Andolana originals

ಕೆಆರ್‌ ನಗರ: ಮಲಗಿದ್ದಲ್ಲೇ ಸಾವನ್ನಪ್ಪಿದ ಯುವ ವೈದ್ಯ

ಕೆ. ಆರ್. ನಗರ: ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನ ಯುವಕರು, ಯುವತಿಯರು ಮತ್ತು ಮಕ್ಕಳು ಹೃದಯಾಘಾತಕ್ಕೆ ಒಳಗಾಗುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಯುವ ವೈದ್ಯರೊಬ್ಬರು ಮನೆಯಲ್ಲಿ ಮಲಗಿದ್ದ ವೇಳೆಯೇ ಹೃದಯ ಸ್ತಂಭನವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.

ಪಟ್ಟಣದ ಕಂಠೇನಹಳ್ಳಿ ನಿವಾಸಿ ಆನಂದ್ ಮತ್ತು ಪ್ರಭಾ ದಂಪತಿಯ ಪುತ್ರ ಡಾ. ರಕ್ಷತ್ (೨೭) ಮೃತಪಟ್ಟವರು. ಮೂಲತಃ ಕೆ. ಆರ್. ಪೇಟೆ ತಾಲ್ಲೂಕಿನ ಪುರ ಗ್ರಾಮದವರಾದ ಆನಂದ್ ಅವರು ಭೇರ್ಯ ಗ್ರಾಮದ ಪಶುವೈದ್ಯ ಆಸ್ಪತ್ರೆಯಲ್ಲಿ ಪಶು ಪರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಪುತ್ರ ರಕ್ಷತ್ ೨ ವರ್ಷಗಳ ಹಿಂದೆ ಮೈಸೂರಿನಲ್ಲಿ ಎಂಬಿಎಸ್‌ಎಸ್ ಮುಗಿಸಿ ಕಳೆದ ಸಾಲಿನಲ್ಲಿ ಪಟ್ಟಣದ ಈಶ್ವರ ನಗರದಲ್ಲಿ ಸರ್ಕಾರದ ಯೋಜನೆಯ ‘ನಮ್ಮ ಕ್ಲಿನಿಕ್’ ನಲ್ಲಿ ವೈದ್ಯರಾಗಿ ಸೇವೆ ಆರಂಭಿಸಿದ್ದರು. ಹೃದ್ರೋಗ ತಜ್ಞರು ಹೇಳುವ ಪ್ರಕಾರ ಡಾ. ರಕ್ಷತ್ ಅವರಿಗೆ ಹೃದಯ ಸ್ತಂಭನವಾಗಿದೆ.

ಕೆಲವು ಪ್ರಕರಣಗಳಲ್ಲಿ ಎದೆ ನೋವು ಕಾಣಿಸುವುದಿಲ್ಲ. ಮಲಗಿದ್ದ ಹಾಗೆಯೇ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ವೈದ್ಯ ಡಾ. ರಕ್ಷತ್ ಅವರ ಹಠಾತ್ ನಿಧನಕ್ಕೆ ತಾಲ್ಲೂಕು ಆರೋಗ್ಯಾಽಕಾರಿ ಡಾ. ಡಿ. ನಟರಾಜು ಹಾಗೂ ಕಚೇರಿಯ ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ. ಹೃದಯಾಘಾತಕ್ಕೆ ಸಂಬಂಽಸಿದಂತೆ ಸರ್ಕಾರ ಕೂಡ ದಿವಂಗತ ಡಾ. ಪುನೀತ್ ರಾಜ್‌ಕುಮಾರ್ ಅವರ ಹೆಸರಿನಲ್ಲಿ ಹೃದಯಭಾಗ್ಯ ಯೋಜನೆ ಜಾರಿಗೆ ತಂದಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಐವರು ಈ ಯೋಜನೆಯಡಿ ಚಿಕಿತ್ಸೆ ಪಡೆದಿದ್ದಾರೆ.

