ಆತಂಕದಲ್ಲೇ ದಿನದೂಡುತ್ತಿರುವ ಗ್ರಾಮಸ್ಥರು; ಶಾಶ್ವತ ಕ್ರಮಕ್ಕೆ ಸ್ಥಳೀಯ ನಿವಾಸಿಗಳ ಒತ್ತಾಯ
ಸುಂಟಿಕೊಪ್ಪ: ಸಮೀಪದ ೭ನೇ ಹೊಸಕೋಟೆ, ಕೆದಕಲ್, ಹೊರೂರು, ಕೊಡಗರಹಳ್ಳಿ, ಕಂಬಿಬಾಣೆ, ಚಿಕ್ಲಿಹೊಳೆ ಭಾಗಗಳಲ್ಲಿ ಕಾಡಾನೆಗಳ ಜೊತೆಗೆ ಹುಲಿಯ ಓಡಾಟ ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ಕಾರ್ಮಿಕರು ತೋಟಗಳಲ್ಲಿ ಕೆಲಸ ನಿರ್ವಹಿಸಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ.
ಈ ವ್ಯಾಪ್ತಿಯಲ್ಲಿ ದಿನನಿತ್ಯ ಆನೆಗಳ ಹಾವಳಿ ವರದಿಯಾಗುತ್ತಿದ್ದು, ಅನಾಹುತಗಳೂ ಸಂಭವಿಸಿವೆ. ಇದರೊಂದಿಗೆ ಹುಲಿ ಸಂಚರಿಸಿರುವ ಹೆಜ್ಜೆ ಗುರುತುಗಳೂಕಂಡು ಬರುತ್ತಿದೆ. ವನ್ಯಪ್ರಾಣಿಗಳ ಹಾವಳಿಯಿಂದ ಒಂದಲ್ಲ ಒಂದು ಸಮಸ್ಯೆ ಎದುರಿಸುತ್ತಿರುವ ಇಲ್ಲಿನ ಗ್ರಾಮಸ್ಥರು ಪ್ರಾಣಭಯದಿಂದಾಗಿ ಆತಂಕದಲ್ಲೇ ದಿನಕಳೆಯುವಂತಾಗಿದೆ.
ಕಾಡಾನೆ ಹಾವಳಿ ಹೆಚ್ಚಿರುವ ಕೊಡಗರಹಳ್ಳಿ, ಕೆದಕಲ್, ಹೊರೂರು, ಮೊದ್ದೂರು, ಕಂಬಿಬಾಣೆ, ಚಿಕ್ಲಿಹೊಳೆ, ೭ನೇ ಹೊಸಕೋಟೆ ಭಾಗಗಳಲ್ಲಿ ಶಾಲೆಗಳಿದ್ದು, ಸಾವಿರಾರು ಮಕ್ಕಳು ವಿವಿಧ ಭಾಗಗಳಿಂದ ಆಗಮಿಸಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ವನ್ಯಪ್ರಾಣಿಗಳ ಹಾವಳಿಯಿಂದ ಪೋಷಕರು ಕೂಡ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುವಂತಾಗಿದೆ. ಇತ್ತೀಚೆಗೆ ದಕ್ಷಿಣ ಕೊಡಗಿನಲ್ಲಿ ಸದ್ದುಮಾಡಿದ ಹುಲಿ ದಾಳಿಯ ನಡುವೆಯೇ ಇದೀಗ ಕೆದಕಲ್ ಮೂಲಕ ಆನೆಗಳು ದಾಳಿಯಿಡುತ್ತಿವೆ. ಅರಣ್ಯ ಇಲಾಖೆಯಿಂದ ಕಾಡಾನೆಗಳನ್ನು ಓಡಿಸುವುದನ್ನು ಹೊರತುಪಡಿಸಿದರೆ ಶಾಶ್ವತ ಕ್ರಮ ಕೈಗೊಂಡಿಲ್ಲದಿರುವುದು ದುರದೃಷ್ಟಕರ. ಈ ವ್ಯಾಪ್ತಿಯಲ್ಲಿ ೧೦ರಿಂದ ೧೫ ಕಾಡಾನೆಗಳು ಓಡಾಡುತ್ತಿದ್ದು, ಅವುಗಳನ್ನು ಸೆರೆಹಿಡಿದು ಪಳಗಿಸಬೇಕೆನ್ನುವ ಒತ್ತಾಯ ಕೇಳಿ ಬಂದಿದೆ.
ಸರ್ಕಾರ ಅರಣ್ಯ ಇಲಾಖೆಯ ಮೂಲಕ ಪರಿಹಾರ ಒದಗಿಸುವುದು ಮತ್ತು ಹಿರಿಯ ಅಧಿಕಾರಿಯೊಬ್ಬರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿದ ಮಾತ್ರಕ್ಕೆ ಆನೆ ಮಾನವ-ಸಂಘರ್ಷ ಮುಗಿಯುವುದಿಲ್ಲ. ಏಕಕಾಲಕ್ಕೆ ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಷ್ಟವೆಂಬುದು ಎಲ್ಲರಿಗೂ ಗೊತ್ತಿದೆ. ಆದರೆ ದೀರ್ಘಕಾಲಿನ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಇಲ್ಲಿನ ನಿವಾಸಿಗಳು ಒತ್ತಾಯಿಸಿದ್ದಾರೆ.
” ಈಗಾಗಲೇ ಕಾಡಾನೆ ಹಾವಳಿಯಿಂದ ಹೈರಾಣಾಗಿದ್ದೇವೆ. ಇದೀಗ ನಮ್ಮ ವ್ಯಾಪ್ತಿಯಲ್ಲಿ ಹುಲಿ ಓಡಾಟದಿಂದ ಮತ್ತಷ್ಟು ಆತಂಕ ಹೆಚ್ಚಾಗಿದೆ. ಹವಾಮಾನ ವೈಪರೀತ್ಯ, ಅಕಾಲಿಕ ಮಳೆಯಿಂದಾಗಿ ವರ್ಷಕ್ಕೊಮ್ಮೆ ಬರುವ ಫಸಲನ್ನು ನಂಬಿ ಬದುಕುವ ನಾವು, ತಲೆ ಮೇಲೆ ಕೈಹೊತ್ತು ಕೂರುವಂತಾಗಿದೆ. ಸಂಬಂಧಪಟ್ಟವರು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು.”
-ಮುಕ್ಕಾಟ್ಟೀರ ಸಂಜುಪೊನ್ನಪ್ಪ, ಗ್ರಾ.ಪಂ. ಮಾಜಿ ಅಧ್ಯಕ್ಷ
” ಹುಲಿ ಹೆಜ್ಜೆ ಗುರುತು ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಹುಲಿ ಹೊರೂರು ಭಾಗದಿಂದ ಮಡಿಕೇರಿ ಕಡೆ ಸಂಚಾರ ಮಾಡಿರಬಹುದೆಂದು ಅಂದಾಜಿಸಲಾಗಿದೆ. ಕಾಡಾನೆ ಹಾವಳಿ ಬಗ್ಗೆಯೂ ಗಮನಕ್ಕೆ ಬಂದಿದೆ. ಈ ಬಗ್ಗೆ ಮೇಲಽಕಾರಿಗಳ ಗಮನಕ್ಕೆ ತರಲಾಗಿದ್ದು, ಅವರ ಸೂಚನೆಯಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು.”
-ದೇವಯ್ಯ, ಉಪ ವಲಯ ಅರಣ್ಯಾಧಿಕಾರಿ
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್ಆರ್ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…