ಇಂದು ವರದಿ ನೀಡಲು ಕ್ಷೆತ್ರ ಶಿಕ್ಷಣಾಧಿಕಾರಿಗೆ ಸೂಚನೆ
ನಂಜನಗೂಡು: ತಾಲ್ಲೂಕಿನ ಶಾಲೆಯೊಂದರಲ್ಲಿ ಹುಳು ಹಿಡಿದ ಅಕ್ಕಿ, ಗೋಧಿಗಳನ್ನು ಬಿಸಿ ಯೂಟಕ್ಕೆ ಉಪಯೋಗಿಸಲಾಗುತ್ತಿರುವ ಕುರಿತು ಭಾನುವಾರದ ‘ಆಂದೋಲನ’ದಿನಪತ್ರಿಕೆಯ ಮುಖಪುಟದಲ್ಲಿ ವರದಿ ಪ್ರಕಟವಾಗಿದ್ದನ್ನು ಗಮನಿಸಿದ ಜಿಪಂ ಸಿಇಒ ಎಸ್.ಯುಕೇಶ್ ಕುಮಾರ್, ಡಿಸಿಪಿಐ ಜವರೇಗೌಡ ಅವರು ಭಾನುವಾರ ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಮಾರ್ಚ್ನಲ್ಲಿ ಸರಬರಾಜಾದ ಅಕ್ಕಿ, ಗೋಧಿ ಹುಳು ಹಿಡಿದಿದ್ದರೆ ಅದನ್ನೇಕೆ ಬದ ಲಾಯಿಸಿಲ್ಲ ಎಂದು ಪ್ರಶ್ನಿಸಿದ ಈ ಅಧಿಕಾರಿಗಳು, ತಾಲ್ಲೂಕಿನಲ್ಲಿ ಎಲ್ಲೆಲ್ಲಿ ದಿನಸಿ ಹುಳು ಹಿಡಿದಿವೆಯೋ ಅವುಗಳನ್ನು ವಾಪಸ್ ಮಾಡಿ ಆ ಶಾಲೆಗಳಿಗೆ ಗೋಡೌನ್ನಿಂದ ಹೊಸದಾಗಿ ಬಿಸಿಯೂಟದ ಸಾಮಗ್ರಿ ನೀಡಬೇಕು. ಹೊಮ್ಮ ಶಾಲೆಯಲ್ಲಿ ಹುಳು ಹಿಡಿದ ಬಿಸಿಯೂಟದ ಕುರಿತು ಸಮಗ್ರವಾಗಿ ಸೋಮವಾರವೇ ವರದಿ ನೀಡಬೇಕು ಎಂದು ಸೂಚಿಸಿದ್ದಾರೆ.
ಹೊಮ್ಮ ಶಾಲೆಯಲ್ಲಿ ಹೊಸದಾಗಿ ಸರಬರಾಜಾದ ಗೋಧಿ, ಅಕ್ಕಿಯನ್ನು ಬಿಸಿಯೂಟಕ್ಕೆ ಉಪಯೋಗಿಸದೆ, ಹಲವು ತಿಂಗಳುಗಳ ಹಿಂದೆ ಸರಬರಾಜಾದ ಧಾನ್ಯಗಳನ್ನು ಹುಳು ಹಿಡಿದ ಮೇಲೆ ಬಳಸಿದ್ದು ತಪ್ಪು. ಅದಕ್ಕೆ ಅಲ್ಲಿನ ಮುಖ್ಯಶಿಕ್ಷಕರೇ ಹೊಣೆ ಎಂದು ತಾಲ್ಲೂಕಿನ ಅಕ್ಷರ ದಾಸೋಹದ ಅಧಿಕಾರಿ ಸೋಮಶೇಖರ್ ಪತ್ರಿಕೆಗೆ ಪ್ರತಿಕ್ರಿಯಿಸಿದರು.
ಪುನೀತ್ ಮಡಿಕೇರಿ ೨೦೨೭ರ ಏಪ್ರಿಲ್-ಮೇನಲ್ಲಿ ನಡೆಯಲಿರುವ ಹಾಕಿ ಉತ್ಸವಕ್ಕೆ ಸಿದ್ಧತೆ; ಟರ್ಫ್, ಹೊನಲು ಬೆಳಕಿನ ಪಂದ್ಯಾವಳಿಗೆ ಚಿಂತನೆ ಮಡಿಕೇರಿ: ೨೬ನೇ…
ಮಂಜು ಕೋಟೆ ಮೇವು, ಕುಡಿಯುವ ನೀರಿಗಾಗಿ ಬರುವ ವನ್ಯಪ್ರಾಣಿಗಳನ್ನು ಕಣ್ತುಂಬಿಕೊಳ್ಳುತ್ತಿರುವ ಪ್ರವಾಸಿಗರು ಎಚ್.ಡಿ.ಕೋಟೆ: ಬಿಸಿಲಿನ ತಾಪಮಾನದಿಂದ ಮೇವು ಮತ್ತು ಕುಡಿಯುವ…
೧೦೦ ಕಿ.ಮೀ.ಹೆಚ್ಡಿಪಿಇ ಪೈಪ್ ಅಳವಡಿಕೆ ಪ್ರಗತಿಯಲ್ಲಿ; ಕಾವೇರಿ ನೀರು ಪೂರೈಸಲು ನಗರಸಭೆ ಕ್ರಮ ಪ್ರಸಾದ್ ಲಕ್ಕೂರು ಚಾಮರಾಜನಗರ: ನಗರದಲ್ಲಿ…
ಗಿರೀಶ್ ಹುಣಸೂರು ರಾಜ್ಯದ ೫.೫೫ ಕೋಟಿ ಮತದಾರರ ಪರಿಷ್ಕರಣೆ ನಡೆಸಲಿರುವ ಬಿಎಲ್ಒಗಳು ಮೈಸೂರು:ಕಳೆದ ಎಲೆಕ್ಷನ್ನಲ್ಲಿ ಇದೇ ಬೂತ್ನಲ್ಲಿ ವೋಟ್ ಮಾಡಿದ್ದೆ,…
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…