ಕೆಲಸದ ಒತ್ತಡ, ಚಿಂತೆ, ಟಾರ್ಗೆಟ್, ಪ್ರಮೋಶನ್ ಎಂಬ ಒತ್ತಡದಲ್ಲಿ ಜನರು ಆರೋಗ್ಯದತ್ತ ಗಮನ ಕೊಡುವುದನ್ನೇ ಮರೆತುಬಿಟ್ಟಿದ್ದಾರೆ. ರೋಗ ಲಕ್ಷಣಗಳು ಕಾಣಿಸಿಕೊಂಡರೂ ನಿರ್ಲಕ್ಷಿಸಿ ಬಿಡುತ್ತಾರೆ. ಇದು ದಿಢೀರ್ ಆಗಿ ಆರೋಗ್ಯ ಕೈ ಕೊಡಲು ಕಾರಣವಾಗುತ್ತದೆ. ಚಿಕಿತ್ಸೆ ಪಡೆಯಲು ಹೋದರೂ ಬಹಳ ತಡವಾಗಿ ಬಿಟ್ಟಿರುತ್ತದೆ. ಹೀಗಾಗಿ ಪ್ರಾಣ ಹೋಗುವ ಸಾಧ್ಯತೆಯೇ ಹೆಚ್ಚಾಗಿರುತ್ತದೆ. ಆದ್ದರಿಂದ ಶಾಲೆ, ಮಾಲ್, ಚಿತ್ರಮಂದಿರಗಳಲ್ಲಿ ಡಿಫಿಬ್ರಿಲೇಟರ್ ಶಾಕ್ ನೀಡುವ ಯಂತ್ರವನ್ನು ಕಡ್ಡಾಯವಾಗಿ ಇಡಲೇಬೇಕು. ಇದು ತತ್‌ಕ್ಷಣ ಹೃದಯಾಘಾತವಾದಾಗ ನೀಡುವ ಶಾಕ್ ನೀಡುವ ಚಿಕಿತ್ಸಾ ವಿಧಾನ. – ಡಾ. ಡಿ. ನಟರಾಜು, ಟಿಎಚ್‌ಒ

andolana

Recent Posts

ಓದುಗರ ಪತ್ರ: ಪಂಚ.. ತಂತ್ರ !

ಪಂಚ.. ತಂತ್ರ ! ಚುನಾವಣೆಯಲ್ಲಿ ಗೆದ್ದವರಿಗೆ ಸಿಎಂ ಚಿಂತೆ, ಸೋತವರಿಗೆ ಇವಿಎಂನದೇ ಚಿಂತೆ ! -ಮ.ಗು.ಬಸವಣ್ಣ, ಜೆಎಸ್‌ಎಸ್ ಬಡಾವಣೆ, ಮೈಸೂರು

23 mins ago

ಓದುಗರ ಪತ್ರ: ಮರದ ಕೊಂಬೆಯನ್ನು ತೆರವುಗೊಳಿಸಿ

ಮೈಸೂರಿನ ಕುವೆಂಪುನಗರದ ‘ಎಂ’ ಬ್ಲಾಕ್‌ನ ನೃಪತುಂಗ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದ ಪಕ್ಕದಲ್ಲಿ ಶ್ರೀ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಹೊಸ…

25 mins ago

ಓದುಗರ ಪತ್ರ: ತಮಿಳುನಾಡಿನಲ್ಲಿ ವಿಜಯ್ ವಿಜಯ

ತಮಿಳುನಾಡು ಚುನಾವಣೆಯಲ್ಲಿ ವಿಜಯ್ ನೇತೃತ್ವದ ಟಿವಿಕೆ ಪಕ್ಷ ೨೩೪ ಕ್ಷೇತ್ರಗಳ ಪೈಕಿ ೧೦೮ ಸ್ಥಾನಗಳಲ್ಲಿ ಜಯಗಳಿಸುವ ಮೂಲಕ ಅತಿ ದೊಡ್ಡ…

25 mins ago

ಓದುಗರ ಪತ್ರ: ಪಶ್ಚಿಮ ಬಂಗಾಳದಲ್ಲಿ ಬದಲಾವಣೆಯ ಪರ್ವ

ದೇಶಾದ್ಯಂತ ತೀವ್ರ ಕುತೂಹಲ ಕೆರಳಿಸಿದ್ದ ಪಶ್ಚಿಮ ಬಂಗಾಳ ರಾಜ್ಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಒಟ್ಟು ೨೯೪ ಸ್ಥಾನಗಳ ಪೈಕಿ…

26 mins ago

ಪಂಜು ಗಂಗೊಳ್ಳಿ ಅವರ ವಾರದ ಅಂಕಣ: ಗಾಲಿ ಕುರ್ಚಿಯಿಂದ ಚಿಮ್ಮಿದ ಮೈಂಡ್‌ಸೆಟ್ ಕೋಚ್ ಜೈಕಿಶನ್!

ಲಕ್ಷಾಂತರ ಜನರಿಗೆ ಮೈಂಡ್ ಸೆಟ್ ಕೋಚ್ ಆಗಿ ಮಾರ್ಗದರ್ಶ ಗುಜರಾತಿನ ಅಹ್ಮದ್‌ನಗರದ ೩೮ ವರ್ಷ ಪ್ರಾಯದ ಜೈಕಿಶನ್ ಶರ್ಮಾ ಒಬ್ಬ…

3 hours ago

ಇಂದು ಅರ್ಜುನ ಆನೆಯ ಸ್ಮಾರಕ ಉದ್ಘಾಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಹಲವು ಅಡೆತಡೆಗಳ ನಡುವೆಯೂ ೩ ವರ್ಷಗಳ ಬಳಿಕ ಕೊಡಗು- ಹಾಸನ ಜಿಲ್ಲೆಗಳ ಗಡಿಭಾಗದ ಯಸಳೂರು ಸಮೀಪ…

3 hours ago