ಇಂದು ವರದಿ ನೀಡಲು ಕ್ಷೆತ್ರ ಶಿಕ್ಷಣಾಧಿಕಾರಿಗೆ ಸೂಚನೆ
ನಂಜನಗೂಡು: ತಾಲ್ಲೂಕಿನ ಶಾಲೆಯೊಂದರಲ್ಲಿ ಹುಳು ಹಿಡಿದ ಅಕ್ಕಿ, ಗೋಧಿಗಳನ್ನು ಬಿಸಿ ಯೂಟಕ್ಕೆ ಉಪಯೋಗಿಸಲಾಗುತ್ತಿರುವ ಕುರಿತು ಭಾನುವಾರದ ‘ಆಂದೋಲನ’ದಿನಪತ್ರಿಕೆಯ ಮುಖಪುಟದಲ್ಲಿ ವರದಿ ಪ್ರಕಟವಾಗಿದ್ದನ್ನು ಗಮನಿಸಿದ ಜಿಪಂ ಸಿಇಒ ಎಸ್.ಯುಕೇಶ್ ಕುಮಾರ್, ಡಿಸಿಪಿಐ ಜವರೇಗೌಡ ಅವರು ಭಾನುವಾರ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಮಾರ್ಚ್ನಲ್ಲಿ ಸರಬರಾಜಾದ ಅಕ್ಕಿ, ಗೋಧಿ ಹುಳು ಹಿಡಿದಿದ್ದರೆ ಅದನ್ನೇಕೆ ಬದ ಲಾಯಿಸಿಲ್ಲ ಎಂದು ಪ್ರಶ್ನಿಸಿದ ಈ ಅಧಿಕಾರಿಗಳು, ತಾಲ್ಲೂಕಿನಲ್ಲಿ ಎಲ್ಲೆಲ್ಲಿ ದಿನಸಿ ಹುಳು ಹಿಡಿದಿವೆಯೋ ಅವುಗಳನ್ನು ವಾಪಸ್ ಮಾಡಿ ಆ ಶಾಲೆಗಳಿಗೆ ಗೋಡೌನ್ನಿಂದ ಹೊಸದಾಗಿ ಬಿಸಿಯೂಟದ ಸಾಮಗ್ರಿ ನೀಡಬೇಕು. ಹೊಮ್ಮ ಶಾಲೆಯಲ್ಲಿ ಹುಳು ಹಿಡಿದ ಬಿಸಿಯೂಟದ ಕುರಿತು ಸಮಗ್ರವಾಗಿ ಸೋಮವಾರವೇ ವರದಿ ನೀಡಬೇಕು ಎಂದು ಸೂಚಿಸಿದ್ದಾರೆ.
ಹೊಮ್ಮ ಶಾಲೆಯಲ್ಲಿ ಹೊಸದಾಗಿ ಸರಬರಾಜಾದ ಗೋಧಿ, ಅಕ್ಕಿಯನ್ನು ಬಿಸಿಯೂಟಕ್ಕೆ ಉಪಯೋಗಿಸದೆ, ಹಲವು ತಿಂಗಳುಗಳ ಹಿಂದೆ ಸರಬರಾಜಾದ ಧಾನ್ಯಗಳನ್ನು ಹುಳು ಹಿಡಿದ ಮೇಲೆ ಬಳಸಿದ್ದು ತಪ್ಪು. ಅದಕ್ಕೆ ಅಲ್ಲಿನ ಮುಖ್ಯಶಿಕ್ಷಕರೇ ಹೊಣೆ ಎಂದು ತಾಲ್ಲೂಕಿನ ಅಕ್ಷರ ದಾಸೋಹದ ಅಧಿಕಾರಿ ಸೋಮಶೇಖರ್ ಪತ್ರಿಕೆಗೆ ಪ್ರತಿಕ್ರಿಯಿಸಿದರು.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…