ಇಂದು ವರದಿ ನೀಡಲು ಕ್ಷೆತ್ರ ಶಿಕ್ಷಣಾಧಿಕಾರಿಗೆ ಸೂಚನೆ
ನಂಜನಗೂಡು: ತಾಲ್ಲೂಕಿನ ಶಾಲೆಯೊಂದರಲ್ಲಿ ಹುಳು ಹಿಡಿದ ಅಕ್ಕಿ, ಗೋಧಿಗಳನ್ನು ಬಿಸಿ ಯೂಟಕ್ಕೆ ಉಪಯೋಗಿಸಲಾಗುತ್ತಿರುವ ಕುರಿತು ಭಾನುವಾರದ ‘ಆಂದೋಲನ’ದಿನಪತ್ರಿಕೆಯ ಮುಖಪುಟದಲ್ಲಿ ವರದಿ ಪ್ರಕಟವಾಗಿದ್ದನ್ನು ಗಮನಿಸಿದ ಜಿಪಂ ಸಿಇಒ ಎಸ್.ಯುಕೇಶ್ ಕುಮಾರ್, ಡಿಸಿಪಿಐ ಜವರೇಗೌಡ ಅವರು ಭಾನುವಾರ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಮಾರ್ಚ್ನಲ್ಲಿ ಸರಬರಾಜಾದ ಅಕ್ಕಿ, ಗೋಧಿ ಹುಳು ಹಿಡಿದಿದ್ದರೆ ಅದನ್ನೇಕೆ ಬದ ಲಾಯಿಸಿಲ್ಲ ಎಂದು ಪ್ರಶ್ನಿಸಿದ ಈ ಅಧಿಕಾರಿಗಳು, ತಾಲ್ಲೂಕಿನಲ್ಲಿ ಎಲ್ಲೆಲ್ಲಿ ದಿನಸಿ ಹುಳು ಹಿಡಿದಿವೆಯೋ ಅವುಗಳನ್ನು ವಾಪಸ್ ಮಾಡಿ ಆ ಶಾಲೆಗಳಿಗೆ ಗೋಡೌನ್ನಿಂದ ಹೊಸದಾಗಿ ಬಿಸಿಯೂಟದ ಸಾಮಗ್ರಿ ನೀಡಬೇಕು. ಹೊಮ್ಮ ಶಾಲೆಯಲ್ಲಿ ಹುಳು ಹಿಡಿದ ಬಿಸಿಯೂಟದ ಕುರಿತು ಸಮಗ್ರವಾಗಿ ಸೋಮವಾರವೇ ವರದಿ ನೀಡಬೇಕು ಎಂದು ಸೂಚಿಸಿದ್ದಾರೆ.
ಹೊಮ್ಮ ಶಾಲೆಯಲ್ಲಿ ಹೊಸದಾಗಿ ಸರಬರಾಜಾದ ಗೋಧಿ, ಅಕ್ಕಿಯನ್ನು ಬಿಸಿಯೂಟಕ್ಕೆ ಉಪಯೋಗಿಸದೆ, ಹಲವು ತಿಂಗಳುಗಳ ಹಿಂದೆ ಸರಬರಾಜಾದ ಧಾನ್ಯಗಳನ್ನು ಹುಳು ಹಿಡಿದ ಮೇಲೆ ಬಳಸಿದ್ದು ತಪ್ಪು. ಅದಕ್ಕೆ ಅಲ್ಲಿನ ಮುಖ್ಯಶಿಕ್ಷಕರೇ ಹೊಣೆ ಎಂದು ತಾಲ್ಲೂಕಿನ ಅಕ್ಷರ ದಾಸೋಹದ ಅಧಿಕಾರಿ ಸೋಮಶೇಖರ್ ಪತ್ರಿಕೆಗೆ ಪ್ರತಿಕ್ರಿಯಿಸಿದರು.
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…