Andolana originals

ಓದುಗರ ಪತ್ರ: ಕನಿಷ್ಠ ಠೇವಣಿ: ಆರ್‌ಬಿಐ ನಿಯಂತ್ರಣವೇಕಿಲ್ಲ?

ಹೊಸ ಖಾತೆದಾರರು ತಮ್ಮ ಬ್ಯಾಂಕ್‌ನಲ್ಲಿ ಖಾತೆ ತೆರೆಯಲು ರೂ. ೫೦ ಸಾವಿರ ಕನಿಷ್ಠ ಠೇವಣಿ ಇಡಬೇಕು ಎಂದು  ಐಸಿಐಸಿಐ ಬ್ಯಾಂಕ್ ಹೇಳಿರುವ ಬಗ್ಗೆ ಪ್ರತಿಕ್ರಿಯಿಸಿರುವ  ಆರ್‌ಬಿಐ ಗವರ್ನರ್ ಸಂಜಯ್ ಮಲ್ಹೋತ್ರ,  ಉಳಿತಾಯ ಖಾತೆಯಲ್ಲಿ ಎಷ್ಟು ಮೊತ್ತ ಇರಿಸಬೇಕು ಎನ್ನುವುದು   ಆರ್‌ಬಿಐನ ನಿಯಂತ್ರಣ ವ್ಯಾಪ್ತಿಗೆ ಬರುವುದಿಲ್ಲ. ಕನಿಷ್ಠ ಮೊತ್ತ ಅವರ ವಿವೇಚನೆಗೆ ಬಿಟ್ಟ ವಿಷಯ ಎಂದು ಹೇಳಿರುವುದು ಸರಿಯಲ್ಲ.

ಹಾಗಿದ್ದರೆ ಬ್ಯಾಂಕ್‌ಗಳು  ಆರ್‌ಬಿಐ ನಿಯಂತ್ರಣದಲ್ಲಿ ಇಲ್ಲವೇ ಎನ್ನುವ ಪ್ರಶ್ನೆ ಉದ್ಭವವಾಗುತ್ತದೆ. ಇತ್ತೀಚೆಗೆ ಕೆನರಾ ಬ್ಯಾಂಕ್ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಇಲ್ಲದಿದ್ದರೂ ದಂಡ ವಿಧಿಸುವುದಿಲ್ಲ ಎಂದು ಹೇಳಿತ್ತು. ಇದೀಗ ಎಸ್‌ಬಿಐ ಕೂಡ ಉಳಿತಾಯ ಖಾತೆಯಲ್ಲಿ ಕನಿಷ್ಠ ಮೊತ್ತ ಕಾಯ್ದುಕೊಳ್ಳುವ ಅಗತ್ಯ ಇಲ್ಲ ಎಂದು ಹೇಳಿರುವುದಾಗಿ  ಪತ್ರಿಕೆಗಳಲ್ಲಿ    ವರದಿಯಾಗಿದೆ.

ಇದು ಸ್ವಾಗತಾರ್ಹ ನಿರ್ಧಾರ.  ಈ ಬಗ್ಗೆ ಬ್ಯಾಂಕ್ ತನ್ನ ಆದೇಶವನ್ನು   ನೋಟಿಸ್ ಬೋರ್ಡ್ ನಲ್ಲಿ ಪ್ರಕಟಿಸಬೇಕು. ಅಂಚೆ ಕಚೇರಿ ಯಲ್ಲಿ ಉಳಿತಾಯ ಖಾತೆಯ ಮೊತ್ತಕ್ಕೆ ಶೇ.  ೪ ಬಡ್ಡಿ ನೀಡುತ್ತಾರೆ. ಆದರೆ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಕೇವಲ ಶೇ ೨.೫ರಿಂದ ೩ರಷ್ಟು ಮಾತ್ರ ಬಡ್ಡಿ ನೀಡುತ್ತಾರೆ. ಇದು ಅಂಚೆ ಕಚೇರಿಗಿಂತ ಹೆಚ್ಚಾಗಿರಬೇಕು. ಈ ಬಗ್ಗೆ  ಆರ್‌ಬಿಐ ಗಮನ ಹರಿಸಲಿ.

-ಮುಳ್ಳೂರು ಪ್ರಕಾಶ್,  ಕನಕದಾಸ ನಗರ,  ಮೈಸೂರು

ಆಂದೋಲನ ಡೆಸ್ಕ್

Recent Posts

ಊರ ಜಾತ್ರೆ ಒಂದು ನೆನಪು…

ನಂಜನಗೂಡಿನ ಜಾತ್ರೆ ಅಂದು ಹೇಗಿತ್ತೋ ಇಂದೂ ಹಾಗೆ ತನ್ನ ಆಚರಣೆಯ ಮುಗ್ಧತೆ ಉಳಿಸಿಕೊಂಡಿದೆ  ಡಾ.ಹೆಚ್.ಸಿ.ಮಹದೇವಪ್ಪ, ಸಚಿವರು ನಂಜನಗೂಡಿನಿಂದ ಕೆಲವೇ ಮೈಲಿಗಳ…

2 mins ago

ಯುದ್ಧ: ಕಟ್ಟಡ ನಿರ್ಮಾಣ ವಲಯಕ್ಕೆ ಬೆಲೆ ಏರಿಕೆಯ ಬಿಸಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜನಸಾಮಾನ್ಯರಿಗೆ ನಿತ್ಯ ಒಂದಲ್ಲಾ ಒಂದು ಬಿಸಿ ತಟ್ಟುತ್ತಿದೆ. ಕಟ್ಟಡ…

7 mins ago

ಚಿರತೆ ದಾಳಿ: ಇಬ್ಬರಿಗೆ ಗಾಯ

ಹುಣಸೂರು: ಚಿರತೆ ಮರಿ ದಾಳಿಯಿಂದ ಇಬ್ಬರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಹುಲ್ಯಾಳು ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಗಾವಡಗೆರೆಹೋಬಳಿಯ ಹುಲ್ಯಾಳು ಗ್ರಾಮದ…

15 mins ago

ವೈಭವ್‌ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್‌ : ಸಿಎಸ್‌ಕೆ ವಿರುದ್ಧ ಆರ್‌ಆರ್‌ಗೆ ಗೆಲುವು

ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್‌ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್‌ ಕಿಂಗ್ಸ್‌…

8 hours ago

ಮೈಸೂರು ರೇಸ್ ಕ್ಲಬ್ ಚುನಾವಣೆ; ಸದಸ್ಯರಾಗಿ ಐವರ ಆಯ್ಕೆ

ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…

9 hours ago