Andolana originals

ಕಾಡಾನೆ ದಾಳಿ; ಶಾಲೆಯ ಗೇಟ್, ನೀರಿನ ಪೈಪ್ ನಾಶ

ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ

ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ ಸುತ್ತುಗೋಡೆ ಹಾಗೂ ಗೇಟ್, ಕುಡಿಯುವ ನೀರಿನ ಪೈಪ್‌ಗಳು ಹಾಳಾಗುತ್ತಿದ್ದು, ಶಾಶ್ವತ ಪರಿಹಾರ ಕಂಡುಕೊಳ್ಳುವಲ್ಲಿ ಅರಣ್ಯ ಇಲಾಖೆಯ ಅಽಕಾರಿಗಳು ವಿಫಲರಾಗಿದ್ದಾರೆ ಎಂದು ಪಚ್ಚೆದೊಡ್ಡಿ ಗ್ರಾಮಸ್ಥರು ಆರೋಪಿಸಿದ್ದಾರೆ.

ತಾಲ್ಲೂಕಿನ ಕಾಡಂಚಿನ ಗ್ರಾಮವಾದ ಪಚ್ಚೆದೊಡ್ಡಿ ಗ್ರಾಮದಲ್ಲಿ ಭಾನುವಾರ ತಡರಾತ್ರಿ ಕಾಡಾನೆ ದಾಳಿ ಮಾಡಿ ಶಾಲಾ ಗೇಟು ಹಾಗೂ ಕುಡಿಯುವ ನೀರಿನ ಪೈಪ್‌ಅನ್ನು ಮುರಿದು ಹಾಕಿದೆ.

ಶಾಲಾ ಗೇಟು ಹಾಗೂ ಪೈಪ್ ಮುರಿತ: ಕಾಡಾನೆ ದಾಳಿ ನಡೆಸಿ ಶಾಲಾ ಮುಂಭಾಗ ಅಳವಡಿಸಿರುವ ಗೇಟು ಹಾಗೂ ಕುಡಿಯುವ ನೀರಿನ ಸಂಪೂರ್ಣ ಪೈಪ್‌ಗಳನ್ನು ಮುರಿದು ಚೆಲ್ಲಾಪಿಲ್ಲಿ ಮಾಡಿದೆ. ಇದರಿಂದ ಸಾಕಷ್ಟು ನಷ್ಟ ಉಂಟಾಗಿದೆ ಎಂದು ಅಲ್ಲಿನ ಶಿಕ್ಷಕರು ಹೇಳಿದ್ದಾರೆ. ಕಾಡಾನೆ ಪದೇಪದೇ ಶಾಲೆಯ ಮೇಲೆ ದಾಳಿ ನಡೆಸುತ್ತಿದೆ. ಇದರಿಂದ ರಿಪೇರಿ ಮಾಡಲು ತೊಂದರೆಯಾಗುತ್ತಿದೆ ಎನ್ನುತ್ತಾರೆ ಅಲ್ಲಿನ ಶಿಕ್ಷಕರು. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಗಮನಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿ ದ್ದಾರೆ.

ಶಾಶ್ವತ ಕ್ರಮ ಕೈಗೊಳ್ಳಿ: ಕಾಡಾನೆ ಆಗಿಂದಾಗ್ಗೆ ಶಾಲೆಯ ಆಸ್ತಿಗೆ ನಷ್ಟ ಉಂಟು ಮಾಡುತ್ತಿರುವ ಹಿನ್ನೆಲೆಯಲ್ಲಿ ಕಾಡಾನೆ ಗ್ರಾಮದೊಳಗೆ ಹಾಗೂ ಶಾಲೆಯ ಸಮೀಪ ಬಾರದಂತೆ ತಡೆಗಟ್ಟಲು ರೈಲ್ವೆ ಗೇಟ್ ಅಥವಾ ಆನೆ ಕಂದಕವನ್ನು ನಿರ್ಮಾಣ ಮಾಡುವುದರ ಮೂಲಕ ಶಾಶ್ವತ ಪರಿಹಾರವನ್ನು ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ಅನಾಹುತಗಳಿಗೆ ಜವಾಬ್ದಾರಿಯನ್ನು ಹೊರಬೇಕಾಗುತ್ತದೆ ಎಂದು ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಸರ್ಕಾರಿ ಶಾಲೆಗೆ ಕಾಡಾನೆ ದಾಳಿ ಮಾಡುತ್ತಿರುವ ವಿಷಯ ಗೊತ್ತಿದ್ದರೂ ಆನೆಗಳು ಶಾಲೆ ಸಮೀಪ ಬಾರದಂತೆ ತಡೆಗಟ್ಟುವಲ್ಲಿ ಕ್ರಮಕೈಗೊಳ್ಳದೆಮ ನಿರ್ಲಕ್ಷ್ಯ ವಹಿಸಿದ್ದಾರೆ. ಇನ್ನಾದರೂ ಸೂಕ್ತ ಕ್ರಮ ವಹಿಸದಿದ್ದರೆ ಉಗ್ರ ಪ್ರತಿಭಟನೆ ನಡೆಸ ಬೇಕಾಗುತ್ತದೆ ಎಂದು ಪಚ್ಚೆದೊಡ್ಡಿ ಗ್ರಾಮಸ್ಥರು ಎಚ್ಚರಿಸಿದ್ದಾರೆ.

