Andolana originals

ಐದು ವಿಮಾನ ಸಂಪರ್ಕಕ್ಕೆ ಯದುವೀರ್‌ ಮನವಿ

ಮೈಸೂರು: ಮೈಸೂರು ನಗರದಿಂದ ಹೊಸದಾಗಿ 5 ವಿಮಾನಗಳ ಮಾರ್ಗಗಳನ್ನು ವಿಸ್ತರಿಸುವಂತೆ ಕೋರಿ ವಿಮಾನಯಾನ ಸಚಿವ ಕಿಂಜ ರಾಪೂ ರಾಮಮೋಹನ್ ನಾಯ್ಡು ಅವರಲ್ಲಿ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದರು.

ನಗರದ ಸರ್ವತೋಮುಖ ಬೆಳವಣಿಗೆ, ಪ್ರವಾಸೋದ್ಯಮ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಮೈಸೂರು ವಿಮಾನ ನಿಲ್ದಾಣ ಸಮೀಪದ ನಗರಗಳಿಗೆ ವಿಮಾನ ಸಂಪರ್ಕ ಕಲ್ಪಿಸಿದಲ್ಲಿ ಅಭಿವೃದ್ಧಿಗೆ ಸಹಕಾರಿಯಾಗಿರುತ್ತದೆ. ಸದ್ಯಕ್ಕೆ ಮೈಸೂರು ವಿಮಾನ ನಿಲ್ದಾಣದಿಂದ 2 ವಿಮಾನಗಳು ಮಾತ್ರ ಹಾರಾಟ ನಡೆಸು ತ್ತಿವೆ. ಇದು ಸ್ಥಳೀಯರು, ಪ್ರವಾಸಿಗರು, ವ್ಯಾಪಾರಸ್ಥರಿಗೆ ಹೆಚ್ಚು ಅನುಕೂಲವಾಗಿಲ್ಲ ಎಂದು ತಿಳಿಸಿದ್ದಾರೆ.

ನಗರದಲ್ಲಿ ಸುಸಜ್ಜಿತ ವಿಮಾನ ನಿಲ್ದಾಣವಿದ್ದರೂ ವಿಮಾನಗಳೇ ಇಲ್ಲದ ಕಾರಣ ಉಪಯುಕ್ತವಾಗಿಲ್ಲ. ವಿಮಾನಗಳನ್ನು ರದ್ದು ಮಾಡಿರುವುದರಿಂದ ತೊಂದರೆಯಾಗಿದೆ. ಪ್ರವಾಸೋದ್ಯಮಕ್ಕೂ ಬಿಸಿ ತಟ್ಟಿದ್ದು, ಮೈಸೂರಿನ ಆರ್ಥಿಕ ಅಭಿವೃದ್ಧಿಗೆ ಧಕ್ಕೆಯಾಗಿದೆ ಎಂದು ತಿಳಿಸಿದ್ದಾರೆ. ಮೈಸೂರು ಪಾರಂಪರಿಕ ನಗರವಾಗಿದ್ದು, ಪ್ರವಾಸೋದ್ಯಮ ಇಲ್ಲಿನ ಪ್ರಮುಖ ಉದ್ಯಮವಾಗಿ ಬೆಳೆಯುತ್ತಿದೆ. ಇದಕ್ಕೆ ಪೂರಕವಾಗಿ ಮೈಸೂರಿನಿಂದ ಕೊಚ್ಚಿನ್, ಗೋವಾ, ಮುಂಬೈ, ಹೈದರಾಬಾದ್ ಹಾಗೂ ವಿಜಯವಾಡ ನಗರಗಳಿಗೆ ವಿಮಾನಯಾನ ಸಂಪರ್ಕ ಕಲ್ಪಿಸಬೇಕು ಎಂದು ಕೇಂದ್ರ ಸಚಿವರಿಗೆ ಪತ್ರದ ಮುಖಾಂತರ ಮನವಿ ಮಾಡಿರುವುದಾಗಿ ಯದುವೀರ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

 

andolana

Recent Posts

ತಿ.‌ ನರಸೀಪುರ: ಬೈಕ್ ಡಿಕ್ಕಿ ಚಿರತೆ ಸಾವು

ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…

4 hours ago

ತಿರುಪತಿ ಲಡ್ಡು: ತುಪ್ಪದಲ್ಲಿ ಪ್ರಾಣಿ ಕೊಬ್ಬು ಬಳಕೆ

ಅಮರಾವತಿ: ಜಗತ್‌ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…

5 hours ago

ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ಖಾನ್‌ ತಂದೆಗೆ ಜೀವ ಬೆದರಿಕೆ: ಮಹಿಳೆ ಸೇರಿ ಇಬ್ಬರ ಬಂಧನ

ಮುಂಬೈ:‌ ಬಾಲಿವುಡ್‌ನ ಭಾಯಿಜಾನ್ ಸಲ್ಮಾನ್‌ ಖಾನ್‌ ಅವರ ತಂದೆಗೆ ಬುರ್ಖಾ ಧರಿಸಿದ್ದ ಮಹಿಳೆ ಹಾಗೂ ಇನ್ನೊರ್ವ ವ್ಯಕ್ತಿ ಜೀವ ಬೆದರಿಕೆ…

6 hours ago

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ…

7 hours ago

ನುಡಿ ಹಬ್ಬಕ್ಕೆ ಆಹ್ವಾನಿಸಲು ಸಿದ್ಧವಾಗಿದೆ ಕನ್ನಡ ರಥ

ಮಂಡ್ಯ: ಜಿಲ್ಲೆಯಲ್ಲಿ ಡಿಸೆಂಬರ್ 20, 21, 22 ರಂದು ನಡೆಯಲಿರುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ…

7 hours ago

ಬಸ್‌ನಲ್ಲಿ ಪ್ರಯಾಣ: ಮಹಿಳೆಯರಿಂದ ಶಕ್ತಿಯೋಜನೆಯ ಅಭಿಪ್ರಾಯ ಪಡೆದ ಪುಷ್ಪ ಅಮರನಾಥ್‌

ಮೈಸೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆ ಫಲಾನುಭವಿಗಳ ಅಭಿಪ್ರಾಯ ಸಂಗ್ರಹಿಸಲು ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷೆಯಾದ ಡಾ…

7 hours ago