Mysore
30
overcast clouds

Social Media

ಬುಧವಾರ, 12 ಆಗಸ್ಟ್ 2026
Light
Dark

ಓದುಗರ ಪತ್ರ: ಪ್ರವಾಸಿ ತಾಣಗಳಿಗೆ ನಿರ್ಬಂಧವೇಕೆ?

ಓದುಗರ ಪತ್ರ

ಚಾಮರಾಜನಗರದಲ್ಲಿರುವ ಸುವರ್ಣಾವತಿ ಮತ್ತು ಚಿಕ್ಕಹೊಳೆ ಜಲಾಶಯಗಳಿಗೆ ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಿರುವುದು ಸೂಕ್ತವಾದ ಕ್ರಮವಲ್ಲ. ಇಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯು ತಮಿಳುನಾಡಿನ ಅನೇಕ  ಸ್ಥಳಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಇಲ್ಲಿ ಸಂಚರಿಸುವ ಪ್ರವಾಸಿಗರು ಜಲಾಶಯಗಳ ಪ್ರಕೃತಿ ಸೌಂದರ್ಯ ಸವಿಯುತ್ತಿದ್ದರು.

ಜಲಾಶಯಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿರುವ ಹಿನ್ನೆಲೆಯಲ್ಲಿ ಪ್ರವಾಸಿಗರ ಸಂಖ್ಯೆ ಕಡಿಮೆಯಾಗುವುದಲ್ಲದೇ ಅನ್ಯದಾರಿಗಳ ಮೂಲಕ ಒಳಹೋಗಲು ಅವಕಾಶ ಕಲ್ಪಿಸಿದಂತಾಗಿದೆ. ಈ ಜಲಾಶಯಗಳಿಗೆ ಇಪ್ಪತ್ತು ವರ್ಷಗಳ ಹಿಂದೆ ಹೆಚ್ಚು ಪ್ರಮಾಣದಲ್ಲಿ ಪ್ರವಾಸಿಗರು ಬರುತ್ತಿದ್ದರು.

ತದ ನಂತರದಲ್ಲಿ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿದೆ. ಈ ಜಲಾಶಯದಲ್ಲಿರುವ ವಿದ್ಯುತ್ ದೀಪಗಳೂ ಹಾಳಾಗಿರುವುದರಿಂದ ಜಲಾಶಯಗಳಿಗೆ ಸೂಕ್ತ ಭದ್ರತೆಯೊಂದಿಗೆ, ಸೂಕ್ತ ಕ್ರಮಗಳನ್ನು ಕೈಗೊಂಡು ಪ್ರವಾಸಿಗರಿಗೆ ಮತ್ತು ಜಿಲ್ಲೆಯ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಅಭಿವೃದ್ಧಿ ಪಡಿಸಲು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕಾಗಿದೆ.

 -ನಾಗೇಶ್, ಮಾನಸಗಂಗೋತ್ರಿ, ಮೈಸೂರು

Tags:
error: Content is protected !!