Andolana originals

ಕೆಆರ್‌ ನಗರ: ಮಲಗಿದ್ದಲ್ಲೇ ಸಾವನ್ನಪ್ಪಿದ ಯುವ ವೈದ್ಯ

ಕೆ. ಆರ್. ನಗರ: ಇತ್ತೀಚಿನ ದಿನಗಳಲ್ಲಿ ಚಿಕ್ಕ ವಯಸ್ಸಿನ ಯುವಕರು, ಯುವತಿಯರು ಮತ್ತು ಮಕ್ಕಳು ಹೃದಯಾಘಾತಕ್ಕೆ ಒಳಗಾಗುವ ಪ್ರಕರಣಗಳು ಹೆಚ್ಚಾಗುತ್ತಿದ್ದು, ಯುವ ವೈದ್ಯರೊಬ್ಬರು ಮನೆಯಲ್ಲಿ ಮಲಗಿದ್ದ ವೇಳೆಯೇ ಹೃದಯ ಸ್ತಂಭನವಾಗಿ ಮೃತಪಟ್ಟಿರುವ ಘಟನೆ ನಡೆದಿದೆ.

ಪಟ್ಟಣದ ಕಂಠೇನಹಳ್ಳಿ ನಿವಾಸಿ ಆನಂದ್ ಮತ್ತು ಪ್ರಭಾ ದಂಪತಿಯ ಪುತ್ರ ಡಾ. ರಕ್ಷತ್ (೨೭) ಮೃತಪಟ್ಟವರು. ಮೂಲತಃ ಕೆ. ಆರ್. ಪೇಟೆ ತಾಲ್ಲೂಕಿನ ಪುರ ಗ್ರಾಮದವರಾದ ಆನಂದ್ ಅವರು ಭೇರ್ಯ ಗ್ರಾಮದ ಪಶುವೈದ್ಯ ಆಸ್ಪತ್ರೆಯಲ್ಲಿ ಪಶು ಪರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಪುತ್ರ ರಕ್ಷತ್ ೨ ವರ್ಷಗಳ ಹಿಂದೆ ಮೈಸೂರಿನಲ್ಲಿ ಎಂಬಿಎಸ್‌ಎಸ್ ಮುಗಿಸಿ ಕಳೆದ ಸಾಲಿನಲ್ಲಿ ಪಟ್ಟಣದ ಈಶ್ವರ ನಗರದಲ್ಲಿ ಸರ್ಕಾರದ ಯೋಜನೆಯ ‘ನಮ್ಮ ಕ್ಲಿನಿಕ್’ ನಲ್ಲಿ ವೈದ್ಯರಾಗಿ ಸೇವೆ ಆರಂಭಿಸಿದ್ದರು. ಹೃದ್ರೋಗ ತಜ್ಞರು ಹೇಳುವ ಪ್ರಕಾರ ಡಾ. ರಕ್ಷತ್ ಅವರಿಗೆ ಹೃದಯ ಸ್ತಂಭನವಾಗಿದೆ.

ಕೆಲವು ಪ್ರಕರಣಗಳಲ್ಲಿ ಎದೆ ನೋವು ಕಾಣಿಸುವುದಿಲ್ಲ. ಮಲಗಿದ್ದ ಹಾಗೆಯೇ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ವೈದ್ಯ ಡಾ. ರಕ್ಷತ್ ಅವರ ಹಠಾತ್ ನಿಧನಕ್ಕೆ ತಾಲ್ಲೂಕು ಆರೋಗ್ಯಾಽಕಾರಿ ಡಾ. ಡಿ. ನಟರಾಜು ಹಾಗೂ ಕಚೇರಿಯ ಸಿಬ್ಬಂದಿ ಕಂಬನಿ ಮಿಡಿದಿದ್ದಾರೆ. ಹೃದಯಾಘಾತಕ್ಕೆ ಸಂಬಂಽಸಿದಂತೆ ಸರ್ಕಾರ ಕೂಡ ದಿವಂಗತ ಡಾ. ಪುನೀತ್ ರಾಜ್‌ಕುಮಾರ್ ಅವರ ಹೆಸರಿನಲ್ಲಿ ಹೃದಯಭಾಗ್ಯ ಯೋಜನೆ ಜಾರಿಗೆ ತಂದಿದ್ದು, ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಐವರು ಈ ಯೋಜನೆಯಡಿ ಚಿಕಿತ್ಸೆ ಪಡೆದಿದ್ದಾರೆ.

ಕೆಲಸದ ಒತ್ತಡ, ಚಿಂತೆ, ಟಾರ್ಗೆಟ್, ಪ್ರಮೋಶನ್ ಎಂಬ ಒತ್ತಡದಲ್ಲಿ ಜನರು ಆರೋಗ್ಯದತ್ತ ಗಮನ ಕೊಡುವುದನ್ನೇ ಮರೆತುಬಿಟ್ಟಿದ್ದಾರೆ. ರೋಗ ಲಕ್ಷಣಗಳು ಕಾಣಿಸಿಕೊಂಡರೂ ನಿರ್ಲಕ್ಷಿಸಿ ಬಿಡುತ್ತಾರೆ. ಇದು ದಿಢೀರ್ ಆಗಿ ಆರೋಗ್ಯ ಕೈ ಕೊಡಲು ಕಾರಣವಾಗುತ್ತದೆ. ಚಿಕಿತ್ಸೆ ಪಡೆಯಲು ಹೋದರೂ ಬಹಳ ತಡವಾಗಿ ಬಿಟ್ಟಿರುತ್ತದೆ. ಹೀಗಾಗಿ ಪ್ರಾಣ ಹೋಗುವ ಸಾಧ್ಯತೆಯೇ ಹೆಚ್ಚಾಗಿರುತ್ತದೆ. ಆದ್ದರಿಂದ ಶಾಲೆ, ಮಾಲ್, ಚಿತ್ರಮಂದಿರಗಳಲ್ಲಿ ಡಿಫಿಬ್ರಿಲೇಟರ್ ಶಾಕ್ ನೀಡುವ ಯಂತ್ರವನ್ನು ಕಡ್ಡಾಯವಾಗಿ ಇಡಲೇಬೇಕು. ಇದು ತತ್‌ಕ್ಷಣ ಹೃದಯಾಘಾತವಾದಾಗ ನೀಡುವ ಶಾಕ್ ನೀಡುವ ಚಿಕಿತ್ಸಾ ವಿಧಾನ. – ಡಾ. ಡಿ. ನಟರಾಜು, ಟಿಎಚ್‌ಒ

andolana

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

5 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

5 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

7 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

8 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

11 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

11 hours ago