Andolana originals

ಕಾವೇರಿ ನದಿ ದಂಡೆಯಲ್ಲಿ ಹೆಚ್ಚುತ್ತಿರುವ ವಾಮಾಚಾರ

ಭೇರ್ಯ ಮಹೇಶ್

ಮಡಕೆ, ಕುಡಿಕೆ, ನಿಂಬೆಹಣ್ಣು, ಕುಂಕುಮ, ರಾಶಿ ಹೂಗಳನ್ನು ಬಿಸಾಡುತ್ತಿರುವುದರಿಂದ ನದಿ ಕಲುಷಿತ ಆರೋಪ 

ಕೆ.ಆರ್.ನಗರ: ನದಿಗಳ ಸಂರಕ್ಷಣೆಗಾಗಿ ಹಲವು ರೀತಿಯಲ್ಲಿ ಅಭಿಯಾನಗಳು ನಡೆಯುತ್ತಿವೆ. ನದಿಗಳ ಸ್ವಚ್ಛತೆಗಾಗಿ ಸರ್ಕಾರ, ಸ್ವಯಂ ಸೇವಾ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಇಂತಹ ಸಂದರ್ಭದಲ್ಲಿ ಪಟ್ಟಣದ ಹೊರವಲಯದಲ್ಲಿರುವ ಹಳೇ ಎಡತೊರೆಯಲ್ಲಿ ಹರಿಯುವ ಕಾವೇರಿ ನದಿ ಆವರಣದಲ್ಲಿ ಮಾಟ, ಮಂತ್ರ, ವಾಮಾಚಾರ ವಿಜೃಂಭಿಸುತ್ತಿದ್ದರೂ ಪುರಸಭೆ ಮತ್ತು ತಾಲ್ಲೂಕು ಆಡಳಿತ ಇತ್ತ ಗಮನಿಸದೆ ಇರುವುದು ಅಚ್ಚರಿಯ ಸಂಗತಿಯಾಗಿದೆ.

ಸಾಲಿಗ್ರಾಮ ಮತ್ತು ಕೆ.ಆರ್.ನಗರ ಅವಳಿ ತಾಲ್ಲೂಕುಗಳಲ್ಲಿ ಹಾದು ಹೋಗಿರುವ ಕಾವೇರಿ ನದಿ ಮೇಲೆ ಹೆಚ್ಚು ಜನ ಅವಲಂಬಿತ ರಾಗಿದ್ದಾರೆ. ಕೃಷಿಗೂ ನೀರು ಬಳಕೆಯಾಗುತ್ತಿದೆ. ಆದರೆ, ನದಿ ಈಗ ವಿವಿಧ ರೀತಿಯಲ್ಲಿ ಕಲುಷಿತಗೊಳ್ಳುತ್ತಿರುವುದು ಪರಿಸರಪ್ರಿಯರಲ್ಲಿ ಬೇಸರ ಮೂಡಿಸಿದೆ.

ಹಳೇ ಎಡತೊರೆಯಲ್ಲಿ ಹರಿಯುವ ಕಾವೇರಿ ನದಿ ದಂಡೆಯಲ್ಲಿ ನದಿಯ ಉದ್ದಗಲಕ್ಕೂ ವಾಮಾಚಾರಕ್ಕೆ ಬಳಸುವ ಮಡಕೆ, ಕುಡಿಕೆ, ನಿಂಬೆಹಣ್ಣು, ಬಣ್ಣ, ಬಣ್ಣದ ಕುಂಕುಮ, ರಾಶಿ, ರಾಶಿ ಹೂ ಇತ್ಯಾದಿ ಪರಿಕರಗಳು ರಾರಾಜಿಸುತ್ತಿವೆ. ಆಧುನಿಕತೆ ಎಷ್ಟೇ ಬೆಳೆದರೂ ವಾಮಾಚಾರದಂತಹ ಕೃತ್ಯಗಳು ಇಂದಿಗೂ ನಡೆಯುತ್ತಿರುವುದು ವಿಪರ್ಯಾಸ. ಹಳೇ ಎಡತೊರೆ ಕಾವೇರಿ ನದಿಯ ದಂಡೆಯಲ್ಲಿ ಶ್ರೀ ಮೀನಾಕ್ಷಿ ಸಮೇತ ಅರ್ಕೇಶ್ವರ ಸ್ಚಾಮಿ ದೇವಾಲಯ ಇದೆ. ನದಿಗೆ ಹೊಂದಿಕೊಂಡಂತೆ ಇರುವ ಕಲ್ಲಿನ ಕಂಬಗಳಿಂದ ನಿರ್ಮಾಣವಾಗಿರುವ ಮಂಟಪಗಳಲ್ಲಿ ಹಾಗೂ ಸೋಪಾನಕಟ್ಟೆ ಸೇರಿದಂತೆ ಸೇತುವೆ ಕೆಳಭಾಗದಲ್ಲಿ ನಿಂಬೆಕಾಯಿ, ಕುಂಕುಮ, ಕರ್ಪೂರ, ದೇವರ ಫೋಟೋ, ದಾರ, ಅರಿಶಿನ, ರವಿಕೆ, ತೆಂಗಿನ ಕಾಯಿ, ಮೆಣಸಿನಕಾಯಿಗಳು ರಾಶಿ ರಾಶಿ ಬಿದ್ದಿವೆ.

