Andolana originals

ಕೆರೆ ಕಟ್ಟೆ ಸಮೀಪದಲ್ಲಿ ವಾಮಾಚಾರ; ಜನರಲ್ಲಿ ಭೀತಿ

ಮಂಜು ಕೋಟೆ

ಸವ್ವೆ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಕೆರೆಯ ಬಳಿ ಮಾಟ-ಮಂತ್ರ; ಇಂಥ ಕೃತ್ಯಗಳಿಗೆ ಕಡಿವಾಣ ಹಾಕಲು ಆಗ್ರಹ

ಎಚ್.ಡಿ.ಕೋಟೆ: ತಾಲ್ಲೂಕಿನ ಕೆರೆಕಟ್ಟೆ ಸಮೀಪದಲ್ಲಿ ವಾಮಾಚಾರಗಳನ್ನು ನಡೆಸುತ್ತಿದ್ದು, ಮಕ್ಕಳು, ವೃದ್ಧರು ಸಾರ್ವಜನಿಕರಲ್ಲಿ ಭಾರಿ ಆತಂಕ ಉಂಟಾಗಿದೆ. ಮಳೆಯ ಅಭಾವದಿಂದಾಗಿ ಜಲಾಶಯಗಳು ಮತ್ತು ಕೆರೆಕಟ್ಟೆಗಳಲ್ಲಿ ನೀರಿನ ಪ್ರಮಾಣ ಕಡಿಮೆಯಾಗಿರುವುದರಿಂದ ದಡಗಳಲ್ಲಿ ವಾಮಾಚಾರ ಮಾಡಲು ಅನೇಕರು ಮುಂದಾಗಿದ್ದಾರೆ.

ಪಟ್ಟಣದ ಪುರಸಭೆ ವ್ಯಾಪ್ತಿಯ ಸವ್ವೆ ಗ್ರಾಮದ ಮುಖ್ಯ ರಸ್ತೆಯಲ್ಲಿರುವ ಕೆರೆಯ ಬಳಿ ಭಾರಿ ಗಾತ್ರದ ಗೊಂಬೆ ನಿರ್ಮಾಣ ಮಾಡಿ ಮಂಡಲ ರೂಪಿಸಿ ಪೂಜೆಗಳನ್ನು ಮಾಡಿ ರಾತ್ರೋರಾತ್ರಿ ವಾಮಾಚಾರವನ್ನು ಮಾಡಿದ್ದಾರೆ.

ಇದೇ ರಸ್ತೆಯಲ್ಲಿ ಓಡಾಡುವ ಸವ್ವೆ, ಪಡುಕೋಟೆ, ಗೂಳಿಕಟ್ಟೆ, ಜಿ.ಜಿ. ಕಾಲೋನಿ ಗ್ರಾಮಗಳ ನೂರಾರು ಮಹಿಳೆಯರು, ವೃದ್ಧರು, ಮಕ್ಕಳು ರಸ್ತೆ ಬಳಿಯೇ ವಾಮಾಚಾರ ನಡೆದಿರುವುದನ್ನು ನೋಡಿ ಭಯಭೀತರಾಗಿದ್ದಾರೆ. ಮತ್ತೆ ಅನೇಕರು ಈ ಮಾರ್ಗದಲ್ಲಿ ಸಂಚರಿಸುವುದನ್ನೇ ಬಿಟ್ಟಿದ್ದಾರೆ.

ರಾಜ್ಯದಲ್ಲಿ ಮೌಢ್ಯ, ವಾಮಾಚಾರ, ಇನ್ನಿತರ ಅನಿಷ್ಟ ಚಟುವಟಿಕೆಗಳಿಗೆ ರಾಜ್ಯ ಸರ್ಕಾರ ಕಡಿವಾಣ ಹಾಕಿದ್ದರೂ ತಾಲ್ಲೂಕಿನಲ್ಲಿರುವ ಮುಗ್ಧ ಜನರ ಬಳಿ ಹಣ ಕೀಳಲು ಇಂತಹ ಚಟುವಟಿಕೆಗಳನ್ನು ತಾಲ್ಲೂಕಿನ ಅನೇಕ ಭಾಗಗಳಲ್ಲಿ ಕದ್ದು ಮುಚ್ಚಿ ನಡೆಸುತ್ತಿದ್ದಾರೆ. ಇದರಿಂದಾಗಿ ಜನ ಸಾಮಾನ್ಯರಲ್ಲಿ ಭಯ ಉಂಟಾಗಿದೆ.

ಸಂಬಂಧಪಟ್ಟ ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಗ್ರಾಮ ಪಂಚಾಯಿತಿಯವರು ಇತ್ತ ಗಮನಹರಿಸಿ ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಿ ಜನಸಾಮಾನ್ಯರು ನೆಮ್ಮದಿಯಿಂದ ಬದುಕಲು ಅವಕಾಶ ಮಾಡಿ ಕೊಡಬೇಕಾಗಿದೆ.

