ಮೈಸೂರು: ಮೈಸೂರು ನಗರದಿಂದ ಹೊಸದಾಗಿ 5 ವಿಮಾನಗಳ ಮಾರ್ಗಗಳನ್ನು ವಿಸ್ತರಿಸುವಂತೆ ಕೋರಿ ವಿಮಾನಯಾನ ಸಚಿವ ಕಿಂಜ ರಾಪೂ ರಾಮಮೋಹನ್ ನಾಯ್ಡು ಅವರಲ್ಲಿ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದರು.
ನಗರದ ಸರ್ವತೋಮುಖ ಬೆಳವಣಿಗೆ, ಪ್ರವಾಸೋದ್ಯಮ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಮೈಸೂರು ವಿಮಾನ ನಿಲ್ದಾಣ ಸಮೀಪದ ನಗರಗಳಿಗೆ ವಿಮಾನ ಸಂಪರ್ಕ ಕಲ್ಪಿಸಿದಲ್ಲಿ ಅಭಿವೃದ್ಧಿಗೆ ಸಹಕಾರಿಯಾಗಿರುತ್ತದೆ. ಸದ್ಯಕ್ಕೆ ಮೈಸೂರು ವಿಮಾನ ನಿಲ್ದಾಣದಿಂದ 2 ವಿಮಾನಗಳು ಮಾತ್ರ ಹಾರಾಟ ನಡೆಸು ತ್ತಿವೆ. ಇದು ಸ್ಥಳೀಯರು, ಪ್ರವಾಸಿಗರು, ವ್ಯಾಪಾರಸ್ಥರಿಗೆ ಹೆಚ್ಚು ಅನುಕೂಲವಾಗಿಲ್ಲ ಎಂದು ತಿಳಿಸಿದ್ದಾರೆ.
ನಗರದಲ್ಲಿ ಸುಸಜ್ಜಿತ ವಿಮಾನ ನಿಲ್ದಾಣವಿದ್ದರೂ ವಿಮಾನಗಳೇ ಇಲ್ಲದ ಕಾರಣ ಉಪಯುಕ್ತವಾಗಿಲ್ಲ. ವಿಮಾನಗಳನ್ನು ರದ್ದು ಮಾಡಿರುವುದರಿಂದ ತೊಂದರೆಯಾಗಿದೆ. ಪ್ರವಾಸೋದ್ಯಮಕ್ಕೂ ಬಿಸಿ ತಟ್ಟಿದ್ದು, ಮೈಸೂರಿನ ಆರ್ಥಿಕ ಅಭಿವೃದ್ಧಿಗೆ ಧಕ್ಕೆಯಾಗಿದೆ ಎಂದು ತಿಳಿಸಿದ್ದಾರೆ. ಮೈಸೂರು ಪಾರಂಪರಿಕ ನಗರವಾಗಿದ್ದು, ಪ್ರವಾಸೋದ್ಯಮ ಇಲ್ಲಿನ ಪ್ರಮುಖ ಉದ್ಯಮವಾಗಿ ಬೆಳೆಯುತ್ತಿದೆ. ಇದಕ್ಕೆ ಪೂರಕವಾಗಿ ಮೈಸೂರಿನಿಂದ ಕೊಚ್ಚಿನ್, ಗೋವಾ, ಮುಂಬೈ, ಹೈದರಾಬಾದ್ ಹಾಗೂ ವಿಜಯವಾಡ ನಗರಗಳಿಗೆ ವಿಮಾನಯಾನ ಸಂಪರ್ಕ ಕಲ್ಪಿಸಬೇಕು ಎಂದು ಕೇಂದ್ರ ಸಚಿವರಿಗೆ ಪತ್ರದ ಮುಖಾಂತರ ಮನವಿ ಮಾಡಿರುವುದಾಗಿ ಯದುವೀರ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಮಂಡ್ಯ : ಜಲ ಶಕ್ತಿ ಜನ ಭಾಗೀದಾರಿ, ಮಹಾತ್ಮ ಗಾಂಧಿ ನರೇಗಾ, ತೆರಿಗೆ ವಸೂಲಾತಿ ಸೇರಿದಂತೆ ಇತರೆ ಯೋಜನೆ ಮತ್ತು…
ಸೋಮವಾರಪೇಟೆ : ಮರದ ನಾಟಗಳನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನವನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ಹೊಸಳ್ಳಿ ಗ್ರಾಮದಲ್ಲಿ ವಶಪಡಿಸಿಕೊಂಡಿದ್ದಾರೆ. ಹುದುಗೂರು…
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೈಲಿನಲ್ಲಿ ಇದ್ರೂ ಗುರುವಾರ ಬಿಡುಗಡೆಯಾದ ಅವರ ಅಭಿನಯದ ಡೆವಿಲ್…
ಮಳವಳ್ಳಿ : ವಿದ್ಯುತ್ ಸ್ಪರ್ಶಿಸಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಕಲ್ಕುಣಿ ಗ್ರಾಮದ ಬಳಿ ನಡೆದಿದ್ದು, ಸೆಸ್ಕ್ ಅಧಿಕಾರಿಗಳ…
ಹೊಸದಿಲ್ಲಿ : ದೇಶದಾದ್ಯಂತ ನಡೆಸಲು ಉದ್ದೇಶಿಸಿರುವ ೨೦೨೭ರ ಜನಗಣತಿಗೆ ರೂ. ೧೧,೭೧೮ ಕೋಟಿ ಅನುದಾನ ನೀಡಲು ಕೇಂದ್ರ ಸಚಿವ ಸಂಪುಟವು…
ಮುಂಬೈ : ಇಂಡಿಗೊ ವಿಮಾನ ಕಾರ್ಯಾಚರಣೆ ವ್ಯತ್ಯಯ ಪ್ರಕರಣ ಸಂಬಂಧ ನಾಲ್ವರು ವಿಮಾನ ನಿರ್ವಹಣಾ ಇನ್ಸ್ಪೆಕ್ಟರ್ಗಳನ್ನು (ಎಫ್.ಒ.ಐ) ನಾಗರಿಕ ವಿಮಾನಯಾನ…