ನದಿ ಪಕ್ಕದ ಕಲ್ಲುಗಳ ಮೇಲೆ ವಿಚಿತ್ರವಾದ ಪೂಜೆಗಳು ನಡೆದಿರುವ ಕುರುಹುಗಳು ಕಂಡು ಬರುತ್ತಿವೆ. ಪೂಜೆಗೆ ಬಳಸುವ ಸಾಮಗ್ರಿಗಳನ್ನು ನದಿಗೆ ಎಸೆಯುವುದರಿಂದ ನದಿಯ ಒಡಲು ದಿನೇ ದಿನೇ ಕಲುಷಿತಗೊಳ್ಳುತ್ತಿದೆ. ಕಾವೇರಿ ನದಿಗೆ ಅಡ್ಡಲಾಗಿ ಹಾಸನ-ಮೈಸೂರು ರಸ್ತೆಯಲ್ಲಿ ಸೇತುವೆ ನಿರ್ಮಿಸಲಾಗಿದ್ದು, ಸೇತುವೆ ಕೆಳಗೆ ವಾಮಾಚಾರದ ಸಾಮಗ್ರಿಗಳ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಪ್ರತಿದಿನ ರಾತ್ರಿ ಕತ್ತಲಾಗುತ್ತಿದ್ದಂತೆ ಬರುವ ಜನರು ಮಾಟ ಮಂತ್ರದ ಸರಕುಗಳನ್ನು ಅಲ್ಲಿ ಎಸೆಯುತ್ತಿದ್ದಾರೆ. ಕೆ.ಆರ್.ಎಸ್. ಜಲಾಶಯದಲ್ಲಿ ನೀರು ಇರುವುದರಿಂದ ಹಳೇ ಎಡತೊರೆವರೆಗೆ ಹಿನ್ನೀರಿನ ಸಂಗ್ರಹವಿದೆ.

” ವಾಮಾಚಾರಕ್ಕೆ ಬಳಸುವ ಮಡಕೆ, ಕುಡಿಕೆ, ಬಟ್ಟೆಗಳು ಸೇರಿದಂತೆ ದೇವರ ಗಾಜಿನ ಫೋಟೋ ಗಳನ್ನು ನದಿಗೆ ಎಸೆಯುತ್ತಿರುವುದರಿಂದ ನೀರಿನಲ್ಲಿ ಹೆಜ್ಜೆ ಇರಿಸಿದರೆ ಗಾಜಿನ ಚೂರುಗಳೇ ಚುಚ್ಚುತ್ತವೆ. ಇದೇ ರೀತಿ ಮುಂದುವರಿದರೆ ಕಾವೇರಿ ನದಿ ಸಂಪೂರ್ಣ ಕಲುಷಿತವಾಗುತ್ತದೆ. ಪುರಸಭೆ ಅಥವಾ ತಾಲ್ಲೂಕು ಆಡಳಿತ ಎಚ್ಚೆತ್ತು ಗಮನ ಹರಿಸಬೇಕಿದೆ.”

-ಜನಾರ್ಧನ್ (ಜಾನಿ), ಮುಖ್ಯ ಶಿಕ್ಷಕ, ಕುವೆಂಪು ಬಡಾವಣೆ ನಿವಾಸಿ, ಕೆ.ಆರ್.ನಗರ

 

 

ಆಂದೋಲನ ಡೆಸ್ಕ್

Recent Posts

ರಷ್ಯಾ ಮೇಲೆ ಉಕ್ರೇನ್‌ ಭೀಕರ ಡ್ರೋನ್‌ ದಾಳಿ: 4 ಮಂದಿ ಸಾವು

ಮಾಸ್ಕೋ: ಉಕ್ರೇನ್‌ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್‌ ದಾಳಿ ನಡೆಸಿದೆ. ಈ ವೈಮಾನಿಕ…

4 hours ago

ಮೈಸೂರಿನಲ್ಲಿ ಜನರೊಂದಿಗೆ ಜನತಾದಳ ಕಾರ್ಯಕ್ರಮ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…

5 hours ago

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…

5 hours ago

ಕಳೆದ ಮೂರು ದಿನಗಳಿಂದ ಮಹದೇಶ್ವರ ಬೆಟ್ಟಕ್ಕೆ ಲಕ್ಷಾಂತದ ಮಂದಿ ಭಕ್ತರು ಭೇಟಿ

ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…

5 hours ago

ಕಾಡಿನಲ್ಲಿ ಅಕ್ರಮವಾಗಿ ಚರ್ಚ್‌ ನಿರ್ಮಾಣ: 40ಕ್ಕೂ ಹೆಚ್ಚು ಜನರ ಬಂಧನ

ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್‌ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…

6 hours ago

ಹಾರ್ಮುಜ್‌ ದಾಟಿ ಸುರಕ್ಷಿತವಾಗಿ ಭಾರತಕ್ಕೆ ಬಂತು 20,000 ಟನ್‌ ಎಲ್‌ಪಿಜಿ ಟ್ಯಾಂಕರ್‌

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್‍ಪಿಜಿಯನ್ನು ಹೊತ್ತ…

7 hours ago