” ನಮ್ಮ ಗ್ರಾಮದ ಸಮೀಪದಲ್ಲಿ ಕೆರೆಯ ಬಳಿ ವಾಮಾಚಾರ ಮಾಡಿರುವುದರಿಂದ ಗ್ರಾಮದ ಎಲ್ಲಾ ಜನರಿಗೆ, ರಸ್ತೆಯಲ್ಲಿ ಓಡಾಡುವ ಪ್ರತಿಯೊಬ್ಬರಿಗೂ ಭಯ ಉಂಟಾಗಿದೆ. ಸಂಬಂಧಪಟ್ಟವರು ಇದನ್ನು ತೆರವುಗೊಳಿಸುವ ಕಾರ್ಯ ಮಾಡಬೇಕಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ವಾಮಾಚಾರ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗಿದೆ.”

-ಶಿವು ಜಿಯೋ, ಸವ್ವೆ ಗ್ರಾಮದ ನಿವಾಸಿ

” ಗ್ರಾಪಂ ವ್ಯಾಪ್ತಿಯ ಕೆರೆ ಬಳಿ ಭಾರಿ ಗಾತ್ರದ ಗೊಂಬೆ ನಿರ್ಮಾಣ ಮಾಡಿ ವಾಮಾಚಾರ ಮಾಡಿರುವ ವಿಚಾರ ಗೊತ್ತಾಗಿದೆ. ಸಂಬಂಧಪಟ್ಟ ಪಿಡಿಒ ಮತ್ತು ಪೊಲೀಸ್ ಇಲಾಖೆಯವರಿಗೆ ವಿಚಾರ ತಿಳಿಸಿ ತಕ್ಷಣ ತೆರವುಗೊಳಿಸಲಾಗುವುದು. ಯಾರೂ ಆತಂಕ ಪಡುವ ಅಗತ್ಯವಿಲ್ಲ.”

-ರವಿಚಂದ್ರನ್, ಇಒ, ತಾಪಂ

 

 

ಆಂದೋಲನ ಡೆಸ್ಕ್

Recent Posts

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

47 seconds ago

ಓದುಗರ ಪತ್ರ: ನೆಮ್ಮದಿ ಕೇಂದ್ರಕ್ಕೆ ಹೆಚ್ಚುವರಿ ಸಿಬ್ಬಂದಿ ನಿಯೋಜಿಸಿ

ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲ್ಲೂಕು ಕಚೇರಿ ಆಡಳಿತ ಸೌಧದಲ್ಲಿ ಇರುವ ನೆಮ್ಮದಿ ಕೇಂದ್ರದ ಮೂಲಕ ಜಾತಿ ಪ್ರಮಾಣ ಪತ್ರ, ಆದಾಯ…

5 mins ago

ಓದುಗರ ಪತ್ರ: ಆಹಾರ ಸರಬರಾಜಿಗೆ ಕಪ್ಪು ಪ್ಲಾಸ್ಟಿಕ್ ಡಬ್ಬಿಗಳನ್ನು ನಿಷೇಧಿಸಿ

ನಗರ ಪ್ರದೇಶಗಳ ಹೋಟೆಲ್‌ಗಳಲ್ಲಿ ನೀಡಲಾಗುವ ಆಹಾರ ಪಾರ್ಸೆಲ್‌ಗಳು ಹಾಗೂ ಆನ್ ಲೈನ್ ಮೂಲಕ ಸರಬರಾಜಾಗುವ ಶೇ.೯೦ ಕ್ಕಿಂತ ಹೆಚ್ಚು ಆಹಾರ…

7 mins ago

ಓದುಗರ ಪತ್ರ: ಅಧಿಕಾರಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಕ್ರಿಯಾಶೀಲವಾಗಲಿ

ಸಾಮಾಜಿಕ ಮಾಧ್ಯಮ ಬಳಕೆದಾರರು ಬೆಂಗಳೂರಿನ ನಂತರ ಅತಿ ಹೆಚ್ಚು ಕ್ರಿಯಾಶೀಲರಾಗಿರುವುದು ಮೈಸೂರು ನಗರದಲ್ಲಿ. ಆದರೆ ಬೇಸರದ ಸಂಗತಿ ಎಂದರೆ ಇಲ್ಲಿನ…

9 mins ago

ಓದುಗರ ಪತ್ರ: ಎಸ್‌ಐಆರ್: ಸಂಪೂರ್ಣ ಮಾಹಿತಿ ನೀಡಿ

ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್)ಪ್ರಕ್ರಿಯೆ ಜೂ.೩೦ರಿಂದ ಆರಂಭವಾಗಿದೆ. ಆದರೆ ಮತದಾರರು ಈ ಪ್ರಕ್ರಿಯೆಯಲ್ಲಿ ಯಾವ ದಾಖಲೆಗಳನ್ನು…

11 mins ago

ಅನನ್ಯಾಳ ಬದುಕು ಬದಲಾಯಿಸಿದ 20 ರೂಪಾಯಿ ನೋಟು

ಪಂಜು ಗಂಗೊಳ್ಳಿ  ಬಡಕಟ್ಟು ಜನರಿಗೆ ಅಕ್ಷರ ಕಲಿಸಿ ಬದುಕು ರೂಪಿಸಿದ ಕರುಣಾಮಯಿ ೧೯೯೦ರಲ್ಲಿ ಅಸ್ಸಾಮಿನ ಹೊಜಾಯ್ ಜಿಲ್ಲೆಯ ಲುಮ್ಡಿಂಗ್ ಗ್ರಾಮದ…

14 mins ago