Andolana originals

ಐದು ವಿಮಾನ ಸಂಪರ್ಕಕ್ಕೆ ಯದುವೀರ್‌ ಮನವಿ

ಮೈಸೂರು: ಮೈಸೂರು ನಗರದಿಂದ ಹೊಸದಾಗಿ 5 ವಿಮಾನಗಳ ಮಾರ್ಗಗಳನ್ನು ವಿಸ್ತರಿಸುವಂತೆ ಕೋರಿ ವಿಮಾನಯಾನ ಸಚಿವ ಕಿಂಜ ರಾಪೂ ರಾಮಮೋಹನ್ ನಾಯ್ಡು ಅವರಲ್ಲಿ ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿ ಮಾಡಿದರು.

ನಗರದ ಸರ್ವತೋಮುಖ ಬೆಳವಣಿಗೆ, ಪ್ರವಾಸೋದ್ಯಮ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಮೈಸೂರು ವಿಮಾನ ನಿಲ್ದಾಣ ಸಮೀಪದ ನಗರಗಳಿಗೆ ವಿಮಾನ ಸಂಪರ್ಕ ಕಲ್ಪಿಸಿದಲ್ಲಿ ಅಭಿವೃದ್ಧಿಗೆ ಸಹಕಾರಿಯಾಗಿರುತ್ತದೆ. ಸದ್ಯಕ್ಕೆ ಮೈಸೂರು ವಿಮಾನ ನಿಲ್ದಾಣದಿಂದ 2 ವಿಮಾನಗಳು ಮಾತ್ರ ಹಾರಾಟ ನಡೆಸು ತ್ತಿವೆ. ಇದು ಸ್ಥಳೀಯರು, ಪ್ರವಾಸಿಗರು, ವ್ಯಾಪಾರಸ್ಥರಿಗೆ ಹೆಚ್ಚು ಅನುಕೂಲವಾಗಿಲ್ಲ ಎಂದು ತಿಳಿಸಿದ್ದಾರೆ.

ನಗರದಲ್ಲಿ ಸುಸಜ್ಜಿತ ವಿಮಾನ ನಿಲ್ದಾಣವಿದ್ದರೂ ವಿಮಾನಗಳೇ ಇಲ್ಲದ ಕಾರಣ ಉಪಯುಕ್ತವಾಗಿಲ್ಲ. ವಿಮಾನಗಳನ್ನು ರದ್ದು ಮಾಡಿರುವುದರಿಂದ ತೊಂದರೆಯಾಗಿದೆ. ಪ್ರವಾಸೋದ್ಯಮಕ್ಕೂ ಬಿಸಿ ತಟ್ಟಿದ್ದು, ಮೈಸೂರಿನ ಆರ್ಥಿಕ ಅಭಿವೃದ್ಧಿಗೆ ಧಕ್ಕೆಯಾಗಿದೆ ಎಂದು ತಿಳಿಸಿದ್ದಾರೆ. ಮೈಸೂರು ಪಾರಂಪರಿಕ ನಗರವಾಗಿದ್ದು, ಪ್ರವಾಸೋದ್ಯಮ ಇಲ್ಲಿನ ಪ್ರಮುಖ ಉದ್ಯಮವಾಗಿ ಬೆಳೆಯುತ್ತಿದೆ. ಇದಕ್ಕೆ ಪೂರಕವಾಗಿ ಮೈಸೂರಿನಿಂದ ಕೊಚ್ಚಿನ್, ಗೋವಾ, ಮುಂಬೈ, ಹೈದರಾಬಾದ್ ಹಾಗೂ ವಿಜಯವಾಡ ನಗರಗಳಿಗೆ ವಿಮಾನಯಾನ ಸಂಪರ್ಕ ಕಲ್ಪಿಸಬೇಕು ಎಂದು ಕೇಂದ್ರ ಸಚಿವರಿಗೆ ಪತ್ರದ ಮುಖಾಂತರ ಮನವಿ ಮಾಡಿರುವುದಾಗಿ ಯದುವೀರ್ ಅವರು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

 

andolana

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

7 hours ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

10 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

10 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

11 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

13 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

14 hours ago