ಮಂಜು ಕೋಟೆ
ಕೋಟೆ, ಸರಗೂರು ಭಾಗದ ರೈತರಲ್ಲಿ ಆತಂಕ; ಅಧಿಕಾರಿಗಳಿಂದ ನಿಯಂತ್ರಣ ಸಲ
ಎಚ್.ಡಿ.ಕೋಟೆ: ರೈತರ ಆರ್ಥಿಕ ಬೆಳೆಯಾದ ಮುಸುಕಿನಜೋಳದ ಬೆಳೆಗೆ ಬಿಳಿ ಸುಳಿ ರೋಗ ಕಾಣಿಸಿಕೊಂಡು ಬೆಳೆ ನಾಶವಾಗುತ್ತಿರುವುದರಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಎಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕುಗಳಲ್ಲಿ ಈ ಬಾರಿ ರೈತರು ಬೆಳೆದ ಮುಸುಕಿನ ಜೋಳದ ಬೆಳೆಗೆ ಕೀಟ ಮತ್ತು ರೋಗ ಬಾಧೆ ಕಾಣಿಸಿಕೊಂಡು ರೈತರು ಔಷಧಿ ಸಿಂಪಡಣೆ ಮಾಡಲು ಮುಂದಾಗಿದ್ದಾರೆ.
ಹಂಪಾಪುರ, ಬಿ.ಮಟಕೆರೆ, ಅಂತರಸಂತೆ, ಸರಗೂರು, ಎಚ್.ಡಿ.ಕೋಟೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ರಿಯಾಯಿತಿ ದರದಲ್ಲಿ ಹಾಗೂ ಖಾಸಗಿ ಅಂಗಡಿಗಳಲ್ಲಿ ಬಿತ್ತನೆ ಬೀಜಗಳನ್ನು ಪಡೆದಿದ್ದ ರೈತರು ಕೋಟೆ ತಾಲ್ಲೂಕಿನಲ್ಲಿ ೧೧,೫೦೦ ಹೆಕ್ಟೇರ್, ಸರಗೂರು ತಾಲ್ಲೂಕಿನಲ್ಲಿ ೯,೮೫೦ ಹೆಕ್ಟೇರ್ ಸೇರಿದಂತೆ ಒಟ್ಟು ೨೧,೩೫೦ ಹೆಕ್ಟೇರ್ ಪ್ರದೇಶದಲ್ಲಿ ಮುಸುಕಿನ ಜೋಳ ಬೆಳೆದಿದ್ದಾರೆ.
ಬಿತ್ತನೆ ಮಾಡಿದ ಒಂದು ತಿಂಗಳ ಒಳಗಾಗಿ ಈ ರೋಗದ ಲಕ್ಷಣಗಳು ಕಾಣಿಸಿಕೊಂಡಿವೆ. ರೋಗ ತಗುಲಿದ ಗಿಡಗಳ ಎಲೆಗಳ ಕೆಳಗೆ ಹಾಗೂ ಮೇಲ್ಭಾಗದಲ್ಲಿ ಬಿಳಿ ಬಣ್ಣದ ಶಿಲೀಂಧ್ರದ ಪುಡಿಗಳಂತೆ ಕಾಣಿಸಿಕೊಂಡ ನಂತರ ಎಲೆಗಳು ಹಳದಿ ಬಣ್ಣಕ್ಕೆ ತಿರುಗಿ, ಗಿಡದ ಬೆಳವಣಿಗೆ ಕುಗ್ಗಿ ೮೦-೯೦ರಷ್ಟು ಇಳುವರಿ ಕುಂಠಿತವಾಗುತ್ತಿದೆ.
ಕೀಟಬಾಧೆಯಿಂದ ಕಂಗಾಲಾಗಿರುವ ನಾಗನಹಳ್ಳಿ, ಹೆಗಡಾಪುರ, ಹಿರೇಹಳ್ಳಿ, ಮೇಟಿಕುಪ್ಪೆ, ಬೆಳಗನಹಳ್ಳಿ, ಹೊಸತೊರವಳ್ಳಿ, ಕೊಲ್ಲೇಗೌಡನಹಳ್ಳಿ, ಗುಜ್ಜಪ್ಪನಹುಂಡಿ, ಚಾಕಹಳ್ಳಿ, ಸಿದ್ದರಾಮನಹುಂಡಿ, ರಾಮೇನಹಳ್ಳಿ, ಕಂದಲಿಕೆ ಸೇರಿದಂತೆ ಹಲವು ಗ್ರಾಮಗಳ ರೈತರು ಪ್ರಸ್ತುತ ಬೆಳೆದಿರುವ ಮೆಕ್ಕೆಜೋಳದ ಬೆಳೆಯನ್ನು ಬೇರು ಸಮೇತ ನಾಶ ಮಾಡಿ, ರಾಗಿ, ದ್ವಿದಳಧಾನ್ಯ ಬೆಳೆಗಳಾದ ಅಲಸಂದೆ, ಅವರೆ ಬೆಳೆಗಳನ್ನು ಬಿತ್ತನೆ ಮಾಡಲು ಮುಂದಾಗಿದ್ದಾರೆ.
