ಮೈಸೂರು: ಮೈಸೂರು ನಗರದಿಂದ ಹೊಸದಾಗಿ 5 ವಿಮಾನಗಳ ಮಾರ್ಗಗಳನ್ನು ವಿಸ್ತರಿಸುವಂತೆ ಕೋರಿ ವಿಮಾನಯಾನ ಸಚಿವ ಕಿಂಜ ರಾಪೂ ರಾಮಮೋಹನ್ ನಾಯ್ಡು ಅವರಲ್ಲಿ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದರು.
ನಗರದ ಸರ್ವತೋಮುಖ ಬೆಳವಣಿಗೆ, ಪ್ರವಾಸೋದ್ಯಮ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಮೈಸೂರು ವಿಮಾನ ನಿಲ್ದಾಣ ಸಮೀಪದ ನಗರಗಳಿಗೆ ವಿಮಾನ ಸಂಪರ್ಕ ಕಲ್ಪಿಸಿದಲ್ಲಿ ಅಭಿವೃದ್ಧಿಗೆ ಸಹಕಾರಿಯಾಗಿರುತ್ತದೆ. ಸದ್ಯಕ್ಕೆ ಮೈಸೂರು ವಿಮಾನ ನಿಲ್ದಾಣದಿಂದ 2 ವಿಮಾನಗಳು ಮಾತ್ರ ಹಾರಾಟ ನಡೆಸು ತ್ತಿವೆ. ಇದು ಸ್ಥಳೀಯರು, ಪ್ರವಾಸಿಗರು, ವ್ಯಾಪಾರಸ್ಥರಿಗೆ ಹೆಚ್ಚು ಅನುಕೂಲವಾಗಿಲ್ಲ ಎಂದು ತಿಳಿಸಿದ್ದಾರೆ.
ನಗರದಲ್ಲಿ ಸುಸಜ್ಜಿತ ವಿಮಾನ ನಿಲ್ದಾಣವಿದ್ದರೂ ವಿಮಾನಗಳೇ ಇಲ್ಲದ ಕಾರಣ ಉಪಯುಕ್ತವಾಗಿಲ್ಲ. ವಿಮಾನಗಳನ್ನು ರದ್ದು ಮಾಡಿರುವುದರಿಂದ ತೊಂದರೆಯಾಗಿದೆ. ಪ್ರವಾಸೋದ್ಯಮಕ್ಕೂ ಬಿಸಿ ತಟ್ಟಿದ್ದು, ಮೈಸೂರಿನ ಆರ್ಥಿಕ ಅಭಿವೃದ್ಧಿಗೆ ಧಕ್ಕೆಯಾಗಿದೆ ಎಂದು ತಿಳಿಸಿದ್ದಾರೆ. ಮೈಸೂರು ಪಾರಂಪರಿಕ ನಗರವಾಗಿದ್ದು, ಪ್ರವಾಸೋದ್ಯಮ ಇಲ್ಲಿನ ಪ್ರಮುಖ ಉದ್ಯಮವಾಗಿ ಬೆಳೆಯುತ್ತಿದೆ. ಇದಕ್ಕೆ ಪೂರಕವಾಗಿ ಮೈಸೂರಿನಿಂದ ಕೊಚ್ಚಿನ್, ಗೋವಾ, ಮುಂಬೈ, ಹೈದರಾಬಾದ್ ಹಾಗೂ ವಿಜಯವಾಡ ನಗರಗಳಿಗೆ ವಿಮಾನಯಾನ ಸಂಪರ್ಕ ಕಲ್ಪಿಸಬೇಕು ಎಂದು ಕೇಂದ್ರ ಸಚಿವರಿಗೆ ಪತ್ರದ ಮುಖಾಂತರ ಮನವಿ ಮಾಡಿರುವುದಾಗಿ ಯದುವೀರ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.
ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್ ಹೈಕೋರ್ಟ್ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…
ಮಂಡ್ಯ : ಬೋರ್ವೆಲ್, ಪಂಪ್ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…
ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…
ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…
ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…
ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…