” ಪಚ್ಚೆದೊಡ್ಡಿ ಸರ್ಕಾರಿ ಶಾಲೆ ಮೇಲೆ ಕಾಡಾನೆ ದಾಳಿ ನಡೆಸಿರುವುದು ಇದೇ ಮೊದಲಲ್ಲ. ಕನಿಷ್ಠ ೫ ಬಾರಿಯಾದರೂ ದಾಳಿ ನಡೆಸಿದೆ. ಈಗ ಕುಡಿಯುವ ನೀರಿನ ಪೈಪ್‌ನ್ನು ಸಹ ಹಾನಿಗೊಳಿಸಿದೆ. ನಾಳೆಯಿಂದ ಮಕ್ಕಳಿಗೆ ಕುಡಿಯುವ ನೀರಿನ ತೊಂದರೆಯಾಗಲಿದೆ. ಹಾಗಾಗಿ ಅರಣ್ಯ ಇಲಾಖೆಯ ಅದಿಕಾರಿಗಳು ಕ್ರಮ ವಹಿಸಬೇಕು.

-ಗೋವಿಂದ, ಅಧ್ಯಕ್ಷರು, ಎಸ್‌ಡಿಎಂಸಿ ಸಮಿತಿ, ಪಚ್ಚೆದೊಡ್ಡಿ ಶಾಲೆ

ಆಂದೋಲನ ಡೆಸ್ಕ್

Recent Posts

ಶಾಲೆ ಶುರುವಾಗಿದೆ; ಮನಸು ಯಾಕೋ ಹೂ ಬಿಟ್ಟಿದೆ…

ವರ್ಷಕ್ಕೊಮ್ಮೆ ಎದುರುಗೊಳ್ಳುವ ಈ ಸುಂದರ ಕಾಲ ಹೊಸತೊಂದು ಯುಗದ ಆರಂಭಕ್ಕೆ ಭಾಷ್ಯ ಬರೆದಂತೆ ಭಾಸವಾಗುತ್ತದೆ. ಮಕ್ಕಳ ಹುಮ್ಮಸ್ಸನ್ನು ನೋಡುವುದೇ ಒಂದು…

1 hour ago

ಭಾನುವಾರದ ಹಾಡುಪಾಡು | ಶಾಲೆಯೆಂಬ ಕಟ್ಟಡಗಳಿಗೆ ಜೀವ ಬರುವ ಹೊತ್ತು…..

ಕನಸುಗಂಗಳ ಈ ಹುಡುಗಿಯರ ಕಲರವದಿಂದಾಗಿ ಜಡವಾಗಿದ್ದ ಕಟ್ಟಡಗಳಿಗೆ ಜೀವ ಬರುತ್ತದೆ. ಅವರ ನಡಿಗೆಯ ಚುರುಕುತನದಿಂದ ಸುತ್ತಲಿನ ಪರಿಸರ ಚಲನಶೀಲವಾಗುತ್ತದೆ. ಸುಧಾ…

1 hour ago

ಭಾನುವಾರದ ಹಾಡುಪಾಡು | ಜೂನ್ ಬಂತು ಎಂದರೆ ಶಿಕ್ಷಕರಿಗೆ ಸುಗ್ಗಿ ಕಾಲ

ವರ್ಷವಿಡೀ ಪಾಠ ಮಾಡಿ ಸುಸ್ತಾದ ಶಿಕ್ಷಕರು ಬೇಸಿಗೆ ರಜಕ್ಕಾಗಿ ಎಷ್ಟೇ ಹಂಬಲಿಸಿದರೂ ಕೂಡ ರಜೆ ಮುಗಿಯುವ ಹೊತ್ತಿಗೆ ಬೇಸರವಾಗಿ ಎಷ್ಟು…

1 hour ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌| ಮೇ 31 ಭಾನುವಾರ

2 hours ago

ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರಾಗಿ ನಿವೃತ್ತ ನ್ಯಾ.ಪಿ.ಎನ್.ದೇಸಾಯಿ ನೇಮಕ

ಬೆಂಗಳೂರು : ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸುವ ಮೊದಲು ಸಿದ್ದರಾಮಯ್ಯ ಅವರು ನಿವೃತ್ತ ನ್ಯಾಯಮೂರ್ತಿ ಪಿ.ಎನ್.ದೇಸಾಯಿ ಅವರನ್ನು ಕರ್ನಾಟಕ ರಾಜ್ಯ ಮಾನವ…

15 hours ago

ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ

ಬೆಂಗಳೂರು : ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕನಾಗಿ ಡಿ.ಕೆ.ಶಿವಕುಮಾರ್‌ ಆಯ್ಕೆ ಆಗಿದ್ದಾರೆ. ಡಿಕೆಶಿ ಅವರ ಹೆಸರನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ…

17 hours ago