ದೇವರಾಜ ಅರಸು ನೂತನ ಪ್ರತಿಮೆ ಅನಾವರಣ

ಮೈಸೂರು: ಮೈಸೂರು ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದ ಬಳಿ ಮಾಜಿ ಸಿಎಂ ದೇವರಾಜ ಅರಸು ಅವರ ನೂತನ ಪ್ರತಿಮೆಯನ್ನು ಪ್ರತಿಷ್ಠಾಪಿಸಲಾಗಿದೆ.…

6 hours ago

ತುಂಗಭದ್ರಾ ಜಲಾಶಯದ ನೂತನ ಕ್ರಸ್ಟ್ ಗೇಟ್: ಮೂವರು ಸಿಎಂಗಳಿಂದ ಲೋಕಾರ್ಪಣೆ

ವಿಜಯನಗರ: ತುಂಗಭದ್ರಾ ಜಲಾಶಯದಲ್ಲಿ ಅಳವಡಿಸಲಾಗಿರುವ ನೂತನ ಕ್ರೆಸ್ಟ್ ಗೇಟ್‌ಗಳನ್ನು ಮೂವರು ಮುಖ್ಯಮಂತ್ರಿಗಳು ಉದ್ಘಾಟಿಸಿದ ಅಪರೂಪದ ಸಮಾರಂಭಕ್ಕೆ ಸಾವಿರಾರು ಮಂದಿ ಸಾಕ್ಷಿಯಾದರು.…

7 hours ago

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರ: ತೋತಾಪುರಿಯ ಒಂದು ಕ್ವಿಂಟಲ್‌ಗೆ ₹1,750 ನಿಗದಿ

ನವದೆಹಲಿ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕೇಂದ್ರದ ಕೃಷಿ ಮತ್ತು ರೈತ ಕಲ್ಯಾಣ ಖಾತೆ ಮಂತ್ರಿಗಳಾದ ಶಿವರಾಜ್ ಸಿಂಗ್…

8 hours ago