ಒಟ್ಟಿನಲ್ಲಿ ತಾಲ್ಲೂಕಿನ ರೈತರಿಗೆ ಪ್ರತಿ ಸಾಲಿನಲ್ಲಿ ಬೆಳೆಗಳಿಗೆ ರೋಗ ಬಾಧೆ, ಕೀಟಬಾಧೆ ಕಂಡುಬಂದು ಕಡಿಮೆ ಇಳುವರಿ ಬರುವುದು, ಬೆಳೆ ಚೆನ್ನಾಗಿ ಬಂದರೂ ಉತ್ತಮ ಬೆಲೆ ಸಿಗದೇ ಇರುವುದು ಕಂಗಾಲಾಗಿಸಿದೆ.
” ರೈತರು ಮೆಕ್ಕೆಜೋಳ ಬೆಳೆದು ಕಟಾವಾದ ಬಳಿಕ ಜಮೀನಿನಲ್ಲಿ ದ್ವಿದಳ ಧಾನ್ಯಗಳನ್ನು ಬೆಳೆಯಬೇಕು. ಜೋಳ ಬೆಳೆದ ಭೂಮಿಯಲ್ಲಿ ನೀರು ಹೆಚ್ಚಾಗಿ ನಿಲ್ಲದಂತೆ ನೋಡಿಕೊಳ್ಳಬೇಕು. ಗಿಡಗಳಿಗೆ ರೋಗ ಬರುವ ಮುನ್ಸೂಚನೆ ತಿಳಿದ ನಂತರ ರೋಗ ಬಂದ ಗಿಡಗಳನ್ನು ಕಿತ್ತು ಹಾಕಬೇಕು. ಮೆಕ್ಕೆಜೋಳ ಬಿತ್ತನೆ ಮಾಡಿದ ೨೦ ರಿಂದ ೨೫ ದಿನಗಳ ನಂತರ ಮೆಟಾಲಾಕ್ಸಿ ೪ ಡಬ್ಲ್ಯುಪಿ ಜೊತೆಗೆ ಮ್ಯಾಂಕೊಜೆಬ್ ೬೪ ಡಬ್ಲ್ಯುಪಿ ಎರಡು ಗ್ರಾಂ ಮಿಶ್ರಣವನ್ನು ಒಂದು ಲೀಟರ್ ನೀರಿನಲ್ಲಿ ಬೆರೆಸಿ ಸಿಂಪಡಿಸಿದರೆ ರೋಗ ಮತ್ತು ಕೀಟಬಾಧೆಯನ್ನು ನಿಯಂತ್ರಿಸಬಹುದು.”
-ಜಯರಾಮಯ್ಯ, ಸಹಾಯಕ ಕೃಷಿ ನಿರ್ದೇಶಕರು, ಎಚ್.ಡಿ.ಕೋಟೆ
” ಜಮೀನಿನಲ್ಲಿ ಬೆಳೆದ ಮೆಕ್ಕೆಜೋಳಕ್ಕೆ ಕಳೆದ ವಾರದಿಂದ ರೋಗ ಮತ್ತು ಕೀಟಬಾಧೆ ಕಾಣಿಸಿಕೊಂಡಿದ್ದು ಕಂಗಳಾಗಿದ್ದೇವೆ. ಅಂಗಡಿಗಳಲ್ಲಿ ಔಷಧಿಗಳನ್ನು ತಂದು ಸಿಂಪಡಿಸಿದರೂ ನಿಯಂತ್ರಣಕ್ಕೆ ಬರುತ್ತಿಲ್ಲ. ಸಾವಿರಾರು ರೂ. ಖರ್ಚು ಮಾಡಿ ಬೆಳೆ ಬೆಳೆದಿದ್ದೇವೆ. ಮುಂದೆ ಏನಾಗುತ್ತದೆಯೋ ಎಂಬ ಆತಂಕ ಉಂಟಾಗಿದೆ.”
-ಚಂದ್ರು, ರೈತ, ಹೆಗಡಾಪುರ
ಜಕಾರ್ತ: ಇಂಡೋನೇಷ್ಯಾದ ಫ್ಲೋರ್ಸ್ ದ್ವೀಪದಲ್ಲಿ ಶನಿವಾರ ಮುಂಜಾನೆ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಮೃತರ ಸಂಖ್ಯೆ 40ಕ್ಕೆ ಏರಿಕೆಯಾಗಿದೆ.…
ಅಯೋಧ್ಯೆ: ಅಯೋಧ್ಯೆ ರಾಮಮಂದಿರದ ಅರ್ಚಕರಿಗೆ ಹಳದಿ ರೇಷ್ಮೆ ಧೋತಿಯನ್ನು ಹೊಸ ಡ್ರೆಸ್ ಕೋಡ್ ಆಗಿ ಜಾರಿಗೆ ತರಲಾಗಿದೆ. ರಾಮನಂದಿ ಸಂಪ್ರದಾಯಕ್ಕೆ…
ವಸ್ತುಗಳು, ಬಂದೂಕು ಸೇರಿ ಸಾಕ್ಷಿಗಳು ಲಭ್ಯ ಬೆಂಗಳೂರು : ಹನೂರಿನಲ್ಲಿ ನಡೆದಿರುವ ಶೂಟೌಟ್ ಪ್ರಕರಣವನ್ನು ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆಗೆ ಆದೇಶ…
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…